Focus News

ಬಂದರು ನಿರ್ಮಾಣ ವಿರೋಧಿಸಿ ಬೃಹತ್ ಪ್ರತಿಭಟನೆ

Share

ಅಂಕೋಲಾ: ಖಾಸಗಿ ಸಹ ಭಾಗಿತ್ವದಲ್ಲಿ ಅಂಕೋಲಾದಲ್ಲಿ ಕೇಣಿ ಗ್ರೀನ್ ಫೀಲ್ಡ್ ಬೃಹತ್ತ್ ವಾಣಿಜ್ಯ ಬಂದರು ನಿರ್ಮಾಣಕ್ಕೆ ಸಿದ್ಧತೆಗಳು ಮತ್ತಷ್ಟು ಹೆಚ್ಚಾಗುತ್ತಿರುವ ನಡುವೆ ಸ್ಥಳೀಯ ಮೀನುಗಾರರ ನೇತೃತ್ವದ ಬಂದರು ವಿರೋಧಿ ಹೋರಾಟ ಸಮಿತಿ ಆಶ್ರಯದಲ್ಲಿ ಕೇಣಿ ಕಡಲ ತೀರದಿಂದ ಮೀನುಗಾರ ಮಹಿಳೆಯರೂ ಸೇರಿದಂತೆ ಸಾವಿರಾರು ಜನ ಪ್ರತಿಭಟನಾಕಾರರು ಸುರಿವ ಮಳೆಯನ್ನೂ ಲೆಕ್ಕಿಸದೇ 4-5 ಕಿ.ಮೀ ದೂರದ ವರೆಗೆ ಪಾದಯಾತ್ರೆ ನಡೆಸಿದರು.

ಪಟ್ಟಣದ ಮುಖ್ಯ ರಸ್ತೆಗಳಲ್ಲಿ ವಾಣಿಜ್ಯ ಬಂದರು ನಿರ್ಮಾಣ ಯೋಜನೆ ವಿರುದ್ಧ ಘೋಷಣೆಗಳನ್ನು ಕೂಗುತ್ತ,ತಹಶೀಲ್ಧಾರರ ಕಾರ್ಯಾಲಯದ ಅವರಣದ ವರೆಗೆ ಬಂದು ವಾಣಿಜ್ಯ ಬಂದರು ನಿರ್ಮಾಣ ಯೋಜನೆ ಕುರಿತಂತೆ ತಮ್ಮ ಅಸಮಧಾನ ಮತ್ತು ಆಕ್ರೋಶ ವ್ಯಕ್ತಪಡಿಸಿದರು.

ಮೀನು ಮಾರಾಟ ಮಾಡುವ ಬುಟ್ಟಿಯ ಮಾದರಿಯಲ್ಲಿ ನೂರಾರು ಮನವಿ ಪತ್ರದ ಪ್ರತಿಗಳನ್ನು ತುಂಬಿ ತಂದ ಕೆಲ ಮಹಿಳೆಯರು ಮತ್ತು ಹೆಗಲ ಮೇಲೆ ಮತ್ತು ಕೈಯಲ್ಲಿ ಬಲೆ ಹಿಡಿದು ಸಾಂಪ್ರದಾಯಿಕ ಮೀನುಗಾರರ ಶೈಲಿಯಲ್ಲಿಯೇ ಕಾಣಿಸಿಕೊಂಡ ಹಿಯರೊಬ್ಬರು, ತಮ್ಮ ಕುಲ ಕಸುಬಾದ ಮೀನುಗಾರಿಕೆಯೇ ಜೀವಾಳ ಎಂಬoತೆ ಸಾಂಕೇತಿಕವಾಗಿ ಪ್ರದರ್ಶಿಸಿ, ಗಮನ ಸೆಳೆದರು. ಬಂದರು ವಿರೋಧಿ ಹೋರಾಟ ಸಮಿತಿ ಪ್ರಮುಖರು ಮತ್ತು ಸ್ಥಳೀಯರು ಸೇರಿ ಮನವಿ ತುಂಬಿರುವ ಬುಟ್ಟಿಗಳನ್ಪು ತಹಶೀಲ್ಧಾರರಿಗೆ ನೀಡುವ ಮೂಲಕ ಮುಖ್ಯಮಂತ್ರಿಗಳಿಗೆ ತಮ್ಮ ಅಳಲು ತಿಳಿಸುವಂತೆ ವಿನಂತಿಸಿದರು.

ಜಿಲ್ಲಾ ಮೀನುಗಾರ ಸಂಘಟನೆ ಪ್ರಮುಖ ಮತ್ತು ಎಂ ಎಲ್ ಸಿ ಗಣಪತಿ ಉಳ್ವೇಕರ ಈ ಸಂದರ್ಭದಲ್ಲಿ ಮಾತನಾಡಿ, ಕೇಣಿಯಲ್ಲಿ ವಾಣಿಜ್ಯ ಬಂದರು ನಿರ್ಮಾಣದಿಂದ ಕೇವಲ ಕೇಣಿಯ ಮೀನುಗಾರರು ಮಾತ್ರವಲ್ಲದೇ ಸುತ್ತ ಮುತ್ತಲಿನ ಎಲ್ಲಾ ಭಾಗಗಳಲ್ಲಿ ಮೀನುಗಾರರು ತೊಂದರೆ ಅನುಭವಿಸಲಿದ್ದಾರೆ ಈ ಯೋಜನೆಯಿಂದ ಕೃಷಿ ಸೇರಿದಂತೆ ಇತರ ಜನ ಮತ್ತು ಜೀವನಕ್ಕೆ ಸಾಕಷ್ಟು ಸಮಸ್ಯೆ ಆಗಲಿದೆ ಎಂದರು.

ಕಾರವಾರ ಮತ್ತು ಬೆಲೇಕೇರಿಗಳಲ್ಲಿ ಬಂದರುಗಳು ವ್ಯವಹಾರ ನಡೆಯದೇ ಖಾಲಿ ಬಿದ್ದಿವೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಇರುವ ಬಂದರುಗಳನ್ನು ಅಭಿವೃದ್ಧಿ ಪಡಿಸುವುದನ್ನು ಬಿಟ್ಟು ಸಾವಿರಾರು ಕೋಟಿಗಳ ಹೊಸ ಬಂದರು ನಿರ್ಮಾಣಕ್ಕೆ ಯಾಕೆ ಮುಂದಾಗಿವೆ ಎನ್ನುವುದು ಅರ್ಥವಾಗುತ್ತಿಲ್ಲ ಎಂದ ಅವರು ಕೇಣಿ ಬಂದರು ಯೋಜನೆಯನ್ನು ಸಮಸ್ತ ಮೀನುಗಾರರು ಮತ್ತು ಸುತ್ತ ಮುತ್ತಲಿನ ಜನರು ವಿರೋಧಿಸಬೇಕು ಎಂದರು.

ಕಾoಗ್ರೆಸ್ ಪಕ್ಷದ ಯುವ ಮುಖಂಡ ಗೋಪಾಲಕೃಷ್ಣ ನಾಯಕ ಮಾತನಾಡಿ ವಾಣಿಜ್ಯ ಬಂದರು ನಿರ್ಮಾಣ ಕೇಂದ್ರ ಸರ್ಕಾರದ ಯೋಜನೆಯಾಗಿದ್ದು ಮೀನುಗಾರರು ಮುಖ್ಯಮಂತ್ರಿಗಳಿಗೆ ಭೇಟಿ ಮಾಡಿ ತಮ್ಮ ಅಹವಾಲು ಸಲ್ಲಿಸಿದ್ದಾರೆ. ಯೋಜನೆ ಕುರಿತಂತೆ ಇರುವ ಸ್ಥಳೀಯರ ವಿರೋಧವನ್ನು ಸರ್ಕಾರ ಪರಿಗಣಿಸಬೇಕು. ಇಲ್ಲದಿದ್ದರೆ ಹೋರಾಟಗಾರರ ಸಮಾಧಿಯ ಮೇಲೆ ಬಂದರು ನಿರ್ಮಾಣ ಮಾಡಬೇಕಾಗುತ್ತದೆ ಎಂದರು.

ತಹಶೀಲ್ಧಾರ ಡಾ.ಚಿಕ್ಕಪ್ಪ ನಾಯಕ ಮನವಿ ಸ್ವೀಕರಿಸಿ, ನಿಮ್ಮ ಜಿಲ್ಲಾಧಿಕಾರಿಗಳ ಮೂಲಕ ತಮ್ಮ ಮನವಿಯಂತೆ, ಇಲ್ಲಿ ತಾವು ಹೇಳಿದ ಮುಖ್ಯಾಂಶಗಳನ್ನು ಮುಖ್ಯಮಂತಿಗಳ ಗಮನಕ್ಕೆ ತರಲಾಗುವುದು ಎಂದರು. ಕೇಣಿ ಬಂದರು ವಿರೋಧಿ ಹೋರಾಟ ಸಮಿತಿಯ ಪದಾಧಿಕಾರಿಗಳು, ಸದಸ್ಯರು, ಹಾರವಾಡದಿಂದ ಮಂಜಗುಣಿ ವರೆಗಿನ ತಾಲೂಕು ವ್ಯಾಪ್ತಿಯ ಕೆಲ ಮೀಮಗಾರ ಮುಖಂಡರು, ಸ್ಥಳೀಯರು, ಕೆಲ ಸಂಘ ಸಂಸ್ಥೆಗಳ ಪ್ರಮುಖರು , ಹಾಲಿ ಹಾಗೂ ಮಾಜಿ ಜನಪ್ರತಿನಿದಿಗಳು, ವಿವಿಧ ಸಮಾಜ ಹಾಗೂ ಬೇರೆ ಬೇರೆ ಊರಿನ ಪ್ರಮುಖರು , ನಾಗರಿಕರು ಸೇರಿ ಸಾವಿರಾರು ಜನ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದರು.

ಇದೇ ವೇಳೆ, ಜಿಲ್ಲಾ ಕೇಂದ್ರ ಕಾರವಾರದ ವಿಶೇಷ ಸಭೆಗೆ ತೆರಳುತ್ತಿದ್ದ ರಾಜ್ಯದ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರನ್ನು ವಂದಿಗೆ ಬಳಿ ರಾಷ್ಟ್ರೀಯ ಹೆದ್ದಾರಿ ಅಂಚಿಗೆ ಭೇಟಿಯಾದ ಕೆಲ ಪ್ರಮುಖರು ವಾಣಿಜ್ಯ ಬಂದರು ನಿರ್ಮಾಣ ವಿರೋಧಿಸಿ ಸಚಿವರಿಗೆ ಮನವಿ ಸಲ್ಲಿಸಿದರು.

ಕಂದಾಯ ಸಚಿವರು ತಮ್ಮ ವಾಹನದಿಂದ ಕೆಳಗೆ ಇಳಿದು ಸ್ಥಳೀಯರ ಮನವಿ ಸ್ವೀಕರಿಸಿದರೂ, ಅದೇ ಕಾರಿನಲ್ಲಿ ಸಚಿವರ ಜೊತೆಯಲ್ಲಿ ಪ್ರಯಾಣಿಸುತ್ತಿದ್ದ ಮೀನುಗಾರ ಸಮುದಾಯದವರೇ ಆಗಿರುವ ಮೀನುಗಾರಿಕೆ ಮತ್ತು ಬಂದರು ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಕಾರಿನಿಂದ ಕೆಳಗಿಳಿದು ಬಂದು ತಮ್ಮ ಸಮಸ್ಯೆ ಆಲಿಸಲು ಬಾರದಿರುವುದು ಸ್ಥಳೀಯ ಕೆಲ ಮೀನುಗಾರ ಮುಖಂಡರ ಹಾಗೂ ಯುವಕರಲ್ಲಿ ನಿರಾಸೆ ಮೂಡಿಸಿದಂತಿತ್ತು.

ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಭಟ್ಕಳದಲ್ಲಿ ಬೆಂಕಿ ಅನಾಹುತ

ಭಟ್ಕಳ: ತಾಲೂಕಿನ ಜಾಲಿ ಕ್ರಾಸ್‌ ಬಳಿಭೀಕರ ಬೆಂಕಿ ಅವಘಡ ಸಂಭವಿಸಿ, ಇಪ್ತಿಕಾರ್ ಮೋಹಿದೀನ್ ಮಾಲಕತ್ವದ “ತಾಸಿನ್ ಫ್ರೂಟ್ಸ್ & ವೆಜಿಟೇಬಲ್ಸ್” ಹೋಲ್‌ಸೇಲ್ ಅಂಗಡಿ ಭಸ್ಮವಾದ ಘಟನೆ ನಡೆದಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ...

ಕ್ಷುಲ್ಲಕ ಕಾರಣಕ್ಕೆ ಜಗಳ: ವ್ಯಕ್ತಿಗೆ ಇರಿತ

ಭಟ್ಕಳ: ವಾರದ ಸಂತೆಯಲ್ಲಿ ವ್ಯಾಪಾರಿಯೊಬ್ಬರ ಹತ್ತಿರ ಕೆಲಸ ಮಾಡುತ್ತಿದ್ದ ಇಬ್ಬರು ಕೆಲಸಗಾರರ ನಡುವೆ ಕ್ಷುಲ್ಲಕ ಕಾರಣಕ್ಕಾಗಿ ಮಾತಿಗೆ ಮಾತು ಬೆಳೆದ ಚೂ-ರಿ ಇರಿತದಲ್ಲಿ ಕೊನೆಗೊಂಡ ಘಟನೆ ನಡೆದಿದೆ. ಹಾನಗಲ್ ಮೂಲದ ಹಾಲಿ...

📰 ನಿಮ್ಮ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರಿನ ಸಭೆ, ಸಮಾರಂಭ, ಪ್ರತಿಭಟನೆ ಮತ್ತು ವಿಶೇಷ ವರದಿಗಳನ್ನು ನಮಗೆ ಕಳುಹಿಸಿ.

✉️ Gmail: [email protected]

📲 WhatsApp ಮೂಲಕ ಕಳುಹಿಸಿ ✉️ Gmail ಮೂಲಕ ಕಳುಹಿಸಿ

ಸರ್ಕಾರಿ ಇಲಾಖೆಯ ಕಟ್ಟಡದ ಇಕ್ಕಟ್ಟಾದ ಗೋಡೆಗಳ ಮಧ್ಯೆ ಪತ್ತೆಯಾದ ಸೂಟ್ ಕೇಸ್ ! ? ಕೊನೆಗೂ ಸೂಟ್ಕೇಸ್ ರಹಸ್ಯ

ಅಂಕೋಲಾ, ಆಗಸ್ಟ್ 26 : ಸರ್ಕಾರಿ ಇಲಾಖೆ ಒಂದರ ಕಟ್ಟಡದ ಗೋಡೆಗಳ ನಡುವಿನ ಇಕ್ಕಟ್ಟಾದ ಸ್ಥಳದಲ್ಲಿ ಯಾರೋ ತಂದಿಟ್ಟು ಹೋಗಿದ್ದರೆನ್ನಲಾದ ಸೂಟ್ ಕೇಸ್ ಒಂದು ಪಟ್ಟಣ ವ್ಯಾಪ್ತಿಯಲ್ಲಿ ಕೆಲಕಾಲ ಆತಂಕ ಸೃಷ್ಟಿಸಿದ್ದಲ್ಲದೇ,ಸೂಟ್ಕೇಸ್...

ಗಣಪತಿಗೆ ಜೀವ ಕಳೆ ತುಂಬುವ ಗಂಗಾವಳಿಯ ಶರತ್ ನಾಯ್ಕ್

ಕುಮಟಾ, ಆಗಸ್ಟ್ 26: ಪ್ರತಿಭೆ ಯಾರ ಸೊತ್ತಲ್ಲ. ಅದು ಸಾಧಕನ ಸ್ವತ್ತು ಎನ್ನುವ ಮಾತಿಗೆ ಅನುಗುಣವಾಗಿ ಇರುವವರು ಕುಮಟಾ ತಾಲೂಕಿನ ಗಂಗಾವಳಿಯ ಹೆಮ್ಮೆಯ ಪ್ರತಿಭೆ ಶರತ್ ನಾಯ್ಕ್ ಅವರು ಈಗಾಗಲೇ ಬೃಹತ್...

ವಿಶ್ವಾಸದ ಮತ್ತೊಂದು ಹೆಸರೇ ಅಲಂಕಾರ ಜ್ಯುವೆಲರ್ಸ್: ಅಂಕೋಲಾದಲ್ಲಿ ಭವ್ಯ ಶುಭಾರಂಭ

ಅಂಕೋಲಾ, ಆಗಸ್ಟ್ 24: ಪಟ್ಟಣದ ಬಂಡಿಬಜಾರ ಮುಖ್ಯ ರಸ್ತೆಯಂಚಿಗೆ ನವೀಕೃತಗೊಂಡಿರುವ ಭವ್ಯವಾದ ಕಟ್ಟಡದಲ್ಲಿ ಅಲಂಕಾರ ಜ್ಯುವೆಲರ್ಸ್ ನ ಬೃಹತ್ತ ಮಳಿಗೆ ಅಗಸ್ಟ್ 24 ರ ರವಿವಾರ ಶುಭ ಮುಹೂರ್ತದಲ್ಲಿ ಗ್ರಾಹಕರ ಸೇವೆಗೆ...

ಭಟ್ಕಳದಲ್ಲಿ ಬೆಂಕಿ ಅನಾಹುತ

ಭಟ್ಕಳ: ತಾಲೂಕಿನ ಜಾಲಿ ಕ್ರಾಸ್‌ ಬಳಿಭೀಕರ ಬೆಂಕಿ ಅವಘಡ ಸಂಭವಿಸಿ, ಇಪ್ತಿಕಾರ್ ಮೋಹಿದೀನ್ ಮಾಲಕತ್ವದ “ತಾಸಿನ್ ಫ್ರೂಟ್ಸ್ & ವೆಜಿಟೇಬಲ್ಸ್” ಹೋಲ್‌ಸೇಲ್ ಅಂಗಡಿ ಭಸ್ಮವಾದ ಘಟನೆ ನಡೆದಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Current date Tuesday , 26 August 2025
Related Articles

35 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯ ಬಂಧನ

ಶಿರಸಿ: ಕಳೆದ 35 ವರ್ಷಗಳಿಂದ ದೆಹಲಿಯಲ್ಲಿ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಶಿರಸಿ ಪೊಲೀಸರು ಬಂಧಿಸಿದ್ದಾರೆ. ಶಿರಸಿ...

ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ: ದೀಕ್ಷಾ ಮಂಜುನಾಥ ನಾಯ್ಕ ಪ್ರಥಮ ಸ್ಥಾನ

ಹೊನ್ನಾವರ: ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಹೊನ್ನಾವರದ ಕು. ದೀಕ್ಷಾ ಮಂಜುನಾಥ ನಾಯ್ಕ ಪ್ರಥಮ ಸ್ಥಾನ ಪಡೆದುಕೊಂಡಿದ್ದಾಳೆ....

ಹಿಮಾಲಯ ಬಿಸಿಎ ಕಾಲೇಜಿನಲ್ಲಿ ಉದ್ಯೋಗ ತರಬೇತಿ

ಅಂಕೋಲಾ : ತಾಲೂಕಿನ ಹಾಗೂ ಜಿಲ್ಲೆಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾಗಿರುವ ಹಿಮಾಲಯ ಶಿಕ್ಷಣ ಸಂಸ್ಥೆಯ...

ಕುಮಟಾದಲ್ಲಿ ಬಿಜೆಪಿ ಮಂಡಲ ಕಾರ್ಯಕಾರಿಣಿ: ಗಮನಸೆಳೆದ ತಿರಂಗಾ ಬೈಕ್ ರ‍್ಯಾಲಿ

ಕುಮಟಾ: ತಾಲೂಕಾ ಭಾರತೀಯ ಜನತಾ ಪಾರ್ಟಿಯ ಕಾರ್ಯಾಲಯದಲ್ಲಿ ಬಿಜೆಪಿ ಮಂಡಲ ಕಾರ್ಯಕಾರಿಣಿ ಸಭೆಯನ್ನು ಆಯೋಜನೆ ಮಾಡಲಾಗಿತ್ತು....