Important

ಶಿರಸಿ ರಸ್ತೆ ಕಾಮಗಾರಿ ವಿಳಂಬಕ್ಕೆ ಆಕ್ರೋಶ: ಅಧಿಕಾರಿಗಳ ಚಳಿ ಬಿಡಿಸಿದಶಾಸಕ ದಿನಕರ ಶೆಟ್ಟಿ

Share

ಕುಮಟಾ: ಅಂಕೋಲಾ ಬೇಲೆಕೆರಿಯಿಂದ ಶಿರಸಿ ಸಾಗರಮಾಲಾ ಯೋಜನೆಯಡಿ ಮಂಜೂರಿಯಾಗಿದ್ದ ರಸ್ತೆ ಕಾಮಗಾರಿ ಗುತ್ತಿಗೆ ಪಡೆದ ಆರ್.ಎನ್.ಎಸ್. ಕಂಪನಿಯು ವಿವಿಧ ಕಾರಣಗಳನ್ನು ನೀಡಿ ಕಾಮಗಾರಿಯನ್ನು ಪೂರ್ಣ ಮಾಡಲು ವಿಳಂಬ ಮಾಡುತ್ತಿರುವ ಹಿನ್ನೆಲೆಯಲ್ಲಿ ಕಾಮಗಾರಿಯ ಸ್ಥಳಕ್ಕೆ ಕುಮಟಾ ಹೊನ್ನಾವರ ವಿಧಾನಸಭಾ ಕ್ಷೇತ್ರದ ಶಾಸಕರಾದ ದಿನಕರ ಶೆಟ್ಟಿಯವರು ಭೆಟಿ ನೀಡಿ ಅಲ್ಲಿನ ಸ್ಥಿತಿಗತಿಗಳನ್ನು ನೋಡಿ ಕಂಪನಿಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಕಳೆದ ಆರು ವರ್ಷಗಳಿಂದ ನಡೆಯುತ್ತಿರುವ ಈ ರಸ್ತೆ ಕಾಮಗಾರಿಯು ಇನ್ನೂ ಪೂರ್ಣವಾಗಿಲ್ಲ. ಆದ್ದರಿಂದ ಈ ಭಾಗದಲ್ಲಿ ಸಂಚರಿಸುವ ಸಾರ್ವಜನಿಕರು ಹಾಗೂ ದಿನ ನಿತ್ಯ ಕೆಲಸಕ್ಕೆ ತೆರಳುವ ಶಿಕ್ಷಕರು, ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಶಾಲಾ ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳಿಗೆ ತುಂಬಾ ತೊಂದರೆಯಾಗುತ್ತಿದೆ.

ಇದರ ಬಗ್ಗೆ ಶಾಸಕರಾದ ದಿನಕರ ಶೆಟ್ಟಿಯವರಲ್ಲಿ ದೂರು ಬಂದ ಹಿನ್ನೆಲೆಯಲ್ಲಿ ಕುಮಟಾ ಸಹಾಯಕ ಆಯುಕ್ತರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರು, ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಕರು ಹಾಗೂ ರಸ್ತೆ ನಿರ್ಮಾಣದ ಜವಾಬ್ದಾರಿ ಹೊಂದಿರುವ ಆರ್‌ಎನ್‌ಎಸ್ ಕಂಪನಿಯ ಪ್ರತಿನಿಧಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿದ ಶಾಸಕರು ಆರ್.ಎನ್.ಎಸ್. ಕಂಪನಿಯ ನಿರ್ಲಕ್ಷ್ಯ ಹಾಗೂ ಕಾಲಾವಕಾಶದಲ್ಲಿ ಕಾಮಗಾರಿ ಪೂರ್ಣಗೊಳಿಸದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿ ಆರ್.ಎನ್.ಎಸ್. ಕಂಪನಿಯ ಅಧಿಕಾರಿಗಳೊಂದಿಗೆ ಫೋನ್ ಕರೆ ಮಾಡಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು ಆರ್.ಎನ್.ಎಸ್. ಕಂಪನಿಯು ವಿವಿಧ ಕಾರಣಗಳನ್ನು ನೀಡಿ ಕಾಮಗಾರಿಯನ್ನು ಪೂರ್ಣ ಮಾಡಲು ವಿಳಂಬ ಮಾಡುತ್ತಿದೆ. ಕಳೆದ ಆರು ವರ್ಷಗಳಿಂದ ನಡೆಯುತ್ತಿರುವ ಈ ರಸ್ತೆ ಕಾಮಗಾರಿಯು ಇನ್ನೂ ಪೂರ್ಣವಾಗಿಲ್ಲ. ಆದ್ದರಿಂದ ಈ ಭಾಗದಲ್ಲಿ ಸಂಚರಿಸುವ ಸಾರ್ವಜನಿಕರು ಹಾಗೂ ದಿನ ನಿತ್ಯ ಕೆಲಸಕ್ಕೆ ತೆರಳುವ ಶಿಕ್ಷಕರು, ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಶಾಲಾ ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳಿಗೆ ತುಂಬಾ ತೊಂದರೆಯಾಗುತ್ತಿದೆ.

ಇದು ಸಾರ್ವಜನಿಕರ ದಿನನಿತ್ಯದ ಜೀವನದ ಮೇಲೆ ಪರಿಣಾಮ ಬೀರುತ್ತಿರುವುದರಿಂದ ಕಾಮಗಾರಿಯನ್ನು ತಕ್ಷಣವೇ ವೇಗವಾಗಿ ಮುಗಿಸಲು ಎಚ್ಚರಿಕೆ ನೀಡಲಾಗಿದೆ. ಕುಮಟಾ ಭಾಗದಿಂದ ಈ ರಸ್ತೆಯಲ್ಲಿ ಸಂಚರಿಸುವ ಕೆಲಸಕ್ಕೆ ತೆರಳುವ ಶಿಕ್ಷಕರು, ವಿವಿಧ ಇಲಾಖೆಯ ಅಧಿಕಾರಿಗಳಿಗೆ ಕಂಪನಿಯ ವತಿಯಿಂದ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಕುಮಟಾ ಸಹಾಯಕ ಆಯುಕ್ತರಾದ ಕಲ್ಯಾಣಿ ಕಾಂಬ್ಳೆ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರು, ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಕರು ಪ್ರಮುಖರಾದ ಗಜಾನನ ಪೈ ಸೇರಿದಂತೆ ಅಳಕೋಡ ಪಂಚಾಯತ್ ಅಧ್ಯಕ್ಷರು ಹಾಗೂ ಸಾರ್ವಜನಿಕರು ಹಾಜರಿದ್ದರು.

ವಿಸ್ಮಯ ನ್ಯೂಸ್ ದೀಪೇಶ ನಾಯ್ಕ ಕುಮಟಾ…

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಆಟೋರಿಕ್ಷಾಗೆ ಪ್ರವಾಸಿಗರಿದ್ದ ಟಿ.ಟಿ ವಾಹನ ಡಿಕ್ಕಿ : ಮಹಿಳೆಗೆ ಗಾಯ

ಅಂಕೋಲಾ: ಸಹೋದರಿಯ ಮನೆಗೆ ಬಂದು ವಾಪಸ್ ಮನೆಗೆ ಮರಳುತ್ತಿದ್ದ ಗೃಹಿಣಿ ಇದ್ದ ಆಟೋರಿಕ್ಷಾಗೆ ಪ್ರವಾಸಿಗರಿದ್ದ ಟಿ.ಟಿ ವಾಹನ ಬಡಿದ ಪರಿಣಾಮ ಮಹಿಳೆ ಗಾಯಗೊಂಡ ಘಟನೆ ಪಟ್ಟಣದ ಅರಣ್ಯ ಇಲಾಖೆ ಕಛೇರಿ ಹತ್ತಿರ...

ಶಾಲಾ ಮಕ್ಕಳ ಬಸ್ ಪಲ್ಟಿ: ವಿದ್ಯಾರ್ಥಿ ಸಾವು

ಹೊನ್ನಾವರ: ಗೇರುಸೊಪ್ಪ ಸುಳೆಮುರ್ಕಿ ಕ್ರಾಸ್ ಹತ್ತಿರ ಶಾಲಾಮಕ್ಕಳ ಪ್ರವಾಸಿ ಬಸ್ ಪಲ್ಟಿಯಾಗಿ, ವಿಧ್ಯಾರ್ಥಿ ಸಾವನಪ್ಪಿರುವ ಘಟನೆ ನಡೆದಿದೆ. ಮೈಸೂರಿನ ಟಿ.ಕೆ ಲೇಔಟ್ ತರಳಬಾಳು ಫ್ರೌಡಶಾಲಾ ವಿದ್ಯಾರ್ಥಿಗಳು ಜೋಗ್ ಫಾಲ್ಸ್ ಪ್ರವಾಸ ಮುಗಿಸಿ...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಬಡ, ಮಧ್ಯಮವರ್ಗ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಒಟ್ಟು 3 ಕೋಟಿ ಮೌಲ್ಯದ ವಿದ್ಯಾರ್ಥಿವೇತನ

ಉಡುಪಿ: ರಾಜ್ಯದಲ್ಲೇ ಪ್ರಸಿದ್ಧ ಪಡೆದ ಉಡುಪಿ ಲಾರ್ಡ್ಸ್ ಇಂಟರ್‌ನ್ಯಾಷನಲ್ ರೆಸಿಡೆನ್ಷಿಯಲ್ ಸ್ಕೂಲ್ , ಬಡ, ಮಧ್ಯಮವರ್ಗ...

ಶತರುದ್ರ ಮತ್ತು ಶತಚಂಡಿಕಾ ಯಾಗಕ್ಕೆ ಆತ್ಮೀಯ ಸ್ವಾಗತ

ಕಾರವಾರ: ದಿವಂಗತ ಕೃಷ್ಣ ಸೈಲ್ ಹಾಗೂ ಗಿರಿಜಾ ಕೃಷ್ಣ ಸೈಲ್ ರವರ ಆರ್ಶೀವಾದದೊಂದಿಗೆ ಈ ಕ್ಷೇತ್ರದ...

ಸಹಕಾರದ ಬೆಳಕಿನಲ್ಲಿ ಮಹತ್ವದ ಹೆಜ್ಜೆಯಿಟ್ಟ ‘ಸೂರ್ಯ’: ಹೊಸ ಶಾಖೆಗಳತ್ತ ನಾಗರಾಜ ನಾಯಕರ ದೃಷ್ಟಿ”

ಅಂಕೋಲಾ: ಅಂಕೋಲೆ ಎಂದಾಗ ಕರಿ ಇಸಾಡು ಮಾವಿನಹಣ್ಣು ನೆನಪಾದರೆ, “ಸೂರ್ಯ” ಸಹಕಾರಿ ಎಂದಾಗ ನಾಗರಾಜ ನಾಯಕ...

ಆಟೋರಿಕ್ಷಾಗೆ ಪ್ರವಾಸಿಗರಿದ್ದ ಟಿ.ಟಿ ವಾಹನ ಡಿಕ್ಕಿ : ಮಹಿಳೆಗೆ ಗಾಯ

ಅಂಕೋಲಾ: ಸಹೋದರಿಯ ಮನೆಗೆ ಬಂದು ವಾಪಸ್ ಮನೆಗೆ ಮರಳುತ್ತಿದ್ದ ಗೃಹಿಣಿ ಇದ್ದ ಆಟೋರಿಕ್ಷಾಗೆ ಪ್ರವಾಸಿಗರಿದ್ದ ಟಿ.ಟಿ...

ಶಾಲಾ ಮಕ್ಕಳ ಬಸ್ ಪಲ್ಟಿ: ವಿದ್ಯಾರ್ಥಿ ಸಾವು

ಹೊನ್ನಾವರ: ಗೇರುಸೊಪ್ಪ ಸುಳೆಮುರ್ಕಿ ಕ್ರಾಸ್ ಹತ್ತಿರ ಶಾಲಾಮಕ್ಕಳ ಪ್ರವಾಸಿ ಬಸ್ ಪಲ್ಟಿಯಾಗಿ, ವಿಧ್ಯಾರ್ಥಿ ಸಾವನಪ್ಪಿರುವ ಘಟನೆ...

ಆಯಕಟ್ಟಿನ ಪ್ರದೇಶದಲ್ಲಿರುವ 8 ಗುಂಟೆ ಜಾಗ ಮಾರಾಟಕ್ಕಿದೆ

ಅಂಕೋಲಾ: ತಾಲೂಕಿನ ಬಳಲೆಯಲ್ಲಿ ಅತ್ಯುತ್ತಮ ಸೌಕರ್ಯ ಹೊಂದಿರುವ, ಆಯಕಟ್ಟಿನ ಪ್ರದೇಶದಲ್ಲಿರುವ NA ಆದ ಜಾಗ ಮಾರಾಟಕ್ಕಿದೆ....

ಕುಮಟಾದ ಬ್ರೌನ್ಸ್ ವಿಲೇಜ್ ಫ್ಯಾಮಿಲಿ ಗಾರ್ಡನ್ ರೆಸ್ಟೋರೆಂಟ್ ನಲ್ಲಿ ಖ್ಯಾತ ಕಲಾವಿದರಿಂದ ಲೈವ್ ಮ್ಯೂಜಿಕ್ ನೋಡುತ್ತಾ ರುಚಿ-ಶುಚಿಯಾದ ಆಹಾರ ಸವಿಯುವ ಅವಕಾಶ

ಕುಮಟಾ: ಬ್ರೌನ್ಸ್ ವಿಲೇಜ್ ಫ್ಯಾಮಿಲಿ ಗಾರ್ಡನ್ ರೆಸ್ಟೋರೆಂಟ್ ಕುಮಟಾ, ಇದು ಉತ್ತರಕನ್ನಡ ಜಿಲ್ಲೆಯ ಅತ್ಯುತ್ತಮ ಫ್ಯಾಮಿಲಿ...