Important

ಜನಸಾಮಾನ್ಯರ ಆರ್ಥಿಕ ಮಟ್ಟ ಏರಿಸುವ ಉದ್ದೇಶದಿಂದ ಗ್ಯಾರಂಟಿ ಯೋಜನೆ ಜಾರಿ: ಜಿಲ್ಲಾಧ್ಯಕ್ಷ ಸಾಯಿ ಗಾವಂಕರ್

Share

ಭಟ್ಕಳ: ಕಾಂಗ್ರೇಸ್ ಪಕ್ಷ ಕೇವಲ ಚುನಾವಣೆ ಗೆಲ್ಲುವ ಉದ್ದೇಶದಿಂದ ಗ್ಯಾರಂಟಿ ಯೋಜನೆಯನ್ನು ಹೊರತರಲಿಲ್ಲ. ಬದಲಾಗಿ ಜನಸಾಮಾನ್ಯರ ಆರ್ಥಿಕ ಮಟ್ಟವನ್ನು ಏರಿಸುವ ನಿಟ್ಟಿನಲ್ಲಿ ಹಾಗೂ ಜನರಲ್ಲಿ ಕೊಳ್ಳುವಿಕೆಯ ಶಕ್ತಿಯನ್ನು ಹೆಚ್ಚಿಸಿ ಆರ್ಥಿಕ ಚೈತನ್ಯಕ್ಕೆ ಸಹಕಾರಿಯಾಗುವ ಹಿನ್ನೆಲೆಯಲ್ಲಿ ಈ ಯೋಜನೆಯನ್ನು ಹೊರತರಲಾಗಿದೆ ಎಂದು ಕಾಂಗ್ರೇಸ್ ಪಕ್ಷದ ಜಿಲ್ಲಾಅಧ್ಯಕ್ಷ ಸಾಯಿ ಗಾವಂಕರ ಹೇಳಿದರು.

ಕೆ.ಪಿಸಿ.ಸಿ ನಿರ್ದೇಶನದ ಮೇರೆಗೆ ಕಾಂಗ್ರೇಸ್ ನಡಿಗೆ ಕಾರ್ಯಕರ್ತರ ಕಡೆಗೆ ಘೊಷಣೆಯೊಂದಿಗೆ ಭಟ್ಕಳ ತಾಲೂಕಿನ ಸಾರದಹೊಳೆಯ ಹಳೆಕೋಟೆ ಹನುಮಂತ ದೇವಸ್ಥಾನದ ನಾಮಧಾರಿ ಸಭಾಭವನದಲ್ಲಿ ಹಮ್ಮಿಕೊಳ್ಳಲಾದ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಕಾಂಗ್ರೇಸ್ ಪಕ್ಷದ ಬಲವರ್ಧನೆಗಾಗಿ ಈಗಾಗಲೇ ಅನೇಕ ಕ್ರಮಗಳನ್ನು ಕೈಗೊಳ್ಳಲಾಗಿದ್ದು ಗೂಗಲ್ ಫಾರ್ಮ ಮೂಲಕ ಪಕ್ಷದ ಸದಸ್ಯತ್ವವ ಅಭಿಯಾನವನ್ನು ಕೈಗೊಳ್ಳಲಾಗಿದೆ. ಪಕ್ಷ ಸಂಘಟನೆಯಲ್ಲಿ ನಿಸ್ಕ್ರೀಯರಾಗಿರುವ ಪಧಾಧಿಕಾರಿಗಳನ್ನು ಕೈಬಿಟ್ಟು ಹೊಸಬರಿಗೆ ಅವಕಾಶ ನೀಡುವ ನಿಟ್ಟಿನಲ್ಲಿ ಚಿಂತಿಸಿಸಲಾಗುತ್ತಿದೆ.

ನಮ್ಮ ಜಿಲ್ಲೆಯಲ್ಲಿ ಕೈಗೆ ಸಿಗುವ ಹಿಂದುಳಿದ ವರ್ಗದ ಮಂತ್ರಿಗಳು ಇರುವುದು ನಮ್ಮ ಸೌಭಾಗ್ಯವಾಗಿ. ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ ಏಕೈಕ ಪಕ್ಷವೆಂದರೆ ಅದು ಕಾಂಗ್ರೇಸ್ ಪಕ್ಷವಾಗಿದೆ. ಗಾಂಧಿಜಿಯವರು ನಮ್ಮ ಪಕ್ಷದ ಅಧ್ಯಕ್ಷರಾಗಿದ್ದರು ಹಾಗೂ ಕೇವಲ ಅಹಿಂಸಾ ಮಾರ್ಗದಲ್ಲಿ ಭಾರತಕ್ಕೆ ಸ್ವಾತಂತ್ರ್ಯ ತಂದುಕೊಟ್ಟರು. ಕಾಂಗ್ರೇಸ್ ಪಕ್ಷ ಮಾತ್ರ ಜಾತಿ, ಧರ್ಮವನ್ನು ನೋಡದೆ ಎಲ್ಲರನ್ನು ಸಮಾನವಾಗಿ ನೋಡುತ್ತದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ತಜಿಂ ಅಧ್ಯಕ್ಷ ಇನಾಯತುಲ್ಲಾ ಶಾಬಂದ್ರಿ, ಸಚಿವ ಮಂಕಾಳ ಎಸ್ ವೈದ್ಯ, ಭಟ್ಕಳ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ವೆಂಕಟೇಶ ನಾಯ್ಕ, ಅರಣ್ಯ ಹೋರಾಟಗಾರರ ಸಮಿತಿಯ ತಾಲೂಕಾ ಅಧ್ಯಕ್ಷ ರಾಮ ಮೊಗೇರ, ನಯನಾ ನಾಯ್ಕ ಮತ್ತಿತರರು ಹಾಜರಿದ್ದರು.

ವಿಸ್ಮಯ ನ್ಯೂಸ್, ಈಶ್ವರ್ ನಾಯ್ಕ, ಭಟ್ಕಳ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಹೋಮಿಯೋಪತಿ ಸಂಸ್ಥಾಪಕ ಹಾನಿಮ್ಯಾನ್ ಅವರ 271ನೇ ಜನ್ಮ ದಿನಾಚರಣೆ

ಅಂಕೋಲಾ: ಇಂಗ್ಲಿಷ್ ಔಷಧಿಗಳನ್ನು ಸೇವಿಸಿದಾಗ ತಾತ್ಕಾಲಿಕವಾಗಿ ಕಾಯಿಲೆ ವಾಸಿಯಾದಂತೆ ಅನ್ನಿಸಿದರೂ, ಕೆಲವೇ ದಿನಗಳಲ್ಲಿ ಅದು ಮರುಕಳಿಸುವ ಸಾಧ್ಯತೆ ಇರುತ್ತದೆ. ಆದರೆ ಹೋಮಿಯೋಪತಿ ಚಿಕಿತ್ಸೆಯು ಕಾಯಿಲೆಯನ್ನು ಶಾಶ್ವತವಾಗಿ ಗುಣಪಡಿಸುವುದಲ್ಲದೆ, ಯಾವುದೇ ಅಡ್ಡಪರಿಣಾಮಗಳನ್ನು ಹೊಂದಿರುವುದಿಲ್ಲ...

ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಲ್ಲಿ ಸಹಾಯಕ ಶಿಕ್ಷಕರು ಬೇಕಾಗಿದ್ದಾರೆ

ಕುಮಟಾ : ಅಂಕೋಲಾದ ಕೆನರಾ ವೆಲ್ಫೇರ್ ಟ್ರಸ್ಟ್ ನ ಕುಮಟಾ ಧಾರೇಶ್ವರದ ದಿನಕರ ಇಂಗ್ಲಿಷ್ ಮೀಡಿಯಂ ಹೈಸ್ಕೂಲ್‌ನಲ್ಲಿ ಸಹಾಯಕ ಶಿಕ್ಷಕರ ಹುದ್ದೆಗಳು ಖಾಲಿ ಇವೆ. BSc, B.Ed (PCM) ಅರ್ಹತೆ ಹೊಂದಿದವರಿಗೆ...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಬಿಜಿಎಸ್ ಸೆಂಟ್ರಲ್ ಸ್ಕೂಲ್ & ಪಿಯು ಕಾಲೇಜಿನಲ್ಲಿ ನೇಮಕಾತಿ: ಕೂಡಲೇ ಸಂಪರ್ಕಿಸಿ

ಉತ್ತರಕನ್ನಡ ಜಿಲ್ಲೆಯ ಮಿರ್ಜಾನಿನ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಬಿಜಿಎಸ್ ಸೆಂಟ್ರಲ್ ಸ್ಕೂಲ್ & ಆದಿಚುಂಚನಗಿರಿ...

ಅಂಕೋಲಾದಬಾಳೇಗುಳಿ ಬೊಗ್ರಿಬೈಲಿನಲ್ಲಿ ಶ್ರೀ ಉದ್ಭವ ನಾಗಚೌಡೇಶ್ವರಿ–ವೀರಾಂಜನೇಯ ದೇವರ ಚತುರ್ಥ ವರ್ಧಂತಿ ಮಹೋತ್ಸವ

ಅಂಕೋಲಾ: ತಾಲೂಕಿನ ಬಾಳೇಗುಳಿ ಬೊಗ್ರಿಬೈಲಿನಲ್ಲಿರುವ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶ್ರೀ ಉದ್ಭವ ನಾಗಚೌಡೇಶ್ವರಿ ಅಮ್ಮನವರು ಹಾಗೂ...

ಹೋಮಿಯೋಪತಿ ಸಂಸ್ಥಾಪಕ ಹಾನಿಮ್ಯಾನ್ ಅವರ 271ನೇ ಜನ್ಮ ದಿನಾಚರಣೆ

ಅಂಕೋಲಾ: ಇಂಗ್ಲಿಷ್ ಔಷಧಿಗಳನ್ನು ಸೇವಿಸಿದಾಗ ತಾತ್ಕಾಲಿಕವಾಗಿ ಕಾಯಿಲೆ ವಾಸಿಯಾದಂತೆ ಅನ್ನಿಸಿದರೂ, ಕೆಲವೇ ದಿನಗಳಲ್ಲಿ ಅದು ಮರುಕಳಿಸುವ...

ಗೋಕರ್ಣಕ್ಕೆ ಆಗಮಿಸಲಿದೆ ವರದಹಳ್ಳಿಯ ಶ್ರೀಧರ ಸ್ವಾಮಿಗಳ ಪಾದುಕೆ: ದರ್ಶನ ಮತ್ತು ಫಲಸಮರ್ಪಣೆಗೆ ಸುವರ್ಣಾವಕಾಶ

ಗೋಕರ್ಣ: ವರದಹಳ್ಳಿಯ ಸದ್ಗುರು ಶ್ರೀಧರ ಸ್ವಾಮಿಗಳ ಪಾದುಕೆ ಇದೇ ಏಪ್ರಿಲ್ 8ರ ಬುಧರವಾರ ಮತ್ತು 9ರ...

ವಿಸ್ಮಯ ಟಿ.ವಿ ಹೆಸರಿನಲ್ಲಿ ಮೋಸ: ವೀಕ್ಷಕರ, ಜಾಹೀರಾತುದಾರರ ಗಮನಕ್ಕೆ

ಕುಮಟಾ: ಕಳೆದ 13 ವರ್ಷಗಳಿಂದ ಸದಭಿರುಚಿಯ ಕಾರ್ಯಕ್ರಮಗಳ ಮೂಲಕ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಮನೆಮಾತಾಗಿರುವ ವಿಸ್ಮಯ...

ಫೋಟೋಗ್ರಾಫರ್ ಪ್ರಶಾಂತ ವಿಧಿವಶ : ಪಚ್ಚು ಎಂದೇ ಚಿರಪರಿಚಿತನಾಗಿದ್ದ ಯುವಕ ಇನ್ನು ನೆನಪು ಮಾತ್ರ

ಅಂಕೋಲಾ : ಪಟ್ಟಣ ವ್ಯಾಪ್ತಿಯ ಲಕ್ಷ್ಮೇಶ್ವರ ಕುಂಬಾರಕೇರಿ ನಿವಾಸಿ, ಪ್ರಶಾಂತ (ಪಚ್ಚು ) ಕೆ ನಾಯ್ಕ...

ತರಂಗ ಎಲೆಕ್ಟ್ರಾನಿಕ್ಸ್ ನಲ್ಲಿ ಯುಗಾದಿ ಉತ್ಸವ: ಏ.ಸಿ ಮೇಲೆ ಬಂಪರ್ ಆಫರ್

ಕುಮಟಾ: ಉತ್ತರಕನ್ನಡ ಜಿಲ್ಲೆಯ ಅತ್ಯಂತ ವಿಶ್ವಾಸಾರ್ಹ ಮತ್ತು ಅತಿದೊಡ್ಡ ಶೋರೂಮ್ ತರಂಗ ಎಲೆಕ್ಟ್ರಾನಿಕ್ಸ್ ನಲ್ಲಿ ಯುಗಾದಿ...

ನರ್ಸ್ ವೃತ್ತಿ ಮತ್ತು ಕುಟುಂಬ ಜವಾಬ್ದಾರಿಗಳ ನಡುವೆಯೇ ಸಾಧನೆ ಮಾಡಿದ ಪೂಜಾ ನಾಯ್ಕ

ಕುಮಟಾ :- ತಾಲೂಕಿನ ಕಲಭಾಗ ಗ್ರಾಮ ನಿವಾಸಿ ಪೂಜಾ ಸಂತೋಷ ನಾಯ್ಕ ಅವರು 2024–26ನೇ ಸಾಲಿನ...