Big News

ರೆಕಾರ್ಡ್ ರೂಮ್ ಪರಿಶೀಲನೆ ನಡೆಸಿದ ಕಂದಾಯ ಸಚಿವರು

Share

ಕುಮಟಾ: ರಾಜ್ಯ ಸರ್ಕಾರದ ಕಂದಾಯ ಸಚಿವರಾದ ಕೃಷ್ಣ ಬೈರೇ ಗೌಡ ಅವರು ಉತ್ತರ ಕನ್ನಡ ಜಿಲ್ಲೆಯ ಪ್ರವಾಸ ಕೈಗೊಂಡಿದ್ದು ಈ ಸಂದರ್ಭದಲ್ಲಿ ಕುಮಟಾ ಆಡಳಿತ ಸೌಧಕ್ಕೆ ಆಗಮಿಸಿ ತಾಲೂಕ ಕಚೇರಿಯ ರೆಕಾರ್ಡ್ ರೂಂಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ತಾಲೂಕಾ ಆಡಳಿತ ಸೌಧಕ್ಕೆ ಆಗಮಿಸಿದ ಸಚಿವರನ್ನು ಜಿಲ್ಲಾಡಳಿತ ಹಾಗೂ ತಾಲೂಕಾಡಳಿತದ ವತಿಯಿಂದ ಹಾರ ಹಾಕಿ ಸ್ವಾಗತಿಸಲಾಯಿತು.

ನಂತರ ಸಚಿವರು ತಾಲೂಕು ಕಚೇರಿಯ ರೆಕಾರ್ಡ್ ರೂಂಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ರಾಜ್ಯ ಸರ್ಕಾರ ಭೂ ಸುರಕ್ಷಾ ಯೋಜನೆಯ ಅಡಿ ತಾಲೂಕು ಕಚೇರಿಯ ರೆಕಾರ್ಡ್ ರೂಂನಲ್ಲಿ ಇರುವ ಎಲ್ಲಾ ಧಾಖಲಾತಿಗಳನ್ನು ಗಣಕೀಕೃತ ಮಾಡಲು ನಿರ್ದೇಶನ ನೀಡಿದ ಹಿನ್ನೆಲೆಯಲ್ಲಿ ಸಚಿವರು ಪರಿಶೀಲನೆ ನಡೆಸಿದರು. ಕುಮಟಾ ತಹಶೀಲ್ದಾರರು ಸಚಿವರಿಗೆ ತಮ್ಮ ಕಚೇರಿಯಲ್ಲಿ ಇರುವ ದಾಖಲಾತಿಗಳ ಬಗ್ಗೆ ಮಾಹಿತಿ ನೀಡಿದರು.

ಪ್ರತಿದಿನದಲ್ಲಿ ಗಣಕೀಕೃತವಾಗುವ ಸರಾಸರಿ ದಾಖಲಾತಿಗಳ ಬಗ್ಗೆ ಜಿಲ್ಲಾಧಿಕಾರಿ ಕೆಅವರು ಸಚಿವರಿಗೆ ಮಾಹಿತಿ ನೀಡಿದರು. ಜಿಲ್ಲೆಯ ಎಲ್ಲಾ ತಾಲೂಕುಗಳ ಮಾಹಿತಿಯನ್ನು ಪಡೆದುಕೊಂಡ ಸಚಿವರು ರೆಕಾರ್ಡ ರೂಂನಲ್ಲಿ ಇಟ್ಟಿರುವ ದಾಖಲಾತಿಗಳ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕಂದಾಯ ಸಚಿವರು ಜನಸಾಮಾನ್ಯರು ತಮ್ಮ ಭೂ ದಾಖಲಾತಿಗಳನ್ನು ಪಡೆಯಲು ತಾಲೂಕು ಕಚೇರಿಗೆ ಬರುವ ಅವಶ್ಯಕತೆ ಇರುವುದಿಲ್ಲ. ತಮ್ಮ ಮನೆಗಳಲ್ಲಿ ಕುಳಿತಲ್ಲಿಯೇ ತಮ್ಮ ಬೆರಳತುದಿಯಲ್ಲಿ ಎಲ್ಲಾ ದಾಖಲಾತಿಗಳ ಬಗ್ಗೆ ಮಾಹಿತಿಯನ್ನು ಪಡೆಯಲು ಸಾಧ್ಯವಿದೆ.

ದಾಖಲಾತಿಗಳನ್ನು ಪಡೆಯುವ ಸಲುವಾಗಿ ಕಚೇರಿಗಳಿಗೆ ಅಲೆಯುವ ಕೆಲಸವನ್ನು ತಪ್ಪಿಸಲು ರಾಜ್ಯ ಸರ್ಕಾರ ಭೂ ಸುರಕ್ಷಾ ಯೋಜನೆಯನ್ನು ತಂದಿದೆ. ಸಲೀಸಾಗಿ ಯಾವುದೇ ಮದ್ಯವರ್ತಿಗಳ ಅವಲಂಬನೆ ಇಲ್ಲದೇ ಶೋಷಣೆಗೆ ಅವಕಾಶ ನೀಡದೆ ತಮ್ಮ ಭೂ ದಾಖಲೆಗಳನ್ನು ಪಡೆಯುವ ಉದ್ದೇಶದಿಂದ ಈ ಯೋಜನೆಯನ್ನು ಜರಿ ಮಾಡಲಾಗಿದೆ. ಇದರಿಂದ ಕೆಲವು ಶಿಥಿಲಾವಸ್ಥೆಗಳಲ್ಲಿರುವ ದಾಖಲಾತಿಗಳನ್ನೂ ಸಹ ಗಣಕೀಕೃತ ಮಾಡಿ ಅವುಗಳು ನಾಶ ಹೊಂದದೇ ಇರುವ ಹಾಗೆ ನೋಡಿಕೊಳ್ಳವ ಉದ್ದೇಶದಿಂದ ಈ ಕೆಲಸವನ್ನು ಮಾಡಲಾಗುತ್ತಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ , ಕುಮಟಾ ತಹಶೀಲ್ದಾರ ಕೃಷ್ಣ ಕಾಮ್ಕರ್, ಹೊನ್ನಾವರ ತಹಶೀಲ್ದಾರ ಪ್ರವೀಣ ಕರಾಂಡೆ, ಕುಮಟಾ ಸಹಾಯಕ ಆಯುಕ್ತರಾದ ಕಲ್ಯಾಣಿ ಕಾಂಬ್ಳೆ, ಜಿಲ್ಲಾ ಉಸ್ತುವಾರಿ ಸಚಿವರಾದ ಮಂಕಾಳ ವೈದ್ಯ, ಕುಮಟಾ ಹೊನ್ನಾವರ ಶಾಸಕರಾದ ದಿನಕರ ಶೆಟ್ಟಿ, ಶಿರಸಿ ಸಿದ್ದಾಪುರ ಶಾಸಕರಾದ ಭೀಮಣ್ಣ ನಾಯ್ಕ,  ಕಾಂಗ್ರೆಸ್ ಮುಖಂಡರಾದ ಭುವನ್ ಭಾಗ್ವತ್, ಹೊನ್ನಪ್ಪ ನಾಯ್ಕ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ವಿಸ್ಮಯ ನ್ಯೂಸ್ ದೀಪೇಶ ನಾಯ್ಕ ಕುಮಟಾ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಜೂನ್ 14 ರಂದು ಚುಟುಕು ಸಾಹಿತ್ಯ ಸಮ್ಮೇಳನ

ಕುಮಟಾ: ಉತ್ತರ ಕನ್ನಡ ಜಿಲ್ಲಾಮಟ್ಟದ 9 ನೇ ಹಾಗೂ ಕುಮಟಾ ತಾಲೂಕಾ 5ನೇ ಚುಟುಕು ಸಾಹಿತ್ಯ ಸಮ್ಮೇಳನವು ಇದೇ ಜೂನ್ 14 ರ ಭಾನುವಾರದಂದು ಕುಮಟಾದ ಲಕ್ಷ್ಮೀಬಾಯಿ ಬುರ್ಡೇಕರ್ ಸಭಾಂಗಣದಲ್ಲಿ ನಡೆಯಲಿದೆ....

ಪ್ರಸಿದ್ಧ ಕಣ್ಣಿನ ಆಸ್ಪತ್ರೆಯಲ್ಲಿ ಉದ್ಯೋಗಾವಕಾಶ: Job Alert

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಪ್ರಸಿದ್ಧ ಕಣ್ಣಿನ ಆಸ್ಪತ್ರೆಗಳಲ್ಲಿ ಒಂದಾದ ಹೆಗಡೆ ಐ ಫೌಂಡೇಷನ್ / ಹೆಗಡೆ ಆಪ್ಟಿಕಲ್ಸ್, ಭಟ್ಕಳ ಹಾಗೂ ಹೊನ್ನಾವರದಲ್ಲಿ ಸುಸಜ್ಜಿತ ಆಸ್ಪತ್ರೆಗಳನ್ನು ಹೊಂದಿದ್ದು, ಇದೀಗ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸಲು...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಸ್ವಾತಂತ್ರ‍್ಯೋತ್ಸವದ ಸಂಭ್ರಮಕ್ಕೆ ತರಂಗ ಎಲೆಕ್ಟ್ರಾನಿಕ್ಸ್ ನಲ್ಲಿ ಭರ್ಜರಿ ಆಫರ್; ಶೇ.70ರಷ್ಟು ರಿಯಾಯಿತಿ

ಕುಮಟಾ: ಸ್ವಾತಂತ್ರ‍್ಯೋತ್ಸವದ ಅಂಗವಾಗಿ ತರಂಗ ಎಲೆಕ್ಟ್ರಾನಿಕ್ಸ್ ಆಂಡ್ ಫರ್ನಿಚರ್ ಗ್ರಾಹಕರಿಗಾಗಿ ವಿಶೇಷ ‘ಫ್ರೀಡಂ ಫೆಸ್ಟಿವಲ್’ ಆಫರ್...

ಜೂನ್ 14 ರಂದು ಚುಟುಕು ಸಾಹಿತ್ಯ ಸಮ್ಮೇಳನ

ಕುಮಟಾ: ಉತ್ತರ ಕನ್ನಡ ಜಿಲ್ಲಾಮಟ್ಟದ 9 ನೇ ಹಾಗೂ ಕುಮಟಾ ತಾಲೂಕಾ 5ನೇ ಚುಟುಕು ಸಾಹಿತ್ಯ...

ಜಾನುವಾರು ರಕ್ಷಣೆ: ಗೋ ಶಾಲೆಗೆ ರವಾನಿಸುವ ಮೂಲಕ ಗೀರ್ ಹೋರಿಗಳಿಗೆ ಜೀವದಾನ

ಅಂಕೋಲಾ: ವಧೆ ಉದ್ದೇಶದಿಂದ ಹಿಂಸಾತ್ಮಕವಾಗಿ ಸಾಗಿಸುತ್ತಿದ್ದ, ಎರಡು ಭಾರೀ ಗಾತ್ರದ ಗೀರ್ ತಳಿಯ ಹೋರಿಗಳಿಗೆ ಕೊನೆಗೂ...

ಮುರಿನಕಟ್ಟೆ ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಕಾಗೇರಿ ಆಗ್ರಹ

ಭಟ್ಕಳ:ಮುರಿನಕಟ್ಟೆ ವಿಚಾರವು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಹಿಂದೂಗಳ ಭಾವನೆಗಳಿಗೆ ಸಂಬAಧಿಸಿದ ವಿಷಯವಾಗಿದ್ದು, ಕೆಲ ಮತಾಂಧ...

ಅಳ್ವೆಕೋಡಿ ಕಪ್ಪೆಚಿಪ್ಪು ದುರಂತ: ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದ ಕಾಗೇರಿ

ಭಟ್ಕಳ: ತಾಲೂಕಿನ ಅಳ್ವೆಕೋಡಿಯ ಕಪ್ಪೆಚಿಪ್ಪು ದುರಂತದಲ್ಲಿ ಸಾವನ್ನಪ್ಪಿದ ಕುಟುಂಬದವರನ್ನು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಭೇಟಿ...

ಜಿಲ್ಲೆಯ ಆರೋಗ್ಯ ಸೇವೆಗೆ ಐತಿಹಾಸಿಕ ಹೆಜ್ಜೆ : ಶಾಸಕ ಸತೀಶ್ ಸೈಲ್

ಅಂಕೋಲಾ : ಜನರಿಗೆ ಉನ್ನತ ಮಟ್ಟದ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಕಾರವಾರದಲ್ಲಿ 100 ಕೋಟಿ...

ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಲ್ಲಿ ಸಹಾಯಕ ಶಿಕ್ಷಕರು ಬೇಕಾಗಿದ್ದಾರೆ

ಕುಮಟಾ : ಅಂಕೋಲಾದ ಕೆನರಾ ವೆಲ್ಫೇರ್ ಟ್ರಸ್ಟ್ ನ ಕುಮಟಾ ಧಾರೇಶ್ವರದ ದಿನಕರ ಇಂಗ್ಲಿಷ್ ಮೀಡಿಯಂ...

ಅಲಂಕಾರ ಜ್ಯುವೆಲ್ಲರ್ಸ್ : ಅಕ್ಷಯ ತೃತೀಯ ವಿಶೇಷ ಆಫರ್

ಸುವರ್ಣ ಕ್ಷಣವನ್ನು ಇನ್ನಷ್ಟು ವಿಶೇಷವಾಗಿಸಿ : ಈ ಶುಭ ಅಕ್ಷಯ ತೃತೀಯದ ಪ್ರಯುಕ್ತ ಚಿನ್ನ ಮತ್ತು...