Important

ಸಂಪನ್ನಗೊoಡ ಹೊನ್ನೆಬೈಲ್ ಹಬ್ಬ: ಹರಿದು ಬಂದ ಭಕ್ತ ಸಾಗರ

Share

ಅಂಕೋಲಾ: ಹೊನ್ನೆಬೈಲ್ ಗ್ರಾಮ ದೇವರುಗಳಾದ ಶ್ರೀಬೊಮ್ಮಯ್ಯ ದೇವರು, ಶ್ರೀಕುಸ್ಲೆ ದೇವರು ಮತ್ತು ಶ್ರೀಮಾಣಿಬೀರ ದೇವರುಗಳ ಬಂಡಿಹಬ್ಬಕ್ಕೆ ಪೂರಕವಾದ ವಿಶೇಷ ಹಬ್ಬ ಸಕಲ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಅತ್ಯಂತ ವಿಜೃಂಭಣೆಯಿoದ ನಡೆಯಿತು. ಕಾರಣಾಂತರಗಳಿoದ ಎಪ್ರಿಲ್ ಮೇ ಒಳಗಡೆ ನಡೆಸಬೇಕಿದ್ದ ಈ ವರ್ಷದ ಬಂಡಿಹಬ್ಬದ ಆಚರಣೆ ಸ್ವಲ್ಪ ವಿಳಂಬವಾಗಿ ಇದೀಗ ಜೂನ್ 10 ಕ್ಕೆ ನಡೆಸುವಂತಾಗಿತ್ತು.

ಈ ವೇಳೆ ಮಳೆಯ ಸಾಧ್ಯತೆ ಮತ್ತಿತರ ಕಾರಣಗಳಿಂದ ಹಬ್ಬದ ಆಚರಣೆಗೆ ತೊಡಕಾಗದಂತೆ , ಕಳಸ ಮೆರವಣಿಗೆ ಹೊರತಾಗಿ ಇತರೆ ಧಾರ್ಮಿಕ – ಸಾಂಪ್ರದಾಯಿಕ ಅಚರಣೆಯೊಂದಿಗೆ ಪೂಜೆ ಪುನಸ್ಕಾರ ಸಲ್ಲಿಸಲಾಯಿತು. ಸರ್ವಾಭರಣ ಭೂಷಿತ ಶ್ರೀ ದೇವರುಗಳ ಅಲಂಕಾರ,ಪುಷ್ಪಾಲoಕಾರ ಭಕ್ತರ ಮನಸೂರೆಗೊಂಡಿತು. ಗುನಗರು , ಕಟ್ಟಿಗೆದಾರರು ಸೇರಿದಂತೆ ದೇವಸ್ಥಾನ ಆಡಳಿತ ಮಂಡಳಿ ಹಾಗೂ ಹಬ್ಬದಾಚರಣೆಗೆ ಸಂಬoಧಿತ ಪ್ರಮುಖರು ಮತ್ತು ಊರ ನಾಗರಿಕರ ಹಾಗೂ ಸರ್ವ ಸದ್ಭಕ್ತರ ಸಹಕಾರದಲ್ಲಿ ನಡೆಸಲು ನಿರ್ಧರಿಸಿದ್ದ, ಈ ವಿಶೇಷ ಹಬ್ಬದಾಚರಣೆ ಯಶಸ್ಸಿಗೆ ಕೈ ಜೋಡಿಸಿದ ಎಲ್ಲರ ಸಹಕಾರ ಸ್ಮರಿಸಿದ ಟೆಂಪಲ್ ಟ್ರಸ್ಟಿ ಹನುಮಂತ ಗೌಡ , ಸರ್ವರಿಗೂ ಶ್ರೀ ದೇವರು ಒಳಿತು ಮಾಡಲಿ ಎಂದು ಪ್ರಾರ್ಥಿಸಿದರು.

ಸಾವಿರಾರು ಭಕ್ತರು ವಿವಿಧ ದೇವಾಲಯಗಳಲ್ಲಿ ಹಣ್ಣು ಕಾಯಿ, ಆರತಿ ಸೇವೆ ಮತ್ತಿತರ ಹರಕೆ ಸೇವೆ ಸಲ್ಲಿಸಿ ತಮ್ಮ ಇಷ್ಟಾರ್ಥ ಸಿದ್ದಿಗೆ ಪ್ರಾರ್ಥಿಸಿದರು. ದೇವಸ್ಥಾನದ ಎದುರು ಗಡೆ ಭಕ್ತರ ದಂಡು ಕಂಡು ಬಂತು. ಸ್ಥಳೀಯ ಹಾಗೂ ಇತರೆಡೆಯ ಅಸಂಖ್ಯ ಭಕ್ತರು ಸಡಗರ ಸಂಭ್ರಮದಿAದ ಹಬ್ಬದ ಆಚರಣೆಯಲ್ಲಿ ಪಾಲ್ಗೊಂಡರು. ಜೂನ್ 10 ಆದರೂ ದೇವರುಗಳ ಕೃಪೆಯಿಂದ ಮಳೆ ಮತ್ತಿತರ ತೊಡಕಾಗದೇ ಹಬ್ಬದ ಆಚರಣೆ ವಿಜೃಂಭಣೆಯಿoದ ಸಂಪನ್ನಗೊoಡಿರುವುದಕ್ಕೆ ದೇವಸ್ಥಾನ ಆಡಳಿತ ಮಂಡಳಿ ಹಾಗೂ ಹಬ್ಬದ ಆಚರಣೆಗೆ ಸಂಬAಧಿಸಿದ ಹಿರಿಕಿರಿಯ ಪ್ರಮುಖರು ಹಾಗೂ ಭಕ್ತವೃಂದ ಸಂತಸ ಸೂಚಿಸಿದೆ.

ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಆಟೋರಿಕ್ಷಾಗೆ ಪ್ರವಾಸಿಗರಿದ್ದ ಟಿ.ಟಿ ವಾಹನ ಡಿಕ್ಕಿ : ಮಹಿಳೆಗೆ ಗಾಯ

ಅಂಕೋಲಾ: ಸಹೋದರಿಯ ಮನೆಗೆ ಬಂದು ವಾಪಸ್ ಮನೆಗೆ ಮರಳುತ್ತಿದ್ದ ಗೃಹಿಣಿ ಇದ್ದ ಆಟೋರಿಕ್ಷಾಗೆ ಪ್ರವಾಸಿಗರಿದ್ದ ಟಿ.ಟಿ ವಾಹನ ಬಡಿದ ಪರಿಣಾಮ ಮಹಿಳೆ ಗಾಯಗೊಂಡ ಘಟನೆ ಪಟ್ಟಣದ ಅರಣ್ಯ ಇಲಾಖೆ ಕಛೇರಿ ಹತ್ತಿರ...

ಶಾಲಾ ಮಕ್ಕಳ ಬಸ್ ಪಲ್ಟಿ: ವಿದ್ಯಾರ್ಥಿ ಸಾವು

ಹೊನ್ನಾವರ: ಗೇರುಸೊಪ್ಪ ಸುಳೆಮುರ್ಕಿ ಕ್ರಾಸ್ ಹತ್ತಿರ ಶಾಲಾಮಕ್ಕಳ ಪ್ರವಾಸಿ ಬಸ್ ಪಲ್ಟಿಯಾಗಿ, ವಿಧ್ಯಾರ್ಥಿ ಸಾವನಪ್ಪಿರುವ ಘಟನೆ ನಡೆದಿದೆ. ಮೈಸೂರಿನ ಟಿ.ಕೆ ಲೇಔಟ್ ತರಳಬಾಳು ಫ್ರೌಡಶಾಲಾ ವಿದ್ಯಾರ್ಥಿಗಳು ಜೋಗ್ ಫಾಲ್ಸ್ ಪ್ರವಾಸ ಮುಗಿಸಿ...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಬಡ, ಮಧ್ಯಮವರ್ಗ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಒಟ್ಟು 3 ಕೋಟಿ ಮೌಲ್ಯದ ವಿದ್ಯಾರ್ಥಿವೇತನ

ಉಡುಪಿ: ರಾಜ್ಯದಲ್ಲೇ ಪ್ರಸಿದ್ಧ ಪಡೆದ ಉಡುಪಿ ಲಾರ್ಡ್ಸ್ ಇಂಟರ್‌ನ್ಯಾಷನಲ್ ರೆಸಿಡೆನ್ಷಿಯಲ್ ಸ್ಕೂಲ್ , ಬಡ, ಮಧ್ಯಮವರ್ಗ...

ಶತರುದ್ರ ಮತ್ತು ಶತಚಂಡಿಕಾ ಯಾಗಕ್ಕೆ ಆತ್ಮೀಯ ಸ್ವಾಗತ

ಕಾರವಾರ: ದಿವಂಗತ ಕೃಷ್ಣ ಸೈಲ್ ಹಾಗೂ ಗಿರಿಜಾ ಕೃಷ್ಣ ಸೈಲ್ ರವರ ಆರ್ಶೀವಾದದೊಂದಿಗೆ ಈ ಕ್ಷೇತ್ರದ...

ಸಹಕಾರದ ಬೆಳಕಿನಲ್ಲಿ ಮಹತ್ವದ ಹೆಜ್ಜೆಯಿಟ್ಟ ‘ಸೂರ್ಯ’: ಹೊಸ ಶಾಖೆಗಳತ್ತ ನಾಗರಾಜ ನಾಯಕರ ದೃಷ್ಟಿ”

ಅಂಕೋಲಾ: ಅಂಕೋಲೆ ಎಂದಾಗ ಕರಿ ಇಸಾಡು ಮಾವಿನಹಣ್ಣು ನೆನಪಾದರೆ, “ಸೂರ್ಯ” ಸಹಕಾರಿ ಎಂದಾಗ ನಾಗರಾಜ ನಾಯಕ...

ಆಟೋರಿಕ್ಷಾಗೆ ಪ್ರವಾಸಿಗರಿದ್ದ ಟಿ.ಟಿ ವಾಹನ ಡಿಕ್ಕಿ : ಮಹಿಳೆಗೆ ಗಾಯ

ಅಂಕೋಲಾ: ಸಹೋದರಿಯ ಮನೆಗೆ ಬಂದು ವಾಪಸ್ ಮನೆಗೆ ಮರಳುತ್ತಿದ್ದ ಗೃಹಿಣಿ ಇದ್ದ ಆಟೋರಿಕ್ಷಾಗೆ ಪ್ರವಾಸಿಗರಿದ್ದ ಟಿ.ಟಿ...

ಶಾಲಾ ಮಕ್ಕಳ ಬಸ್ ಪಲ್ಟಿ: ವಿದ್ಯಾರ್ಥಿ ಸಾವು

ಹೊನ್ನಾವರ: ಗೇರುಸೊಪ್ಪ ಸುಳೆಮುರ್ಕಿ ಕ್ರಾಸ್ ಹತ್ತಿರ ಶಾಲಾಮಕ್ಕಳ ಪ್ರವಾಸಿ ಬಸ್ ಪಲ್ಟಿಯಾಗಿ, ವಿಧ್ಯಾರ್ಥಿ ಸಾವನಪ್ಪಿರುವ ಘಟನೆ...

ಆಯಕಟ್ಟಿನ ಪ್ರದೇಶದಲ್ಲಿರುವ 8 ಗುಂಟೆ ಜಾಗ ಮಾರಾಟಕ್ಕಿದೆ

ಅಂಕೋಲಾ: ತಾಲೂಕಿನ ಬಳಲೆಯಲ್ಲಿ ಅತ್ಯುತ್ತಮ ಸೌಕರ್ಯ ಹೊಂದಿರುವ, ಆಯಕಟ್ಟಿನ ಪ್ರದೇಶದಲ್ಲಿರುವ NA ಆದ ಜಾಗ ಮಾರಾಟಕ್ಕಿದೆ....

ಕುಮಟಾದ ಬ್ರೌನ್ಸ್ ವಿಲೇಜ್ ಫ್ಯಾಮಿಲಿ ಗಾರ್ಡನ್ ರೆಸ್ಟೋರೆಂಟ್ ನಲ್ಲಿ ಖ್ಯಾತ ಕಲಾವಿದರಿಂದ ಲೈವ್ ಮ್ಯೂಜಿಕ್ ನೋಡುತ್ತಾ ರುಚಿ-ಶುಚಿಯಾದ ಆಹಾರ ಸವಿಯುವ ಅವಕಾಶ

ಕುಮಟಾ: ಬ್ರೌನ್ಸ್ ವಿಲೇಜ್ ಫ್ಯಾಮಿಲಿ ಗಾರ್ಡನ್ ರೆಸ್ಟೋರೆಂಟ್ ಕುಮಟಾ, ಇದು ಉತ್ತರಕನ್ನಡ ಜಿಲ್ಲೆಯ ಅತ್ಯುತ್ತಮ ಫ್ಯಾಮಿಲಿ...