Focus News

ಕುಮಟಾದಲ್ಲಿ ಬಿಜೆಪಿ ಮಂಡಲ ಕಾರ್ಯಕಾರಿಣಿ: ಗಮನಸೆಳೆದ ತಿರಂಗಾ ಬೈಕ್ ರ‍್ಯಾಲಿ

Share

ಕುಮಟಾ: ತಾಲೂಕಾ ಭಾರತೀಯ ಜನತಾ ಪಾರ್ಟಿಯ ಕಾರ್ಯಾಲಯದಲ್ಲಿ ಬಿಜೆಪಿ ಮಂಡಲ ಕಾರ್ಯಕಾರಿಣಿ ಸಭೆಯನ್ನು ಆಯೋಜನೆ ಮಾಡಲಾಗಿತ್ತು. ಕುಮಟಾ ಹೊನ್ನಾವರ ವಿಧಾನಸಭಾ ಕ್ಷೇತ್ರದ ಶಾಸಕರಾದ ದಿನಕರ ಶೆಟ್ಟಿಯವರು ಭಾರತಾಂಬೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಎನ್.ಎಸ್. ಹೆಗಡೆ ಮಾತನಾಡಿ ನಾವು ಇಂದು 79 ನೇ ಸ್ವಾತಂತ್ರ್ಯ ದಿನಾಚರಣೆಯ ಹೊಸ್ತಿಲಲ್ಲಿದ್ದೇವೆ.

ಜಾತಿಗಣತಿ ಮುನ್ನಲೆ ಮತ್ತು ಹಿನ್ನೆಲೆ ಕುರಿತಂತೆ ಓಬಿಸಿ ವರ್ಗಗಳ ಸಮಾವೇಶವನ್ನು ಮಾಡಬೇಕೆಂದು ಈಗಾಗಲೇ ನಿಶ್ಚಯಿಸಿರುವ ಹಿನ್ನೆಲೆಯಲ್ಲಿ ಇದೇ ಬರುವ ಅಗಷ್ಟ್ 17 ರಂದು ಕಾರವಾರದಲ್ಲಿ ನಮ್ಮ ಸಂಸದರು ಮತ್ತು ಶಾಸಕರ ನೇತೃತ್ವದಲ್ಲಿ ಕೇವಲ ಪಕ್ಷದ ಕಾರ್ಯಕರ್ತರು ಮಾತ್ರವಲ್ಲದೇ ಎಲ್ಲಾ ಓಬಿಸಿ ವರ್ಗಗಳ ಜನರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ನಮ್ಮ ಪಕ್ಷದ ಕಾರ್ಯಕರ್ತರು ನೀಡಿಕೊಳ್ಳಬೇಕದ ಜವಾಬ್ದಾರಿ ಇದೆ. ಬೇರೇ ಬೇರೇ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಅನೇಕ ಹಿರಿಯರನ್ನು ಭೇಟಿ ಮಾಡಿ ಜಾತಿ ಜನಗಣತಿಯ ಬಗ್ಗೆ ಚರ್ಚೆ ಮಾಡಬೇಕು ಎಂದು ಹೇಳಿದರು.

ಕಾರ್ಯಕಾರಿಣಿ ಸಭೆಯ ನಂತರ ಕುಮಟಾ ಪಟ್ಟಣದ ಹೆಗಡೆ ಕ್ರಾಸ್ ಸಮೀಪದಲ್ಲಿರುವ ನಾದಶ್ರೀ ಕಲಾ ಕೇಂದ್ರದಿAದ ಬಿಜೆಪಿ ಮೋರ್ಚಾ ನೇತೃತ್ವದಲ್ಲಿ ಆಪರೇಷನ್ ಸಿಂಧೂರ ಮತ್ತು ಆಪರೇಷನ್ ಮಹದೇವ್ ಯಶಸ್ವಿಗಾಗಿ ವೀರ ಯೋಧರಿಗೆ ನಮನ ಹಾಗೂ 79ನೇ ಸ್ವಾತಂತ್ರ‍್ಯ ದಿನದ ಅಂಗವಾಗಿ ತಿರಂಗಾ ಬೈಕ್ ರ್ಯಾಲಿ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಸುಮಾರು 60 ಕ್ಕೂ ಅಧಿಕ ಬೈಕ್ ಗಳ ಮೂಲಕ ರ‍್ಯಾಲಿ ಪ್ರಾರಂಭವಾಗಿ ಕುಮಟಾ ಪಟ್ಟಣದ ಮಹಾಸತಿ ಸರ್ಕಲ್ ಮಾರ್ಗವಾಗಿ ಹಳೆ ಬಸ್ ನಿಲ್ದಾಣದ ಮೂಲಕ ಮೂರುಕಟ್ಟೆ, ರಥ ಬೀದಿ ಮರ್ಗವಾಗಿ ಗಿಬ್ ಸರ್ಕಲ್ ಮೂಲಕ ಪುನಃ ನಾದಶ್ರೀ ಕಲಾಕೇಂದ್ರಕ್ಕೆ ಬರುವುದರ ಮೂಲಕ ಜನಜಾಗೃತಿ ಮೂಡಿಸಲಾಯಿತು.

ಈ ಸಂದರ್ಭದಲ್ಲಿ ಕುಮಟಾ ಹೊನ್ನಾವರ ವಿಧಾನಸಭಾ ಕ್ಷೇತ್ರದ ಶಾಸಕರಾದ ದಿನಕರ ಶೆಟ್ಟಿಯವರು ಮಾತನಾಡಿ ಪ್ರತೀ ವರ್ಷವೂ ಭಾರತೀಯ ಜನತಾ ಪಾರ್ಟಿ ಅಗಷ್ಟ್ 15 ರ ಪೂರ್ವದಲ್ಲಿ ಹರ ಘರ್ ತಿರಂಗಾ ಎಂಬ ಕಾರ್ಯಕ್ರಮವನ್ನು ಆಯೋಜನೆ ಮಾಡಿಕೊಂಡು ಬಂದಿರುತ್ತದೆ. ಈ ವರ್ಷವೂ ಸಹ ನಮ್ಮ ಬಿಜೆಪಿ ಮೋರ್ಚಾ ನೇತೃತ್ವದಲ್ಲಿ ಬೈಕ್ ರ‍್ಯಾಲಿಯನ್ನು ಮಾಡಿ ಜನ ಜಾಗೃತಿ ಮೂಡಿಸಲಾಗಿದೆ. ನಮ್ಮ ದೇಶದ ಸ್ವಾತಂತ್ರ್ಯ ಗಳಿಸುವುದಕ್ಕೆ ಅನೇಕ ಮಹನೀಯರು ತಮ್ಮ ಪ್ರಾಣ ತ್ಯಾಗ ಮಾಡಿದ್ದಾರೆ. ಅವರು ಗಳಿಸಿಕೊಟ್ಟ ಸ್ವಾತಂತ್ರ್ಯ ಉಳಿಸಿಕೊಂಡು ಬೆಳೆಸಿಕೊಂಡು ಹೋಗುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಕುಮಟಾ ಬಿಜೆಪಿ ಮಂಡಲಾಧ್ಯಕ್ಷರಾದ ಜಿ. ಆಯ್. ಹೆಗಡೆ, ಬಿಜೆಪಿ ಶಿಕ್ಷಣ ಪ್ರಕೋಷ್ಟದ ಸಂಚಾಲಕರಾದ ಎಮ್. ಜಿ. ಭಟ್, ಪುರಸಭಾ ಅಧ್ಯಕ್ಷೆ ಸುಮತಿ ಭಟ್, ಪ್ರಮುಖರಾದ ಗಜಾನನ ಗುನಗಾ, ಡಾ, ಜಿ.ಜಿ. ಹೆಗಡೆ, ನಿಕಟಪೂರ್ವ ಜಿಲ್ಲಾಧ್ಯಕ್ಷರಾದ ವೆಂಕಟೇಶ ನಾಯಕ್ ಸೇರಿದಂತೆ ಬಿಜೆಪಿ ಯುವಮೋರ್ಚಾದ ಅಧ್ಯಕ್ಷರು ಪದಾಧಿಕಾರಿಗಳು ಹಾಜರಿದ್ದರು.

ವಿಸ್ಮಯ ನ್ಯೂಸ್ ದೀಪೇಶ ನಾಯ್ಕ ಕುಮಟಾ…

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಜೂನ್ 14 ರಂದು ಚುಟುಕು ಸಾಹಿತ್ಯ ಸಮ್ಮೇಳನ

ಕುಮಟಾ: ಉತ್ತರ ಕನ್ನಡ ಜಿಲ್ಲಾಮಟ್ಟದ 9 ನೇ ಹಾಗೂ ಕುಮಟಾ ತಾಲೂಕಾ 5ನೇ ಚುಟುಕು ಸಾಹಿತ್ಯ ಸಮ್ಮೇಳನವು ಇದೇ ಜೂನ್ 14 ರ ಭಾನುವಾರದಂದು ಕುಮಟಾದ ಲಕ್ಷ್ಮೀಬಾಯಿ ಬುರ್ಡೇಕರ್ ಸಭಾಂಗಣದಲ್ಲಿ ನಡೆಯಲಿದೆ....

ಪ್ರಸಿದ್ಧ ಕಣ್ಣಿನ ಆಸ್ಪತ್ರೆಯಲ್ಲಿ ಉದ್ಯೋಗಾವಕಾಶ: Job Alert

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಪ್ರಸಿದ್ಧ ಕಣ್ಣಿನ ಆಸ್ಪತ್ರೆಗಳಲ್ಲಿ ಒಂದಾದ ಹೆಗಡೆ ಐ ಫೌಂಡೇಷನ್ / ಹೆಗಡೆ ಆಪ್ಟಿಕಲ್ಸ್, ಭಟ್ಕಳ ಹಾಗೂ ಹೊನ್ನಾವರದಲ್ಲಿ ಸುಸಜ್ಜಿತ ಆಸ್ಪತ್ರೆಗಳನ್ನು ಹೊಂದಿದ್ದು, ಇದೀಗ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸಲು...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಜನಪ್ರಿಯ ಶಿಕ್ಷಕ ಮಂಜುನಾಥ ನಾಯಕ ಇನ್ನಿಲ್ಲ :  ಜೂನ್ 6 ರ ಶನಿವಾರ ಬೆಳಿಗ್ಗೆ ಅಗ್ರಗೋಣದಲ್ಲಿ ಅಂತ್ಯಸಂಸ್ಕಾರ

ಅಂಕೋಲಾ: ತಾಲೂಕಿನ ಅಗ್ರಗೋಣ ಗ್ರಾಮದ (ಲಕ್ಷ್ಮೀ ಮನೆ ) ನಿವಾಸಿ, ಹಾಗೂ ಬೇಲೇಕೇರಿ ಸರ್ಕಾರಿ ಪ್ರೌಢಶಾಲೆಯ...

ಮೂಲ ಸ್ಥಳದಲ್ಲೇ ಮುರಿನಕಟ್ಟೆ ನಿರ್ಮಾಣಕ್ಕೆ ಯೋಜನೆ ಸಿದ್ಧ : ವಿಶ್ವೇಶ್ವರ ಹೆಗಡೆ ಕಾಗೇರಿ

ಭಟ್ಕಳ: ಹೆದ್ದಾರಿ ಪ್ರಾಧಿಕಾರ ಮುರಿನಕಟ್ಟೆಯನ್ನು ಮೂಲ ಜಾಗದಲ್ಲಿಯೇ ಕಟ್ಟಲು ತಿರ್ಮಾನಿಸಿ ಈ ಕುರಿತು ನೀಲನಕ್ಷೇಯನ್ನು ತಯಾರಿಸಲಾಗಿದೆ...

ಬಂಗಾರಮಕ್ಕಿಯಲ್ಲಿ ‘ಪ್ರಾಚೀನ ಆರೋಗ್ಯ ಪರಂಪರಾ ವೈದ್ಯ ಸಂಗಮ

ಹೊನ್ನಾವರ: ರಾಜ್ಯದ ಪ್ರತಿ ಗ್ರಾಮದಲ್ಲಿ ಔಷಧಿ ಗಿಡಗಳ ಪಾರ್ಕ್ ನಿರ್ಮಾಣ ಮಾಡಲಾಗುವುದು ಎಂದು ವಡ್ನಾಳ್ ಜಗದೀಶ್...

ಚುನಾವಣೆ ನಂತರ ರಾಜಕೀಯ ಬದಿಗಿಟ್ಟು ಅಭಿವೃದ್ಧಿಗೆ ಒಗ್ಗಟ್ಟು ಅಗತ್ಯ : ಅಮದಳ್ಳಿ ಗ್ರಾಮ ದೇವರ ಗ್ರಾಮ ಎಂದ ಶಾಸಕ ಸೈಲ್

ಕಾರವಾರ: ಗ್ರಾಮೀಣ ಆಡಳಿತ ವ್ಯವಸ್ಥೆಗೆ ಬಲ ತುಂಬುವ ಹೆಜ್ಜೆಯಾಗಿ ಅಮದಳ್ಳಿ ಗ್ರಾಮ ಪಂಚಾಯತ್‌ನ ನೂತನ ಸಭಾಭವನವನ್ನು...

ಅಂಕೋಲಾದಲ್ಲಿ ಇಂದು ಪಂಚದೇವರ ದೊಡ್ಡ ಕಾರ್ತಿಕೋತ್ಸವ : ಶಿರ ಕುಳಿ ಕಾನದೇವಿ ದೇವಸ್ಥಾನದ ಹತ್ತಿರ ವನಭೋಜನಕ್ಕೆ ನಡೆಯುತ್ತಿದೆ ಸಿದ್ದತೆ

ಅಂಕೋಲಾ: ತಾಲೂಕಿನ ಸಂಸ್ಕೃತಿಯ ಆರಾಧನಾ ಪದ್ಧತಿಯಾಗಿ ಹಲವು ತಲೆಮಾರುಗಳಿಂದ ಆಚರಿಸಲ್ಪಡುತ್ತಬಂದಿರುವ ಪಂಚ ದೇವರುಗಳ ದೊಡ್ಡ ಕಾರ್ತಿಕೋತ್ಸವ...

ಕೇಣಿ ವಾಣಿಜ್ಯ ಬಂದರು ವಿರೋಧಿಸಿ ಹೋರಾಟ ನಿರಂತರ : ಬಹಿರಂಗ ಸಭೆ ತಾತ್ಕಾಲಿಕವಾಗಿ ಮುಂದೂಡಿಕೆ : ಸಂಘಟಕ ಪ್ರಮುಖರು ಪ್ರಕಟಣೆಯಲ್ಲಿ ಹೇಳಿದ್ದೇನು ?

ಅಂಕೋಲಾ: ತಾಲೂಕಿನ ಕೇಣಿಯಲ್ಲಿ ನಿರ್ಮಾಣ ಉದ್ದೇಶಿತ ವಾಣಿಜ್ಯ ಬಂದರು ಯೋಜನೆಯನ್ನು ವಿರೋಧಿಸಿ, ಸಾಮೂಹಿಕ ನಾಯಕತ್ವದಡಿ, ಅಂಕೋಲಾ...

ಚಿಪ್ಪಿ ಫ್ಯಾಕ್ಟರಿ ಹತ್ತಿರದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತ ದೇಹ ಪತ್ತೆ

ಅಂಕೋಲಾ: ತಾಲೂಕಿನ ಶೆಟಗೇರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಮರವೊಂದಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ...

ಆಧುನಿಕ ಜಗತ್ತನ್ನಾಳಲಿರುವ AI ಕುರಿತು ವಿದ್ಯಾರ್ಥಿಗಳಿಗೆ ತರಬೇತಿ ಕಾರ್ಯಕ್ರಮ

ಅಂಕೋಲಾ : ಕೃತಕ ಬುದ್ಧಿಮತ್ತೆಯು ( AI ತಂತ್ರಜ್ಞಾನ ) ತ್ವರಿತವಾಗಿ ಮಾಹಿತಿ ಪಡೆಯುವ ಹೊಸತನದ...