Important

24 ಗಂಟೆಗಳಿoದ ನಿರಂತರವಾಗಿ ಮಳೆ: ಕೆಲವೆಡೆ ಪ್ರವಾಹ ಪರಿಸ್ಥಿತಿ: ಕಾಳಜಿ ಕೇಂದ್ರಕ್ಕೆ ಜನರ ಸ್ಥಳಾಂತರ

Share

ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಮಳೆಯ ಆರ್ಭಟ ಜೋರಾಗಿದೆ. ಕಳೆದ 24 ಗಂಟೆಗಳಿoದ ನಿರಂತರವಾಗಿ ಮಳೆಯಾಗುತ್ತಿದ್ದು, ನದಿಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಕುಮಟಾ ತಾಲೂಕಿನ ಕೆಲವೆಡೆ ಕೃತಕ ಪ್ರವಾಹ ಉಂಟಾಗಿದ್ದು, ಕೆಳಗಿನಕೇರಿ ಮಜರೆಯ 17 ಕುಟುಂಬಗಳನ್ನು ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲು ಕ್ರಮಕೈಗೊಳ್ಳಲಾಗಿದೆ. ಕುಮಟಾ ತಹಶೀಲ್ದಾರರಾದ ಕೃಷ್ಣ ಕಾಮ್ಕರ ಅವರು ಸ್ಥಳಕ್ಕೆ ತೆರಳಿ ಪರಿಶಿಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಸಧ್ಯ ತಾಲೂಕಿನಲ್ಲಿ ಒಂದು ಕಾಳಜಿ ಕೇಂದ್ರ ತೆರೆಯಲಾಗಿದೆ ಎಂದು ತಹಶೀಲ್ದಾರ್ ಅವರು ಮಾಹಿತಿ ನಿಡಿದ್ದಾರೆ.

ಇದೇ ವೇಳೆ, ತಾಲೂಕಿನ ಗುಡ್ನಕಟ್ಟು ಭಾಗದಲ್ಲಿ ಮಳೆಯಿಂದಾಗಿ ಕೆಲವು ಕಡೆಗಳಲ್ಲಿ ನೀರು ರಸ್ತೆಯ ಮೇಲೆ ಹರಿಯುತ್ತಿರುವುದು ಕಂಡು ಬಂದಿದೆ. ತಡರಾತ್ರಿ ಬೀಸಿದ ಭಾರಿ ಗಾಳಿ ಮಳೆಗೆ ಗೋಕರ್ಣ ತೊರ್ಕೆ ಗ್ರಾಮದ ಸಾವಿತ್ರಿ ರಾಮಕೃಷ್ಣ ನಾಯಕ ಅವರ ಹಳೆಯ ಮನೆಯು ಕುಸಿದು ಬಿದ್ದು ಹಾನಿಯಾಗಿದೆ. ಆ ಮನೆಯಲ್ಲಿ ಯಾರೂ ವಾಸ್ತವ್ಯ ಇಲ್ಲದ ಕಾರಣ ಜನ ಜಾನುವಾರುಗಳಿಗೆ ಯಾವುದೇ ಹಾನಿಯಾಗಿಲ್ಲ ಎಂದು ತಿಳಿದುಬಂದಿದೆ.

ಲಿoಗನಮಕ್ಕಿ ಜಲಾಶಯದಿಂದ ನೀರು ಬಿಡುಗಡೆಯ ಕುರಿತು ಎರಡನೇಯ ಮುನ್ನೆಚ್ಚರಿಕೆ ನೀಡಲಾಗಿದೆ. ಲಿಂಗನಮಕ್ಕಿ ಜಲಾಶಯದಲ್ಲಿ ನೀರಿನ ಪ್ರಮಾಣ ಹೆಚ್ಚಾದರೆ ನೀರನ್ನು ಹಂತ ಹಂತವಾಗಿ ಹೊರಬಿಡುವುದಾಗಿ ತಿಳಿಸಲಾಗಿದೆ. ಹೀಗಾಗಿ ಜಲಾಶಯದ ಕೆಳಭಾಗz ಸಾರ್ವಜನಿಕರು ಜಾನುವಾರುಗಳೊಂದಿಗೆ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಸೂಚಿಸಲಾಗಿದೆ. ಸಿದ್ದಾಪುರ ತಾಲೂಕಿನಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ದುಬಾರಿ ಬೆಟ್ಟದಲ್ಲಿ ಭಾರಿ ಪ್ರಮಾಣದ ಭೂಕುಸಿತ ಉಂಟಾಗಿದೆ. ಕುಮಟಾ ಮುಖ್ಯ ರಸ್ತೆಯ ಬೇಡ್ಕಣಿ ಸಮೀಪದ ದುಬಾರಿ ಘಟ್ಟದಲ್ಲಿ ಭೂಕುಸಿತ ಉಂಟಾಗಿದ್ದು ವಾಹನ ಸವಾರರು ಜಾಗೃತಿಯಿಂದ ಓಡಾಡುವಂತೆ ಸ್ಥಳೀಯರು ಮನವಿ ಮಾಡಿದ್ದಾರೆ.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್,

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಮೂಲ ಸ್ಥಳದಲ್ಲೇ ಮುರಿನಕಟ್ಟೆ ನಿರ್ಮಾಣಕ್ಕೆ ಯೋಜನೆ ಸಿದ್ಧ : ವಿಶ್ವೇಶ್ವರ ಹೆಗಡೆ ಕಾಗೇರಿ

ಭಟ್ಕಳ: ಹೆದ್ದಾರಿ ಪ್ರಾಧಿಕಾರ ಮುರಿನಕಟ್ಟೆಯನ್ನು ಮೂಲ ಜಾಗದಲ್ಲಿಯೇ ಕಟ್ಟಲು ತಿರ್ಮಾನಿಸಿ ಈ ಕುರಿತು ನೀಲನಕ್ಷೇಯನ್ನು ತಯಾರಿಸಲಾಗಿದೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು. ಈ ವಿಚಾರದ ಕುರಿತಂತೆ ಜಿಲ್ಲಾಡಳಿತ ಹಾಗೂ...

ಜಾನುವಾರು ರಕ್ಷಣೆ: ಗೋ ಶಾಲೆಗೆ ರವಾನಿಸುವ ಮೂಲಕ ಗೀರ್ ಹೋರಿಗಳಿಗೆ ಜೀವದಾನ

ಅಂಕೋಲಾ: ವಧೆ ಉದ್ದೇಶದಿಂದ ಹಿಂಸಾತ್ಮಕವಾಗಿ ಸಾಗಿಸುತ್ತಿದ್ದ, ಎರಡು ಭಾರೀ ಗಾತ್ರದ ಗೀರ್ ತಳಿಯ ಹೋರಿಗಳಿಗೆ ಕೊನೆಗೂ ಸುರಕ್ಷಿತ ಆಶ್ರಯ ದೊರೆತಂತಿದ್ದು, ಕುಮಟಾ ಉಪವಿಭಾಗಾಧಿಕಾರಿಗಳ ಅನುಮತಿ ಬಳಿಕ ಹೋರಿಗಳನ್ನು ಗೋಶಾಲೆಗೆ ಕಳಿಸಿ, ಮೂಕ...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಪ್ರಗತಿ ವಿದ್ಯಾಲಯದಲ್ಲಿ ಶಾಲಾ ಪ್ರಾರಂಭೋತ್ಸವ; ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ

ಕುಮಟಾ: ಮೂರೂರಿನ ಪ್ರಗತಿ ವಿದ್ಯಾಲಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ಅತ್ಯಂತ ವಿಜೃಂಭಣೆಯಿoದ ನೆರವೇರಿತು....

ಬಿಜಿಎಸ್ ಸೆಂಟ್ರಲ್ ಸ್ಕೂಲ್ & ಪಿಯು ಕಾಲೇಜಿನಲ್ಲಿ ನೇಮಕಾತಿ: ಕೂಡಲೇ ಸಂಪರ್ಕಿಸಿ

ಉತ್ತರಕನ್ನಡ ಜಿಲ್ಲೆಯ ಮಿರ್ಜಾನಿನ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಬಿಜಿಎಸ್ ಸೆಂಟ್ರಲ್ ಸ್ಕೂಲ್ & ಆದಿಚುಂಚನಗಿರಿ...

ಅಂಕೋಲಾದಬಾಳೇಗುಳಿ ಬೊಗ್ರಿಬೈಲಿನಲ್ಲಿ ಶ್ರೀ ಉದ್ಭವ ನಾಗಚೌಡೇಶ್ವರಿ–ವೀರಾಂಜನೇಯ ದೇವರ ಚತುರ್ಥ ವರ್ಧಂತಿ ಮಹೋತ್ಸವ

ಅಂಕೋಲಾ: ತಾಲೂಕಿನ ಬಾಳೇಗುಳಿ ಬೊಗ್ರಿಬೈಲಿನಲ್ಲಿರುವ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶ್ರೀ ಉದ್ಭವ ನಾಗಚೌಡೇಶ್ವರಿ ಅಮ್ಮನವರು ಹಾಗೂ...

ಹೋಮಿಯೋಪತಿ ಸಂಸ್ಥಾಪಕ ಹಾನಿಮ್ಯಾನ್ ಅವರ 271ನೇ ಜನ್ಮ ದಿನಾಚರಣೆ

ಅಂಕೋಲಾ: ಇಂಗ್ಲಿಷ್ ಔಷಧಿಗಳನ್ನು ಸೇವಿಸಿದಾಗ ತಾತ್ಕಾಲಿಕವಾಗಿ ಕಾಯಿಲೆ ವಾಸಿಯಾದಂತೆ ಅನ್ನಿಸಿದರೂ, ಕೆಲವೇ ದಿನಗಳಲ್ಲಿ ಅದು ಮರುಕಳಿಸುವ...

ಗೋಕರ್ಣಕ್ಕೆ ಆಗಮಿಸಲಿದೆ ವರದಹಳ್ಳಿಯ ಶ್ರೀಧರ ಸ್ವಾಮಿಗಳ ಪಾದುಕೆ: ದರ್ಶನ ಮತ್ತು ಫಲಸಮರ್ಪಣೆಗೆ ಸುವರ್ಣಾವಕಾಶ

ಗೋಕರ್ಣ: ವರದಹಳ್ಳಿಯ ಸದ್ಗುರು ಶ್ರೀಧರ ಸ್ವಾಮಿಗಳ ಪಾದುಕೆ ಇದೇ ಏಪ್ರಿಲ್ 8ರ ಬುಧರವಾರ ಮತ್ತು 9ರ...

ವಿಸ್ಮಯ ಟಿ.ವಿ ಹೆಸರಿನಲ್ಲಿ ಮೋಸ: ವೀಕ್ಷಕರ, ಜಾಹೀರಾತುದಾರರ ಗಮನಕ್ಕೆ

ಕುಮಟಾ: ಕಳೆದ 13 ವರ್ಷಗಳಿಂದ ಸದಭಿರುಚಿಯ ಕಾರ್ಯಕ್ರಮಗಳ ಮೂಲಕ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಮನೆಮಾತಾಗಿರುವ ವಿಸ್ಮಯ...

ಫೋಟೋಗ್ರಾಫರ್ ಪ್ರಶಾಂತ ವಿಧಿವಶ : ಪಚ್ಚು ಎಂದೇ ಚಿರಪರಿಚಿತನಾಗಿದ್ದ ಯುವಕ ಇನ್ನು ನೆನಪು ಮಾತ್ರ

ಅಂಕೋಲಾ : ಪಟ್ಟಣ ವ್ಯಾಪ್ತಿಯ ಲಕ್ಷ್ಮೇಶ್ವರ ಕುಂಬಾರಕೇರಿ ನಿವಾಸಿ, ಪ್ರಶಾಂತ (ಪಚ್ಚು ) ಕೆ ನಾಯ್ಕ...

ತರಂಗ ಎಲೆಕ್ಟ್ರಾನಿಕ್ಸ್ ನಲ್ಲಿ ಯುಗಾದಿ ಉತ್ಸವ: ಏ.ಸಿ ಮೇಲೆ ಬಂಪರ್ ಆಫರ್

ಕುಮಟಾ: ಉತ್ತರಕನ್ನಡ ಜಿಲ್ಲೆಯ ಅತ್ಯಂತ ವಿಶ್ವಾಸಾರ್ಹ ಮತ್ತು ಅತಿದೊಡ್ಡ ಶೋರೂಮ್ ತರಂಗ ಎಲೆಕ್ಟ್ರಾನಿಕ್ಸ್ ನಲ್ಲಿ ಯುಗಾದಿ...