Important

ಸೆಂಟ್ರಿಂಗ್ ಶೀಟ್ ಕಳ್ಳತನ: ಆರೋಪಿಗಳ ಬಂಧನ

Share

ಹೊನ್ನಾವರ: ಕಟ್ಟಡ ನಿರ್ಮಿಸಲು ಬಳಸುವ ಕಬ್ಬಿಣದ ಸೆಂಟ್ರಿಂಗ್ ಶೀಟ್ ಕಳ್ಳತನ ಮಾಡಿದ ಅಂತರಜಿಲ್ಲಾ ಕಳ್ಳರನ್ನು ಹೊನ್ನಾವರ ಪೊಲೀಸರು ಬಂದಿಸಿದ್ದಾರೆ. ತಾಲೂಕಿನ ಮಂಕಿ, ಉಪ್ಲಿಯ ರಾಮಾ ಲಕ್ಷ್ಮಣ ನಾಯ್ಕ ಇವರು ಕಾಸರಕೋಡ ರೋಷನ್ ಮೊಹಲ್ಲಾದಲ್ಲಿರುವ ಮಸೀದಿ ಹತ್ತಿರ ಹೊಸದಾಗಿ ಕಟ್ಟಡ ನಿರ್ಮಿಸಲು ಇಟ್ಟಿರುವ ಕಬ್ಬಿಣದ ಸೆಂಟ್ರಿಂಗ್ ಸೀಟ್‌ನ್ನು ಜೂಲೈ 15 ರ ಸಾಯಂಕಾಲದಿಂದ ಜೂಲೈ 16 ರ ಬೆಳಗ್ಗೆಯ ಒಳಗೆ ಕಳ್ಳತನ ಮಾಡಿಕೊಂಡು ಹೋಗಿರುವ ಬಗ್ಗೆ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.

ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು ಅಪರಾಧಿಗಳ ಹೆಡೆಮುರಿ ಕಟ್ಟುವಲ್ಲಿ ಯಶಸ್ಸು ಕಂಡಿದ್ದಾರೆ. ಪ್ರಕರಣದ ಪತ್ತೆಗಾಗಿ ಅನುಭವಿ ಪತ್ತೆ ತಂಡವನ್ನು ನೇಮಿಸಿ, ಈತಾಂತ್ರಿಕ ಮಾಹಿತಿಯ ಸಹಾಯದಿಂದ ಆಗಸ್ಟ್ 4 ರಂದು ಖಚಿತ ಮಾಹಿತಿ ಮೇರೆಗೆ ಆರೋಪಿತರಾದ ಶಿವಮೊಗ್ಗ ಜಿಲ್ಲೆಯ, ಶಿಕಾರಿಪುರ, ದೊಡ್ಡಪೇಟೆ, ಹಾಲಿ ಗಬ್ಬುರು ನಿವಾಸಿ ತವೀರ ಅಹಮ್ಮದ ಮಹ್ಮದ ಇಸಾಕ ಸಾಬ್, ಶಿಕಾರಿಪುರದ, ಕುಮದ್ವತಿ ನಗರ, ಗಣ್ಣೂರಿನ ಷಹಾದ್-ಉಲ್ಲಾ ನಜೀರ್ ಸಾಬ್, ಶಿಕಾರಿಪುರ, ಕುಂಬಾರಗುಂಡಿ ಕೊಪ್ಪಲು ಮಹ್ಮದ ಮನ್ಸೂರ ತಂದೆ ಇಲಿಯಾಸ್ ಅಹ್ಮದ್, ಶಿಕಾರಿಪುರದ, ಖಾಜಿ ಕೇರಿಯ ಕಲೀಮುಲ್ಲಾ @ ಕಲೀಂ ತಂದೆ ಭಕ್ಷೀ ಸಾಥ್ ಇವರನ್ನು ವಶಕ್ಕೆ ಪಡೆದಿರುತ್ತಾರೆ.

ಆರೋಪಿತರು ಕಳ್ಳತನ ಮಾಡಿರುವ ಬಗ್ಗೆ ಒಪ್ಪಿಕೊಂಡಿರುತ್ತಾರೆ. ಆರೋಪಿತರರಿಂದ 200.000/- ರೂ ಬೆಲೆ ಬಾಳುವ 180 ಕಬ್ಬಿಣದ ಸೆಂಟ್ರಿಂಗ್ ಸೀಟ್ ಹಾಗೂ ಕಳ್ಳತನಕ್ಕೆ ಉಪಯೋಗಿಸಿದ 3 ಲಕ್ಷ ರೂ ಬೆಲೆಯ ಅಶೋಕ ಲೈಲಾಂಡ್ ದೋಸ್ತ್ ವಾಹನ ಒಟ್ಟೂ 5 ಲಕ್ಷ ರೂ ಬೆಲೆ ಬಾಳುವ ಸ್ವತ್ತನ್ನು ಜಪ್ತುಪಡಿಸಿಕೊಂಡು ಆರೋಪಿತರನ್ನು ನ್ಯಾಯಾಲಯಕ್ಕೆ ಹಾಜರ ಪಡಿಸಿದ್ದು ನ್ಯಾಯಾಲಯ ಆರೋಪಿತರಿಗೆ ನ್ಯಾಯಾಂಗ ಬಂಧನಕ್ಕೆ ವಿಧಿಸಿರುತ್ತದೆ.

ಜಿಲ್ಲಾ ಪೊಲೀಸ್ ಅಧೀಕ್ಷಕ ದೀಪನ್ ಎಮ್.ಎನ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರು-1 ಜಿ. ಕೃಷ್ಣಮೂರ್ತಿ, ಪೊಲೀಸ್ ಅಧೀಕ್ಷಕರು-2 ಎಮ್. ಜಗದೀಶ್, ಭಟ್ಕಳ ಉಪವಿಭಾಗ ಮಹೇಶ ಕೆ. ಪೋಲೀಸ್ ನಿರೀಕ್ಷಕರ ಸಿದ್ದರಾಮೇಶ್ವರ, ಎಸ್,
ಇವರ ಮಾರ್ಗದರ್ಶನದಲ್ಲಿ ಕ್ರೈಮ್ ಪಿ.ಎಸ್.ಐ ರಾಜಶೇಖರ ವಂದಲಿ ಇವರ ನೇತೃತ್ವದಲ್ಲಿ, ಅಧಿಕಾರಿ, ಸಿಬ್ಬಂದಿಗಳಾದ ಗಜಾನನ ನಾಯ್ಕ, ವಿಠಲ ಗೌಡ, ಮನೋಜ.ಡಿ., ರವಿ ನಾಯ್ಕ, ಚಂದ್ರಶೇಖರ ನಾಯ್ತ, ಅನಿಲ ಲಮಾಣಿ ಹಾಗೂ ತಾಂತ್ರಿಕ ವಿಭಾಗದ ಸಿಬ್ಬಂದಿ ಉದಯ ಗುನಗಾ ಇವರು ಆರೋಪಿತರನ್ನು ಪತ್ತೆ ಹಚ್ಚುವಲ್ಲಿ ಪ್ರಮುಖ ಪಾತ್ರ ವಹಿಸಿರುತ್ತಾರೆ.

ವಿಸ್ಮಯ ನ್ಯೂಸ್, ವಿವೇಕ್ ಶೇಟ್, ಹೊನ್ನಾವರ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಶಾಲಾ ಮಕ್ಕಳ ಬಸ್ ಪಲ್ಟಿ: ವಿದ್ಯಾರ್ಥಿ ಸಾವು

ಹೊನ್ನಾವರ: ಗೇರುಸೊಪ್ಪ ಸುಳೆಮುರ್ಕಿ ಕ್ರಾಸ್ ಹತ್ತಿರ ಶಾಲಾಮಕ್ಕಳ ಪ್ರವಾಸಿ ಬಸ್ ಪಲ್ಟಿಯಾಗಿ, ವಿಧ್ಯಾರ್ಥಿ ಸಾವನಪ್ಪಿರುವ ಘಟನೆ ನಡೆದಿದೆ. ಮೈಸೂರಿನ ಟಿ.ಕೆ ಲೇಔಟ್ ತರಳಬಾಳು ಫ್ರೌಡಶಾಲಾ ವಿದ್ಯಾರ್ಥಿಗಳು ಜೋಗ್ ಫಾಲ್ಸ್ ಪ್ರವಾಸ ಮುಗಿಸಿ...

ತಗ್ಗು ಪ್ರದೇಶದಲ್ಲಿ ಪಲ್ಟಿಯಾದ ಸಾರಿಗೆ ಸಂಸ್ಥೆ ಬಸ್ : ಚಾಲಕ, ನಿರ್ವಾಹಕ , ಪುಟಾಣಿ ಮಗು ಸೇರಿ 26 ಕ್ಕೂ ಹೆಚ್ಚು ಜನರಿಗೆ ಗಾಯ – ನೋವು

ಅಂಕೋಲಾ: ಸಾರಿಗೆ ಸಂಸ್ಥೆಯ ಬಸ್ ಒಂದು ಪಲ್ಟಿಯಾಗಿ ಚಾಲಕ , ನಿರ್ವಾಹಕ, ಪುಟ್ಟ ಮಗು ಹಾಗೂ ಇತರೆ ಪ್ರಯಾಣಿಕರೂ ಸೇರಿ ಸುಮಾರು 26ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡ ಘಟನೆ ತಾಲೂಕಿನ ಸುಂಕಸಾಳ...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಶತರುದ್ರ ಮತ್ತು ಶತಚಂಡಿಕಾ ಯಾಗಕ್ಕೆ ಆತ್ಮೀಯ ಸ್ವಾಗತ

ಕಾರವಾರ: ದಿವಂಗತ ಕೃಷ್ಣ ಸೈಲ್ ಹಾಗೂ ಗಿರಿಜಾ ಕೃಷ್ಣ ಸೈಲ್ ರವರ ಆರ್ಶೀವಾದದೊಂದಿಗೆ ಈ ಕ್ಷೇತ್ರದ...

ಸಹಕಾರದ ಬೆಳಕಿನಲ್ಲಿ ಮಹತ್ವದ ಹೆಜ್ಜೆಯಿಟ್ಟ ‘ಸೂರ್ಯ’: ಹೊಸ ಶಾಖೆಗಳತ್ತ ನಾಗರಾಜ ನಾಯಕರ ದೃಷ್ಟಿ”

ಅಂಕೋಲಾ: ಅಂಕೋಲೆ ಎಂದಾಗ ಕರಿ ಇಸಾಡು ಮಾವಿನಹಣ್ಣು ನೆನಪಾದರೆ, “ಸೂರ್ಯ” ಸಹಕಾರಿ ಎಂದಾಗ ನಾಗರಾಜ ನಾಯಕ...

ಆಟೋರಿಕ್ಷಾಗೆ ಪ್ರವಾಸಿಗರಿದ್ದ ಟಿ.ಟಿ ವಾಹನ ಡಿಕ್ಕಿ : ಮಹಿಳೆಗೆ ಗಾಯ

ಅಂಕೋಲಾ: ಸಹೋದರಿಯ ಮನೆಗೆ ಬಂದು ವಾಪಸ್ ಮನೆಗೆ ಮರಳುತ್ತಿದ್ದ ಗೃಹಿಣಿ ಇದ್ದ ಆಟೋರಿಕ್ಷಾಗೆ ಪ್ರವಾಸಿಗರಿದ್ದ ಟಿ.ಟಿ...

ಶಾಲಾ ಮಕ್ಕಳ ಬಸ್ ಪಲ್ಟಿ: ವಿದ್ಯಾರ್ಥಿ ಸಾವು

ಹೊನ್ನಾವರ: ಗೇರುಸೊಪ್ಪ ಸುಳೆಮುರ್ಕಿ ಕ್ರಾಸ್ ಹತ್ತಿರ ಶಾಲಾಮಕ್ಕಳ ಪ್ರವಾಸಿ ಬಸ್ ಪಲ್ಟಿಯಾಗಿ, ವಿಧ್ಯಾರ್ಥಿ ಸಾವನಪ್ಪಿರುವ ಘಟನೆ...

ಆಯಕಟ್ಟಿನ ಪ್ರದೇಶದಲ್ಲಿರುವ 8 ಗುಂಟೆ ಜಾಗ ಮಾರಾಟಕ್ಕಿದೆ

ಅಂಕೋಲಾ: ತಾಲೂಕಿನ ಬಳಲೆಯಲ್ಲಿ ಅತ್ಯುತ್ತಮ ಸೌಕರ್ಯ ಹೊಂದಿರುವ, ಆಯಕಟ್ಟಿನ ಪ್ರದೇಶದಲ್ಲಿರುವ NA ಆದ ಜಾಗ ಮಾರಾಟಕ್ಕಿದೆ....

ಕುಮಟಾದ ಬ್ರೌನ್ಸ್ ವಿಲೇಜ್ ಫ್ಯಾಮಿಲಿ ಗಾರ್ಡನ್ ರೆಸ್ಟೋರೆಂಟ್ ನಲ್ಲಿ ಖ್ಯಾತ ಕಲಾವಿದರಿಂದ ಲೈವ್ ಮ್ಯೂಜಿಕ್ ನೋಡುತ್ತಾ ರುಚಿ-ಶುಚಿಯಾದ ಆಹಾರ ಸವಿಯುವ ಅವಕಾಶ

ಕುಮಟಾ: ಬ್ರೌನ್ಸ್ ವಿಲೇಜ್ ಫ್ಯಾಮಿಲಿ ಗಾರ್ಡನ್ ರೆಸ್ಟೋರೆಂಟ್ ಕುಮಟಾ, ಇದು ಉತ್ತರಕನ್ನಡ ಜಿಲ್ಲೆಯ ಅತ್ಯುತ್ತಮ ಫ್ಯಾಮಿಲಿ...

ಆಂಬ್ಯುಲೆನ್ಸ್ ಡಿಕ್ಕಿ : ಭಟ್ಕಳದ ದಂಪತಿ ಬೆಂಗಳೂರಿನಲ್ಲಿ ದುರಂತ ಸಾವು

ಭಟ್ಕಳ: ವೇಗವಾಗಿ ಬಂದ ಆಂಬ್ಯುಲೆನ್ಸ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಭಟ್ಕಳ ಮೂಲದ ದಂಪತಿ...