Big News

ರೆಕಾರ್ಡ್ ರೂಮ್ ಪರಿಶೀಲನೆ ನಡೆಸಿದ ಕಂದಾಯ ಸಚಿವರು

Share

ಕುಮಟಾ: ರಾಜ್ಯ ಸರ್ಕಾರದ ಕಂದಾಯ ಸಚಿವರಾದ ಕೃಷ್ಣ ಬೈರೇ ಗೌಡ ಅವರು ಉತ್ತರ ಕನ್ನಡ ಜಿಲ್ಲೆಯ ಪ್ರವಾಸ ಕೈಗೊಂಡಿದ್ದು ಈ ಸಂದರ್ಭದಲ್ಲಿ ಕುಮಟಾ ಆಡಳಿತ ಸೌಧಕ್ಕೆ ಆಗಮಿಸಿ ತಾಲೂಕ ಕಚೇರಿಯ ರೆಕಾರ್ಡ್ ರೂಂಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ತಾಲೂಕಾ ಆಡಳಿತ ಸೌಧಕ್ಕೆ ಆಗಮಿಸಿದ ಸಚಿವರನ್ನು ಜಿಲ್ಲಾಡಳಿತ ಹಾಗೂ ತಾಲೂಕಾಡಳಿತದ ವತಿಯಿಂದ ಹಾರ ಹಾಕಿ ಸ್ವಾಗತಿಸಲಾಯಿತು.

ನಂತರ ಸಚಿವರು ತಾಲೂಕು ಕಚೇರಿಯ ರೆಕಾರ್ಡ್ ರೂಂಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ರಾಜ್ಯ ಸರ್ಕಾರ ಭೂ ಸುರಕ್ಷಾ ಯೋಜನೆಯ ಅಡಿ ತಾಲೂಕು ಕಚೇರಿಯ ರೆಕಾರ್ಡ್ ರೂಂನಲ್ಲಿ ಇರುವ ಎಲ್ಲಾ ಧಾಖಲಾತಿಗಳನ್ನು ಗಣಕೀಕೃತ ಮಾಡಲು ನಿರ್ದೇಶನ ನೀಡಿದ ಹಿನ್ನೆಲೆಯಲ್ಲಿ ಸಚಿವರು ಪರಿಶೀಲನೆ ನಡೆಸಿದರು. ಕುಮಟಾ ತಹಶೀಲ್ದಾರರು ಸಚಿವರಿಗೆ ತಮ್ಮ ಕಚೇರಿಯಲ್ಲಿ ಇರುವ ದಾಖಲಾತಿಗಳ ಬಗ್ಗೆ ಮಾಹಿತಿ ನೀಡಿದರು.

ಪ್ರತಿದಿನದಲ್ಲಿ ಗಣಕೀಕೃತವಾಗುವ ಸರಾಸರಿ ದಾಖಲಾತಿಗಳ ಬಗ್ಗೆ ಜಿಲ್ಲಾಧಿಕಾರಿ ಕೆಅವರು ಸಚಿವರಿಗೆ ಮಾಹಿತಿ ನೀಡಿದರು. ಜಿಲ್ಲೆಯ ಎಲ್ಲಾ ತಾಲೂಕುಗಳ ಮಾಹಿತಿಯನ್ನು ಪಡೆದುಕೊಂಡ ಸಚಿವರು ರೆಕಾರ್ಡ ರೂಂನಲ್ಲಿ ಇಟ್ಟಿರುವ ದಾಖಲಾತಿಗಳ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕಂದಾಯ ಸಚಿವರು ಜನಸಾಮಾನ್ಯರು ತಮ್ಮ ಭೂ ದಾಖಲಾತಿಗಳನ್ನು ಪಡೆಯಲು ತಾಲೂಕು ಕಚೇರಿಗೆ ಬರುವ ಅವಶ್ಯಕತೆ ಇರುವುದಿಲ್ಲ. ತಮ್ಮ ಮನೆಗಳಲ್ಲಿ ಕುಳಿತಲ್ಲಿಯೇ ತಮ್ಮ ಬೆರಳತುದಿಯಲ್ಲಿ ಎಲ್ಲಾ ದಾಖಲಾತಿಗಳ ಬಗ್ಗೆ ಮಾಹಿತಿಯನ್ನು ಪಡೆಯಲು ಸಾಧ್ಯವಿದೆ.

ದಾಖಲಾತಿಗಳನ್ನು ಪಡೆಯುವ ಸಲುವಾಗಿ ಕಚೇರಿಗಳಿಗೆ ಅಲೆಯುವ ಕೆಲಸವನ್ನು ತಪ್ಪಿಸಲು ರಾಜ್ಯ ಸರ್ಕಾರ ಭೂ ಸುರಕ್ಷಾ ಯೋಜನೆಯನ್ನು ತಂದಿದೆ. ಸಲೀಸಾಗಿ ಯಾವುದೇ ಮದ್ಯವರ್ತಿಗಳ ಅವಲಂಬನೆ ಇಲ್ಲದೇ ಶೋಷಣೆಗೆ ಅವಕಾಶ ನೀಡದೆ ತಮ್ಮ ಭೂ ದಾಖಲೆಗಳನ್ನು ಪಡೆಯುವ ಉದ್ದೇಶದಿಂದ ಈ ಯೋಜನೆಯನ್ನು ಜರಿ ಮಾಡಲಾಗಿದೆ. ಇದರಿಂದ ಕೆಲವು ಶಿಥಿಲಾವಸ್ಥೆಗಳಲ್ಲಿರುವ ದಾಖಲಾತಿಗಳನ್ನೂ ಸಹ ಗಣಕೀಕೃತ ಮಾಡಿ ಅವುಗಳು ನಾಶ ಹೊಂದದೇ ಇರುವ ಹಾಗೆ ನೋಡಿಕೊಳ್ಳವ ಉದ್ದೇಶದಿಂದ ಈ ಕೆಲಸವನ್ನು ಮಾಡಲಾಗುತ್ತಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ , ಕುಮಟಾ ತಹಶೀಲ್ದಾರ ಕೃಷ್ಣ ಕಾಮ್ಕರ್, ಹೊನ್ನಾವರ ತಹಶೀಲ್ದಾರ ಪ್ರವೀಣ ಕರಾಂಡೆ, ಕುಮಟಾ ಸಹಾಯಕ ಆಯುಕ್ತರಾದ ಕಲ್ಯಾಣಿ ಕಾಂಬ್ಳೆ, ಜಿಲ್ಲಾ ಉಸ್ತುವಾರಿ ಸಚಿವರಾದ ಮಂಕಾಳ ವೈದ್ಯ, ಕುಮಟಾ ಹೊನ್ನಾವರ ಶಾಸಕರಾದ ದಿನಕರ ಶೆಟ್ಟಿ, ಶಿರಸಿ ಸಿದ್ದಾಪುರ ಶಾಸಕರಾದ ಭೀಮಣ್ಣ ನಾಯ್ಕ,  ಕಾಂಗ್ರೆಸ್ ಮುಖಂಡರಾದ ಭುವನ್ ಭಾಗ್ವತ್, ಹೊನ್ನಪ್ಪ ನಾಯ್ಕ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ವಿಸ್ಮಯ ನ್ಯೂಸ್ ದೀಪೇಶ ನಾಯ್ಕ ಕುಮಟಾ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಬೆಂಕಿ ಅವಘಡದಲ್ಲಿ ಅಪಾರಹಾನಿ: ಆದರೆ, ಮಾರಿಕಾಂಬೆಯ ಫೋಟೋ ಮಾತ್ರ ಸೇಫ್

ಅಂಕೋಲಾ: ಪಟ್ಟಣ ವ್ಯಾಪ್ತಿಯ ಲಕ್ಷ್ಮೇಶ್ವರ–ಕುಂಬಾರಕೇರಿ ಪ್ರದೇಶದಲ್ಲಿರುವ ಶ್ರೀ ಮಹಾಲಸಾ ವೆಲ್ಡಿಂಗ್ ಶಾಪ್ನಲ್ಲಿ ಫೆಬ್ರವರಿ 9ರ ಸೋಮವಾರ ರಾತ್ರಿ ಆಕಸ್ಮಿಕವಾಗಿ ಬೆಂಕಿ ಅವಘಡ ಸಂಭವಿಸಿ, ಲಕ್ಷಾಂತರ ರೂಪಾಯಿ ಮೌಲ್ಯದ ಆಸ್ತಿ ಹಾನಿಯಾಗಿರುವ ಘಟನೆ...

ಕಲೆ ಆತ್ಮ ಗೌರವದ ಸಂಕೇತ: ಮಂಕಾಳು ವೈದ್ಯ

ಮುರುಡೇಶ್ವರ: ಮುರುಡೇಶ್ವರದ ಯಕ್ಷರಕ್ಷೆ ವೇದಿಕೆಯಲ್ಲಿ ರಾಗಶ್ರೀ ಸಂಗೀತ ವಿದ್ಯಾಲಯ ಹಡಿನಬಾಳ ಇದರ ಮುರುಡೇಶ್ವರ ಶಾಖೆಯ ಪ್ರಥಮ ವರ್ಷದ ವಾರ್ಷಿಕೋತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಉಸ್ತುವಾರಿ ಸಚಿವರಾದ ಶ್ರೀ ಮಂಕಾಳು ವೈದ್ಯರು ಕಲೆ ಮತ್ತು...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಮಹಾಶಿವರಾತ್ರಿ ಪುಣ್ಯಕಾಲದಲ್ಲಿ ಕಣಕಣೇಶ್ವರ ದೇವರ ನೂತನ ಭವ್ಯ ದೇವಸ್ಥಾನ ಲೋಕಾರ್ಪಣೆ :ಶಿಖರ ಕಲಶ ಪ್ರತಿಷ್ಠೆ – ಅಷ್ಟಬಂಧ ಸಮೇತ ನೂತನ ಶಿವಲಿಂಗ ಪ್ರತಿಷ್ಠಾ ಮಹೋತ್ಸವ

ಅಂಕೋಲಾ: ಪಟ್ಟಣದ ಕಾರವಾರ ರಸ್ತೆಯಲ್ಲಿರುವ ಪುರಾತನ ಪ್ರಸಿದ್ಧ ಶ್ರೀ ಕಣಕಣೇಶ್ವರ ದೇವಾಲಯವು ಮಹಾಶಿವರಾತ್ರಿ ಪುಣ್ಯಸಂದರ್ಭದಲ್ಲಿ ನೂತನ...

ಬೆಂಕಿ ಅವಘಡದಲ್ಲಿ ಅಪಾರಹಾನಿ: ಆದರೆ, ಮಾರಿಕಾಂಬೆಯ ಫೋಟೋ ಮಾತ್ರ ಸೇಫ್

ಅಂಕೋಲಾ: ಪಟ್ಟಣ ವ್ಯಾಪ್ತಿಯ ಲಕ್ಷ್ಮೇಶ್ವರ–ಕುಂಬಾರಕೇರಿ ಪ್ರದೇಶದಲ್ಲಿರುವ ಶ್ರೀ ಮಹಾಲಸಾ ವೆಲ್ಡಿಂಗ್ ಶಾಪ್ನಲ್ಲಿ ಫೆಬ್ರವರಿ 9ರ ಸೋಮವಾರ...

ಅಂಕೋಲಾದಲ್ಲಿ ಕರಾಳ ದಿನಾಚರಣೆ ಮತ್ತು ಬಂದ್ ಗೆ ಕರೆ

ಅಂಕೋಲಾ: ಕೇಣಿ ವಾಣಿಜ್ಯ ಬಂದರು ಯೋಜನೆ ವಿರೋಧಿಸಿ ನಡೆಯುತ್ತಿರುವ ಹೋರಾಟಕ್ಕೆ ನವೆಂಬರ್ 15ರಂದು ಒಂದು ವರ್ಷವಾಗಲಿದ್ದು...

ಕಲಾಸಿರಿ ಪ್ರಶಸ್ತಿಯು ಬದುಕಿನ ಸಾರ್ಥಕತೆಯ ಜ್ಞಾನದ ಬೆಳಕು ಬೆಳಗಲು ಸಾಧ್ಯ:ಪಿ. ಆರ್. ನಾಯ್ಕ

ಭಟ್ಕಳ : ಒಂದು ಹಣತೆಯಿಂದ ಹಲವು ಹಣತೆಗಳು ಬೆಳಗುವಂತೆ, ಕಲಾಸಿರಿಯು ಬದುಕಿನ ಸಾರ್ಥಕತೆಯ ಜ್ಞಾನದ ಬೆಳಕು...

ವರ್ಷಾಂತ್ಯಕ್ಕೆ 12 ಲಕ್ಷ ಲಾಭ ಗಳಿಸಿದ ಸೀತಾರಾಮ ಸಹಕಾರಿ ಸಂಘ

ಭಟ್ಕಳ: ಆರ್ಥಿಕ ವರ್ಷಾಂತ್ಯಕ್ಕೆ ಸಹಕಾರಿಯು 12 ಲಕ್ಷ ಲಾಭ ಗಳಿಸಿದೆ ಎಂದು ಶ್ರೀ ಸೀತಾರಾಮ ಸೌಹಾರ್ಧ...

ಬೈಕಿಗೆ ಡಿಕ್ಕಿ ಹೊಡದ ಲಾರಿ: ಸ್ಥಳದಲ್ಲಿಯೇ ಬೈಕ್ ಸವಾರ ದುರ್ಮರಣ: ಹಿಟ್ & ರನ್ ಕೇಸ್ ದಾಖಲು

ಯಲ್ಲಾಪುರ: ಬೈಕಿಗೆ ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು ಹಿಂಬದಿ ಸವಾರ ತೀವ್ರವಾಗಿ...

ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿಟ್ಟಿದ್ದ ಬೈಕ್ ಕಳ್ಳತನ : ಆರೋಪಿ ಬಂಧನ

ಅಂಕೋಲಾ: ಪಟ್ಟಣದಲ್ಲಿ ನಿಲ್ಲಿಸಿಟ್ಟ ಮೋಟಾರ್ ಬೈಕ್ ಕಳ್ಳತನ ಮಾಡಿದ್ದ ಆರೋಪಿತನನ್ನು ಅಂಕೋಲಾ ಪೊಲೀಸರು ವಾಹನ ಸಮೇತ...