Important

ಬಿಜಿಎಸ್ ಸೆಂಟ್ರಲ್ ಸ್ಕೂಲಿನಲ್ಲಿ ಅದ್ದೂರಿಯಿಂದ ನಡೆದ ಶಾಲಾ ಪ್ರಾರಂಭೋತ್ಸವ: ಮಕ್ಕಳನ್ನು ಆದರದಿಂದ ಬರಮಾಡಿಕೊಂಡ ಶಿಕ್ಷಕರು

Share

ಕುಮಟಾ: ಮಿರ್ಜಾನ್ ಶಾಖಾಮಠದ ಪೂಜ್ಯರಾದ ನಿಶ್ಚಲಾನಂದನಾಥಜೀಯವರ ದಿವ್ಯ ಸಾನಿಧ್ಯದಲ್ಲಿ ಇಂದು ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟಿನ ಬಿಜಿಎಸ್ ಸೆಂಟ್ರಲ್ ಸ್ಕೂಲಿನಲ್ಲಿ ಶಾಲಾ ಪ್ರಾರಂಭೋತ್ಸವವನ್ನು ತುಂಬಾ ಸಡಗರದಿಂದ ಮಾಡಲಾಯಿತು. ತಳಿರು ತೋರಣಗಳಿಂದ ವಿದ್ಯಾಲಯವನ್ನು ಅಲಂಕರಿಸಿ, ಶಾಲೆಗೆ ಬಂದ ಮಕ್ಕಳು ಮತ್ತು ಪೋಷಕರಿಗೆ ಶಿಕ್ಷಕ ವೃಂದದವರು ಸಿಹಿವಿತರಿಸಿ, ತುಂಬಾ ಆದರದಿಂದ ಬರಮಾಡಿಕೊಂಡರು.

ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸಿ, ಉದ್ಘಾಟಿಸಿದ ನಿಶ್ಚಲಾನಂದನಾಥ ಸ್ವಾಮೀಜಿಯವರು ವಿದ್ಯಾರ್ಥಿಗಳಿಗೆ ಸಾಂಕೇತಿಕವಾಗಿ ಭಗವದ್ಗೀತೆ ಪುಸ್ತಕವನ್ನು ನೀಡುವುದರ ಮೂಲಕ ಆಶೀರ್ವದಿಸಿ, ಹೊಸ ಶೈಕ್ಷಣಿಕ ವರ್ಷ ತಮಗೆಲ್ಲರಿಗೂ ಒಳಿತುಂಟು ಮಾಡಲಿ ಎಂದು ಶುಭ ಹಾರೈಸಿದರು.

ಬಿಜಿಎಸ್ ಸಂಸ್ಥೆಯ ಶೈಕ್ಷಣಿಕ ನಿರ್ದೇಶಕರಾದ ಎಮ್. ಟಿ. ಗೌಡರವರು ಮಾತನಾಡಿ, ಮಕ್ಕಳಲ್ಲಿ ಹುದುಗಿರುವ ಸುಪ್ತ ಪ್ರತಿಭೆಯನ್ನು ತೆಗೆದು, ಅವರಿಗೆ ಸೂಕ್ತ ಮಾರ್ಗದರ್ಶನ ನೀಡಿ, ಅವರನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯುವಲ್ಲಿ ನಮ್ಮ ಸಂಸ್ಥೆಯ ಶಿಕ್ಷಕರ ಪಾತ್ರ ಬಹಳ ಮುಖ್ಯ. ಮಕ್ಕಳು ದೇವರ ಸಮಾನ, ಶಿಕ್ಷಕರು ಸಮಯ ಪಾಲನೆ ಮತ್ತು ದಕ್ಷತೆಯಿಂದ ಕಾರ್ಯನಿರ್ವಹಿಸಿ ಮಕ್ಕಳ ಏಳಿಗೆಗೆ ಶ್ರಮಿಸಬೇಕು ಎಂದರು.

ಬಿಜಿಎಸ್ ಸೆಂಟ್ರಲ್ ಸ್ಕೂಲಿನ ಪ್ರಾಂಶುಪಾಲೆ ಅರ್ಚನಾ ಭಟ್ ಶಾಲೆಗೆ ಆಗಮಿಸಿದ ವಿದ್ಯಾರ್ಥಿಗಳಿಗೆ ಶುಭಕೋರಿ, ಗಣ್ಯರನ್ನು ಸ್ವಾಗತಿಸಿ, ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಉತ್ತಮ ಸಾಧನೆ ತೋರಿ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ವಿದ್ಯಾರ್ಥಿಗಳು ಪ್ರಾರ್ಥಿಸಿ, ಭಗವದ್ಗೀತೆ ಶ್ಲೋಕ ಪಠಿಸಿದರು.

ವಿಸ್ಮಯ ನ್ಯೂಸ್, ಕುಮಟಾ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಆಯಕಟ್ಟಿನ ಪ್ರದೇಶದಲ್ಲಿರುವ 8 ಗುಂಟೆ ಜಾಗ ಮಾರಾಟಕ್ಕಿದೆ

ಅಂಕೋಲಾ: ತಾಲೂಕಿನ ಬಳಲೆಯಲ್ಲಿ ಅತ್ಯುತ್ತಮ ಸೌಕರ್ಯ ಹೊಂದಿರುವ, ಆಯಕಟ್ಟಿನ ಪ್ರದೇಶದಲ್ಲಿರುವ NA ಆದ ಜಾಗ ಮಾರಾಟಕ್ಕಿದೆ. NA ಆದ ( ರೆಸಿಡೆನ್ಷಿಯಲ್ ) 8 ಗುಂಟೆ ಜಾಗ ಮಾರಾಟಕ್ಕಿದೆ. 56 ಲಕ್ಷ...

ಅಂಕೋಲಾದಲ್ಲಿ ಇಂದು ಪಂಚದೇವರ ದೊಡ್ಡ ಕಾರ್ತಿಕೋತ್ಸವ : ಶಿರ ಕುಳಿ ಕಾನದೇವಿ ದೇವಸ್ಥಾನದ ಹತ್ತಿರ ವನಭೋಜನಕ್ಕೆ ನಡೆಯುತ್ತಿದೆ ಸಿದ್ದತೆ

ಅಂಕೋಲಾ: ತಾಲೂಕಿನ ಸಂಸ್ಕೃತಿಯ ಆರಾಧನಾ ಪದ್ಧತಿಯಾಗಿ ಹಲವು ತಲೆಮಾರುಗಳಿಂದ ಆಚರಿಸಲ್ಪಡುತ್ತಬಂದಿರುವ ಪಂಚ ದೇವರುಗಳ ದೊಡ್ಡ ಕಾರ್ತಿಕೋತ್ಸವ ಮತ್ತು ವನಭೋಜನ ಮಹೋತ್ಸವ ಈ ಬಾರಿ ನವೆಂಬರ್ 7ರ ಶುಕ್ರವಾರ (ಇಂದು), ಮತ್ತು 8...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಶಾಲಾ ಮಕ್ಕಳ ಬಸ್ ಪಲ್ಟಿ: ವಿದ್ಯಾರ್ಥಿ ಸಾವು

ಹೊನ್ನಾವರ: ಗೇರುಸೊಪ್ಪ ಸುಳೆಮುರ್ಕಿ ಕ್ರಾಸ್ ಹತ್ತಿರ ಶಾಲಾಮಕ್ಕಳ ಪ್ರವಾಸಿ ಬಸ್ ಪಲ್ಟಿಯಾಗಿ, ವಿಧ್ಯಾರ್ಥಿ ಸಾವನಪ್ಪಿರುವ ಘಟನೆ...

ಆಯಕಟ್ಟಿನ ಪ್ರದೇಶದಲ್ಲಿರುವ 8 ಗುಂಟೆ ಜಾಗ ಮಾರಾಟಕ್ಕಿದೆ

ಅಂಕೋಲಾ: ತಾಲೂಕಿನ ಬಳಲೆಯಲ್ಲಿ ಅತ್ಯುತ್ತಮ ಸೌಕರ್ಯ ಹೊಂದಿರುವ, ಆಯಕಟ್ಟಿನ ಪ್ರದೇಶದಲ್ಲಿರುವ NA ಆದ ಜಾಗ ಮಾರಾಟಕ್ಕಿದೆ....

ಕುಮಟಾದ ಬ್ರೌನ್ಸ್ ವಿಲೇಜ್ ಫ್ಯಾಮಿಲಿ ಗಾರ್ಡನ್ ರೆಸ್ಟೋರೆಂಟ್ ನಲ್ಲಿ ಖ್ಯಾತ ಕಲಾವಿದರಿಂದ ಲೈವ್ ಮ್ಯೂಜಿಕ್ ನೋಡುತ್ತಾ ರುಚಿ-ಶುಚಿಯಾದ ಆಹಾರ ಸವಿಯುವ ಅವಕಾಶ

ಕುಮಟಾ: ಬ್ರೌನ್ಸ್ ವಿಲೇಜ್ ಫ್ಯಾಮಿಲಿ ಗಾರ್ಡನ್ ರೆಸ್ಟೋರೆಂಟ್ ಕುಮಟಾ, ಇದು ಉತ್ತರಕನ್ನಡ ಜಿಲ್ಲೆಯ ಅತ್ಯುತ್ತಮ ಫ್ಯಾಮಿಲಿ...

ಆಂಬ್ಯುಲೆನ್ಸ್ ಡಿಕ್ಕಿ : ಭಟ್ಕಳದ ದಂಪತಿ ಬೆಂಗಳೂರಿನಲ್ಲಿ ದುರಂತ ಸಾವು

ಭಟ್ಕಳ: ವೇಗವಾಗಿ ಬಂದ ಆಂಬ್ಯುಲೆನ್ಸ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಭಟ್ಕಳ ಮೂಲದ ದಂಪತಿ...

ಪಲ್ಟಿಯಾದ ಬಸ್: 45 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಅಂಕೋಲಾ: ಪ್ರಮುಖ ಸಂಪರ್ಕ ರಸ್ತೆಗಳಲ್ಲಿ ಒಂದಾಗಿರುವ ಗೋಕರ್ಣ ವಡ್ದೀಘಾಟ ಹೆದ್ದಾರಿ ತಿರುವಿನಲ್ಲಿ ಸಾರಿಗೆ ಸಂಸ್ಥೆಯ ಬಸ್ಸೊಂದು...

KDCC ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ವಸಂತ ನಾಯಕ ಜಮಗೋಡ : ಈ ಬಾರಿ ಹೆಚ್ಚಿದ ಗೆಲುವಿನ ನಿರೀಕ್ಷೆ

ಅಂಕೋಲಾ : ಸಹಕಾರಿ ಮತ್ತು ಸಾಮಾಜಿಕ, ಧಾರ್ಮಿಕ ಮತ್ತಿತರ ಕ್ಷೇತ್ರಗಳಲ್ಲಿ ಸದಾ ಮಂಚೂಣಿಯಲ್ಲಿರುವ ನಾಯಕ ಎಂದು...

ಅಂಕೋಲಾ ಕರಾವಳಿ ಉತ್ಸವ 2025 : ನವೆಂಬರ್ 5 ರಿಂದ 10ರ ವರೆಗೆ ಸಾಂಸ್ಕೃತಿಕ ವೈಭವ

ಅಂಕೋಲಾ: ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಹೊಂದಿರುವ ಅಂಕೋಲಾ ತಾಲೂಕಿನಲ್ಲಿ ಅಂಕೋಲಾ ಸಾಂಸ್ಕೃತಿಕ ಕಲಾಬಳಗ ಉತ್ತರ ಕನ್ನಡ ಸಂಘಟನೆಯ...