Important

ಹಳ್ಳಿಗಾಡಿನ ಅಣಬೆಗೆ ಭಾರೀ ಡಿಮ್ಯಾಂಡ್: ಮುಗಿಬಿದ್ದು ಖರೀದಿಸುತ್ತಿರುವ ಗ್ರಾಹಕರು

Share

ನಿಸರ್ಗದ ಮಡಿಲಿನಲ್ಲಿ ಹುಟ್ಟುವ ಅಣಬೆಗಳು ಮಲೆನಾಡಿನ ಜನರಿಗೆ ಅಚ್ಚುಮೆಚ್ಚು. ಸುರಿಯುವ ಮಳೆಯಲ್ಲಿ ನಡುವೆ ಅಲ್ಲಲ್ಲಿ ಎದ್ದಿರುವ ಅಣಬೆಗಳು ಎದ್ದಿದ್ದು, ಸಿಕ್ಕಾಪಟ್ಟೆ ಬೇಡಿಕೆಯಿದೆ. ಜನರಿಗೆ ಕಾಡಿನಲ್ಲಿ ಅಥವಾ ಹುತ್ತದಲ್ಲೋ ತಿರುಗಾಡಿ ಅಣಬೆ ತಿನ್ನುವ ಆಸೆ. ಪ್ರಕೃತಿದತ್ತವಾಗಿ ಹುಟ್ಟುವ ಅಣಬೆಗಳಲ್ಲಿ ಎಲ್ಲಾ ರೀತಿಯ ವಿಟಮಿನ್‌ಗಳಿವೆ. ಕಣ್ಣಿನ ಆರೋಗ್ಯಕ್ಕೆ ಹೆಚ್ಚು ಸಹಕಾರಿ. ಮಾಂಸಹಾರದಲ್ಲಿ ಸಿಗುವ ಪೋಷಕಾಂಶಗಳು ಈ ಅಣಬೆಗಳಲ್ಲಿ ದೊರೆಯುತ್ತವೆ.

ರಾಸಾಯನಿಕ ಬಳಸಿ ಬೆಳೆಯುವ ಕೃತಕ ಅಣಬೆಗೂ ನೈಸರ್ಗಿಕವಾಗಿ ಬೆಳೆಯುವ ಅಣಬೆಗೂ ಸಾಕಷ್ಟು ವ್ಯತ್ಯಾಸವಿದೆ. ಹೆಚ್ಚಾಗಿ ಆಷಾಢ ತಿಂಗಳಿನಲ್ಲಿ ಕಾಣಿಸಿಕೊಳ್ಳುವ ಅಣಬೆಗಳು ಹುತ್ತದ ಮಣ್ಣಿನಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತವೆ. ಮಲೆನಾಡಿನ ಭಾಗದಲ್ಲಿ ಮಳೆಗಾಲದಲ್ಲಿ ಅದರಲ್ಲೂ ಜುಲೈ ತಿಂಗಳಿನಲ್ಲಿ ಸುರಿಯುವ ಗುಡುಗು ಮಿಂಚಿನ ಮಳೆಯಿಂದಾಗಿ ತೇವಾಂಶ ಹೆಚ್ಚಾಗುತ್ತದೆ. ಈ ಸಂದರ್ಭದಲ್ಲಿ ಮಣ್ಣು ಸಡಿಲಗೊಳ್ಳುತ್ತದೆ. ಇದು ಅಣಬೆಗಳು ಅಲ್ಲಲ್ಲಿ ಹುಟ್ಟಲು ಅನುಕೂಲ ವಾತಾವರಣ ಸೃಷ್ಟಿಸುತ್ತದೆ.

ಹುತ್ತಗಳ ಮಣ್ಣು, ಹುಲ್ಲುಗಾವಲು, ಗದ್ದೆಯ ಪ್ರದೇಶಗಳು, ಕಾಫಿ ತೋಟಗಳಲ್ಲಿ ಅಣಬೆಗಳು ಕಾಣಿಸಿಕೊಳ್ಳುತ್ತವೆ. ಈಗ ಮಲೆನಾಡಿನಲ್ಲಿ ಎಲ್ಲೆಡೆ ಈ ಅಣಬೆಗಳು ಕಾಣಿಸಿಕೊಳ್ಳುತ್ತಿದ್ದು, ಅಣಬೆ ಪ್ರಿಯರಿಗೆ ಹಬ್ಬವಾಗಿದೆ.ಅಣಬೆ ವರ್ಷವಿಡೀ ಸಿಗುವದಕ್ಕಿಂತ ನೈಸರ್ಗಿಕವಾಗಿ ಸಿಗುವಂತದ್ದು, ಇದಕ್ಕೆ ತುಂಬ ಬೇಡಿಕೆಯಿದೆ. ಕೃತಕ ಅಣಬೆ ಕ್ಕಿಂತ ನೈಸರ್ಗಿಕವಾಗಿ ಮಳೆಗಾಲದಲ್ಲಿ ಮಾತ್ರ ಸಿಗುವಂತಹದ್ದು. ಇದಕ್ಕೆ ಬೇಡಿಕೆಯಿದ್ದು, ಸಾವಿರಾರು ರೂಪಾಯಿ ವ್ಯಯಿಸಿ ತಿನ್ನುವ ಜನರಿದ್ದು, ವರ್ಷಕ್ಕೆ ಓಂದು ಸಲವಾದರೂ ತಿನ್ನುವ ಆಸೆ ಸಾರ್ವಜನಿಕರದ್ದು, 100 ಅಣಬೆಗೆ 600 ರಿಂದ 800 ರೂಪಾಯಿವರೆಗೂ ತೆಗೆದುಕೊಂಡು ಹೋಗುತ್ತಾರೆ.

ಇದರಲ್ಲಿ ಪ್ರೊಟೀನ್, ಜೀವಸತ್ವಗಳು, ಖನಿಜಾಂಶಗಳು ಹೇರಳವಾಗಿದೆ. ಅಣಬೆ ಹೆಚ್ಚು ಮೃದುವಾಗಿರುವುದರಿಂದ ಎಲ್ಲಾ ವಿಧದ ಮಸಾಲೆ ಪರಿಮಳವನ್ನು ಹೀರಿಕೊಳ್ಳುವ ಗುಣ ಇದಕ್ಕಿದೆ. ಹಾಗಾಗಿ ಇದರಿಂದ ರುಚಿಕರ ತಿನಿಸುಗಳನ್ನು ತಯಾರಿಸಹುದು. ಅತ್ಯಧಿಕ ಪ್ರೊಟೀನ್ ಇರುವ ಆಹಾರ ವರ್ಧಕ ಅಣಬೆಗೆ ದಿನದಿಂದ ದಿನಕ್ಕೆ ಬೇಡಿಕೆ ಹೆಚ್ಚುತ್ತಿದೆ.

ವಿಸ್ಮಯ ನ್ಯೂಸ್, ವಿವೇಕ್ ಶೇಟ್, ಹೊನ್ನಾವರ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಸಹಕಾರದ ಬೆಳಕಿನಲ್ಲಿ ಮಹತ್ವದ ಹೆಜ್ಜೆಯಿಟ್ಟ ‘ಸೂರ್ಯ’: ಹೊಸ ಶಾಖೆಗಳತ್ತ ನಾಗರಾಜ ನಾಯಕರ ದೃಷ್ಟಿ”

ಅಂಕೋಲಾ: ಅಂಕೋಲೆ ಎಂದಾಗ ಕರಿ ಇಸಾಡು ಮಾವಿನಹಣ್ಣು ನೆನಪಾದರೆ, “ಸೂರ್ಯ” ಸಹಕಾರಿ ಎಂದಾಗ ನಾಗರಾಜ ನಾಯಕ ಅರೆಗದ್ದೆ ನೆನಪಾಗುತ್ತಾರೆ. ಅದರ ಬೆನ್ನಲ್ಲೇ ರಿಯಲ್ ಎಸ್ಟೇಟ್ ಉದ್ಯಮ, ಆಯ್ಸಪ್ಲಾಂಟ್. ಸಹನಾ ಪ್ಯಾಲೇಸ್ ಲಾಡ್ಜ್,...

ಆಟೋರಿಕ್ಷಾಗೆ ಪ್ರವಾಸಿಗರಿದ್ದ ಟಿ.ಟಿ ವಾಹನ ಡಿಕ್ಕಿ : ಮಹಿಳೆಗೆ ಗಾಯ

ಅಂಕೋಲಾ: ಸಹೋದರಿಯ ಮನೆಗೆ ಬಂದು ವಾಪಸ್ ಮನೆಗೆ ಮರಳುತ್ತಿದ್ದ ಗೃಹಿಣಿ ಇದ್ದ ಆಟೋರಿಕ್ಷಾಗೆ ಪ್ರವಾಸಿಗರಿದ್ದ ಟಿ.ಟಿ ವಾಹನ ಬಡಿದ ಪರಿಣಾಮ ಮಹಿಳೆ ಗಾಯಗೊಂಡ ಘಟನೆ ಪಟ್ಟಣದ ಅರಣ್ಯ ಇಲಾಖೆ ಕಛೇರಿ ಹತ್ತಿರ...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಬಡ, ಮಧ್ಯಮವರ್ಗ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಒಟ್ಟು 3 ಕೋಟಿ ಮೌಲ್ಯದ ವಿದ್ಯಾರ್ಥಿವೇತನ

ಉಡುಪಿ: ರಾಜ್ಯದಲ್ಲೇ ಪ್ರಸಿದ್ಧ ಪಡೆದ ಉಡುಪಿ ಲಾರ್ಡ್ಸ್ ಇಂಟರ್‌ನ್ಯಾಷನಲ್ ರೆಸಿಡೆನ್ಷಿಯಲ್ ಸ್ಕೂಲ್ , ಬಡ, ಮಧ್ಯಮವರ್ಗ...

ಶತರುದ್ರ ಮತ್ತು ಶತಚಂಡಿಕಾ ಯಾಗಕ್ಕೆ ಆತ್ಮೀಯ ಸ್ವಾಗತ

ಕಾರವಾರ: ದಿವಂಗತ ಕೃಷ್ಣ ಸೈಲ್ ಹಾಗೂ ಗಿರಿಜಾ ಕೃಷ್ಣ ಸೈಲ್ ರವರ ಆರ್ಶೀವಾದದೊಂದಿಗೆ ಈ ಕ್ಷೇತ್ರದ...

ಸಹಕಾರದ ಬೆಳಕಿನಲ್ಲಿ ಮಹತ್ವದ ಹೆಜ್ಜೆಯಿಟ್ಟ ‘ಸೂರ್ಯ’: ಹೊಸ ಶಾಖೆಗಳತ್ತ ನಾಗರಾಜ ನಾಯಕರ ದೃಷ್ಟಿ”

ಅಂಕೋಲಾ: ಅಂಕೋಲೆ ಎಂದಾಗ ಕರಿ ಇಸಾಡು ಮಾವಿನಹಣ್ಣು ನೆನಪಾದರೆ, “ಸೂರ್ಯ” ಸಹಕಾರಿ ಎಂದಾಗ ನಾಗರಾಜ ನಾಯಕ...

ಆಟೋರಿಕ್ಷಾಗೆ ಪ್ರವಾಸಿಗರಿದ್ದ ಟಿ.ಟಿ ವಾಹನ ಡಿಕ್ಕಿ : ಮಹಿಳೆಗೆ ಗಾಯ

ಅಂಕೋಲಾ: ಸಹೋದರಿಯ ಮನೆಗೆ ಬಂದು ವಾಪಸ್ ಮನೆಗೆ ಮರಳುತ್ತಿದ್ದ ಗೃಹಿಣಿ ಇದ್ದ ಆಟೋರಿಕ್ಷಾಗೆ ಪ್ರವಾಸಿಗರಿದ್ದ ಟಿ.ಟಿ...

ಶಾಲಾ ಮಕ್ಕಳ ಬಸ್ ಪಲ್ಟಿ: ವಿದ್ಯಾರ್ಥಿ ಸಾವು

ಹೊನ್ನಾವರ: ಗೇರುಸೊಪ್ಪ ಸುಳೆಮುರ್ಕಿ ಕ್ರಾಸ್ ಹತ್ತಿರ ಶಾಲಾಮಕ್ಕಳ ಪ್ರವಾಸಿ ಬಸ್ ಪಲ್ಟಿಯಾಗಿ, ವಿಧ್ಯಾರ್ಥಿ ಸಾವನಪ್ಪಿರುವ ಘಟನೆ...

ಆಯಕಟ್ಟಿನ ಪ್ರದೇಶದಲ್ಲಿರುವ 8 ಗುಂಟೆ ಜಾಗ ಮಾರಾಟಕ್ಕಿದೆ

ಅಂಕೋಲಾ: ತಾಲೂಕಿನ ಬಳಲೆಯಲ್ಲಿ ಅತ್ಯುತ್ತಮ ಸೌಕರ್ಯ ಹೊಂದಿರುವ, ಆಯಕಟ್ಟಿನ ಪ್ರದೇಶದಲ್ಲಿರುವ NA ಆದ ಜಾಗ ಮಾರಾಟಕ್ಕಿದೆ....

ಕುಮಟಾದ ಬ್ರೌನ್ಸ್ ವಿಲೇಜ್ ಫ್ಯಾಮಿಲಿ ಗಾರ್ಡನ್ ರೆಸ್ಟೋರೆಂಟ್ ನಲ್ಲಿ ಖ್ಯಾತ ಕಲಾವಿದರಿಂದ ಲೈವ್ ಮ್ಯೂಜಿಕ್ ನೋಡುತ್ತಾ ರುಚಿ-ಶುಚಿಯಾದ ಆಹಾರ ಸವಿಯುವ ಅವಕಾಶ

ಕುಮಟಾ: ಬ್ರೌನ್ಸ್ ವಿಲೇಜ್ ಫ್ಯಾಮಿಲಿ ಗಾರ್ಡನ್ ರೆಸ್ಟೋರೆಂಟ್ ಕುಮಟಾ, ಇದು ಉತ್ತರಕನ್ನಡ ಜಿಲ್ಲೆಯ ಅತ್ಯುತ್ತಮ ಫ್ಯಾಮಿಲಿ...