Important

ಉಚಿತ ಹೃದಯ ರೋಗ ತಪಾಸಣಾ ಶಿಬಿರ : ಮೇ 31ರ ಶನಿವಾರದಂದು ಕುಮಟಾ ತಾಲೂಕಾಸ್ಪತ್ರೆಯಲ್ಲಿ ಆಯೋಜನೆ

Share

ಕುಮಟಾ: ಶ್ರೀ ರಾಮಚಂದ್ರಾಪುರ ಮಠ ಹೊಸನಗರ ಸೇವಾಖಂಡದ ಯೋಗಕ್ಷೇಮ ವಿಭಾಗ , ಜನಪರ ಹೋರಾಟ ವೇದಿಕೆ ಕುಮಟಾ ಹಾಗೂ ತಾಲೂಕಾಸ್ಪತ್ರೆ ಕುಮಟಾ ಇವರ ಸಹಯೋಗದಲ್ಲಿ ಉಚಿತ ಹೃದಯ ರೋಗ ತಪಾಸಣಾ ಶಿಬಿರವನ್ನು ಮೇ 31ರ ಶನಿವಾರದಂದು ಕುಮಟಾ ತಾಲೂಕಾಸ್ಪತ್ರೆಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕಾ ಆಸ್ಪತ್ರೆಯ ವೈದ್ಯಾಧಿಕಾರಿಗಳಾದ ಡಾ. ಗಣೇಶ ನಾಯಕ್ ಅವರು ಹೇಳಿದರು.

ಕುಮಟಾ ಪಟ್ಟಣದ ಖಾಸಗಿ ಹೋಟೆಲ್‌ನಲ್ಲಿ ಹಮ್ಮಿಕೊಂಡ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಮಂಗಳೂರಿನ ಖ್ಯಾತ ಹೃದಯ ರೋಗತಜ್ಞರಾದ ಢಾ. ಸುಬ್ರಹ್ಮಣ್ಯಂ ಅವರು ಕುಮಟಾದ ಸರ್ಕಾರಿ ಆಸ್ಪತ್ರೆಗೆ ಆಗಮಿಸಲಿದ್ದಾರೆ. ಹೃದಯ ಸಂಬoಧಿ ಖಾಯಿಲೆ ಹೊಂದಿದವರಿಗೆ ರಕ್ತದ ಒತ್ತಡ, ಮಧುಮೇಹ, ಇಸಿಜಿ ಪರೀಕ್ಷೆಗಳನ್ನು ನಡೆಸಲಿದ್ದಾರೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಈ ಶಿಭಿರದ ಪ್ರಯೋಜನ ಪಡೆದುಕೊಳ್ಳುವಂತೆ ವಿನಂತಿಸಿಕೊAಡರು.

ತಾಲೂಕಾಸ್ಪತ್ರೆಯ ಖ್ಯಾತ ಹೃದ್ರೋಗ ತಜ್ಞರಾದ ಡಾ. ಶ್ರೀನಿವಾಸನಾಯಕ ಮಾತನಾಡಿ ಶಿಭಿರದ ಮಾಹಿತಿಗಳನ್ನು ತಿಳಿಸಿದರು. ಬಿಜೆಪಿ ಶಿಕ್ಷಣ ಪ್ರೊಕೋಷ್ಟ ಮುಖಂಡರು ಮತ್ತು ಬಿಜೆಪಿ ಮುಖಂಡರಾದ ಎಮ್. ಜಿ. ಭಟ್ ಮಾತನಾಡಿ ಕುಮಟಾ ತಾಲೂಕಿನಲ್ಲಿ ಉಚಿತ ಹೃದಯ ರೋಗ ತಪಾಸಣಾ ಶಿಭಿರ ನಡೆಯುತ್ತಿರುವುದು ಒಂದು ಉತ್ತಮ ವಿಚಾರವಾಗಿದೆ. ಖ್ಯಾತ ಹೃದ್ರೋಗ ತಜ್ಞರು ಕುಮಟಾ ತಾಲೂಕಾಸ್ಪತ್ರೆಗೆ ಆಗಮಿಸಿ ಹೃದಯ ಸಂಬAಧಿ ಖಾಯಿಲೆಯ ಬಗ್ಗೆ ಚಿಕಿತ್ಸೆ ನೀಡುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ. ಇದು ಹೃದ್ರೋಗ ತಜ್ಞರಾದ ಡಾ. ಶ್ರೀನಿವಾಸನಾಯಕ ಅವರ ಕರೆಯ ಮೇರೆಗೆ ನಡೆಯುತ್ತಿರುವ ಶಿಭಿರವಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಶ್ರೀ ರಾಮಚಂದ್ರಾಪುರ ಮಠ ಹೊಸನಗರ ಸೇವಾಖಂಡದ ಯೋಗಕ್ಷೇಮ ವಿಭಾಗದ ಸತೀಶ ಭಟ್, ಟ್ಯಾಕ್ಸಿ ಚಾಲಕಮಾಲಕ ಸಂಘದ ಜಿಲ್ಲಾಧ್ಯಕ್ಷರಾದ ನವೀನ ನಾಯ್ಕ, ತಾಲೂಕಾಸ್ಪತ್ರೆಯ ವೈದ್ಯಾಧಿಕಾರಿಗಳಾದ ಡಾ. ಗಣೇಶ ನಾಯ್ಕ, ಡಾ. ಶ್ರೀನಿವಾಸ ನಾಯಕ, ಬಿಜೆಪಿ ಶಿಕ್ಷಣ ಪ್ರೊಕೋಷ್ಟದ ಎಮ್. ಜಿ. ಭಟ್, ವಿಘ್ನೇಶ ಮುಂತಾದವರಿದ್ದರು.

ವಿಸ್ಮಯ ನ್ಯೂಸ್ ದೀಪೇಶ ನಾಯ್ಕ ಕುಮಟಾ…

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಬೆಂಕಿ ಅವಘಡದಲ್ಲಿ ಅಪಾರಹಾನಿ: ಆದರೆ, ಮಾರಿಕಾಂಬೆಯ ಫೋಟೋ ಮಾತ್ರ ಸೇಫ್

ಅಂಕೋಲಾ: ಪಟ್ಟಣ ವ್ಯಾಪ್ತಿಯ ಲಕ್ಷ್ಮೇಶ್ವರ–ಕುಂಬಾರಕೇರಿ ಪ್ರದೇಶದಲ್ಲಿರುವ ಶ್ರೀ ಮಹಾಲಸಾ ವೆಲ್ಡಿಂಗ್ ಶಾಪ್ನಲ್ಲಿ ಫೆಬ್ರವರಿ 9ರ ಸೋಮವಾರ ರಾತ್ರಿ ಆಕಸ್ಮಿಕವಾಗಿ ಬೆಂಕಿ ಅವಘಡ ಸಂಭವಿಸಿ, ಲಕ್ಷಾಂತರ ರೂಪಾಯಿ ಮೌಲ್ಯದ ಆಸ್ತಿ ಹಾನಿಯಾಗಿರುವ ಘಟನೆ...

ಕಲೆ ಆತ್ಮ ಗೌರವದ ಸಂಕೇತ: ಮಂಕಾಳು ವೈದ್ಯ

ಮುರುಡೇಶ್ವರ: ಮುರುಡೇಶ್ವರದ ಯಕ್ಷರಕ್ಷೆ ವೇದಿಕೆಯಲ್ಲಿ ರಾಗಶ್ರೀ ಸಂಗೀತ ವಿದ್ಯಾಲಯ ಹಡಿನಬಾಳ ಇದರ ಮುರುಡೇಶ್ವರ ಶಾಖೆಯ ಪ್ರಥಮ ವರ್ಷದ ವಾರ್ಷಿಕೋತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಉಸ್ತುವಾರಿ ಸಚಿವರಾದ ಶ್ರೀ ಮಂಕಾಳು ವೈದ್ಯರು ಕಲೆ ಮತ್ತು...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಕಲೆ ಆತ್ಮ ಗೌರವದ ಸಂಕೇತ: ಮಂಕಾಳು ವೈದ್ಯ

ಮುರುಡೇಶ್ವರ: ಮುರುಡೇಶ್ವರದ ಯಕ್ಷರಕ್ಷೆ ವೇದಿಕೆಯಲ್ಲಿ ರಾಗಶ್ರೀ ಸಂಗೀತ ವಿದ್ಯಾಲಯ ಹಡಿನಬಾಳ ಇದರ ಮುರುಡೇಶ್ವರ ಶಾಖೆಯ ಪ್ರಥಮ...

ಬಡ, ಮಧ್ಯಮವರ್ಗ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಒಟ್ಟು 3 ಕೋಟಿ ಮೌಲ್ಯದ ವಿದ್ಯಾರ್ಥಿವೇತನ

ಉಡುಪಿ: ರಾಜ್ಯದಲ್ಲೇ ಪ್ರಸಿದ್ಧ ಪಡೆದ ಉಡುಪಿ ಲಾರ್ಡ್ಸ್ ಇಂಟರ್‌ನ್ಯಾಷನಲ್ ರೆಸಿಡೆನ್ಷಿಯಲ್ ಸ್ಕೂಲ್ , ಬಡ, ಮಧ್ಯಮವರ್ಗ...

ಶತರುದ್ರ ಮತ್ತು ಶತಚಂಡಿಕಾ ಯಾಗಕ್ಕೆ ಆತ್ಮೀಯ ಸ್ವಾಗತ

ಕಾರವಾರ: ದಿವಂಗತ ಕೃಷ್ಣ ಸೈಲ್ ಹಾಗೂ ಗಿರಿಜಾ ಕೃಷ್ಣ ಸೈಲ್ ರವರ ಆರ್ಶೀವಾದದೊಂದಿಗೆ ಈ ಕ್ಷೇತ್ರದ...

ಸಹಕಾರದ ಬೆಳಕಿನಲ್ಲಿ ಮಹತ್ವದ ಹೆಜ್ಜೆಯಿಟ್ಟ ‘ಸೂರ್ಯ’: ಹೊಸ ಶಾಖೆಗಳತ್ತ ನಾಗರಾಜ ನಾಯಕರ ದೃಷ್ಟಿ”

ಅಂಕೋಲಾ: ಅಂಕೋಲೆ ಎಂದಾಗ ಕರಿ ಇಸಾಡು ಮಾವಿನಹಣ್ಣು ನೆನಪಾದರೆ, “ಸೂರ್ಯ” ಸಹಕಾರಿ ಎಂದಾಗ ನಾಗರಾಜ ನಾಯಕ...

ಆಟೋರಿಕ್ಷಾಗೆ ಪ್ರವಾಸಿಗರಿದ್ದ ಟಿ.ಟಿ ವಾಹನ ಡಿಕ್ಕಿ : ಮಹಿಳೆಗೆ ಗಾಯ

ಅಂಕೋಲಾ: ಸಹೋದರಿಯ ಮನೆಗೆ ಬಂದು ವಾಪಸ್ ಮನೆಗೆ ಮರಳುತ್ತಿದ್ದ ಗೃಹಿಣಿ ಇದ್ದ ಆಟೋರಿಕ್ಷಾಗೆ ಪ್ರವಾಸಿಗರಿದ್ದ ಟಿ.ಟಿ...

ಶಾಲಾ ಮಕ್ಕಳ ಬಸ್ ಪಲ್ಟಿ: ವಿದ್ಯಾರ್ಥಿ ಸಾವು

ಹೊನ್ನಾವರ: ಗೇರುಸೊಪ್ಪ ಸುಳೆಮುರ್ಕಿ ಕ್ರಾಸ್ ಹತ್ತಿರ ಶಾಲಾಮಕ್ಕಳ ಪ್ರವಾಸಿ ಬಸ್ ಪಲ್ಟಿಯಾಗಿ, ವಿಧ್ಯಾರ್ಥಿ ಸಾವನಪ್ಪಿರುವ ಘಟನೆ...