Big News

ಭಟ್ಕಳ ನಗರಸಭೆ ರಚನೆಯಲ್ಲಿ ಸಾಮಾಜಿಕ ನ್ಯಾಯ ಕಡೆಗಣನೆ: ಮಾಜಿ ಶಾಸಕ ಸುನಿಲ್ ನಾಯ್ಕ

Share

ಭಟ್ಕಳ: ನಗರಸಭೆ ರಚನೆಯಲ್ಲಿ ಸಾಮಾಜಿಕ ನ್ಯಾಯವನ್ನು ಬದಿಗೊತ್ತಿ ಒಂದು ನಿರ್ದಿಷ್ಟ ಕೋಮಿನ ಋಣ ಸಂದಾಯವನ್ನು ಮಾಡುವ ಕೆಲಸವನ್ನು ಸಚಿವ ಮಂಕಾಳ ವೈದ್ಯ ಮಾಡಿದ್ದಾರೆ ಎಂದು ಮಾಜಿ ಶಾಸಕ ಸುನಿಲ್ ನಾಯ್ಕ ಆರೋಪಿಸಿದರು. ಭಟ್ಕಳ ನಗರಸಭೆಗೆ ರಾಜ್ಯ ಸಚಿವ ಸಂಪುಟ ಅನುಮೊದನೆ ನೀಡಿದ ಬೆನ್ನಲ್ಲಿ ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಕರೆಯಲಾದ ಪತ್ರಿಕಾಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದ ಅವರು., ನಾನು ಶಾಸಕನಿದ್ದಾಗ ಮುಸ್ಲಿಂ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿ ಇರುವ ಪ್ರದೇಶಗಳಾದ ಪುರಸಭೆ, ಜಾಲಿ ಪಟ್ಟಣ ಪಂಚಾಯತ್, ಹೆಬ್ಳೆ ಗ್ರಾಮಪಂಚಾಯತ್ ಸೇರಿದಂತೆ ಹಿಂದೂಗಳ ಸಂಖ್ಯೆಯೂ ಇರುವ ಮಾವಿನಕುರ್ವೆ, ಮುಂಡಳ್ಳಿ, ಯಲ್ವಡಿಕವೂರ, ಮುಟ್ಟಳ್ಳಿ, ಶಿರಾಲಿ ಪಂಚಾಯತಗಳನ್ನು ಸೇರಿದ ನಗರಸಭೆಗೆ ಯೋಜನೆಯನ್ನು ಹಾಕಿಕೊಳ್ಳಲಾಗಿತ್ತು. ಆದರೆ ಸಚಿವ ಮಂಕಾಳ ವೈದ್ಯ ಹಿಂದುಗಳ ಬಾಹುಳ್ಯವಿರುವ ಪುರಸಭೆಗೆ ಬೌಗೋಳಿಕವಾಗಿ ಹತ್ತಿರವಿರುವ ಎಲ್ಲಾ ಪ್ರದೇಶವನ್ನು ಕಡೆಗಣಿಸಿ ಹಿಂದುಗಳನ್ನು ನಗರಸಭೆಯಿಂದ ದೂರವಿರಿಸಿ ಹಿಂದೂಗಳಿಗೆ ದ್ರೋಹ ಬಗೆದಿದ್ದಾರೆ ಎಂದು ಆರೋಪಿಸಿದರು.

ಬಿಜೆಪಿ ಮಂಡಳ ಅಧ್ಯಕ್ಷ ಲಕ್ಮೀನಾರಾಯಣ ನಾಯ್ಕ ಮಾತನಾಡಿ ಅಭಿವೃದ್ಧಿ ವಿಚಾರವಾಗಿ ಭಟ್ಕಳ ನಗರ ಸಭೆಯಾಗಿ ಮೇಲ್ದರ್ಜೇಗೇರುತ್ತಿರುವ ಕುರಿತು ಯಾವುದೇ ವಿರೋಧವಿಲ್ಲ . ಆದರೆ ಕೇವಲ ಅಲ್ಪಸಂಖ್ಯಾತರು ಹೆಚ್ಚಿರುವ ಪ್ರದೇಶವನ್ನು ಸೇರಿಸಿ ನಗರಸಭೆಯನ್ನು ರೂಪಿಸಿರುವುದು ಹಿಂದುಗಳಿಗೆ ಮಾಡಿದ ಅನ್ಯಾಯವಾಗಿದೆ ಎಂದರು. ಜಿಲ್ಲಾ ಕಾರ್ಯದರ್ಶಿ ಶ್ರೀಕಾಂತ ನಾಯ್ಕ ಮಾತನಾಡಿ ಭಟ್ಕಳ ರೈಲ್ವೆ ನಿಲ್ದಾಣ ಮುಟ್ಟಳ್ಳಿ ಪಂಚಾಯತ ವ್ಯಾಪ್ತಿಯನ್ನು ಹೊಂದಿದ್ದು ಪಟ್ಟಣಕ್ಕೆ ಹತ್ತಿರವಿರುವ ಈ ಭಾಗವನ್ನು ನಗರಸಭೆಯಿಂದ ಹೊರಗಿಡಲಾಗಿದೆ. ಪೌರಾಡಳಿತ ನಿರ್ದೇಶನಾಲಯದ ನಿಯಮಾವಳಿಗಳ ಪ್ರಕಾರ ಶೇಕಡಾ 50 ಕ್ಕಿಂತ ಹೆಚ್ಚು ಕೃಷಿಭೂಮಿ ಹೊಂದಿರುವ ಪ್ರದೇಶವನ್ನು ನಗರಸಭೆಗೆ ಸೇರಿಸುವಂತಿಲ್ಲ .ಆದರೂ ಕೃಷಿಕರೆ ಹೆಚ್ಚಾಗಿರುವ ಹೆಬಳೆ ಗ್ರಾಮ ಪಂಚಾಯತನ್ನು ನಗರಸಭೆಗೆ ಸೇರಿಸಲಾಗಿದೆ ಎಂದು ದೂರಿದರು.

ಮಾಜಿ ನಿಗಮ ಮಂಡಳಿ ಅಧ್ಯಕ್ಷ ಗೋವಿಂದ ನಾಯ್ಕ, ವೃತ್ತಿಪರ ಪ್ರಕೋಷ್ಠ ಜಿಲ್ಲಾ ಸಂಚಾಲಕರಾದ ರಾಜೇಶ ನಾಯ್ಕ, ರಾಜ್ಯ ಹಿಂದುಳಿದ ಮೊರ್ಚ ಉಪಾಧ್ಯಕ್ಷ ಈಶ್ವರ ನಾಯ್ಕ, ಜಿಲ್ಲಾ ಕಾರ್ಯದರ್ಶಿ ಸುಬ್ರಾಯ ದೇವಾಡಿಗ ಮಾತನಾಡಿ ಸಚಿವರ ನಡೆಯನ್ನು ಖಂಡಿಸಿದರು. ಈ ಸಂದರ್ಭದಲ್ಲಿ ಭಟ್ಕಳ ಮಂಡಳದ ಪ್ರಧಾನ ಕಾರ್ಯದರ್ಶಿ, ಮೀನುಗಾರಿ ಪ್ರಕೋಷ್ಠ ಜಿಲ್ಲಾ ಸಂಚಾಲಕ ಭಾಸ್ಕರ ದೈಮನೆ, ತಾಲೂಕಾ ಕಾರ್ಯದರ್ಶಿ ಶ್ರೀಧರ ನಾಯ್ಕ, ಹೆಬ್ಳೆ ಪಂಚಾಯತ್ ಅಧ್ಯಕೇ ಪಾರ್ವತಿ ನಾಯ್ಕ ಮತ್ತಿತರು ಹಾಜರಿದ್ದರು.

ವಿಸ್ಮಯ ನ್ಯೂಸ್, ಈಶ್ವರ ನಾಯ್ಕ ಭಟ್ಕಳ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಮುರಿನಕಟ್ಟೆ ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಕಾಗೇರಿ ಆಗ್ರಹ

ಭಟ್ಕಳ:ಮುರಿನಕಟ್ಟೆ ವಿಚಾರವು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಹಿಂದೂಗಳ ಭಾವನೆಗಳಿಗೆ ಸಂಬAಧಿಸಿದ ವಿಷಯವಾಗಿದ್ದು, ಕೆಲ ಮತಾಂಧ ಶಕ್ತಿಗಳು ಇದನ್ನು ಬಳಸಿಕೊಂಡು ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಪ್ರಯತ್ನ ನಡೆಸಿವೆ ಎಂದು ವಿಶ್ವೇಶ್ವರ ಹೆಗಡೆ...

ಅಳ್ವೆಕೋಡಿ ಕಪ್ಪೆಚಿಪ್ಪು ದುರಂತ: ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದ ಕಾಗೇರಿ

ಭಟ್ಕಳ: ತಾಲೂಕಿನ ಅಳ್ವೆಕೋಡಿಯ ಕಪ್ಪೆಚಿಪ್ಪು ದುರಂತದಲ್ಲಿ ಸಾವನ್ನಪ್ಪಿದ ಕುಟುಂಬದವರನ್ನು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಭೇಟಿ ಮಾಡಿ ಸಾಂತ್ವನ ಹೇಳಿದರು. ಈ ವೇಳೆ ಮಾತನಾಡಿದ ಅವರು, ನಡೆಯಬಾರದ ದುರಂತವೊoದು ಸಂಭವಿಸಿದ್ದು, ಈ...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಜಾನುವಾರು ರಕ್ಷಣೆ: ಗೋ ಶಾಲೆಗೆ ರವಾನಿಸುವ ಮೂಲಕ ಗೀರ್ ಹೋರಿಗಳಿಗೆ ಜೀವದಾನ

ಅಂಕೋಲಾ: ವಧೆ ಉದ್ದೇಶದಿಂದ ಹಿಂಸಾತ್ಮಕವಾಗಿ ಸಾಗಿಸುತ್ತಿದ್ದ, ಎರಡು ಭಾರೀ ಗಾತ್ರದ ಗೀರ್ ತಳಿಯ ಹೋರಿಗಳಿಗೆ ಕೊನೆಗೂ...

ಮುರಿನಕಟ್ಟೆ ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಕಾಗೇರಿ ಆಗ್ರಹ

ಭಟ್ಕಳ:ಮುರಿನಕಟ್ಟೆ ವಿಚಾರವು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಹಿಂದೂಗಳ ಭಾವನೆಗಳಿಗೆ ಸಂಬAಧಿಸಿದ ವಿಷಯವಾಗಿದ್ದು, ಕೆಲ ಮತಾಂಧ...

ಅಳ್ವೆಕೋಡಿ ಕಪ್ಪೆಚಿಪ್ಪು ದುರಂತ: ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದ ಕಾಗೇರಿ

ಭಟ್ಕಳ: ತಾಲೂಕಿನ ಅಳ್ವೆಕೋಡಿಯ ಕಪ್ಪೆಚಿಪ್ಪು ದುರಂತದಲ್ಲಿ ಸಾವನ್ನಪ್ಪಿದ ಕುಟುಂಬದವರನ್ನು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಭೇಟಿ...

ಜಿಲ್ಲೆಯ ಆರೋಗ್ಯ ಸೇವೆಗೆ ಐತಿಹಾಸಿಕ ಹೆಜ್ಜೆ : ಶಾಸಕ ಸತೀಶ್ ಸೈಲ್

ಅಂಕೋಲಾ : ಜನರಿಗೆ ಉನ್ನತ ಮಟ್ಟದ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಕಾರವಾರದಲ್ಲಿ 100 ಕೋಟಿ...

ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಲ್ಲಿ ಸಹಾಯಕ ಶಿಕ್ಷಕರು ಬೇಕಾಗಿದ್ದಾರೆ

ಕುಮಟಾ : ಅಂಕೋಲಾದ ಕೆನರಾ ವೆಲ್ಫೇರ್ ಟ್ರಸ್ಟ್ ನ ಕುಮಟಾ ಧಾರೇಶ್ವರದ ದಿನಕರ ಇಂಗ್ಲಿಷ್ ಮೀಡಿಯಂ...

ಅಲಂಕಾರ ಜ್ಯುವೆಲ್ಲರ್ಸ್ : ಅಕ್ಷಯ ತೃತೀಯ ವಿಶೇಷ ಆಫರ್

ಸುವರ್ಣ ಕ್ಷಣವನ್ನು ಇನ್ನಷ್ಟು ವಿಶೇಷವಾಗಿಸಿ : ಈ ಶುಭ ಅಕ್ಷಯ ತೃತೀಯದ ಪ್ರಯುಕ್ತ ಚಿನ್ನ ಮತ್ತು...

ಭಟ್ಕಳದಲ್ಲಿ 14 ಜಾನುವಾರಗಳ ರಕ್ಷಣೆ : ಇಬ್ಬರ ವಿರುದ್ಧ ಪ್ರಕರಣ ದಾಖಲು

ಭಟ್ಕಳ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬAಧಿಸಿದAತೆ ಇಬ್ಬರ ವಿರುದ್ಧ ಭಟ್ಕಳ ಪಟ್ಟಣ ಪೊಲೀಸ್...

ಮಹಾಶಿವರಾತ್ರಿ ಪುಣ್ಯಕಾಲದಲ್ಲಿ ಕಣಕಣೇಶ್ವರ ದೇವರ ನೂತನ ಭವ್ಯ ದೇವಸ್ಥಾನ ಲೋಕಾರ್ಪಣೆ :ಶಿಖರ ಕಲಶ ಪ್ರತಿಷ್ಠೆ – ಅಷ್ಟಬಂಧ ಸಮೇತ ನೂತನ ಶಿವಲಿಂಗ ಪ್ರತಿಷ್ಠಾ ಮಹೋತ್ಸವ

ಅಂಕೋಲಾ: ಪಟ್ಟಣದ ಕಾರವಾರ ರಸ್ತೆಯಲ್ಲಿರುವ ಪುರಾತನ ಪ್ರಸಿದ್ಧ ಶ್ರೀ ಕಣಕಣೇಶ್ವರ ದೇವಾಲಯವು ಮಹಾಶಿವರಾತ್ರಿ ಪುಣ್ಯಸಂದರ್ಭದಲ್ಲಿ ನೂತನ...