Important

ಅಂಗಾರಕ ಸಂಕಷ್ಟಿ: ಇಡಗುಂಜಿ ಮಹಾಗಣಪತಿ ದರ್ಶನ ಪಡೆದ ಅಪಾರ ಭಕ್ತರು

Share

ಹೊನ್ನಾವರ: ಪುರಾಣ ಪ್ರಸಿದ್ಧ ಶ್ರೀ ಕ್ಷೇತ್ರ ಇಡಗುಂಜಿ ಶ್ರೀ ಮಹಾಗಣಪತಿ ಸನ್ನಿಧಿಯಲ್ಲಿ ಅಂಗಾರಕ ಸಂಕಷ್ಟಿಯು ವಿಜೃಂಭಣೆಯಿoದ ನಡೆಯಿತು. ಭಕ್ತರು ತಮ್ಮಿಷ್ಠಾರ್ಥ ಸೇವೆಗಳನ್ನ ಸಲ್ಲಿಸಿ ಪುನೀತರಾದರು. ಅಂಗಾರಕ ಸಂಕಷ್ಟಿಯಾಗಿದ್ದರಿoದ ಬೆಳಗಿನ ಜಾವದಿಂದಲೇ ಮಹಾಗಣಪತಿಯ ದರ್ಶನಕ್ಕೆ ಸಾವಿರಾರು ಸಂಖ್ಯೆಯ ಭಕ್ತಾಧಿಗಳು ಆಗಮಿಸಿದ್ದರು. ಶ್ರೀ ಮಹಾಗಣಪತಿಗೆ ಭಕ್ತರು ಶ್ರೀ ಕ್ಷೇತ್ರದಲ್ಲಿ ಮಂಗಳಾರತಿ, ಸತ್ಯಗಣಪತಿ ವ್ರತ , ಅಭಿಷೇಕ ಹಾಗೂ ಪಂಚಕಜ್ಜಾಯ ಸೇವೆಗಳನ್ನು ಸಲ್ಲಿಸಿದರು.

ಈ ಬಗ್ಗೆ ದೇವಾಲಯದ ಅರ್ಚಕರಾದ ನರಸಿಂಹ ಭಟ್ ಮಾತನಾಡಿ ಇವತ್ತು ವಿಶೇಷ ದಿನ. ಅಂಗಾರಕ ಸಂಕಷ್ಟಿಯoದು ಭಕ್ತರು ಗಣಪತಿಗೆ ಪೂಜೆ ಮಾಡಿ ಚಂದ್ರನಿಗೆ ಅರ್ಘ್ಯ ನೀಡಿದರೆ ಅವರ ಕಷ್ಟಗಳು ನಿವಾರಣೆಯಾಗುತ್ತವೆ ಹಾಗೂ ಇಷ್ಟಾರ್ಥಗಳನ್ನು ನೇರವೇರಿಸುತ್ತಾನೆ ಎನ್ನುವ ಪ್ರತೀತಿಯಿಂದ ಭಕ್ತರು ದರ್ಶನಕ್ಕೆ ಬರುತ್ತಾರೆ. ಇನ್ನೂ 30 ಕ್ವಿಂಟಾಲ್ ನಷ್ಟು ಪಂಚಕಜ್ಜಾಯ ನೈವೆದ್ಯವಾಗಿದೆ.

ತೆಂಗಿನಕಾಯಿ,ಬಾಳೆಗೋನೆ ಸಮರ್ಪಣೆ ನಡೆದಿದ್ದು, 250 ಗಣಹೋಮ ನಡೆದಿದೆ. ಭಕ್ತರಿಗೆ ಬೆಳಿಗ್ಗೆ 5 ಗಂಟೆಯಿoದಲೇ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ ಎಂದರು. ಬೆಳಿಗ್ಗೆಯಿoದಲೇ ಶ್ರೀ ಕ್ಷೇತ್ರಕ್ಕೆ ಸಾವಿರಾರು ಸಂಖ್ಯೆಯ ಭಕ್ತರಿಗೆ ಸರತಿ ಸಾಲಿನಲ್ಲಿ ಮಹಾಗಣಪತಿಯ ದರ್ಶನಕ್ಕೆ ಅವಕಾಶ ಮಾಡಿದರು..

ಇದರ ಮಧ್ಯೆ ವರುಣ ಅಬ್ಬರಿಸಿದ್ದರಿಂದ ಕೆಲಕಾಲ ಭಕ್ತಾಧಿಗಳು ಮಳೆಯಲ್ಲಿ ನೆನೆಯುವಂತಾಯಿತು. ಪೊಲೀಸರು, ದೇವಾಲಯದ ಸಿಬ್ಬಂದಿಗಳು ಜನದಟ್ಟಣೆ ನಿಬಾಯಿಸುವಲ್ಲಿ ನಿರತರಾಗಿದ್ದರು. ಭಕ್ತರು ಸರದಿ ಸಾಲಿನಲ್ಲಿ ಬಂದು, ಹಣ್ಣು ಕಾಯಿ ಸೇವೆ, ಪಂಚಕಾದ್ಯ ಸೇವೆ, ಪೂಜೆ, ಗಣಹೋಮ, ಬಾಳೆಗೋನೆ, ಕುಂಕುಮಾರ್ಚನೆ ಸೇರಿದಂತೆ ಇನ್ನಿತರ ವಿವಿಧ ಸೇವೆಗಳನ್ನ ನೀಡಿ ಮನೋಕಾಮನೆಗಾಗಿ ಪ್ರಾರ್ಥಿಸಿಕೊಂಡರು.

ವಿಸ್ಮಯ ನ್ಯೂಸ್, ವಿವೇಕ್ ಶೇಟ್, ಹೊನ್ನಾವರ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಬೆಂಕಿ ಅವಘಡದಲ್ಲಿ ಅಪಾರಹಾನಿ: ಆದರೆ, ಮಾರಿಕಾಂಬೆಯ ಫೋಟೋ ಮಾತ್ರ ಸೇಫ್

ಅಂಕೋಲಾ: ಪಟ್ಟಣ ವ್ಯಾಪ್ತಿಯ ಲಕ್ಷ್ಮೇಶ್ವರ–ಕುಂಬಾರಕೇರಿ ಪ್ರದೇಶದಲ್ಲಿರುವ ಶ್ರೀ ಮಹಾಲಸಾ ವೆಲ್ಡಿಂಗ್ ಶಾಪ್ನಲ್ಲಿ ಫೆಬ್ರವರಿ 9ರ ಸೋಮವಾರ ರಾತ್ರಿ ಆಕಸ್ಮಿಕವಾಗಿ ಬೆಂಕಿ ಅವಘಡ ಸಂಭವಿಸಿ, ಲಕ್ಷಾಂತರ ರೂಪಾಯಿ ಮೌಲ್ಯದ ಆಸ್ತಿ ಹಾನಿಯಾಗಿರುವ ಘಟನೆ...

ಕಲೆ ಆತ್ಮ ಗೌರವದ ಸಂಕೇತ: ಮಂಕಾಳು ವೈದ್ಯ

ಮುರುಡೇಶ್ವರ: ಮುರುಡೇಶ್ವರದ ಯಕ್ಷರಕ್ಷೆ ವೇದಿಕೆಯಲ್ಲಿ ರಾಗಶ್ರೀ ಸಂಗೀತ ವಿದ್ಯಾಲಯ ಹಡಿನಬಾಳ ಇದರ ಮುರುಡೇಶ್ವರ ಶಾಖೆಯ ಪ್ರಥಮ ವರ್ಷದ ವಾರ್ಷಿಕೋತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಉಸ್ತುವಾರಿ ಸಚಿವರಾದ ಶ್ರೀ ಮಂಕಾಳು ವೈದ್ಯರು ಕಲೆ ಮತ್ತು...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಕಲೆ ಆತ್ಮ ಗೌರವದ ಸಂಕೇತ: ಮಂಕಾಳು ವೈದ್ಯ

ಮುರುಡೇಶ್ವರ: ಮುರುಡೇಶ್ವರದ ಯಕ್ಷರಕ್ಷೆ ವೇದಿಕೆಯಲ್ಲಿ ರಾಗಶ್ರೀ ಸಂಗೀತ ವಿದ್ಯಾಲಯ ಹಡಿನಬಾಳ ಇದರ ಮುರುಡೇಶ್ವರ ಶಾಖೆಯ ಪ್ರಥಮ...

ಬಡ, ಮಧ್ಯಮವರ್ಗ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಒಟ್ಟು 3 ಕೋಟಿ ಮೌಲ್ಯದ ವಿದ್ಯಾರ್ಥಿವೇತನ

ಉಡುಪಿ: ರಾಜ್ಯದಲ್ಲೇ ಪ್ರಸಿದ್ಧ ಪಡೆದ ಉಡುಪಿ ಲಾರ್ಡ್ಸ್ ಇಂಟರ್‌ನ್ಯಾಷನಲ್ ರೆಸಿಡೆನ್ಷಿಯಲ್ ಸ್ಕೂಲ್ , ಬಡ, ಮಧ್ಯಮವರ್ಗ...

ಶತರುದ್ರ ಮತ್ತು ಶತಚಂಡಿಕಾ ಯಾಗಕ್ಕೆ ಆತ್ಮೀಯ ಸ್ವಾಗತ

ಕಾರವಾರ: ದಿವಂಗತ ಕೃಷ್ಣ ಸೈಲ್ ಹಾಗೂ ಗಿರಿಜಾ ಕೃಷ್ಣ ಸೈಲ್ ರವರ ಆರ್ಶೀವಾದದೊಂದಿಗೆ ಈ ಕ್ಷೇತ್ರದ...

ಸಹಕಾರದ ಬೆಳಕಿನಲ್ಲಿ ಮಹತ್ವದ ಹೆಜ್ಜೆಯಿಟ್ಟ ‘ಸೂರ್ಯ’: ಹೊಸ ಶಾಖೆಗಳತ್ತ ನಾಗರಾಜ ನಾಯಕರ ದೃಷ್ಟಿ”

ಅಂಕೋಲಾ: ಅಂಕೋಲೆ ಎಂದಾಗ ಕರಿ ಇಸಾಡು ಮಾವಿನಹಣ್ಣು ನೆನಪಾದರೆ, “ಸೂರ್ಯ” ಸಹಕಾರಿ ಎಂದಾಗ ನಾಗರಾಜ ನಾಯಕ...

ಆಟೋರಿಕ್ಷಾಗೆ ಪ್ರವಾಸಿಗರಿದ್ದ ಟಿ.ಟಿ ವಾಹನ ಡಿಕ್ಕಿ : ಮಹಿಳೆಗೆ ಗಾಯ

ಅಂಕೋಲಾ: ಸಹೋದರಿಯ ಮನೆಗೆ ಬಂದು ವಾಪಸ್ ಮನೆಗೆ ಮರಳುತ್ತಿದ್ದ ಗೃಹಿಣಿ ಇದ್ದ ಆಟೋರಿಕ್ಷಾಗೆ ಪ್ರವಾಸಿಗರಿದ್ದ ಟಿ.ಟಿ...

ಶಾಲಾ ಮಕ್ಕಳ ಬಸ್ ಪಲ್ಟಿ: ವಿದ್ಯಾರ್ಥಿ ಸಾವು

ಹೊನ್ನಾವರ: ಗೇರುಸೊಪ್ಪ ಸುಳೆಮುರ್ಕಿ ಕ್ರಾಸ್ ಹತ್ತಿರ ಶಾಲಾಮಕ್ಕಳ ಪ್ರವಾಸಿ ಬಸ್ ಪಲ್ಟಿಯಾಗಿ, ವಿಧ್ಯಾರ್ಥಿ ಸಾವನಪ್ಪಿರುವ ಘಟನೆ...