Important

ಶಿರೂರು ಗುಡ್ಡ ಕುಸಿತ ದುರಂತ : ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ಧ ಪ್ರಣವಾನಂದ ಸ್ವಾಮೀಜಿ

Share

ಅಂಕೋಲಾ: ತಾಲೂಕಿನ ಶಿರೂರು ಗುಡ್ಡ ಕುಸಿತ ದುರ್ಘಟನೆಗೆ ಸಂಬoಧಿಸಿದoತೆ ಅಂಕೋಲಾ ಪೊಲೀಸರು 8 ಜನರ ಮೇಲೆ ಪ್ರಕರಣ ದಾಖಲಿಸಿದ್ದಾರೆ. ಶಿರೂರು ದುರಂತಕ್ಕೆ ರಾಷ್ಟ್ರೀಯ ಹೆದ್ದಾರಿ ಇಲಾಖೆ ಮತ್ತು ಗುತ್ತಿಗೆ ಕಂಪನಿಯ ಬೇಜವಾಬ್ದಾರಿ ಕಾರಣ ಎಂದು ಈಡಿಗ ಮಹಾ ಮಂಡಲದ ಪ್ರಣವಾನಂದ ಸ್ವಾಮೀಜಿ ಅವರು ಅಂಕೋಲಾ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾಯಾಲಯ ಆರೋಪಿತರ ಮೇಲೆ ಎಫ್. ಐ.ಆರ್ ದಾಖಲಿಸುವಂತೆ ಆದೇಶ ನೀಡಿತ್ತು.

ಆದರೆ ನ್ಯಾಯಾಲಯ ಆದೇಶ ನೀಡಿ 24 ದಿನಗಳು ಕಳೆದರೂ ಆರೋಪಿತರ ಮೇಲೆ ಅಂಕೋಲಾ ಪೊಲೀಸರು ಎಫ್.ಐ.ಆರ್ ದಾಖಲಿಸದಿರುವ ಕುರಿತು ಪ್ರಣವಾನಂದ ಸ್ವಾಮೀಜಿ ಅವರು ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿ ನ್ಯಾಯಾಲಯದ ಆದೇಶ ಉಲ್ಲಂಘನೆಗೆ ಸಂಬoಧಿಸಿದoತೆ ಸ್ಥಳೀಯ ಠಾಣೆ , ತಹಶೀಲ್ದಾರ ಕಾರ್ಯಾಲಯ ಇಲ್ಲವೇ ವಿಧಾನಸೌಧದ ಎದುರು, ನೊಂದ ಕುಟುಂಬ ವರ್ಗದವರೊಂದಿಗೆ ಧರಣಿ ನಡೆಸುವ ಎಚ್ಚರಿಕೆ ನೀಡಿದ್ದರಲ್ಲದೇ ಈ ಕುರಿತು ಸ್ಥಳೀಯ ಸಿಪಿಐ ಹಾಗೂ ಪಿ ಎಸ್ ಐ ಅವರ ಜೊತೆ ಸಮಾಲೋಚಿಸಿ ಪ್ರಕರಣ ಯಾವ ಹಂತದಲ್ಲಿದೆ ಎಂದು ಕೇಳಿದ್ದರು. ಅದಕ್ಕೆ ಪ್ರತಿಕ್ರಿಯಿಸಿದ್ದ ಪೋಲೀಸ್ ಅಧಿಕಾರಿಗಳು ಕೆಲ ತಾಂತ್ರಿಕ ಕಾರಣದಿಂದ ವಿಳಂಬವಾಗಿದೆ. ಎಫ್ ಆಯ್ ಆರ್ ದಾಖಲಾಗುತ್ತಿದೆ ಎಂದಿದ್ದರು.

ಜಿಲ್ಲಾ ಪೊಲೀಸ್ ವರಿಷ್ಠ ಎಂ.ನಾರಾಯಣ ಅವರು ಅಂಕೋಲಾಕ್ಕೆ ಭೇಟಿ ನೀಡಿ ಪ್ರಣವಾನಂದ ಸ್ವಾಮೀಜಿ ಅವರೊಂದಿಗೆ ಚರ್ಚೆ ನಡೆಸಿದ್ದು ಶಿರೂರು ಗುಡ್ಡ ಕುಸಿತಕ್ಕೆ ಸಂಬoಧಿಸಿದoತೆ ಅಂಕೋಲಾ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್ ದಾಖಲಾಗಿದೆ. ಆರೋಪಿತರನ್ನು ಬಂಧಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳುವುದಾಗಿ ತಿಳಿಸಿದ್ದು , ಹಿರಿಯ ಅಧಿಕಾರಿಗಳ ಮಾತಿನ ಮೇಲೆ ಭರವಸೆ ಇಡುತ್ತೇನೆ ಎಂದು ಸ್ವಾಮೀಜಿ ತಿಳಿಸಿದರು.

ನ್ಯಾಯಾಲಯದ ಆದೇಶ ಪಾಲಿಸುವಲ್ಲಿ ಅಂಕೋಲಾ ಪೊಲೀಸರು ವಿಳಂಬ ಮಾಡಿದ್ದು ನ್ಯಾಯಾಲಯದ ಆದೇಶ ಯಾವಾಗ ಕೈ ಸೇರಿದೆ ಎನ್ನುವ ಕುರಿತು ಮಾಹಿತಿ ಹಕ್ಕಿನಲ್ಲಿ ವಿವರ ಪಡೆಯುವುದಾಗಿ ಇದೇ ವೇಳೆ ತಿಳಿಸಿರುವ ಸ್ವಾಮಿಗಳು , ನ್ಯಾಯಾಂಗ ನಿಂದನೆ ಆಗಿದ್ದರೆ ಸಂಬoಧಿಸಿದವರ ಮೇಲೆ ಕ್ರಮಕ್ಕೆ ಒತ್ತಾಯಿಸುವುದಾಗಿ ತಿಳಿಸಿದರು.

ವಿಸ್ಮಯ ನ್ಯೂಸ್, ವಿಲಾಸ ನಾಯಕ ಅಂಕೋಲಾ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಸಹಕಾರದ ಬೆಳಕಿನಲ್ಲಿ ಮಹತ್ವದ ಹೆಜ್ಜೆಯಿಟ್ಟ ‘ಸೂರ್ಯ’: ಹೊಸ ಶಾಖೆಗಳತ್ತ ನಾಗರಾಜ ನಾಯಕರ ದೃಷ್ಟಿ”

ಅಂಕೋಲಾ: ಅಂಕೋಲೆ ಎಂದಾಗ ಕರಿ ಇಸಾಡು ಮಾವಿನಹಣ್ಣು ನೆನಪಾದರೆ, “ಸೂರ್ಯ” ಸಹಕಾರಿ ಎಂದಾಗ ನಾಗರಾಜ ನಾಯಕ ಅರೆಗದ್ದೆ ನೆನಪಾಗುತ್ತಾರೆ. ಅದರ ಬೆನ್ನಲ್ಲೇ ರಿಯಲ್ ಎಸ್ಟೇಟ್ ಉದ್ಯಮ, ಆಯ್ಸಪ್ಲಾಂಟ್. ಸಹನಾ ಪ್ಯಾಲೇಸ್ ಲಾಡ್ಜ್,...

ಆಟೋರಿಕ್ಷಾಗೆ ಪ್ರವಾಸಿಗರಿದ್ದ ಟಿ.ಟಿ ವಾಹನ ಡಿಕ್ಕಿ : ಮಹಿಳೆಗೆ ಗಾಯ

ಅಂಕೋಲಾ: ಸಹೋದರಿಯ ಮನೆಗೆ ಬಂದು ವಾಪಸ್ ಮನೆಗೆ ಮರಳುತ್ತಿದ್ದ ಗೃಹಿಣಿ ಇದ್ದ ಆಟೋರಿಕ್ಷಾಗೆ ಪ್ರವಾಸಿಗರಿದ್ದ ಟಿ.ಟಿ ವಾಹನ ಬಡಿದ ಪರಿಣಾಮ ಮಹಿಳೆ ಗಾಯಗೊಂಡ ಘಟನೆ ಪಟ್ಟಣದ ಅರಣ್ಯ ಇಲಾಖೆ ಕಛೇರಿ ಹತ್ತಿರ...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಬಡ, ಮಧ್ಯಮವರ್ಗ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಒಟ್ಟು 3 ಕೋಟಿ ಮೌಲ್ಯದ ವಿದ್ಯಾರ್ಥಿವೇತನ

ಉಡುಪಿ: ರಾಜ್ಯದಲ್ಲೇ ಪ್ರಸಿದ್ಧ ಪಡೆದ ಉಡುಪಿ ಲಾರ್ಡ್ಸ್ ಇಂಟರ್‌ನ್ಯಾಷನಲ್ ರೆಸಿಡೆನ್ಷಿಯಲ್ ಸ್ಕೂಲ್ , ಬಡ, ಮಧ್ಯಮವರ್ಗ...

ಶತರುದ್ರ ಮತ್ತು ಶತಚಂಡಿಕಾ ಯಾಗಕ್ಕೆ ಆತ್ಮೀಯ ಸ್ವಾಗತ

ಕಾರವಾರ: ದಿವಂಗತ ಕೃಷ್ಣ ಸೈಲ್ ಹಾಗೂ ಗಿರಿಜಾ ಕೃಷ್ಣ ಸೈಲ್ ರವರ ಆರ್ಶೀವಾದದೊಂದಿಗೆ ಈ ಕ್ಷೇತ್ರದ...

ಸಹಕಾರದ ಬೆಳಕಿನಲ್ಲಿ ಮಹತ್ವದ ಹೆಜ್ಜೆಯಿಟ್ಟ ‘ಸೂರ್ಯ’: ಹೊಸ ಶಾಖೆಗಳತ್ತ ನಾಗರಾಜ ನಾಯಕರ ದೃಷ್ಟಿ”

ಅಂಕೋಲಾ: ಅಂಕೋಲೆ ಎಂದಾಗ ಕರಿ ಇಸಾಡು ಮಾವಿನಹಣ್ಣು ನೆನಪಾದರೆ, “ಸೂರ್ಯ” ಸಹಕಾರಿ ಎಂದಾಗ ನಾಗರಾಜ ನಾಯಕ...

ಆಟೋರಿಕ್ಷಾಗೆ ಪ್ರವಾಸಿಗರಿದ್ದ ಟಿ.ಟಿ ವಾಹನ ಡಿಕ್ಕಿ : ಮಹಿಳೆಗೆ ಗಾಯ

ಅಂಕೋಲಾ: ಸಹೋದರಿಯ ಮನೆಗೆ ಬಂದು ವಾಪಸ್ ಮನೆಗೆ ಮರಳುತ್ತಿದ್ದ ಗೃಹಿಣಿ ಇದ್ದ ಆಟೋರಿಕ್ಷಾಗೆ ಪ್ರವಾಸಿಗರಿದ್ದ ಟಿ.ಟಿ...

ಶಾಲಾ ಮಕ್ಕಳ ಬಸ್ ಪಲ್ಟಿ: ವಿದ್ಯಾರ್ಥಿ ಸಾವು

ಹೊನ್ನಾವರ: ಗೇರುಸೊಪ್ಪ ಸುಳೆಮುರ್ಕಿ ಕ್ರಾಸ್ ಹತ್ತಿರ ಶಾಲಾಮಕ್ಕಳ ಪ್ರವಾಸಿ ಬಸ್ ಪಲ್ಟಿಯಾಗಿ, ವಿಧ್ಯಾರ್ಥಿ ಸಾವನಪ್ಪಿರುವ ಘಟನೆ...

ಆಯಕಟ್ಟಿನ ಪ್ರದೇಶದಲ್ಲಿರುವ 8 ಗುಂಟೆ ಜಾಗ ಮಾರಾಟಕ್ಕಿದೆ

ಅಂಕೋಲಾ: ತಾಲೂಕಿನ ಬಳಲೆಯಲ್ಲಿ ಅತ್ಯುತ್ತಮ ಸೌಕರ್ಯ ಹೊಂದಿರುವ, ಆಯಕಟ್ಟಿನ ಪ್ರದೇಶದಲ್ಲಿರುವ NA ಆದ ಜಾಗ ಮಾರಾಟಕ್ಕಿದೆ....

ಕುಮಟಾದ ಬ್ರೌನ್ಸ್ ವಿಲೇಜ್ ಫ್ಯಾಮಿಲಿ ಗಾರ್ಡನ್ ರೆಸ್ಟೋರೆಂಟ್ ನಲ್ಲಿ ಖ್ಯಾತ ಕಲಾವಿದರಿಂದ ಲೈವ್ ಮ್ಯೂಜಿಕ್ ನೋಡುತ್ತಾ ರುಚಿ-ಶುಚಿಯಾದ ಆಹಾರ ಸವಿಯುವ ಅವಕಾಶ

ಕುಮಟಾ: ಬ್ರೌನ್ಸ್ ವಿಲೇಜ್ ಫ್ಯಾಮಿಲಿ ಗಾರ್ಡನ್ ರೆಸ್ಟೋರೆಂಟ್ ಕುಮಟಾ, ಇದು ಉತ್ತರಕನ್ನಡ ಜಿಲ್ಲೆಯ ಅತ್ಯುತ್ತಮ ಫ್ಯಾಮಿಲಿ...