Focus News

ಕೇಣಿ ವಾಣಿಜ್ಯ ಬಂದರು ಕೈಬಿಡಿ: ಮೀನುಗಾರರ ಹಿತ ದೃಷ್ಟಿಯಿಂದ ಲೈಫ್ ಜಾಕೆಟ್ ಮತ್ತಿತರ ಪೂರಕ ವ್ಯವಸ್ಥೆಗೆ ಅನುಕೂಲ ಕಲ್ಪಿಸಿಕೊಡಿ

Share

ಅಂಕೋಲಾ: ತಾಲೂಕಿನ ಕೇಣಿಯಲ್ಲಿ ವಾಣಿಜ್ಯ ಬಂದರು ನಿರ್ಮಾಣ ಯೋಜನೆಯನ್ನು ಕೈ ಬಿಟ್ಟು,ಮೀನುಗಾರರ ಹಿತರಕ್ಷಣೆಗೆ ಸರ್ಕಾರ ಸ್ಪಂದಿಸುವಂತೆ ಬೆಳಂಬಾರದ ಮೀನುಗಾರರು ಮತ್ತು ನಾಡ ದೋಣಿ ಸಂಘದವರು ಸ್ಥಳೀಯ ಯುವ ಪ್ರಮುಖ ಸುಂದರ ಖಾರ್ವಿ ನೇತೃತ್ವದಲ್ಲಿ ತಹಶೀಲ್ದಾರರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಅಂಕೋಲಾ ತಾಲೂಕು ಮತ್ತು ಸುತ್ತ ಮುತ್ತಲಿನ ಮೀನುಗಾರರಿಗೆ ಕೇಣಿ ಭಾಗದ ಕಡಲ ಪ್ರದೇಶ ಜೀವಾಳವಾಗಿದ್ದು ಆ ಭಾಗದಲ್ಲಿ ಮೀನುಗಾರಿಕೆ ನಡೆಸಿ ಜೀವನ ನಿರ್ವಹಣೆ ಮಾಡಲಾಗುತ್ತಿದೆ, ಕೇಣಿಯಲ್ಲಿ ವಾಣಿಜ್ಯ ಬಂದರು ನಿರ್ಮಾಣದಿಂದ ಮೀನುಗಾರರ ಜೀವನಾಧಾರ ಸಂಪೂರ್ಣವಾಗಿ ನಿಂತು ಹೋಗಲಿದ್ದು ಬದುಕು ಸರ್ವನಾಶವಾಗಲಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ. ನೈಸರ್ಗಿಕ ಸಮುದ್ರ ಪ್ರದೇಶವನ್ನು ಬಂದರು ನಿರ್ಮಾಣಕ್ಕೆ ಬಳಸುವದರಿಂದ ಮತ್ತು ಉಬ್ಬರ ಇಳಿತಕ್ಕೆ ಅಡ್ಡವಾಗಿ ತಡೆ ಉಂಟಾಗುವುದರಿಂದ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ಕಡಲ ತೀರಗಳು ಕೊಚ್ಚಿ ಹೋಗುವ ಆತಂಕವಿದೆ ಅಲೆಗಳ ಅಬ್ಬರ ಹೆಚ್ಚಿ ಮೀನುಗಾರರ ಮನೆ ಶೆಡ್ಡುಗಳು ಕಡಲ ಒಡಲು ಸೇರುವ ಸಾಧ್ಯತೆ ಇದೆ, ಎಂದು ಮನವಿಯಲ್ಲಿ ಅಳಲನ್ನು ತೋಡಿಕೊಳ್ಳಲಾಗಿದೆ.

ಈಗಾಗಲೇ ನೌಕಾನೆಲೆ ಮತ್ತಿತರ ಯೋಜನೆಗಳಿಂದಾಗಿ ಮೀನುಗಾರರು ಮೀನುಗಾರಿಕೆ ಪ್ರದೇಶಗಳನ್ನು ಕಳೆದುಕೊಂಡು ತೀವ್ರ ಸಂಕಟದಲ್ಲಿದ್ದು ವಾಣಿಜ್ಯ ಬಂದರು ನಿರ್ಮಾಣದಿಂದ ಮೀನುಗಾರ ಸಮಸ್ಯೆಗಳು ಹೆಚ್ಚಿಲಿವೆ, ಕರಾವಳಿ ಜನರ ಸಾಂಪ್ರದಾಯಿಕ ಕಸುಬುಗಳಾದ ಕೃಷಿ ಮತ್ತು ಮೀನುಗಾರಿಕೆಯನ್ನು ಬಲಿ ಪಡೆಯುವ ವಾಣಿಜ್ಯ ಬಂದರು ಯೋಜನೆ ಕೈ ಬಿಟ್ಟು ಪ್ರವಾಸೋದ್ಯಮದ ಬೆಳವಣಿಗೆಗೆ ಮಹತ್ವ ನೀಡಿ ಅಭಿವೃದ್ಧಿ ಕೆಲಸಗಳು ನಡೆಯಲಿ.

ಅಲ್ಲದೇ ಮೀನುಗಾರರ ಹಿತ ದೃಷ್ಟಿಯಿಂದ ಲೈಫ್ ಜಾಕೆಟ್ ಸೇರಿದಂತೆ ಪೂರಕ ವ್ಯವಸ್ಥೆಗಳನ್ನು ಮಾಡಿ, ಸಾಂಪ್ರದಾಯಿಕ ಮೀನುಗಾರಿಕೆಗೆ ಯಾವುದೇ ರೀತಿ ಕುತ್ತು ಬಾರದಂತೆ ,ಸಮುದ್ರ ಮತ್ತು ಸಮುದ್ರ ತೀರವನ್ನು ಉಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ವಿನಂತಿಸಲಾಗಿದೆ. ನಮ್ಮ ಮನವಿಗೆ ಸ್ಪಂದಿಸದಿದ್ದರೆ ವಾಣಿಜ್ಯ ಬಂದರು ನಿರ್ಮಾಣ ವಿರೋಧಿಸಿ ನಿರಂತರವಾಗಿ ಹೋರಾಟ ಮುಂದುವರಿಸಬೇಕಾದೀತು ಎಂದು ಸುಂದರ ಖಾರ್ವಿ ಮನವಿ ಓದುವಾಗ ತಿಳಿಸಿದರು. ತಹಶೀಲ್ದಾರ ಡಾ ಚಿಕ್ಕಪ್ಪ ನಾಯಕ ಮನವಿ ಸ್ವೀಕರಿಸಿದರು. ಬೆಳಂಬಾರದ ಮೀನುಗಾರರ ಪ್ರಮುಖರಾದ ಪ್ರಭಾಕರ್ ಖಾರ್ವಿ, ಮಧುಕರ್ ಖಾರ್ವಿ, ಅಮಿತ್ ಖಾರ್ವಿ, ಕಮಲಕರ್ ಖಾರ್ವಿ ರೋಷನ್ ಖಾರ್ವಿ ದಿಲೀಪ್, ನಾಗರಾಜ ಖಾರ್ವಿ, ಮಂಜು ಖಾರ್ವಿ, ಗ್ರಾಪಂ ಉಪಾಧ್ಯಕ್ಷ ಜಗದೀಶ ಖಾರ್ವಿ ಮತ್ತಿತರರಿದ್ದರು.

ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಮೂಲ ಸ್ಥಳದಲ್ಲೇ ಮುರಿನಕಟ್ಟೆ ನಿರ್ಮಾಣಕ್ಕೆ ಯೋಜನೆ ಸಿದ್ಧ : ವಿಶ್ವೇಶ್ವರ ಹೆಗಡೆ ಕಾಗೇರಿ

ಭಟ್ಕಳ: ಹೆದ್ದಾರಿ ಪ್ರಾಧಿಕಾರ ಮುರಿನಕಟ್ಟೆಯನ್ನು ಮೂಲ ಜಾಗದಲ್ಲಿಯೇ ಕಟ್ಟಲು ತಿರ್ಮಾನಿಸಿ ಈ ಕುರಿತು ನೀಲನಕ್ಷೇಯನ್ನು ತಯಾರಿಸಲಾಗಿದೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು. ಈ ವಿಚಾರದ ಕುರಿತಂತೆ ಜಿಲ್ಲಾಡಳಿತ ಹಾಗೂ...

ಜಾನುವಾರು ರಕ್ಷಣೆ: ಗೋ ಶಾಲೆಗೆ ರವಾನಿಸುವ ಮೂಲಕ ಗೀರ್ ಹೋರಿಗಳಿಗೆ ಜೀವದಾನ

ಅಂಕೋಲಾ: ವಧೆ ಉದ್ದೇಶದಿಂದ ಹಿಂಸಾತ್ಮಕವಾಗಿ ಸಾಗಿಸುತ್ತಿದ್ದ, ಎರಡು ಭಾರೀ ಗಾತ್ರದ ಗೀರ್ ತಳಿಯ ಹೋರಿಗಳಿಗೆ ಕೊನೆಗೂ ಸುರಕ್ಷಿತ ಆಶ್ರಯ ದೊರೆತಂತಿದ್ದು, ಕುಮಟಾ ಉಪವಿಭಾಗಾಧಿಕಾರಿಗಳ ಅನುಮತಿ ಬಳಿಕ ಹೋರಿಗಳನ್ನು ಗೋಶಾಲೆಗೆ ಕಳಿಸಿ, ಮೂಕ...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಜನಪ್ರಿಯ ಶಿಕ್ಷಕ ಮಂಜುನಾಥ ನಾಯಕ ಇನ್ನಿಲ್ಲ :  ಜೂನ್ 6 ರ ಶನಿವಾರ ಬೆಳಿಗ್ಗೆ ಅಗ್ರಗೋಣದಲ್ಲಿ ಅಂತ್ಯಸಂಸ್ಕಾರ

ಅಂಕೋಲಾ: ತಾಲೂಕಿನ ಅಗ್ರಗೋಣ ಗ್ರಾಮದ (ಲಕ್ಷ್ಮೀ ಮನೆ ) ನಿವಾಸಿ, ಹಾಗೂ ಬೇಲೇಕೇರಿ ಸರ್ಕಾರಿ ಪ್ರೌಢಶಾಲೆಯ...

ಮೂಲ ಸ್ಥಳದಲ್ಲೇ ಮುರಿನಕಟ್ಟೆ ನಿರ್ಮಾಣಕ್ಕೆ ಯೋಜನೆ ಸಿದ್ಧ : ವಿಶ್ವೇಶ್ವರ ಹೆಗಡೆ ಕಾಗೇರಿ

ಭಟ್ಕಳ: ಹೆದ್ದಾರಿ ಪ್ರಾಧಿಕಾರ ಮುರಿನಕಟ್ಟೆಯನ್ನು ಮೂಲ ಜಾಗದಲ್ಲಿಯೇ ಕಟ್ಟಲು ತಿರ್ಮಾನಿಸಿ ಈ ಕುರಿತು ನೀಲನಕ್ಷೇಯನ್ನು ತಯಾರಿಸಲಾಗಿದೆ...

ಬಂಗಾರಮಕ್ಕಿಯಲ್ಲಿ ‘ಪ್ರಾಚೀನ ಆರೋಗ್ಯ ಪರಂಪರಾ ವೈದ್ಯ ಸಂಗಮ

ಹೊನ್ನಾವರ: ರಾಜ್ಯದ ಪ್ರತಿ ಗ್ರಾಮದಲ್ಲಿ ಔಷಧಿ ಗಿಡಗಳ ಪಾರ್ಕ್ ನಿರ್ಮಾಣ ಮಾಡಲಾಗುವುದು ಎಂದು ವಡ್ನಾಳ್ ಜಗದೀಶ್...

ಚುನಾವಣೆ ನಂತರ ರಾಜಕೀಯ ಬದಿಗಿಟ್ಟು ಅಭಿವೃದ್ಧಿಗೆ ಒಗ್ಗಟ್ಟು ಅಗತ್ಯ : ಅಮದಳ್ಳಿ ಗ್ರಾಮ ದೇವರ ಗ್ರಾಮ ಎಂದ ಶಾಸಕ ಸೈಲ್

ಕಾರವಾರ: ಗ್ರಾಮೀಣ ಆಡಳಿತ ವ್ಯವಸ್ಥೆಗೆ ಬಲ ತುಂಬುವ ಹೆಜ್ಜೆಯಾಗಿ ಅಮದಳ್ಳಿ ಗ್ರಾಮ ಪಂಚಾಯತ್‌ನ ನೂತನ ಸಭಾಭವನವನ್ನು...

ಅಂಕೋಲಾದಲ್ಲಿ ಇಂದು ಪಂಚದೇವರ ದೊಡ್ಡ ಕಾರ್ತಿಕೋತ್ಸವ : ಶಿರ ಕುಳಿ ಕಾನದೇವಿ ದೇವಸ್ಥಾನದ ಹತ್ತಿರ ವನಭೋಜನಕ್ಕೆ ನಡೆಯುತ್ತಿದೆ ಸಿದ್ದತೆ

ಅಂಕೋಲಾ: ತಾಲೂಕಿನ ಸಂಸ್ಕೃತಿಯ ಆರಾಧನಾ ಪದ್ಧತಿಯಾಗಿ ಹಲವು ತಲೆಮಾರುಗಳಿಂದ ಆಚರಿಸಲ್ಪಡುತ್ತಬಂದಿರುವ ಪಂಚ ದೇವರುಗಳ ದೊಡ್ಡ ಕಾರ್ತಿಕೋತ್ಸವ...

ಕೇಣಿ ವಾಣಿಜ್ಯ ಬಂದರು ವಿರೋಧಿಸಿ ಹೋರಾಟ ನಿರಂತರ : ಬಹಿರಂಗ ಸಭೆ ತಾತ್ಕಾಲಿಕವಾಗಿ ಮುಂದೂಡಿಕೆ : ಸಂಘಟಕ ಪ್ರಮುಖರು ಪ್ರಕಟಣೆಯಲ್ಲಿ ಹೇಳಿದ್ದೇನು ?

ಅಂಕೋಲಾ: ತಾಲೂಕಿನ ಕೇಣಿಯಲ್ಲಿ ನಿರ್ಮಾಣ ಉದ್ದೇಶಿತ ವಾಣಿಜ್ಯ ಬಂದರು ಯೋಜನೆಯನ್ನು ವಿರೋಧಿಸಿ, ಸಾಮೂಹಿಕ ನಾಯಕತ್ವದಡಿ, ಅಂಕೋಲಾ...

ಚಿಪ್ಪಿ ಫ್ಯಾಕ್ಟರಿ ಹತ್ತಿರದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತ ದೇಹ ಪತ್ತೆ

ಅಂಕೋಲಾ: ತಾಲೂಕಿನ ಶೆಟಗೇರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಮರವೊಂದಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ...

ಆಧುನಿಕ ಜಗತ್ತನ್ನಾಳಲಿರುವ AI ಕುರಿತು ವಿದ್ಯಾರ್ಥಿಗಳಿಗೆ ತರಬೇತಿ ಕಾರ್ಯಕ್ರಮ

ಅಂಕೋಲಾ : ಕೃತಕ ಬುದ್ಧಿಮತ್ತೆಯು ( AI ತಂತ್ರಜ್ಞಾನ ) ತ್ವರಿತವಾಗಿ ಮಾಹಿತಿ ಪಡೆಯುವ ಹೊಸತನದ...