Important

ಪ್ರಸಿದ್ಧ ನಾಗಕ್ಷೇತ್ರ ಮುಗ್ವಾ ಸುಬ್ರಹ್ಮಣ್ಯದಲ್ಲಿ ನಾಗರಪಂಚಮಿ ಸಂಭ್ರಮ: ಹರಿದುಬಂದ ಜನಸಾಗರ

Share

ಕುಮಟಾ: ನಾಡಿಗೆ ದೊಡ್ಡ ಹಬ್ಬ ಎಂಬ ಖ್ಯಾತಿ ಪಡೆದ ನಾಗರ ಪಂಚಮಿ ಹಬ್ಬವನ್ನು ರಾಜ್ಯದಾದ್ಯಂತ ಸಂಭ್ರಮದಿoದ ಆಚರಿಸಲಾಗುತ್ತದೆ. ನಾಗರ ಪಂಚಮಿಯ ಹಿನ್ನೆಲೆಯಲ್ಲಿ ಇಂದು ಕುಮಟಾ ತಾಲೂಕಿನ ಕಡ್ಲೆಯ ಕಾರಹಿತ್ತಲದ ನಾಗಬನ, ಪಟ್ಟಣದ ಕುಂಬೇಶ್ವರ ದೇವಸ್ಥಾನ, ಶಾಂತಿಕಾ ಪರಮೇಶ್ವರಿ ದೇವಸ್ಥಾನ, ಮಹಾಸತಿ ದೇವಸ್ಥಾನ ಸೇರಿದಂತೆ ಹಲವು ದೇವಾಲಯಗಳಲ್ಲಿ ವಿಶೇಷ ಪೂಜಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ತಾಲೂಕಿನ ವಿವಿದ ಭಾಗಗಳಿಂದ ಆಗಮಿಸಿದ ಭಕ್ತಾಧಿಗಳು ಶ್ರೀ ನಾಗದೇವರಿಗೆ ಹಾಲಿನಾಭಿಷೇಕ, ಏಳನೀರಿನಭಿಷೇಕ ಸೇರಿದಂತೆ ವಿವಿದ ಸೇವೆ ಸಲ್ಲಿಸಿ ಕೃತಾರ್ಥರಾದರು.

ಕಡ್ಲೆಯ ಕಾರಹಿತ್ತಲದ ನಾಗಬನದಲ್ಲಿಯೂ ಸಹ ಈ ಬಾರಿ ನಾಗರ ಪಂಚಮಿ ಹಬ್ಬವನ್ನು ಅತ್ಯಂತ ಸಡಗರದಿಂದ ಆಚರಿಸಲಾಯಿತು. ಮಂಗಳೂರಿನಿoದ ಬಂದ ಕುಟುಂಬದವರು ಸೇರಿದಂತೆ ನೂರಾರು ಸಂಖ್ಯೆಯಲ್ಲಿ ಆಗಮಿಸಿದ ಭಕ್ತರು ನಾಗನಿಗೆ ತಮ್ಮ ಸೇವೆಗಳನ್ನು ಸಲ್ಲಿಸಿದರು. ಬಾಳೆಗೊನೆ ಸೇವೆ, ತುಪ್ಪದ ದೀಪ ಸೇವೆ, ಹಣ್ಣುಕಾಯಿ ಸೇವೆ ಸೇರಿದಂತೆ ಹಲವಾರು ಸೇವೆಗಳನ್ನು ಸಲ್ಲಿಸಿ ಕೃಥಾರ್ತರದರು.

ಈ ಸಂದರ್ಭದಲ್ಲಿ ಮಂಗಳೂರಿನಿAದ ಆಗಮಿಸಿದ ಭಕ್ತರಾದ ಶಿವಶಂಕರ ರಾಮ್ ಅವರು ನಮ್ಮ ವಿಸ್ಮಯ ಟಿ.ವಿ ಯೊಂದಿಗೆ ಮಾತನಾಡಿ ಕಡ್ಲೆಯ ಕಾರಹಿತ್ತಲದ ನಾಗದೇವರನ್ನು 2007 ರಲ್ಲಿ ಪ್ರತಿಷ್ಠೆ ಮಾಡಲಾಗಿದೆ. ಅದಕ್ಕಿಂತಲೂ ಹಿಂದೆ ನಮ್ಮ ಪೂರ್ವಿಕರಾದ ತಿಮ್ಮಪ್ಪ ಶೆಟ್ಟಿಯವರು ಈ ಸ್ಥಳದಲ್ಲಿ ನಾಗರ ಆರಾಧನೆ ಮಾಡಿಕೊಂಡು ಬಂದಿದ್ದರು.

ಅವರ ನಿಧನದ ನಂತರ 2007 ರಲ್ಲಿ ನಾವುಗಳು ಈ ಸ್ಥಳಕ್ಕೆ ಬಂದು ಶ್ರೀದೇವರ ಪರಿವಾರದ ಸಮೇತ ದೇವತೆಗಳನ್ನು ಪ್ರತಿಷ್ಠೆ ಮಾಡಿ ಆರಾಧಿಸಿಕೊಂಡು ಬರುತ್ತಿದ್ದೇವೆ. ಅನಾದಿಕಾಲದಿಂದಲೂ ಈ ಸ್ಥಳದಲ್ಲಿ ನಾಗದೇವತೆ, ಜಟಗ, ಸೇರಿದಂತೆ ಇನ್ನುಳಿದ ಪರಿವಾರ ದೇವತೆಗಳನ್ನು ಪೂಜಿಸಿಕೊಂಡು ಬರಲಾಗಿದೆ. ನಾಗರಪಂಚಮಿ ಸೇರಿದಂತೆ ಇನ್ನಿತರ ದಿನಗಳಲ್ಲಿಯೂ ಸಹ ನಾಗಬನಕ್ಕೆ ಹೆಚ್ಚಿ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸಿ ತಮ್ಮ ಇಷ್ಟಾರ್ಥ ಪ್ರಾಪ್ತಿಗಾಗಿ ಬೇಡಿಕೊಳ್ಳುತ್ತಾರೆ ಎಂದು ಮಾಹಿತಿ ನೀಡಿದರು.

ವಿಸ್ಮಯ ನ್ಯೂಸ್, ದೀಪೇಶ ನಾಯ್ಕ ಕುಮಟಾ.

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಬೆಂಕಿ ಅವಘಡದಲ್ಲಿ ಅಪಾರಹಾನಿ: ಆದರೆ, ಮಾರಿಕಾಂಬೆಯ ಫೋಟೋ ಮಾತ್ರ ಸೇಫ್

ಅಂಕೋಲಾ: ಪಟ್ಟಣ ವ್ಯಾಪ್ತಿಯ ಲಕ್ಷ್ಮೇಶ್ವರ–ಕುಂಬಾರಕೇರಿ ಪ್ರದೇಶದಲ್ಲಿರುವ ಶ್ರೀ ಮಹಾಲಸಾ ವೆಲ್ಡಿಂಗ್ ಶಾಪ್ನಲ್ಲಿ ಫೆಬ್ರವರಿ 9ರ ಸೋಮವಾರ ರಾತ್ರಿ ಆಕಸ್ಮಿಕವಾಗಿ ಬೆಂಕಿ ಅವಘಡ ಸಂಭವಿಸಿ, ಲಕ್ಷಾಂತರ ರೂಪಾಯಿ ಮೌಲ್ಯದ ಆಸ್ತಿ ಹಾನಿಯಾಗಿರುವ ಘಟನೆ...

ಕಲೆ ಆತ್ಮ ಗೌರವದ ಸಂಕೇತ: ಮಂಕಾಳು ವೈದ್ಯ

ಮುರುಡೇಶ್ವರ: ಮುರುಡೇಶ್ವರದ ಯಕ್ಷರಕ್ಷೆ ವೇದಿಕೆಯಲ್ಲಿ ರಾಗಶ್ರೀ ಸಂಗೀತ ವಿದ್ಯಾಲಯ ಹಡಿನಬಾಳ ಇದರ ಮುರುಡೇಶ್ವರ ಶಾಖೆಯ ಪ್ರಥಮ ವರ್ಷದ ವಾರ್ಷಿಕೋತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಉಸ್ತುವಾರಿ ಸಚಿವರಾದ ಶ್ರೀ ಮಂಕಾಳು ವೈದ್ಯರು ಕಲೆ ಮತ್ತು...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಕಲೆ ಆತ್ಮ ಗೌರವದ ಸಂಕೇತ: ಮಂಕಾಳು ವೈದ್ಯ

ಮುರುಡೇಶ್ವರ: ಮುರುಡೇಶ್ವರದ ಯಕ್ಷರಕ್ಷೆ ವೇದಿಕೆಯಲ್ಲಿ ರಾಗಶ್ರೀ ಸಂಗೀತ ವಿದ್ಯಾಲಯ ಹಡಿನಬಾಳ ಇದರ ಮುರುಡೇಶ್ವರ ಶಾಖೆಯ ಪ್ರಥಮ...

ಬಡ, ಮಧ್ಯಮವರ್ಗ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಒಟ್ಟು 3 ಕೋಟಿ ಮೌಲ್ಯದ ವಿದ್ಯಾರ್ಥಿವೇತನ

ಉಡುಪಿ: ರಾಜ್ಯದಲ್ಲೇ ಪ್ರಸಿದ್ಧ ಪಡೆದ ಉಡುಪಿ ಲಾರ್ಡ್ಸ್ ಇಂಟರ್‌ನ್ಯಾಷನಲ್ ರೆಸಿಡೆನ್ಷಿಯಲ್ ಸ್ಕೂಲ್ , ಬಡ, ಮಧ್ಯಮವರ್ಗ...

ಶತರುದ್ರ ಮತ್ತು ಶತಚಂಡಿಕಾ ಯಾಗಕ್ಕೆ ಆತ್ಮೀಯ ಸ್ವಾಗತ

ಕಾರವಾರ: ದಿವಂಗತ ಕೃಷ್ಣ ಸೈಲ್ ಹಾಗೂ ಗಿರಿಜಾ ಕೃಷ್ಣ ಸೈಲ್ ರವರ ಆರ್ಶೀವಾದದೊಂದಿಗೆ ಈ ಕ್ಷೇತ್ರದ...

ಸಹಕಾರದ ಬೆಳಕಿನಲ್ಲಿ ಮಹತ್ವದ ಹೆಜ್ಜೆಯಿಟ್ಟ ‘ಸೂರ್ಯ’: ಹೊಸ ಶಾಖೆಗಳತ್ತ ನಾಗರಾಜ ನಾಯಕರ ದೃಷ್ಟಿ”

ಅಂಕೋಲಾ: ಅಂಕೋಲೆ ಎಂದಾಗ ಕರಿ ಇಸಾಡು ಮಾವಿನಹಣ್ಣು ನೆನಪಾದರೆ, “ಸೂರ್ಯ” ಸಹಕಾರಿ ಎಂದಾಗ ನಾಗರಾಜ ನಾಯಕ...

ಆಟೋರಿಕ್ಷಾಗೆ ಪ್ರವಾಸಿಗರಿದ್ದ ಟಿ.ಟಿ ವಾಹನ ಡಿಕ್ಕಿ : ಮಹಿಳೆಗೆ ಗಾಯ

ಅಂಕೋಲಾ: ಸಹೋದರಿಯ ಮನೆಗೆ ಬಂದು ವಾಪಸ್ ಮನೆಗೆ ಮರಳುತ್ತಿದ್ದ ಗೃಹಿಣಿ ಇದ್ದ ಆಟೋರಿಕ್ಷಾಗೆ ಪ್ರವಾಸಿಗರಿದ್ದ ಟಿ.ಟಿ...

ಶಾಲಾ ಮಕ್ಕಳ ಬಸ್ ಪಲ್ಟಿ: ವಿದ್ಯಾರ್ಥಿ ಸಾವು

ಹೊನ್ನಾವರ: ಗೇರುಸೊಪ್ಪ ಸುಳೆಮುರ್ಕಿ ಕ್ರಾಸ್ ಹತ್ತಿರ ಶಾಲಾಮಕ್ಕಳ ಪ್ರವಾಸಿ ಬಸ್ ಪಲ್ಟಿಯಾಗಿ, ವಿಧ್ಯಾರ್ಥಿ ಸಾವನಪ್ಪಿರುವ ಘಟನೆ...