Big News

ಕೋಳಿ ಸಾಯಿಸಿ ಮೊಟ್ಟೆಗಳನ್ನು ನುಂಗಿದ್ದ ನಾಗರಹಾವು : ಸೆರೆ ಹಿಡಿಯಲು ಮುಂದಾದಂತೆ ಮೊಟ್ಟೆಗಳನ್ನು ಹೊರ ಕಕ್ಕಿದ ಹಾವು

Share

ಅಂಕೋಲಾ : ಕೋಡಗನ ಕೋಳಿ ನುಂಗಿತ್ತ ಎಂಬ ಜನಪದ ಹಾಡು ಇಂದಿಗೂ ಹಲವರ ಬಾಯಲ್ಲಿ ಜನಜನಿತವಾಗಿದೆ. ಆದರೆ ಇಲ್ಲೊಂದು ಅಪರೂಪದ ಘಟನೆ ಸಂಭವಿಸಿದ್ದು ಕಾವಿಗೆ ( ಮೊಟ್ಟೆ ಮರಿಮಾಡಲು ) ಕುಳಿತಿದ್ದ ಕೋಳಿಯನ್ನು ಸಾಯಿಸಿ, ಅದರ ಸುಮಾರು 5 ಮೊಟ್ಟೆಗಳನ್ನು ನಾಗರ ಹಾವು ನುಂಗಿತ್ತ! ಎನ್ನುವಂತಾಗಿದೆ. ತಾಲೂಕಿನ ಅವರ್ಸಾ – ಸಕಲಬೇಣ ನಿವಾಸಿ ರಾಜು ನಾಯ್ಕ ಎನ್ನುವವರ ಮನೆಯೊಳಗೆ ಕಾವಿಗೆ ಕುಳಿತಿದ್ದ ಕೋಳಿಯನ್ನು ಸಾಯಿಸಿ, ಬುಟ್ಟಿಯಲ್ಲಿದ್ದ ಮೊಟ್ಟೆಗಳನ್ನು ನುಂಗಿದ್ದ ನಾಗರ ಹಾವೊಂದು , ಅದನ್ನು ಜೀರ್ಣಿಸಿಕೊಳ್ಳಲೋ ಎಂಬಂತೆ ಕಟ್ಟಿಗೆ ರಾಶಿಯಲ್ಲಿ ಸೇರಿಕೊಂಡು ವಿರಮಿಸುತಿತ್ತು ಎನ್ನಲಾಗಿದ್ದು, ಅದನ್ನು ಕಂಡ ಮನೆಯವರು,ಮೂಡೆಕಟ್ಟಾ ನಿವಾಸಿ ಪ್ರಶಾಂತ ಕಳಸ ಎನ್ನುವವರಿಗೆ ಕರೆ ಮಾಡಿ ತಮ್ಮ ಆತಂಕ ವ್ಯಕ್ತಪಡಿಸಿದ್ದರು.

ಸ್ಥಳಕ್ಕೆ ಬಂದ ಪ್ರಶಾಂತ ಕಳಸ, ಅವರು ಆ ಮನೆಯ ಸದಸ್ಯರ ಮತ್ತು ಸ್ಥಳೀಯರ ಸಹಕಾರದಿಂದ ಕಟ್ಟಿಗೆ ರಾಶಿಯನ್ನು ಸ್ವಲ್ಪ ಪಕ್ಕಕ್ಕೆ ಸರಿಸಿ ಅಲ್ಲಿಯೇ ಅವಿತು ಕೊಂಡಿದ್ದ ನಾಗರ ಹಾವನ್ನು ಹಿಡಿಯಲು ಮುಂದಾಗಿದ್ದಾರೆ. ಅಂತೂ ಇಂತು ನಿಧಾನವಾಗಿ ಹಾವಿನ ಬಾಲ ಹಿಡಿದು,ಕಟ್ಟಿಗೆ ರಾಶಿಯಿಂದ ಹೊರ ತಂದು ಚೀಲಕ್ಕೆ ತುಂಬುವ ಯತ್ನ ಮಾಡಿದ್ದಾರೆ.ತಾನು ತಿಂದ ಆಹಾರದಿಂದ ತುಸು ಜಡವಾದಂತೆ ಕಟ್ಟಿಗೆ ರಾಶಿಯಲ್ಲಿದ್ದ ನಾಗರ ಹಾವು , ತನ್ನ ಸೆರೆ ಕಾರ್ಯಚರಣೆ ನಡೆಯುತ್ತಿರುವುದನ್ನು ತಿಳಿದು, ಅದರಿಂದ ಹೇಗಾದರೂ ತಪ್ಪಿಸಿಕೊಳ್ಳಬೇಕೆಂಬ ಭಾವನೆಯಿಂದ ತನ್ನ ಜಡತ್ವ ದೂರ ಮಾಡಿಕೊಳ್ಳಲೋ ಎಂಬಂತೆ,ನಿಧಾನವಾಗಿ ಬಾಯಿ ತೆರೆದಿದೆ.

ಅಕ್ಕ ಪಕ್ಕದವರು ಬೆರಗುಗಣ್ಣುಗಳಿಂದ ನೋಡುತ್ತಿರುವಾಗ ಹಾವು ತಾನು ನುಂಗಿದ್ದ ಸುಮಾರು 5 ಕೋಳಿ ಮೊಟ್ಟೆಗಳನ್ನು ಹೊರಕಕ್ಕಿದೆ.ಈ ಬಲು ಅಪರೂಪದ ದೃಶ್ಯವನ್ನು ಅಲ್ಲಿ ನೆರೆದವರು ತಮ್ಮ ಮೊಬೈಲ್ ಕೆಮರಾ ಕಣ್ಣುಗಳಲ್ಲಿ ಚಿತ್ರೀಕರಿಸಿದ್ದು,ಸಖತ್ ವೈರಲ್ ಆಗುವಂತಾಗಿದೆ.ಮೊಟ್ಟೆಗಳನ್ನು ಹೊರ ಕಕ್ಕಿದ ನಾಗರಹಾವಿನ ಜಡತ್ವ ದೂರವಾದಂತಾಗಿ ಚುರುಕಿನ ಚಲನೆಗೆ ಮುಂದಾಗಿದೆ. ಈ ವೇಳೆ ತನ್ನ ಬಾಲ ಉರಗ ಸಂರಕ್ಷನ ಕೈಯಲ್ಲಿ ಇರುವುದು ತಿಳಿಯುತ್ತಿದ್ದಂತೆ ಹೆಡೆ ಎತ್ತಿ ಬುಸ್ ಗುಡುತ್ತ ತನ್ನ ನೈಜ ಗುಣ ತೋರಿಸಲಾರಂಭಿಸಿದೆ. ಅದರ ಎದೆಗುಂದದ ಪ್ರಶಾಂತ್ ಕಳಸ, ಅದೇ ಹಾವನ್ನು ಸ್ಥಳೀಯರ ಸಹಕಾರದಲ್ಲಿ ಚೀಲದೊಳಗೆ ತುಂಬಲು ಯಶಸ್ವಿಯಾಗಿದ್ದಾರೆ.

ಆ ಮೂಲಕ ಅವರು,ಅರಣ್ಯ ಇಲಾಖೆಗೆ ಅದನ್ನು ಹಸ್ತಾಂತರಿಸಿ ಸುರಕ್ಷಿತ ಪ್ರದೇಶದಲ್ಲಿ ಬಿಟ್ಟು ಬರುವ ಮೂಲಕ ನಾಗರ ಹಾವಿನ ಸಂರಕ್ಷಣೆಯ ಜೊತೆ ಸ್ಥಳೀಯರ ಆತಂಕ ದೂರ ಮಾಡಿದ್ದಾರೆ. ಹೆಸ್ಕಾಂ ಸಿಬ್ಬಂದಿ ಆಗಿರುವ ಪ್ರಶಾಂತ ಕಳಸ ಅವರು ಉರಗ ಸಂರಕ್ಷಣೆ ಮೂಲಕವೂ ಆಗಾಗ ಗಮನ ಸೆಳೆಯುತ್ತಿದ್ದು ,ಯಾವುದೇ ಪ್ರತಿಫಲಾಕ್ಷೆ ಬಯಸದೇ ಸಾಮಾಜಿಕ ಸೇವೆ ಸಲ್ಲಿಸುತ್ತಿರುವುದಕ್ಕೆ ,ಸ್ಥಳೀಯರಿಂದ ಮೆಚ್ಚುಗೆ ಮಾತುಗಳು ಕೇಳಿಬಂದಿವೆ.ಇತ್ತೀಚಿನ ದಿನಗಳಲ್ಲಿ ತನ್ನ ಕಾರ್ಯವೈಖರಿಯಿಂದ ಪ್ರಶಾಂತ್ ಕಳಸ ಸಹ ಸುದ್ದಿಯಾಗುವಂತಾಗಿದ್ದು, ಸ್ಥಳೀಯ ಅರಣ್ಯ ಇಲಾಖೆ ಸಿಬ್ಬಂದಿಗಳು, ಹಾರವಾಡ, ಗಾಬಿತವಾಡ ಮತ್ತಿತರಡೆಯ ಆಯಾ ಭಾಗದ ಸ್ಥಳೀಯರ ಸಹಕಾರದಿಂದ ಈ ವರೆಗೆ ನಾಗರ ಹಾವು , ಕೇರೆ ಹಾವು , ಹೆಬ್ಬಾವು ಸೇರಿ ಸುಮಾರು 30 ಕ್ಕೂ ಹೆಚ್ಚು ಹಾವುಗಳನ್ನು ಹಿಡಿದು ಸಂರಕ್ಷಿಸಿದ್ದು, ಕಳಸ ಅವರ ಸೇವೆಗೆ ಪ್ರೋತ್ಸಾಹಿಸಲು ಸಂಬಂಧಿತ ಇಲಾಖೆ ಹಾಗೂ ಸಂಘ ಸಂಸ್ಥೆಗಳು ಗುರುತಿಸಿ ಗೌರವಿಸುವಂತಾಗಬೇಕಿದೆ.ನಿಮಗೂ ಈ ವಿಷಯ ಇಷ್ಟವಾದಲ್ಲಿ ಹೆಸ್ಕಾಂ ಸಿಬ್ಬಂದಿಯ ವಿಶೇಷ ಸಾಮಾಜಿಕ ಸೇವೆಗೆ ಮತ್ತು ಉರಗ ಸಂರಕ್ಷಣೆಯ ಪ್ರಯತ್ನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಮತ್ತು,ಸಾಧ್ಯವಾದಷ್ಟು ಹೆಚ್ಚಿನ ಜನರಿಗೆ ಶೇರ್ ಮಾಡಿ.

ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಭಟ್ಕಳದಲ್ಲಿ ಬೆಂಕಿ ಅನಾಹುತ

ಭಟ್ಕಳ: ತಾಲೂಕಿನ ಜಾಲಿ ಕ್ರಾಸ್‌ ಬಳಿಭೀಕರ ಬೆಂಕಿ ಅವಘಡ ಸಂಭವಿಸಿ, ಇಪ್ತಿಕಾರ್ ಮೋಹಿದೀನ್ ಮಾಲಕತ್ವದ “ತಾಸಿನ್ ಫ್ರೂಟ್ಸ್ & ವೆಜಿಟೇಬಲ್ಸ್” ಹೋಲ್‌ಸೇಲ್ ಅಂಗಡಿ ಭಸ್ಮವಾದ ಘಟನೆ ನಡೆದಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ...

ಕ್ಷುಲ್ಲಕ ಕಾರಣಕ್ಕೆ ಜಗಳ: ವ್ಯಕ್ತಿಗೆ ಇರಿತ

ಭಟ್ಕಳ: ವಾರದ ಸಂತೆಯಲ್ಲಿ ವ್ಯಾಪಾರಿಯೊಬ್ಬರ ಹತ್ತಿರ ಕೆಲಸ ಮಾಡುತ್ತಿದ್ದ ಇಬ್ಬರು ಕೆಲಸಗಾರರ ನಡುವೆ ಕ್ಷುಲ್ಲಕ ಕಾರಣಕ್ಕಾಗಿ ಮಾತಿಗೆ ಮಾತು ಬೆಳೆದ ಚೂ-ರಿ ಇರಿತದಲ್ಲಿ ಕೊನೆಗೊಂಡ ಘಟನೆ ನಡೆದಿದೆ. ಹಾನಗಲ್ ಮೂಲದ ಹಾಲಿ...

📰 ನಿಮ್ಮ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರಿನ ಸಭೆ, ಸಮಾರಂಭ, ಪ್ರತಿಭಟನೆ ಮತ್ತು ವಿಶೇಷ ವರದಿಗಳನ್ನು ನಮಗೆ ಕಳುಹಿಸಿ.

✉️ Gmail: [email protected]

📲 WhatsApp ಮೂಲಕ ಕಳುಹಿಸಿ ✉️ Gmail ಮೂಲಕ ಕಳುಹಿಸಿ

ಸರ್ಕಾರಿ ಇಲಾಖೆಯ ಕಟ್ಟಡದ ಇಕ್ಕಟ್ಟಾದ ಗೋಡೆಗಳ ಮಧ್ಯೆ ಪತ್ತೆಯಾದ ಸೂಟ್ ಕೇಸ್ ! ? ಕೊನೆಗೂ ಸೂಟ್ಕೇಸ್ ರಹಸ್ಯ

ಅಂಕೋಲಾ, ಆಗಸ್ಟ್ 26 : ಸರ್ಕಾರಿ ಇಲಾಖೆ ಒಂದರ ಕಟ್ಟಡದ ಗೋಡೆಗಳ ನಡುವಿನ ಇಕ್ಕಟ್ಟಾದ ಸ್ಥಳದಲ್ಲಿ ಯಾರೋ ತಂದಿಟ್ಟು ಹೋಗಿದ್ದರೆನ್ನಲಾದ ಸೂಟ್ ಕೇಸ್ ಒಂದು ಪಟ್ಟಣ ವ್ಯಾಪ್ತಿಯಲ್ಲಿ ಕೆಲಕಾಲ ಆತಂಕ ಸೃಷ್ಟಿಸಿದ್ದಲ್ಲದೇ,ಸೂಟ್ಕೇಸ್...

ಗಣಪತಿಗೆ ಜೀವ ಕಳೆ ತುಂಬುವ ಗಂಗಾವಳಿಯ ಶರತ್ ನಾಯ್ಕ್

ಕುಮಟಾ, ಆಗಸ್ಟ್ 26: ಪ್ರತಿಭೆ ಯಾರ ಸೊತ್ತಲ್ಲ. ಅದು ಸಾಧಕನ ಸ್ವತ್ತು ಎನ್ನುವ ಮಾತಿಗೆ ಅನುಗುಣವಾಗಿ ಇರುವವರು ಕುಮಟಾ ತಾಲೂಕಿನ ಗಂಗಾವಳಿಯ ಹೆಮ್ಮೆಯ ಪ್ರತಿಭೆ ಶರತ್ ನಾಯ್ಕ್ ಅವರು ಈಗಾಗಲೇ ಬೃಹತ್...

ವಿಶ್ವಾಸದ ಮತ್ತೊಂದು ಹೆಸರೇ ಅಲಂಕಾರ ಜ್ಯುವೆಲರ್ಸ್: ಅಂಕೋಲಾದಲ್ಲಿ ಭವ್ಯ ಶುಭಾರಂಭ

ಅಂಕೋಲಾ, ಆಗಸ್ಟ್ 24: ಪಟ್ಟಣದ ಬಂಡಿಬಜಾರ ಮುಖ್ಯ ರಸ್ತೆಯಂಚಿಗೆ ನವೀಕೃತಗೊಂಡಿರುವ ಭವ್ಯವಾದ ಕಟ್ಟಡದಲ್ಲಿ ಅಲಂಕಾರ ಜ್ಯುವೆಲರ್ಸ್ ನ ಬೃಹತ್ತ ಮಳಿಗೆ ಅಗಸ್ಟ್ 24 ರ ರವಿವಾರ ಶುಭ ಮುಹೂರ್ತದಲ್ಲಿ ಗ್ರಾಹಕರ ಸೇವೆಗೆ...

ಭಟ್ಕಳದಲ್ಲಿ ಬೆಂಕಿ ಅನಾಹುತ

ಭಟ್ಕಳ: ತಾಲೂಕಿನ ಜಾಲಿ ಕ್ರಾಸ್‌ ಬಳಿಭೀಕರ ಬೆಂಕಿ ಅವಘಡ ಸಂಭವಿಸಿ, ಇಪ್ತಿಕಾರ್ ಮೋಹಿದೀನ್ ಮಾಲಕತ್ವದ “ತಾಸಿನ್ ಫ್ರೂಟ್ಸ್ & ವೆಜಿಟೇಬಲ್ಸ್” ಹೋಲ್‌ಸೇಲ್ ಅಂಗಡಿ ಭಸ್ಮವಾದ ಘಟನೆ ನಡೆದಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Current date Wednesday , 27 August 2025
Related Articles

ಸರ್ಕಾರಿ ಇಲಾಖೆಯ ಕಟ್ಟಡದ ಇಕ್ಕಟ್ಟಾದ ಗೋಡೆಗಳ ಮಧ್ಯೆ ಪತ್ತೆಯಾದ ಸೂಟ್ ಕೇಸ್ ! ? ಕೊನೆಗೂ ಸೂಟ್ಕೇಸ್ ರಹಸ್ಯ

ಅಂಕೋಲಾ, ಆಗಸ್ಟ್ 26 : ಸರ್ಕಾರಿ ಇಲಾಖೆ ಒಂದರ ಕಟ್ಟಡದ ಗೋಡೆಗಳ ನಡುವಿನ ಇಕ್ಕಟ್ಟಾದ ಸ್ಥಳದಲ್ಲಿ...

ಧರ್ಮಸ್ಥಳದ ವಿರುದ್ಧ ಅಪಪ್ರಚಾರ: ಭಟ್ಕಳದಿಂದ ರಾಜ್ಯಪಾಲರಿಗೆ ಮನವಿ

ಭಟ್ಕಳ, ಆಗಸ್ಟ್ 22: ಹಿಂದೂಗಳ ಶ್ರದ್ಧಾ ಕೇಂದ್ರವಾಗಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಅಪಪ್ರಚಾರವನ್ನು...

ಕುಮಟಾದಲ್ಲಿ ಕೊಂಕಣಿ ಮಾನ್ಯತಾ ದಿವಸ್ ಆಚರಣೆ

ಕುಮಟಾ: ದಿನಾಂಕ 20-08-2025 ರಂದು ರೋಟರಿ ಹಾಲ್ ಕುಮಟಾ ದಲ್ಲಿ ಕೊಂಕಣಿ ಮಾನ್ಯತಾ ದಿವಸ್ ಆಚರಣೆ...

ಸ್ಥಳೀಯ ಮೀನುಗಾರರಿಗೆ,ರೈತರಿಗೆ ತಮ್ಮ ಅಹವಾಲು ಸಲ್ಲಿಸಲು ಮುಕ್ತ ಅವಕಾಶ ಕೊಡಿ: ಜಿಲ್ಲಾಧಿಕಾರಿಗಳಿಗೆ ಮತ್ತು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ಮನವಿ

ಕಾರವಾರ : ಅಂಕೋಲಾ ತಾಲೂಕಿನ ಕೇಣಿಯಲ್ಲಿ ಖಾಸಗಿ ಮೂಲದ ಗ್ರೀನ್ ಫೀಲ್ಡ್ ಬಂದರು ನಿರ್ಮಾಣಕ್ಕೆ ರಾಷ್ಟ್ರೀಯ...