Important

ಅಂಗಾರಕ ಸಂಕಷ್ಟಿ: ಇಡಗುಂಜಿ ಮಹಾಗಣಪತಿ ದರ್ಶನ ಪಡೆದ ಅಪಾರ ಭಕ್ತರು

Share

ಹೊನ್ನಾವರ: ಪುರಾಣ ಪ್ರಸಿದ್ಧ ಶ್ರೀ ಕ್ಷೇತ್ರ ಇಡಗುಂಜಿ ಶ್ರೀ ಮಹಾಗಣಪತಿ ಸನ್ನಿಧಿಯಲ್ಲಿ ಅಂಗಾರಕ ಸಂಕಷ್ಟಿಯು ವಿಜೃಂಭಣೆಯಿoದ ನಡೆಯಿತು. ಭಕ್ತರು ತಮ್ಮಿಷ್ಠಾರ್ಥ ಸೇವೆಗಳನ್ನ ಸಲ್ಲಿಸಿ ಪುನೀತರಾದರು. ಅಂಗಾರಕ ಸಂಕಷ್ಟಿಯಾಗಿದ್ದರಿoದ ಬೆಳಗಿನ ಜಾವದಿಂದಲೇ ಮಹಾಗಣಪತಿಯ ದರ್ಶನಕ್ಕೆ ಸಾವಿರಾರು ಸಂಖ್ಯೆಯ ಭಕ್ತಾಧಿಗಳು ಆಗಮಿಸಿದ್ದರು. ಶ್ರೀ ಮಹಾಗಣಪತಿಗೆ ಭಕ್ತರು ಶ್ರೀ ಕ್ಷೇತ್ರದಲ್ಲಿ ಮಂಗಳಾರತಿ, ಸತ್ಯಗಣಪತಿ ವ್ರತ , ಅಭಿಷೇಕ ಹಾಗೂ ಪಂಚಕಜ್ಜಾಯ ಸೇವೆಗಳನ್ನು ಸಲ್ಲಿಸಿದರು.

ಈ ಬಗ್ಗೆ ದೇವಾಲಯದ ಅರ್ಚಕರಾದ ನರಸಿಂಹ ಭಟ್ ಮಾತನಾಡಿ ಇವತ್ತು ವಿಶೇಷ ದಿನ. ಅಂಗಾರಕ ಸಂಕಷ್ಟಿಯoದು ಭಕ್ತರು ಗಣಪತಿಗೆ ಪೂಜೆ ಮಾಡಿ ಚಂದ್ರನಿಗೆ ಅರ್ಘ್ಯ ನೀಡಿದರೆ ಅವರ ಕಷ್ಟಗಳು ನಿವಾರಣೆಯಾಗುತ್ತವೆ ಹಾಗೂ ಇಷ್ಟಾರ್ಥಗಳನ್ನು ನೇರವೇರಿಸುತ್ತಾನೆ ಎನ್ನುವ ಪ್ರತೀತಿಯಿಂದ ಭಕ್ತರು ದರ್ಶನಕ್ಕೆ ಬರುತ್ತಾರೆ. ಇನ್ನೂ 30 ಕ್ವಿಂಟಾಲ್ ನಷ್ಟು ಪಂಚಕಜ್ಜಾಯ ನೈವೆದ್ಯವಾಗಿದೆ.

ತೆಂಗಿನಕಾಯಿ,ಬಾಳೆಗೋನೆ ಸಮರ್ಪಣೆ ನಡೆದಿದ್ದು, 250 ಗಣಹೋಮ ನಡೆದಿದೆ. ಭಕ್ತರಿಗೆ ಬೆಳಿಗ್ಗೆ 5 ಗಂಟೆಯಿoದಲೇ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ ಎಂದರು. ಬೆಳಿಗ್ಗೆಯಿoದಲೇ ಶ್ರೀ ಕ್ಷೇತ್ರಕ್ಕೆ ಸಾವಿರಾರು ಸಂಖ್ಯೆಯ ಭಕ್ತರಿಗೆ ಸರತಿ ಸಾಲಿನಲ್ಲಿ ಮಹಾಗಣಪತಿಯ ದರ್ಶನಕ್ಕೆ ಅವಕಾಶ ಮಾಡಿದರು..

ಇದರ ಮಧ್ಯೆ ವರುಣ ಅಬ್ಬರಿಸಿದ್ದರಿಂದ ಕೆಲಕಾಲ ಭಕ್ತಾಧಿಗಳು ಮಳೆಯಲ್ಲಿ ನೆನೆಯುವಂತಾಯಿತು. ಪೊಲೀಸರು, ದೇವಾಲಯದ ಸಿಬ್ಬಂದಿಗಳು ಜನದಟ್ಟಣೆ ನಿಬಾಯಿಸುವಲ್ಲಿ ನಿರತರಾಗಿದ್ದರು. ಭಕ್ತರು ಸರದಿ ಸಾಲಿನಲ್ಲಿ ಬಂದು, ಹಣ್ಣು ಕಾಯಿ ಸೇವೆ, ಪಂಚಕಾದ್ಯ ಸೇವೆ, ಪೂಜೆ, ಗಣಹೋಮ, ಬಾಳೆಗೋನೆ, ಕುಂಕುಮಾರ್ಚನೆ ಸೇರಿದಂತೆ ಇನ್ನಿತರ ವಿವಿಧ ಸೇವೆಗಳನ್ನ ನೀಡಿ ಮನೋಕಾಮನೆಗಾಗಿ ಪ್ರಾರ್ಥಿಸಿಕೊಂಡರು.

ವಿಸ್ಮಯ ನ್ಯೂಸ್, ವಿವೇಕ್ ಶೇಟ್, ಹೊನ್ನಾವರ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಹೋಮಿಯೋಪತಿ ಸಂಸ್ಥಾಪಕ ಹಾನಿಮ್ಯಾನ್ ಅವರ 271ನೇ ಜನ್ಮ ದಿನಾಚರಣೆ

ಅಂಕೋಲಾ: ಇಂಗ್ಲಿಷ್ ಔಷಧಿಗಳನ್ನು ಸೇವಿಸಿದಾಗ ತಾತ್ಕಾಲಿಕವಾಗಿ ಕಾಯಿಲೆ ವಾಸಿಯಾದಂತೆ ಅನ್ನಿಸಿದರೂ, ಕೆಲವೇ ದಿನಗಳಲ್ಲಿ ಅದು ಮರುಕಳಿಸುವ ಸಾಧ್ಯತೆ ಇರುತ್ತದೆ. ಆದರೆ ಹೋಮಿಯೋಪತಿ ಚಿಕಿತ್ಸೆಯು ಕಾಯಿಲೆಯನ್ನು ಶಾಶ್ವತವಾಗಿ ಗುಣಪಡಿಸುವುದಲ್ಲದೆ, ಯಾವುದೇ ಅಡ್ಡಪರಿಣಾಮಗಳನ್ನು ಹೊಂದಿರುವುದಿಲ್ಲ...

ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಲ್ಲಿ ಸಹಾಯಕ ಶಿಕ್ಷಕರು ಬೇಕಾಗಿದ್ದಾರೆ

ಕುಮಟಾ : ಅಂಕೋಲಾದ ಕೆನರಾ ವೆಲ್ಫೇರ್ ಟ್ರಸ್ಟ್ ನ ಕುಮಟಾ ಧಾರೇಶ್ವರದ ದಿನಕರ ಇಂಗ್ಲಿಷ್ ಮೀಡಿಯಂ ಹೈಸ್ಕೂಲ್‌ನಲ್ಲಿ ಸಹಾಯಕ ಶಿಕ್ಷಕರ ಹುದ್ದೆಗಳು ಖಾಲಿ ಇವೆ. BSc, B.Ed (PCM) ಅರ್ಹತೆ ಹೊಂದಿದವರಿಗೆ...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಬಿಜಿಎಸ್ ಸೆಂಟ್ರಲ್ ಸ್ಕೂಲ್ & ಪಿಯು ಕಾಲೇಜಿನಲ್ಲಿ ನೇಮಕಾತಿ: ಕೂಡಲೇ ಸಂಪರ್ಕಿಸಿ

ಉತ್ತರಕನ್ನಡ ಜಿಲ್ಲೆಯ ಮಿರ್ಜಾನಿನ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಬಿಜಿಎಸ್ ಸೆಂಟ್ರಲ್ ಸ್ಕೂಲ್ & ಆದಿಚುಂಚನಗಿರಿ...

ಅಂಕೋಲಾದಬಾಳೇಗುಳಿ ಬೊಗ್ರಿಬೈಲಿನಲ್ಲಿ ಶ್ರೀ ಉದ್ಭವ ನಾಗಚೌಡೇಶ್ವರಿ–ವೀರಾಂಜನೇಯ ದೇವರ ಚತುರ್ಥ ವರ್ಧಂತಿ ಮಹೋತ್ಸವ

ಅಂಕೋಲಾ: ತಾಲೂಕಿನ ಬಾಳೇಗುಳಿ ಬೊಗ್ರಿಬೈಲಿನಲ್ಲಿರುವ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶ್ರೀ ಉದ್ಭವ ನಾಗಚೌಡೇಶ್ವರಿ ಅಮ್ಮನವರು ಹಾಗೂ...

ಹೋಮಿಯೋಪತಿ ಸಂಸ್ಥಾಪಕ ಹಾನಿಮ್ಯಾನ್ ಅವರ 271ನೇ ಜನ್ಮ ದಿನಾಚರಣೆ

ಅಂಕೋಲಾ: ಇಂಗ್ಲಿಷ್ ಔಷಧಿಗಳನ್ನು ಸೇವಿಸಿದಾಗ ತಾತ್ಕಾಲಿಕವಾಗಿ ಕಾಯಿಲೆ ವಾಸಿಯಾದಂತೆ ಅನ್ನಿಸಿದರೂ, ಕೆಲವೇ ದಿನಗಳಲ್ಲಿ ಅದು ಮರುಕಳಿಸುವ...

ಗೋಕರ್ಣಕ್ಕೆ ಆಗಮಿಸಲಿದೆ ವರದಹಳ್ಳಿಯ ಶ್ರೀಧರ ಸ್ವಾಮಿಗಳ ಪಾದುಕೆ: ದರ್ಶನ ಮತ್ತು ಫಲಸಮರ್ಪಣೆಗೆ ಸುವರ್ಣಾವಕಾಶ

ಗೋಕರ್ಣ: ವರದಹಳ್ಳಿಯ ಸದ್ಗುರು ಶ್ರೀಧರ ಸ್ವಾಮಿಗಳ ಪಾದುಕೆ ಇದೇ ಏಪ್ರಿಲ್ 8ರ ಬುಧರವಾರ ಮತ್ತು 9ರ...

ವಿಸ್ಮಯ ಟಿ.ವಿ ಹೆಸರಿನಲ್ಲಿ ಮೋಸ: ವೀಕ್ಷಕರ, ಜಾಹೀರಾತುದಾರರ ಗಮನಕ್ಕೆ

ಕುಮಟಾ: ಕಳೆದ 13 ವರ್ಷಗಳಿಂದ ಸದಭಿರುಚಿಯ ಕಾರ್ಯಕ್ರಮಗಳ ಮೂಲಕ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಮನೆಮಾತಾಗಿರುವ ವಿಸ್ಮಯ...

ಫೋಟೋಗ್ರಾಫರ್ ಪ್ರಶಾಂತ ವಿಧಿವಶ : ಪಚ್ಚು ಎಂದೇ ಚಿರಪರಿಚಿತನಾಗಿದ್ದ ಯುವಕ ಇನ್ನು ನೆನಪು ಮಾತ್ರ

ಅಂಕೋಲಾ : ಪಟ್ಟಣ ವ್ಯಾಪ್ತಿಯ ಲಕ್ಷ್ಮೇಶ್ವರ ಕುಂಬಾರಕೇರಿ ನಿವಾಸಿ, ಪ್ರಶಾಂತ (ಪಚ್ಚು ) ಕೆ ನಾಯ್ಕ...

ತರಂಗ ಎಲೆಕ್ಟ್ರಾನಿಕ್ಸ್ ನಲ್ಲಿ ಯುಗಾದಿ ಉತ್ಸವ: ಏ.ಸಿ ಮೇಲೆ ಬಂಪರ್ ಆಫರ್

ಕುಮಟಾ: ಉತ್ತರಕನ್ನಡ ಜಿಲ್ಲೆಯ ಅತ್ಯಂತ ವಿಶ್ವಾಸಾರ್ಹ ಮತ್ತು ಅತಿದೊಡ್ಡ ಶೋರೂಮ್ ತರಂಗ ಎಲೆಕ್ಟ್ರಾನಿಕ್ಸ್ ನಲ್ಲಿ ಯುಗಾದಿ...

ನರ್ಸ್ ವೃತ್ತಿ ಮತ್ತು ಕುಟುಂಬ ಜವಾಬ್ದಾರಿಗಳ ನಡುವೆಯೇ ಸಾಧನೆ ಮಾಡಿದ ಪೂಜಾ ನಾಯ್ಕ

ಕುಮಟಾ :- ತಾಲೂಕಿನ ಕಲಭಾಗ ಗ್ರಾಮ ನಿವಾಸಿ ಪೂಜಾ ಸಂತೋಷ ನಾಯ್ಕ ಅವರು 2024–26ನೇ ಸಾಲಿನ...