Important

24 ಗಂಟೆಗಳಿoದ ನಿರಂತರವಾಗಿ ಮಳೆ: ಕೆಲವೆಡೆ ಪ್ರವಾಹ ಪರಿಸ್ಥಿತಿ: ಕಾಳಜಿ ಕೇಂದ್ರಕ್ಕೆ ಜನರ ಸ್ಥಳಾಂತರ

Share

ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಮಳೆಯ ಆರ್ಭಟ ಜೋರಾಗಿದೆ. ಕಳೆದ 24 ಗಂಟೆಗಳಿoದ ನಿರಂತರವಾಗಿ ಮಳೆಯಾಗುತ್ತಿದ್ದು, ನದಿಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಕುಮಟಾ ತಾಲೂಕಿನ ಕೆಲವೆಡೆ ಕೃತಕ ಪ್ರವಾಹ ಉಂಟಾಗಿದ್ದು, ಕೆಳಗಿನಕೇರಿ ಮಜರೆಯ 17 ಕುಟುಂಬಗಳನ್ನು ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲು ಕ್ರಮಕೈಗೊಳ್ಳಲಾಗಿದೆ. ಕುಮಟಾ ತಹಶೀಲ್ದಾರರಾದ ಕೃಷ್ಣ ಕಾಮ್ಕರ ಅವರು ಸ್ಥಳಕ್ಕೆ ತೆರಳಿ ಪರಿಶಿಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಸಧ್ಯ ತಾಲೂಕಿನಲ್ಲಿ ಒಂದು ಕಾಳಜಿ ಕೇಂದ್ರ ತೆರೆಯಲಾಗಿದೆ ಎಂದು ತಹಶೀಲ್ದಾರ್ ಅವರು ಮಾಹಿತಿ ನಿಡಿದ್ದಾರೆ.

ಇದೇ ವೇಳೆ, ತಾಲೂಕಿನ ಗುಡ್ನಕಟ್ಟು ಭಾಗದಲ್ಲಿ ಮಳೆಯಿಂದಾಗಿ ಕೆಲವು ಕಡೆಗಳಲ್ಲಿ ನೀರು ರಸ್ತೆಯ ಮೇಲೆ ಹರಿಯುತ್ತಿರುವುದು ಕಂಡು ಬಂದಿದೆ. ತಡರಾತ್ರಿ ಬೀಸಿದ ಭಾರಿ ಗಾಳಿ ಮಳೆಗೆ ಗೋಕರ್ಣ ತೊರ್ಕೆ ಗ್ರಾಮದ ಸಾವಿತ್ರಿ ರಾಮಕೃಷ್ಣ ನಾಯಕ ಅವರ ಹಳೆಯ ಮನೆಯು ಕುಸಿದು ಬಿದ್ದು ಹಾನಿಯಾಗಿದೆ. ಆ ಮನೆಯಲ್ಲಿ ಯಾರೂ ವಾಸ್ತವ್ಯ ಇಲ್ಲದ ಕಾರಣ ಜನ ಜಾನುವಾರುಗಳಿಗೆ ಯಾವುದೇ ಹಾನಿಯಾಗಿಲ್ಲ ಎಂದು ತಿಳಿದುಬಂದಿದೆ.

ಲಿoಗನಮಕ್ಕಿ ಜಲಾಶಯದಿಂದ ನೀರು ಬಿಡುಗಡೆಯ ಕುರಿತು ಎರಡನೇಯ ಮುನ್ನೆಚ್ಚರಿಕೆ ನೀಡಲಾಗಿದೆ. ಲಿಂಗನಮಕ್ಕಿ ಜಲಾಶಯದಲ್ಲಿ ನೀರಿನ ಪ್ರಮಾಣ ಹೆಚ್ಚಾದರೆ ನೀರನ್ನು ಹಂತ ಹಂತವಾಗಿ ಹೊರಬಿಡುವುದಾಗಿ ತಿಳಿಸಲಾಗಿದೆ. ಹೀಗಾಗಿ ಜಲಾಶಯದ ಕೆಳಭಾಗz ಸಾರ್ವಜನಿಕರು ಜಾನುವಾರುಗಳೊಂದಿಗೆ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಸೂಚಿಸಲಾಗಿದೆ. ಸಿದ್ದಾಪುರ ತಾಲೂಕಿನಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ದುಬಾರಿ ಬೆಟ್ಟದಲ್ಲಿ ಭಾರಿ ಪ್ರಮಾಣದ ಭೂಕುಸಿತ ಉಂಟಾಗಿದೆ. ಕುಮಟಾ ಮುಖ್ಯ ರಸ್ತೆಯ ಬೇಡ್ಕಣಿ ಸಮೀಪದ ದುಬಾರಿ ಘಟ್ಟದಲ್ಲಿ ಭೂಕುಸಿತ ಉಂಟಾಗಿದ್ದು ವಾಹನ ಸವಾರರು ಜಾಗೃತಿಯಿಂದ ಓಡಾಡುವಂತೆ ಸ್ಥಳೀಯರು ಮನವಿ ಮಾಡಿದ್ದಾರೆ.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್,

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಆಯಕಟ್ಟಿನ ಪ್ರದೇಶದಲ್ಲಿರುವ 8 ಗುಂಟೆ ಜಾಗ ಮಾರಾಟಕ್ಕಿದೆ

ಅಂಕೋಲಾ: ತಾಲೂಕಿನ ಬಳಲೆಯಲ್ಲಿ ಅತ್ಯುತ್ತಮ ಸೌಕರ್ಯ ಹೊಂದಿರುವ, ಆಯಕಟ್ಟಿನ ಪ್ರದೇಶದಲ್ಲಿರುವ NA ಆದ ಜಾಗ ಮಾರಾಟಕ್ಕಿದೆ. NA ಆದ ( ರೆಸಿಡೆನ್ಷಿಯಲ್ ) 8 ಗುಂಟೆ ಜಾಗ ಮಾರಾಟಕ್ಕಿದೆ. 56 ಲಕ್ಷ...

ಅಂಕೋಲಾದಲ್ಲಿ ಇಂದು ಪಂಚದೇವರ ದೊಡ್ಡ ಕಾರ್ತಿಕೋತ್ಸವ : ಶಿರ ಕುಳಿ ಕಾನದೇವಿ ದೇವಸ್ಥಾನದ ಹತ್ತಿರ ವನಭೋಜನಕ್ಕೆ ನಡೆಯುತ್ತಿದೆ ಸಿದ್ದತೆ

ಅಂಕೋಲಾ: ತಾಲೂಕಿನ ಸಂಸ್ಕೃತಿಯ ಆರಾಧನಾ ಪದ್ಧತಿಯಾಗಿ ಹಲವು ತಲೆಮಾರುಗಳಿಂದ ಆಚರಿಸಲ್ಪಡುತ್ತಬಂದಿರುವ ಪಂಚ ದೇವರುಗಳ ದೊಡ್ಡ ಕಾರ್ತಿಕೋತ್ಸವ ಮತ್ತು ವನಭೋಜನ ಮಹೋತ್ಸವ ಈ ಬಾರಿ ನವೆಂಬರ್ 7ರ ಶುಕ್ರವಾರ (ಇಂದು), ಮತ್ತು 8...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಶಾಲಾ ಮಕ್ಕಳ ಬಸ್ ಪಲ್ಟಿ: ವಿದ್ಯಾರ್ಥಿ ಸಾವು

ಹೊನ್ನಾವರ: ಗೇರುಸೊಪ್ಪ ಸುಳೆಮುರ್ಕಿ ಕ್ರಾಸ್ ಹತ್ತಿರ ಶಾಲಾಮಕ್ಕಳ ಪ್ರವಾಸಿ ಬಸ್ ಪಲ್ಟಿಯಾಗಿ, ವಿಧ್ಯಾರ್ಥಿ ಸಾವನಪ್ಪಿರುವ ಘಟನೆ...

ಆಯಕಟ್ಟಿನ ಪ್ರದೇಶದಲ್ಲಿರುವ 8 ಗುಂಟೆ ಜಾಗ ಮಾರಾಟಕ್ಕಿದೆ

ಅಂಕೋಲಾ: ತಾಲೂಕಿನ ಬಳಲೆಯಲ್ಲಿ ಅತ್ಯುತ್ತಮ ಸೌಕರ್ಯ ಹೊಂದಿರುವ, ಆಯಕಟ್ಟಿನ ಪ್ರದೇಶದಲ್ಲಿರುವ NA ಆದ ಜಾಗ ಮಾರಾಟಕ್ಕಿದೆ....

ಕುಮಟಾದ ಬ್ರೌನ್ಸ್ ವಿಲೇಜ್ ಫ್ಯಾಮಿಲಿ ಗಾರ್ಡನ್ ರೆಸ್ಟೋರೆಂಟ್ ನಲ್ಲಿ ಖ್ಯಾತ ಕಲಾವಿದರಿಂದ ಲೈವ್ ಮ್ಯೂಜಿಕ್ ನೋಡುತ್ತಾ ರುಚಿ-ಶುಚಿಯಾದ ಆಹಾರ ಸವಿಯುವ ಅವಕಾಶ

ಕುಮಟಾ: ಬ್ರೌನ್ಸ್ ವಿಲೇಜ್ ಫ್ಯಾಮಿಲಿ ಗಾರ್ಡನ್ ರೆಸ್ಟೋರೆಂಟ್ ಕುಮಟಾ, ಇದು ಉತ್ತರಕನ್ನಡ ಜಿಲ್ಲೆಯ ಅತ್ಯುತ್ತಮ ಫ್ಯಾಮಿಲಿ...

ಆಂಬ್ಯುಲೆನ್ಸ್ ಡಿಕ್ಕಿ : ಭಟ್ಕಳದ ದಂಪತಿ ಬೆಂಗಳೂರಿನಲ್ಲಿ ದುರಂತ ಸಾವು

ಭಟ್ಕಳ: ವೇಗವಾಗಿ ಬಂದ ಆಂಬ್ಯುಲೆನ್ಸ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಭಟ್ಕಳ ಮೂಲದ ದಂಪತಿ...

ಪಲ್ಟಿಯಾದ ಬಸ್: 45 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಅಂಕೋಲಾ: ಪ್ರಮುಖ ಸಂಪರ್ಕ ರಸ್ತೆಗಳಲ್ಲಿ ಒಂದಾಗಿರುವ ಗೋಕರ್ಣ ವಡ್ದೀಘಾಟ ಹೆದ್ದಾರಿ ತಿರುವಿನಲ್ಲಿ ಸಾರಿಗೆ ಸಂಸ್ಥೆಯ ಬಸ್ಸೊಂದು...

KDCC ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ವಸಂತ ನಾಯಕ ಜಮಗೋಡ : ಈ ಬಾರಿ ಹೆಚ್ಚಿದ ಗೆಲುವಿನ ನಿರೀಕ್ಷೆ

ಅಂಕೋಲಾ : ಸಹಕಾರಿ ಮತ್ತು ಸಾಮಾಜಿಕ, ಧಾರ್ಮಿಕ ಮತ್ತಿತರ ಕ್ಷೇತ್ರಗಳಲ್ಲಿ ಸದಾ ಮಂಚೂಣಿಯಲ್ಲಿರುವ ನಾಯಕ ಎಂದು...

ಅಂಕೋಲಾ ಕರಾವಳಿ ಉತ್ಸವ 2025 : ನವೆಂಬರ್ 5 ರಿಂದ 10ರ ವರೆಗೆ ಸಾಂಸ್ಕೃತಿಕ ವೈಭವ

ಅಂಕೋಲಾ: ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಹೊಂದಿರುವ ಅಂಕೋಲಾ ತಾಲೂಕಿನಲ್ಲಿ ಅಂಕೋಲಾ ಸಾಂಸ್ಕೃತಿಕ ಕಲಾಬಳಗ ಉತ್ತರ ಕನ್ನಡ ಸಂಘಟನೆಯ...