Important

ಈ ಊರಿನವರ ಗೋಳಿನ ಕಥೆ-ವ್ಯಥೆ ನೋಡಿ

Share

ಶಿರಸಿ: ಇದು ಯಾವುದೋ ಇತಿಹಾಸದ ಕಟ್ಟು ಕಥೆಯಲ್ಲ.. ಅಕ್ಷರಶಃ ಜೀವ ಕೈಯ್ಯಲ್ಲಿಡಿದು ಸಾಗಿ, ಕುಗ್ರಾಮದ ಕರಾಳ ಕಥೆಗೆ ಸಾಕ್ಷಿಯಾದ ಕಣ್ಣುಗಳ ಅಕ್ಷರ ರೂಪದ ಚಿತ್ರಣವಿದು.. ಶಿರಸಿ ತಾಲೂಕಿನ ಗಡಿಭಾಗಕ್ಕೆ ಹೊಂದಿಕೊoಡಿರುವ ಮುಷ್ಕಿ ಸಮೀಪದ ಶಿರಗಣಿ ಗ್ರಾಮದ ರಸ್ತೆಯ ಕಣ್ಣೀರ ಕಥೆಯಿದು. ಶಿರಸಿಯಿಂದ 45 ಕಿ.ಮೀ ದೂರದಲ್ಲಿರುವ ಶಿರಗಣಿ ಗ್ರಾಮದ ಅನಾರೋಗ್ಯ ಪೀಡಿತ ವೃದ್ಧೆಯೊಬ್ಬರನ್ನು ಇತ್ತಿಚಿಗೆ ಕಂಬ್ಳಿಯಲ್ಲಿ ಹೊತ್ತೊಯ್ದಿದ್ದ ವಿಷಯ ರಾಜ್ಯಮಟ್ಟದ ಸುದ್ದಿಯಾಗಿತ್ತು.

ಸ್ವಾತಂತ್ರ‍್ಯ ಪಡೆದು 78 ವರ್ಷದ ಹೊಸ್ತಿಲಲ್ಲಿದ್ದರೂ, ಗ್ರಾಮಾಂತರ ಭಾಗದ ಈ ಕುಗ್ರಾಮ ಮೂಲಭೂತ ಅವಶ್ಯಕತೆಗಳಿಂದ ವಂಚಿತಗೊoಡಿದ್ದು, ನಾಗರಿಕ ಸಮಾಜ ತಲೆತಗ್ಗಿಸುವ ವಿಚಾರವಾಗಿದೆ. ಸುಮಾರು ಏಳರಿಂದ ಎಂಟು ಕಿ.ಮೀಗಳಷ್ಟು ದೂರದಿಂದ ತಮ್ಮ ಅವಶ್ಯಕತೆಗಾಗಿ ಜನರು ನಡೆದು ಸಾಗುವ ಪರಿಸ್ಥಿತಿ ಇಂದಿಗೂ ಇದೆಯೆಂದರೂ ಅದು ಆಡಳಿತ ನಡೆಸುವ ಸರ್ಕಾರದ ದಿವ್ಯ ನಿರ್ಲಕ್ಷ್ಯಕ್ಕೆ ಹಿಡಿದ ಕೈಗನ್ನಡಿಯಾಗಿದೆ.

ಪ್ರತಿ ಮಳೆಗಾಲದಲ್ಲಿಯೂ ತಮ್ಮ ನರಕಯಾತನೆಯನ್ನು ಅಧಿಕಾರಿಗಳ, ಜನಪ್ರತಿನಿಧಿಗಳ ಗಮನಕ್ಕೆ ತಂದರೂ ಸಹ ಮತ್ತೆ ಮತ್ತೆ ಸೌಲಭ್ಯದಿಂದ ವಂಚಿತರಾಗುವ ಶಿರಗಣಿ ಗ್ರಾಮದ ಗ್ರಾಮಸ್ಥರ ಅನಿಸಿಕೆಯನ್ನು ಅವರಿಂದಲೇ ಕೇಳಬೇಕು. ತಮಗೆ ಬೇಕಾದ ಎಲ್ಲ ವ್ಯವಸ್ಥೆಗಳನ್ನು ಗ್ರಾಮಸ್ಥರೇ ಎಲ್ಲ ಸೇರಿ ಮಾಡಿಕೊಳ್ಳುವ ಅನಿವಾರ್ಯತೆ ಇಲ್ಲಿನವರದ್ದು. ಎಲ್ಲ ಸಮುದಾಯದ ಜನ ಜೊತೆಗೂಡಿ ತಮ್ಮ ಕೈಲಾಗುವ ಸಹಕಾರವನ್ನು ಪರಸ್ಪರ ಮಾಡಿಕೊಳ್ಳುವುದು ಇವರಿಗೆ ನಿತ್ಯದ ಕಾಯಕ.

ತಮ್ಮೂರಿನ ರಸ್ತೆಯನ್ನು ಸರಿಪಡಿಸಲು ಕಳೆದ ನಲವತ್ತು, ಐವತ್ತು ವರ್ಷಗಳಿಂದ ಕಲ್ಲು, ಜಲ್ಲಿ ಹೊತ್ತಿದ್ದ ಶಿರಗಣಿ ಗ್ರಾಮದ ವೃದ್ಧರು ಇಂದು 97 ರ ಇಳಿ ವಯಸ್ಸಿನಲ್ಲಿ ಹಾಸಿಗೆಯಲ್ಲಿ ಅಂತಿಮ ದಿನವನ್ನು ಎಣಿಸುತ್ತಿದ್ದಾರೆ. ಆದರೆ ಅವರ ಅನಾರೋಗ್ಯದ ಸಮಯದಲ್ಲಿಯೂ ಅವರನ್ನು ಕಂಬ್ಳಿಯಲ್ಲಿ ಹೊತ್ತೊಯ್ಯುವ ಪರಿಸ್ಥಿತಿ ಇಂದಿಗೂ ಇರುವುದು ದುರದೃಷ್ಟಕರವಾಗಿದೆ.

ಸ್ವಾತಂತ್ರ‍್ಯ ಬಂದು 78 ವರ್ಷ ಕಳೆದರೂ ಸಹ ನಮ್ಮ ಪಕ್ಕಸಲ್ಲಿಯೇ ಇಂತಹ ಪರಿಸ್ಥಿತಿ ಇರುವ ಊರನ್ನು ನೋಡಿದರೆ ಸರಕಾರದ ಆಡಳುತ ವ್ಯವಸ್ಥೆ ಬದುಕಿದೆಯಾ, ಸತ್ತಿದೆಯಾ ಎಂಬ ಅನುಮಾನ ಮೂಡುತ್ತಿದೆ. ಈ ಕೂಡಲೇ ಶಾಸಕರಾದ ಭೀಮಣ್ಣನವರು ಅಧಿಕಾರಿಗಳ ಜೊತೆಗೆ ಈ ಗ್ರಾಮಕ್ಕೆ ಭೇಟಿ ನೀಡಿ, ರಸ್ತೆಯನ್ನು ಸರಿಪಡಿಸಿಕೊಡಬೇಕು. ಇಲ್ಲವಾದಲ್ಲಿ ಊರಿನ ಗ್ರಾಮಸ್ಥರ ಪರವಾಗಿ, ಅವರ ಜೊತೆಯಾಗಿ ನಿಮ್ಮ ಕಛೇರಿಯೆದುರು ಅನಿರ್ದಿಷ್ಟಾವಧಿ ಪ್ರತಿಭಟನೆ ಮಾಡಲಾಗುವುದು. ಈ ರಸ್ತೆ ಸಮಸ್ಯೆ ಬಗರಹರಿಯುವವರೆಗೂ ನಾನು ಈ ಊರಿನ ಜೊತೆಗೆ, ಜನರೊಡನೆ ಗಟ್ಟಿಯಾಗಿ ಇರುತ್ತೇನೆ. ಅಭಿವೃದ್ಧಿ ವಿಚಾರದಲ್ಲಿ ಯಾವುದೇ ರಾಜಿಯಿಲ್ಲ ಎಂದು ಸಾಮಾಜಿಕ ಹೋರಾಟಗಾರ ಅನಂತಮೂರ್ತಿ ಹೆಗಡೆ ಎಚ್ಚರಿಸಿದ್ದಾರೆ.

ವಿಸ್ಮಯ ನ್ಯೂಸ್, ಶಿರಸಿ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಸಹಕಾರದ ಬೆಳಕಿನಲ್ಲಿ ಮಹತ್ವದ ಹೆಜ್ಜೆಯಿಟ್ಟ ‘ಸೂರ್ಯ’: ಹೊಸ ಶಾಖೆಗಳತ್ತ ನಾಗರಾಜ ನಾಯಕರ ದೃಷ್ಟಿ”

ಅಂಕೋಲಾ: ಅಂಕೋಲೆ ಎಂದಾಗ ಕರಿ ಇಸಾಡು ಮಾವಿನಹಣ್ಣು ನೆನಪಾದರೆ, “ಸೂರ್ಯ” ಸಹಕಾರಿ ಎಂದಾಗ ನಾಗರಾಜ ನಾಯಕ ಅರೆಗದ್ದೆ ನೆನಪಾಗುತ್ತಾರೆ. ಅದರ ಬೆನ್ನಲ್ಲೇ ರಿಯಲ್ ಎಸ್ಟೇಟ್ ಉದ್ಯಮ, ಆಯ್ಸಪ್ಲಾಂಟ್. ಸಹನಾ ಪ್ಯಾಲೇಸ್ ಲಾಡ್ಜ್,...

ಆಟೋರಿಕ್ಷಾಗೆ ಪ್ರವಾಸಿಗರಿದ್ದ ಟಿ.ಟಿ ವಾಹನ ಡಿಕ್ಕಿ : ಮಹಿಳೆಗೆ ಗಾಯ

ಅಂಕೋಲಾ: ಸಹೋದರಿಯ ಮನೆಗೆ ಬಂದು ವಾಪಸ್ ಮನೆಗೆ ಮರಳುತ್ತಿದ್ದ ಗೃಹಿಣಿ ಇದ್ದ ಆಟೋರಿಕ್ಷಾಗೆ ಪ್ರವಾಸಿಗರಿದ್ದ ಟಿ.ಟಿ ವಾಹನ ಬಡಿದ ಪರಿಣಾಮ ಮಹಿಳೆ ಗಾಯಗೊಂಡ ಘಟನೆ ಪಟ್ಟಣದ ಅರಣ್ಯ ಇಲಾಖೆ ಕಛೇರಿ ಹತ್ತಿರ...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಬಡ, ಮಧ್ಯಮವರ್ಗ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಒಟ್ಟು 3 ಕೋಟಿ ಮೌಲ್ಯದ ವಿದ್ಯಾರ್ಥಿವೇತನ

ಉಡುಪಿ: ರಾಜ್ಯದಲ್ಲೇ ಪ್ರಸಿದ್ಧ ಪಡೆದ ಉಡುಪಿ ಲಾರ್ಡ್ಸ್ ಇಂಟರ್‌ನ್ಯಾಷನಲ್ ರೆಸಿಡೆನ್ಷಿಯಲ್ ಸ್ಕೂಲ್ , ಬಡ, ಮಧ್ಯಮವರ್ಗ...

ಶತರುದ್ರ ಮತ್ತು ಶತಚಂಡಿಕಾ ಯಾಗಕ್ಕೆ ಆತ್ಮೀಯ ಸ್ವಾಗತ

ಕಾರವಾರ: ದಿವಂಗತ ಕೃಷ್ಣ ಸೈಲ್ ಹಾಗೂ ಗಿರಿಜಾ ಕೃಷ್ಣ ಸೈಲ್ ರವರ ಆರ್ಶೀವಾದದೊಂದಿಗೆ ಈ ಕ್ಷೇತ್ರದ...

ಸಹಕಾರದ ಬೆಳಕಿನಲ್ಲಿ ಮಹತ್ವದ ಹೆಜ್ಜೆಯಿಟ್ಟ ‘ಸೂರ್ಯ’: ಹೊಸ ಶಾಖೆಗಳತ್ತ ನಾಗರಾಜ ನಾಯಕರ ದೃಷ್ಟಿ”

ಅಂಕೋಲಾ: ಅಂಕೋಲೆ ಎಂದಾಗ ಕರಿ ಇಸಾಡು ಮಾವಿನಹಣ್ಣು ನೆನಪಾದರೆ, “ಸೂರ್ಯ” ಸಹಕಾರಿ ಎಂದಾಗ ನಾಗರಾಜ ನಾಯಕ...

ಆಟೋರಿಕ್ಷಾಗೆ ಪ್ರವಾಸಿಗರಿದ್ದ ಟಿ.ಟಿ ವಾಹನ ಡಿಕ್ಕಿ : ಮಹಿಳೆಗೆ ಗಾಯ

ಅಂಕೋಲಾ: ಸಹೋದರಿಯ ಮನೆಗೆ ಬಂದು ವಾಪಸ್ ಮನೆಗೆ ಮರಳುತ್ತಿದ್ದ ಗೃಹಿಣಿ ಇದ್ದ ಆಟೋರಿಕ್ಷಾಗೆ ಪ್ರವಾಸಿಗರಿದ್ದ ಟಿ.ಟಿ...

ಶಾಲಾ ಮಕ್ಕಳ ಬಸ್ ಪಲ್ಟಿ: ವಿದ್ಯಾರ್ಥಿ ಸಾವು

ಹೊನ್ನಾವರ: ಗೇರುಸೊಪ್ಪ ಸುಳೆಮುರ್ಕಿ ಕ್ರಾಸ್ ಹತ್ತಿರ ಶಾಲಾಮಕ್ಕಳ ಪ್ರವಾಸಿ ಬಸ್ ಪಲ್ಟಿಯಾಗಿ, ವಿಧ್ಯಾರ್ಥಿ ಸಾವನಪ್ಪಿರುವ ಘಟನೆ...

ಆಯಕಟ್ಟಿನ ಪ್ರದೇಶದಲ್ಲಿರುವ 8 ಗುಂಟೆ ಜಾಗ ಮಾರಾಟಕ್ಕಿದೆ

ಅಂಕೋಲಾ: ತಾಲೂಕಿನ ಬಳಲೆಯಲ್ಲಿ ಅತ್ಯುತ್ತಮ ಸೌಕರ್ಯ ಹೊಂದಿರುವ, ಆಯಕಟ್ಟಿನ ಪ್ರದೇಶದಲ್ಲಿರುವ NA ಆದ ಜಾಗ ಮಾರಾಟಕ್ಕಿದೆ....

ಕುಮಟಾದ ಬ್ರೌನ್ಸ್ ವಿಲೇಜ್ ಫ್ಯಾಮಿಲಿ ಗಾರ್ಡನ್ ರೆಸ್ಟೋರೆಂಟ್ ನಲ್ಲಿ ಖ್ಯಾತ ಕಲಾವಿದರಿಂದ ಲೈವ್ ಮ್ಯೂಜಿಕ್ ನೋಡುತ್ತಾ ರುಚಿ-ಶುಚಿಯಾದ ಆಹಾರ ಸವಿಯುವ ಅವಕಾಶ

ಕುಮಟಾ: ಬ್ರೌನ್ಸ್ ವಿಲೇಜ್ ಫ್ಯಾಮಿಲಿ ಗಾರ್ಡನ್ ರೆಸ್ಟೋರೆಂಟ್ ಕುಮಟಾ, ಇದು ಉತ್ತರಕನ್ನಡ ಜಿಲ್ಲೆಯ ಅತ್ಯುತ್ತಮ ಫ್ಯಾಮಿಲಿ...