Important

ಪ್ರಸಿದ್ಧ ನಾಗಕ್ಷೇತ್ರ ಮುಗ್ವಾ ಸುಬ್ರಹ್ಮಣ್ಯದಲ್ಲಿ ನಾಗರಪಂಚಮಿ ಸಂಭ್ರಮ: ಹರಿದುಬಂದ ಜನಸಾಗರ

Share

ಕುಮಟಾ: ನಾಡಿಗೆ ದೊಡ್ಡ ಹಬ್ಬ ಎಂಬ ಖ್ಯಾತಿ ಪಡೆದ ನಾಗರ ಪಂಚಮಿ ಹಬ್ಬವನ್ನು ರಾಜ್ಯದಾದ್ಯಂತ ಸಂಭ್ರಮದಿoದ ಆಚರಿಸಲಾಗುತ್ತದೆ. ನಾಗರ ಪಂಚಮಿಯ ಹಿನ್ನೆಲೆಯಲ್ಲಿ ಇಂದು ಕುಮಟಾ ತಾಲೂಕಿನ ಕಡ್ಲೆಯ ಕಾರಹಿತ್ತಲದ ನಾಗಬನ, ಪಟ್ಟಣದ ಕುಂಬೇಶ್ವರ ದೇವಸ್ಥಾನ, ಶಾಂತಿಕಾ ಪರಮೇಶ್ವರಿ ದೇವಸ್ಥಾನ, ಮಹಾಸತಿ ದೇವಸ್ಥಾನ ಸೇರಿದಂತೆ ಹಲವು ದೇವಾಲಯಗಳಲ್ಲಿ ವಿಶೇಷ ಪೂಜಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ತಾಲೂಕಿನ ವಿವಿದ ಭಾಗಗಳಿಂದ ಆಗಮಿಸಿದ ಭಕ್ತಾಧಿಗಳು ಶ್ರೀ ನಾಗದೇವರಿಗೆ ಹಾಲಿನಾಭಿಷೇಕ, ಏಳನೀರಿನಭಿಷೇಕ ಸೇರಿದಂತೆ ವಿವಿದ ಸೇವೆ ಸಲ್ಲಿಸಿ ಕೃತಾರ್ಥರಾದರು.

ಕಡ್ಲೆಯ ಕಾರಹಿತ್ತಲದ ನಾಗಬನದಲ್ಲಿಯೂ ಸಹ ಈ ಬಾರಿ ನಾಗರ ಪಂಚಮಿ ಹಬ್ಬವನ್ನು ಅತ್ಯಂತ ಸಡಗರದಿಂದ ಆಚರಿಸಲಾಯಿತು. ಮಂಗಳೂರಿನಿoದ ಬಂದ ಕುಟುಂಬದವರು ಸೇರಿದಂತೆ ನೂರಾರು ಸಂಖ್ಯೆಯಲ್ಲಿ ಆಗಮಿಸಿದ ಭಕ್ತರು ನಾಗನಿಗೆ ತಮ್ಮ ಸೇವೆಗಳನ್ನು ಸಲ್ಲಿಸಿದರು. ಬಾಳೆಗೊನೆ ಸೇವೆ, ತುಪ್ಪದ ದೀಪ ಸೇವೆ, ಹಣ್ಣುಕಾಯಿ ಸೇವೆ ಸೇರಿದಂತೆ ಹಲವಾರು ಸೇವೆಗಳನ್ನು ಸಲ್ಲಿಸಿ ಕೃಥಾರ್ತರದರು.

ಈ ಸಂದರ್ಭದಲ್ಲಿ ಮಂಗಳೂರಿನಿAದ ಆಗಮಿಸಿದ ಭಕ್ತರಾದ ಶಿವಶಂಕರ ರಾಮ್ ಅವರು ನಮ್ಮ ವಿಸ್ಮಯ ಟಿ.ವಿ ಯೊಂದಿಗೆ ಮಾತನಾಡಿ ಕಡ್ಲೆಯ ಕಾರಹಿತ್ತಲದ ನಾಗದೇವರನ್ನು 2007 ರಲ್ಲಿ ಪ್ರತಿಷ್ಠೆ ಮಾಡಲಾಗಿದೆ. ಅದಕ್ಕಿಂತಲೂ ಹಿಂದೆ ನಮ್ಮ ಪೂರ್ವಿಕರಾದ ತಿಮ್ಮಪ್ಪ ಶೆಟ್ಟಿಯವರು ಈ ಸ್ಥಳದಲ್ಲಿ ನಾಗರ ಆರಾಧನೆ ಮಾಡಿಕೊಂಡು ಬಂದಿದ್ದರು.

ಅವರ ನಿಧನದ ನಂತರ 2007 ರಲ್ಲಿ ನಾವುಗಳು ಈ ಸ್ಥಳಕ್ಕೆ ಬಂದು ಶ್ರೀದೇವರ ಪರಿವಾರದ ಸಮೇತ ದೇವತೆಗಳನ್ನು ಪ್ರತಿಷ್ಠೆ ಮಾಡಿ ಆರಾಧಿಸಿಕೊಂಡು ಬರುತ್ತಿದ್ದೇವೆ. ಅನಾದಿಕಾಲದಿಂದಲೂ ಈ ಸ್ಥಳದಲ್ಲಿ ನಾಗದೇವತೆ, ಜಟಗ, ಸೇರಿದಂತೆ ಇನ್ನುಳಿದ ಪರಿವಾರ ದೇವತೆಗಳನ್ನು ಪೂಜಿಸಿಕೊಂಡು ಬರಲಾಗಿದೆ. ನಾಗರಪಂಚಮಿ ಸೇರಿದಂತೆ ಇನ್ನಿತರ ದಿನಗಳಲ್ಲಿಯೂ ಸಹ ನಾಗಬನಕ್ಕೆ ಹೆಚ್ಚಿ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸಿ ತಮ್ಮ ಇಷ್ಟಾರ್ಥ ಪ್ರಾಪ್ತಿಗಾಗಿ ಬೇಡಿಕೊಳ್ಳುತ್ತಾರೆ ಎಂದು ಮಾಹಿತಿ ನೀಡಿದರು.

ವಿಸ್ಮಯ ನ್ಯೂಸ್, ದೀಪೇಶ ನಾಯ್ಕ ಕುಮಟಾ.

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಮೂಲ ಸ್ಥಳದಲ್ಲೇ ಮುರಿನಕಟ್ಟೆ ನಿರ್ಮಾಣಕ್ಕೆ ಯೋಜನೆ ಸಿದ್ಧ : ವಿಶ್ವೇಶ್ವರ ಹೆಗಡೆ ಕಾಗೇರಿ

ಭಟ್ಕಳ: ಹೆದ್ದಾರಿ ಪ್ರಾಧಿಕಾರ ಮುರಿನಕಟ್ಟೆಯನ್ನು ಮೂಲ ಜಾಗದಲ್ಲಿಯೇ ಕಟ್ಟಲು ತಿರ್ಮಾನಿಸಿ ಈ ಕುರಿತು ನೀಲನಕ್ಷೇಯನ್ನು ತಯಾರಿಸಲಾಗಿದೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು. ಈ ವಿಚಾರದ ಕುರಿತಂತೆ ಜಿಲ್ಲಾಡಳಿತ ಹಾಗೂ...

ಜಾನುವಾರು ರಕ್ಷಣೆ: ಗೋ ಶಾಲೆಗೆ ರವಾನಿಸುವ ಮೂಲಕ ಗೀರ್ ಹೋರಿಗಳಿಗೆ ಜೀವದಾನ

ಅಂಕೋಲಾ: ವಧೆ ಉದ್ದೇಶದಿಂದ ಹಿಂಸಾತ್ಮಕವಾಗಿ ಸಾಗಿಸುತ್ತಿದ್ದ, ಎರಡು ಭಾರೀ ಗಾತ್ರದ ಗೀರ್ ತಳಿಯ ಹೋರಿಗಳಿಗೆ ಕೊನೆಗೂ ಸುರಕ್ಷಿತ ಆಶ್ರಯ ದೊರೆತಂತಿದ್ದು, ಕುಮಟಾ ಉಪವಿಭಾಗಾಧಿಕಾರಿಗಳ ಅನುಮತಿ ಬಳಿಕ ಹೋರಿಗಳನ್ನು ಗೋಶಾಲೆಗೆ ಕಳಿಸಿ, ಮೂಕ...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಪ್ರಗತಿ ವಿದ್ಯಾಲಯದಲ್ಲಿ ಶಾಲಾ ಪ್ರಾರಂಭೋತ್ಸವ; ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ

ಕುಮಟಾ: ಮೂರೂರಿನ ಪ್ರಗತಿ ವಿದ್ಯಾಲಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ಅತ್ಯಂತ ವಿಜೃಂಭಣೆಯಿoದ ನೆರವೇರಿತು....

ಬಿಜಿಎಸ್ ಸೆಂಟ್ರಲ್ ಸ್ಕೂಲ್ & ಪಿಯು ಕಾಲೇಜಿನಲ್ಲಿ ನೇಮಕಾತಿ: ಕೂಡಲೇ ಸಂಪರ್ಕಿಸಿ

ಉತ್ತರಕನ್ನಡ ಜಿಲ್ಲೆಯ ಮಿರ್ಜಾನಿನ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಬಿಜಿಎಸ್ ಸೆಂಟ್ರಲ್ ಸ್ಕೂಲ್ & ಆದಿಚುಂಚನಗಿರಿ...

ಅಂಕೋಲಾದಬಾಳೇಗುಳಿ ಬೊಗ್ರಿಬೈಲಿನಲ್ಲಿ ಶ್ರೀ ಉದ್ಭವ ನಾಗಚೌಡೇಶ್ವರಿ–ವೀರಾಂಜನೇಯ ದೇವರ ಚತುರ್ಥ ವರ್ಧಂತಿ ಮಹೋತ್ಸವ

ಅಂಕೋಲಾ: ತಾಲೂಕಿನ ಬಾಳೇಗುಳಿ ಬೊಗ್ರಿಬೈಲಿನಲ್ಲಿರುವ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶ್ರೀ ಉದ್ಭವ ನಾಗಚೌಡೇಶ್ವರಿ ಅಮ್ಮನವರು ಹಾಗೂ...

ಹೋಮಿಯೋಪತಿ ಸಂಸ್ಥಾಪಕ ಹಾನಿಮ್ಯಾನ್ ಅವರ 271ನೇ ಜನ್ಮ ದಿನಾಚರಣೆ

ಅಂಕೋಲಾ: ಇಂಗ್ಲಿಷ್ ಔಷಧಿಗಳನ್ನು ಸೇವಿಸಿದಾಗ ತಾತ್ಕಾಲಿಕವಾಗಿ ಕಾಯಿಲೆ ವಾಸಿಯಾದಂತೆ ಅನ್ನಿಸಿದರೂ, ಕೆಲವೇ ದಿನಗಳಲ್ಲಿ ಅದು ಮರುಕಳಿಸುವ...

ಗೋಕರ್ಣಕ್ಕೆ ಆಗಮಿಸಲಿದೆ ವರದಹಳ್ಳಿಯ ಶ್ರೀಧರ ಸ್ವಾಮಿಗಳ ಪಾದುಕೆ: ದರ್ಶನ ಮತ್ತು ಫಲಸಮರ್ಪಣೆಗೆ ಸುವರ್ಣಾವಕಾಶ

ಗೋಕರ್ಣ: ವರದಹಳ್ಳಿಯ ಸದ್ಗುರು ಶ್ರೀಧರ ಸ್ವಾಮಿಗಳ ಪಾದುಕೆ ಇದೇ ಏಪ್ರಿಲ್ 8ರ ಬುಧರವಾರ ಮತ್ತು 9ರ...

ವಿಸ್ಮಯ ಟಿ.ವಿ ಹೆಸರಿನಲ್ಲಿ ಮೋಸ: ವೀಕ್ಷಕರ, ಜಾಹೀರಾತುದಾರರ ಗಮನಕ್ಕೆ

ಕುಮಟಾ: ಕಳೆದ 13 ವರ್ಷಗಳಿಂದ ಸದಭಿರುಚಿಯ ಕಾರ್ಯಕ್ರಮಗಳ ಮೂಲಕ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಮನೆಮಾತಾಗಿರುವ ವಿಸ್ಮಯ...

ಫೋಟೋಗ್ರಾಫರ್ ಪ್ರಶಾಂತ ವಿಧಿವಶ : ಪಚ್ಚು ಎಂದೇ ಚಿರಪರಿಚಿತನಾಗಿದ್ದ ಯುವಕ ಇನ್ನು ನೆನಪು ಮಾತ್ರ

ಅಂಕೋಲಾ : ಪಟ್ಟಣ ವ್ಯಾಪ್ತಿಯ ಲಕ್ಷ್ಮೇಶ್ವರ ಕುಂಬಾರಕೇರಿ ನಿವಾಸಿ, ಪ್ರಶಾಂತ (ಪಚ್ಚು ) ಕೆ ನಾಯ್ಕ...

ತರಂಗ ಎಲೆಕ್ಟ್ರಾನಿಕ್ಸ್ ನಲ್ಲಿ ಯುಗಾದಿ ಉತ್ಸವ: ಏ.ಸಿ ಮೇಲೆ ಬಂಪರ್ ಆಫರ್

ಕುಮಟಾ: ಉತ್ತರಕನ್ನಡ ಜಿಲ್ಲೆಯ ಅತ್ಯಂತ ವಿಶ್ವಾಸಾರ್ಹ ಮತ್ತು ಅತಿದೊಡ್ಡ ಶೋರೂಮ್ ತರಂಗ ಎಲೆಕ್ಟ್ರಾನಿಕ್ಸ್ ನಲ್ಲಿ ಯುಗಾದಿ...