Important

ಕುಮಟಾ ಶಾಸಕರ ನೂತನ ಕಾರ್ಯಾಲಯ ಶುಭಾರಂಭ : ತಾಲೂಕಾ ಆಡಳಿತ ಸೌಧದಲ್ಲಿ ಉದ್ಘಾಟನೆ

Share

ಕುಮಟಾ: ತಾಲೂಕಾ ಆಡಳಿತ ಸೌಧದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶಾಸಕರ ಕಾರ್ಯಾಲಯವನ್ನು ಇಂದು ಉದ್ಘಾಟನೆ ಮಾಡಲಾಯಿತು. ಕುಮಟಾ ಹೊನ್ನಾವರ ವಿಧಾನಸಭಾ ಕ್ಷೇತ್ರದ ಶಾಸಕರಾದ ದಿನಕರ ಶೆಟ್ಟಿಯವರು ರಿಬ್ಬನ್ ಕತ್ತರಿಸುವುದರ ಮೂಲಕ ಕಾರ್ಯಾಯವನ್ನು ಉದ್ಘಾಟಿಸಿದರು. ನಂತರ ಕಾರ್ಯಾಲಯದ ಒಳಗಡೆ ಪೂಜೆ ನೆರವೇರಿಸಿ ಸಿಹಿ ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು ಭಾರತೀಯ ಜನತಾ ಪಾರ್ಟಿ ಅಧಿಕಾರದಲ್ಲಿ ಇದ್ದಂತಹ ಸಂದರ್ಭದಲ್ಲಿ ಯಡಿಯೂರಪ್ಪ ಮತ್ತು ಬಸವರಾಜ್ ಬೊಮ್ಮಾಯಿಯವರು ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಕುಮಟಾಕ್ಕೆ ಆಡಳಿತ ಸೌಧವನ್ನು ಮಂಜೂರಿ ಮಾಡಲಾಗಿತ್ತು. ಅಂದಿನ ಕಂದಾಯ ಸಚಿವರಾದ ಆರ್ ಅಶೋಕ್ ಅವರು ಶಂಖುಸ್ಥಾಪನೆ ಮಾಡಿದ್ದರು. ಅಂದಿನ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಕೋಟಾ ಶ್ರೀವಾಸ ಪೂಜಾರಿಯವರು ಈ ಮಿನಿ ವಿಧಾನ ಸೌಧದ ಉದ್ಘಾಟನೆಯನ್ನು ನೆರವೇರಿಸಿದ್ದರು. ಅಂದಿನ ದಿನದಲ್ಲಿ ಉತ್ತಮ ಗುಣಮಟ್ಟದ ಕಾಮಗಾರಿನ್ನು ನಡೆಸಿದ್ದ ನಮ್ಮ ಲೋಕೋಪಯೋಗಿ ಇಲಾಖೆಯವರು ಈ ಒಂದು ಆಡಳಿತ ಸೌಧವನ್ನು ನಿರ್ಮಿಸಿ ಕೊಟ್ಟಿದ್ದಾರೆ.

ನಮ್ಮ ಜಿಲ್ಲೆಯಲ್ಲಿಯೇ ಅತಿ ದೊಡ್ಡ ಆಡಳಿತ ಸೌಧ ನಮ್ಮ ಕುಮಟಾದಲ್ಲಿದೆ. ಪರಿಪೂರ್ಣ ವ್ಯವಸ್ಥೆಯನ್ನು ಹೊಂದಿರುವ ಸೌಧ ಇದಾಗಿದೆ. ಶಾಸಕರ ಕಾರ್ಯಾಲಯದ ಉದ್ಘಾಟನೆ ವಿಳಂಬವಾಗಿ ನಡೆದಿದೆ. ಅದರೂ ಸಹ ನಾನು ಪ್ರತೀ ದಿನ ಈ ಕಾರ್ಯಾಲಯಕ್ಕೆ ಬಂದು ನಮ್ಮ ಜನರ ಸಮಸ್ಯೆಗಳ ಅಹವಾಲನ್ನು ಸ್ವೀಕರಿಸಿ ಅವರ ಸಮಸ್ಯೆಗೆ ಪರಿಹಾರ ಒದಗಿಸಲು ಪ್ರಾಮಾಣಿಕವಾಗಿ ಪ್ರಯತ್ನ ನಡೆಸುತ್ತೇನೆ ಎಂದರು.

ಈ ಸಂದರ್ಭದಲ್ಲಿ ಕುಮಟಾ ಸಹಾಯಕ ಆಯುಕ್ತರಾದ ಕಲ್ಯಾಣಿ ಕಾಂಬ್ಳೆ, ಪುರಸಭಾ ಅಧ್ಯಕ್ಷೆ ಸುಮತಿ ಭಟ್, ಉಪಾಧ್ಯಕ್ಷ ಮಹೇಶ ನಾಯ್ಕ, ಬಿಜೆಪಿ ಮಂಡಲಾಧ್ಯಕ್ಷ ಜಿ. ಆಯ್. ಹೆಗಡೆ, ಪ್ರಮುಖರಾದ ಡಾ. ಜಿ.ಜಿ. ಹೆಗಡೆ. ಗಜಾನನ ಗುನಗಾ, ಬಿಜೆಪಿ ನಿಕಟಪೂರ್ವ ಜಿಲ್ಲಾಧ್ಯಕ್ಷ ವೆಂಕಟೇಶ ನಾಯ್ಕ, ಶಿಕ್ಷಣ ಪ್ರಕೋಷ್ಠದ ಎಮ್. ಜಿ. ಭಟ್, ಹೇಮಂತಕುಮಾರ್ ಗಾಂವ್ಕರ್, ಜಯಾ ಶೇಟ್, ಪುರಸಭಾ ಸದಸ್ಯರಾದ ಸಂತೋಷ ನಾಯ್ಕ, ಸೂರ್ಯಕಾಂತ ಗೌಡ ಸೇರಿದಂತೆ ಬಿಜೆಪಿ ಪಕ್ಷದ ಕಾರ್ಯಕರ್ತರು, ಆಡಳಿತ ಸೌಧದ ವಿವಿಧ ಅಧಿಕಾರಿಗಳು ಸಿಬ್ಬಂದಿಗಳು ಹಾಜರಿದ್ದರು.

ವಿಸ್ಮಯ ನ್ಯೂಸ್ ದೀಪೇಶ ನಾಯ್ಕ ಕುಮಟಾ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಬೆಂಕಿ ಅವಘಡದಲ್ಲಿ ಅಪಾರಹಾನಿ: ಆದರೆ, ಮಾರಿಕಾಂಬೆಯ ಫೋಟೋ ಮಾತ್ರ ಸೇಫ್

ಅಂಕೋಲಾ: ಪಟ್ಟಣ ವ್ಯಾಪ್ತಿಯ ಲಕ್ಷ್ಮೇಶ್ವರ–ಕುಂಬಾರಕೇರಿ ಪ್ರದೇಶದಲ್ಲಿರುವ ಶ್ರೀ ಮಹಾಲಸಾ ವೆಲ್ಡಿಂಗ್ ಶಾಪ್ನಲ್ಲಿ ಫೆಬ್ರವರಿ 9ರ ಸೋಮವಾರ ರಾತ್ರಿ ಆಕಸ್ಮಿಕವಾಗಿ ಬೆಂಕಿ ಅವಘಡ ಸಂಭವಿಸಿ, ಲಕ್ಷಾಂತರ ರೂಪಾಯಿ ಮೌಲ್ಯದ ಆಸ್ತಿ ಹಾನಿಯಾಗಿರುವ ಘಟನೆ...

ಕಲೆ ಆತ್ಮ ಗೌರವದ ಸಂಕೇತ: ಮಂಕಾಳು ವೈದ್ಯ

ಮುರುಡೇಶ್ವರ: ಮುರುಡೇಶ್ವರದ ಯಕ್ಷರಕ್ಷೆ ವೇದಿಕೆಯಲ್ಲಿ ರಾಗಶ್ರೀ ಸಂಗೀತ ವಿದ್ಯಾಲಯ ಹಡಿನಬಾಳ ಇದರ ಮುರುಡೇಶ್ವರ ಶಾಖೆಯ ಪ್ರಥಮ ವರ್ಷದ ವಾರ್ಷಿಕೋತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಉಸ್ತುವಾರಿ ಸಚಿವರಾದ ಶ್ರೀ ಮಂಕಾಳು ವೈದ್ಯರು ಕಲೆ ಮತ್ತು...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಕಲೆ ಆತ್ಮ ಗೌರವದ ಸಂಕೇತ: ಮಂಕಾಳು ವೈದ್ಯ

ಮುರುಡೇಶ್ವರ: ಮುರುಡೇಶ್ವರದ ಯಕ್ಷರಕ್ಷೆ ವೇದಿಕೆಯಲ್ಲಿ ರಾಗಶ್ರೀ ಸಂಗೀತ ವಿದ್ಯಾಲಯ ಹಡಿನಬಾಳ ಇದರ ಮುರುಡೇಶ್ವರ ಶಾಖೆಯ ಪ್ರಥಮ...

ಬಡ, ಮಧ್ಯಮವರ್ಗ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಒಟ್ಟು 3 ಕೋಟಿ ಮೌಲ್ಯದ ವಿದ್ಯಾರ್ಥಿವೇತನ

ಉಡುಪಿ: ರಾಜ್ಯದಲ್ಲೇ ಪ್ರಸಿದ್ಧ ಪಡೆದ ಉಡುಪಿ ಲಾರ್ಡ್ಸ್ ಇಂಟರ್‌ನ್ಯಾಷನಲ್ ರೆಸಿಡೆನ್ಷಿಯಲ್ ಸ್ಕೂಲ್ , ಬಡ, ಮಧ್ಯಮವರ್ಗ...

ಶತರುದ್ರ ಮತ್ತು ಶತಚಂಡಿಕಾ ಯಾಗಕ್ಕೆ ಆತ್ಮೀಯ ಸ್ವಾಗತ

ಕಾರವಾರ: ದಿವಂಗತ ಕೃಷ್ಣ ಸೈಲ್ ಹಾಗೂ ಗಿರಿಜಾ ಕೃಷ್ಣ ಸೈಲ್ ರವರ ಆರ್ಶೀವಾದದೊಂದಿಗೆ ಈ ಕ್ಷೇತ್ರದ...

ಸಹಕಾರದ ಬೆಳಕಿನಲ್ಲಿ ಮಹತ್ವದ ಹೆಜ್ಜೆಯಿಟ್ಟ ‘ಸೂರ್ಯ’: ಹೊಸ ಶಾಖೆಗಳತ್ತ ನಾಗರಾಜ ನಾಯಕರ ದೃಷ್ಟಿ”

ಅಂಕೋಲಾ: ಅಂಕೋಲೆ ಎಂದಾಗ ಕರಿ ಇಸಾಡು ಮಾವಿನಹಣ್ಣು ನೆನಪಾದರೆ, “ಸೂರ್ಯ” ಸಹಕಾರಿ ಎಂದಾಗ ನಾಗರಾಜ ನಾಯಕ...

ಆಟೋರಿಕ್ಷಾಗೆ ಪ್ರವಾಸಿಗರಿದ್ದ ಟಿ.ಟಿ ವಾಹನ ಡಿಕ್ಕಿ : ಮಹಿಳೆಗೆ ಗಾಯ

ಅಂಕೋಲಾ: ಸಹೋದರಿಯ ಮನೆಗೆ ಬಂದು ವಾಪಸ್ ಮನೆಗೆ ಮರಳುತ್ತಿದ್ದ ಗೃಹಿಣಿ ಇದ್ದ ಆಟೋರಿಕ್ಷಾಗೆ ಪ್ರವಾಸಿಗರಿದ್ದ ಟಿ.ಟಿ...

ಶಾಲಾ ಮಕ್ಕಳ ಬಸ್ ಪಲ್ಟಿ: ವಿದ್ಯಾರ್ಥಿ ಸಾವು

ಹೊನ್ನಾವರ: ಗೇರುಸೊಪ್ಪ ಸುಳೆಮುರ್ಕಿ ಕ್ರಾಸ್ ಹತ್ತಿರ ಶಾಲಾಮಕ್ಕಳ ಪ್ರವಾಸಿ ಬಸ್ ಪಲ್ಟಿಯಾಗಿ, ವಿಧ್ಯಾರ್ಥಿ ಸಾವನಪ್ಪಿರುವ ಘಟನೆ...