Big News

ಕೃಷ್ಣಲೀಲಾ ಧಾರ್ಮಿಕ ಸ್ಪರ್ಧೆ: ವಿಜೇತರಿಗೆ ಬಹುಮಾನ ವಿತರಣೆ

Share

ಭಟ್ಕಳ: ಊರಲ್ಲಿ ಯಾವುದೇ ಕಾರ್ಯಕ್ರಮಗಳು ನಡೆದಾಗ ಒಮ್ಮೆ ಅಲ್ಲಿ ಹೋಗಿ ನೋಡಿಕೊಂಡು ಬರುವ ಮನೋಭಾವ ನಮ್ಮಲ್ಲಿ ಬೆಳೆಯಬೇಕು ಇದು ನಮ್ಮ ನಡುವೆ ಸಾಮರಸ್ಯದ ಭಾವನೆಯನ್ನುಬೆಳೆಯಲು ಸಹಕರಿಸುತ್ತದೆ ಎಂದು ಸ್ವಾಮಿ ವಿವೇಕಾನಂದ ಜನಸ್ಪಂದನಾ ಫೌಂಡೆಷನ್ ಅಧ್ಯಕ್ಷ ವಸಂತ ನಾಯ್ಕ ಹೇಳಿದರು.

ತಾಲೂಕಿನ ಜಾಲಿಯಲ್ಲಿರುವ ಶ್ರೀ ವೆಂಕಟೇಶ್ವರ ವಿದ್ಯಾವರ್ಧಕ ಸಭಾಭವನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಅಂಗವಾಗಿ ಸ್ವಾಮಿ ವಿವೇಕಾನಂದ ಜನಸ್ಪಂದನಾ ಫೌಂಡೇಶನ್ ವತಿಯಿಂತ ರವಿವಾರ ನಡೆದ ಕೃಷ್ಣಲೀಲಾ ಧಾರ್ಮಿಕ ಸ್ಪರ್ಧಾ ಚಟುವಟಿಕೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಈ ಹಿಂದೆ ಹಬ್ಬಗಳು ಮನೆಯಲ್ಲಿ ಮಾತ್ರ ಆಚರಿಸಲ್ಪಡುತ್ತಿದ್ದು ಧಾರ್ಮಿಕ ಸ್ಪರ್ಧಾ ಚಟುವಟಿಕೆಯ ಕಾರಣಕ್ಕೆ ಎಲ್ಲರೂ ಒಂದು ಕಡೆ ಸೇರಿ ಸಂತಸದಿoದ ಕಳೆಯಲು ಸಂದರ್ಭ ದೊರೆತಂತಾಗಿದೆ.

ಶ್ರೀ ಬ್ರಹ್ಮಾನಂದ ಸರಸ್ವತಿ ಶ್ರೀಗಳ ಸೀಮೋಲ್ಲಂಘನ : ಗಮನಸೆಳೆದ ಬೃಹತ್ ಮೆರವಣಿಗೆ

ಮಕ್ಕಳ ಕಾರ್ಯಕ್ರಮದ ಜತೆ ಮಹಿಳೆಯರಿಗೂ ರಂoಗೋಲಿ ಕಾರ್ಯಕ್ರಮ ಏರ್ಪಡಿಸಿರುವುದರಿಂದ ಸದಾಕಾಲ ಮನೆಯಲ್ಲಿ ಕಾಲಕಳೆಯುವ ಮಹಿಳೆಯರಿಗೆ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶ ಸಿಕ್ಕಿದಂತಾಗಿದೆ. ಸ್ವಾಮಿ ವಿವೇಕಾನಂದ ಪೌಂಡೆಷನ್ ಇಂತಹ ಸಾಮಾಜಿಕ, ಧಾರ್ಮಿಕ ಕಾರ್ಯಕ್ರಮಗಳನ್ನು ನಿರಂತರವಾಗಿ ಹಮ್ಮಿಕೊಂಡು ಬರುತ್ತಿದೆ ಎಂದರು.

ಕಾರ್ಯಕ್ರಮ ಉದ್ಘಾಟಿಸಿ ನಿವೃತ್ತ ಶಿಕ್ಷಕ ಡಿಬಿ ನಾಯ್ಕ ಮಾತನಾಡಿ ಜಾಲಿಯಲ್ಲಿ ಇತ್ತಿಚೆಗೆ ಇಂತಹ ಅಪರೂಪದ ಕಾರ್ಯಕ್ರಮಗಳು ನಡೆಯುತ್ತಿದೆ. ಸ್ಪರ್ಧೆಯಲ್ಲಿ ಸೋಲು ಗೆಲುವು ಸಹಜವಾಗಿದ್ದು ಸೋತ ಸ್ಪರ್ಧಿಗಳು ಬೆಸರಿಸಿಕೊಳ್ಳದೆ ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು ಎಂದರು. ಕಾರ್ಯಕ್ರಮದಲ್ಲಿ ಮುದ್ದು ಕೃಷ್ಣ ಮುದ್ದು ರಾಧೆ, ಚೆಲ್ವ ಕೃಷ್ಣ ಚೆಲ್ವೆ ರಾಧೆ, ಭಗವತ್ ಗೀತಾ ಶ್ಲೋಕ ಸಾರ, ರಂಗೋಲಿ ಸ್ಪರ್ಧೆಯನ್ನು ಏರ್ಪಡಿಸಲಾಗಿದ್ದು. ಮಕ್ಕಳು ಕೃಷ್ಣ ರಾಧೆಯ ವೇಷ ತೊಟ್ಟ ವೇದಿಕೆಯಲ್ಲಿ ಪ್ರದರ್ಶನ ನೀಡಿದರು.

ಭಗವತ್ ಗೀತಾ ಶ್ಲೋಕ ಸಾರ ಸ್ಪರ್ಧೆಯಲ್ಲಿ ಭಾಗವಹಿಸಿದ ಮಕ್ಕಳು ತಮ್ಮ ತೊದಲು ನುಡಿಯಲ್ಲಿ ಭಗವತ್ವಗೀತೆಯ ಶ್ಲೋಕವನ್ನು ಪಠಿಸಿ, ಅದರ ಅರ್ಥ ವಿವರಿಸಿದ್ದು ವಿಶೇಷವಾಗಿತ್ತು. ರಂಗೋಲಿ ಸ್ಪರ್ಧೆಯಲ್ಲಿ ಯುವತಿಯರು, ಮಹಿಳೆಯರು ಭಾಗವಹಿಸಿ ಆಕರ್ಷಕ ರಂಗೋಲಿಯನ್ನು ಬಿಡಿಸಿ ಗಮನಸೆಳೆದರು. ಸ್ಪರ್ಧೆಯಲ್ಲಿ ಗೆದ್ದ ಅಬ್ಯರ್ಥಿಗಳಿಗೆ ಸಂಘಟಕರ ಕಡೆಯಿಂದ ಬಹುಮಾನವನ್ನು ವಿತರಿಸಲಾಯಿತು.

ವಿಸ್ಮಯ ನ್ಯೂಸ್ ಈಶ್ವರ ನಾಯ್ಕ ಭಟ್ಕಳ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಜೂನ್ 14 ರಂದು ಚುಟುಕು ಸಾಹಿತ್ಯ ಸಮ್ಮೇಳನ

ಕುಮಟಾ: ಉತ್ತರ ಕನ್ನಡ ಜಿಲ್ಲಾಮಟ್ಟದ 9 ನೇ ಹಾಗೂ ಕುಮಟಾ ತಾಲೂಕಾ 5ನೇ ಚುಟುಕು ಸಾಹಿತ್ಯ ಸಮ್ಮೇಳನವು ಇದೇ ಜೂನ್ 14 ರ ಭಾನುವಾರದಂದು ಕುಮಟಾದ ಲಕ್ಷ್ಮೀಬಾಯಿ ಬುರ್ಡೇಕರ್ ಸಭಾಂಗಣದಲ್ಲಿ ನಡೆಯಲಿದೆ....

ಪ್ರಸಿದ್ಧ ಕಣ್ಣಿನ ಆಸ್ಪತ್ರೆಯಲ್ಲಿ ಉದ್ಯೋಗಾವಕಾಶ: Job Alert

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಪ್ರಸಿದ್ಧ ಕಣ್ಣಿನ ಆಸ್ಪತ್ರೆಗಳಲ್ಲಿ ಒಂದಾದ ಹೆಗಡೆ ಐ ಫೌಂಡೇಷನ್ / ಹೆಗಡೆ ಆಪ್ಟಿಕಲ್ಸ್, ಭಟ್ಕಳ ಹಾಗೂ ಹೊನ್ನಾವರದಲ್ಲಿ ಸುಸಜ್ಜಿತ ಆಸ್ಪತ್ರೆಗಳನ್ನು ಹೊಂದಿದ್ದು, ಇದೀಗ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸಲು...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಸ್ವಾತಂತ್ರ‍್ಯೋತ್ಸವದ ಸಂಭ್ರಮಕ್ಕೆ ತರಂಗ ಎಲೆಕ್ಟ್ರಾನಿಕ್ಸ್ ನಲ್ಲಿ ಭರ್ಜರಿ ಆಫರ್; ಶೇ.70ರಷ್ಟು ರಿಯಾಯಿತಿ

ಕುಮಟಾ: ಸ್ವಾತಂತ್ರ‍್ಯೋತ್ಸವದ ಅಂಗವಾಗಿ ತರಂಗ ಎಲೆಕ್ಟ್ರಾನಿಕ್ಸ್ ಆಂಡ್ ಫರ್ನಿಚರ್ ಗ್ರಾಹಕರಿಗಾಗಿ ವಿಶೇಷ ‘ಫ್ರೀಡಂ ಫೆಸ್ಟಿವಲ್’ ಆಫರ್...

ಜೂನ್ 14 ರಂದು ಚುಟುಕು ಸಾಹಿತ್ಯ ಸಮ್ಮೇಳನ

ಕುಮಟಾ: ಉತ್ತರ ಕನ್ನಡ ಜಿಲ್ಲಾಮಟ್ಟದ 9 ನೇ ಹಾಗೂ ಕುಮಟಾ ತಾಲೂಕಾ 5ನೇ ಚುಟುಕು ಸಾಹಿತ್ಯ...

ಜಾನುವಾರು ರಕ್ಷಣೆ: ಗೋ ಶಾಲೆಗೆ ರವಾನಿಸುವ ಮೂಲಕ ಗೀರ್ ಹೋರಿಗಳಿಗೆ ಜೀವದಾನ

ಅಂಕೋಲಾ: ವಧೆ ಉದ್ದೇಶದಿಂದ ಹಿಂಸಾತ್ಮಕವಾಗಿ ಸಾಗಿಸುತ್ತಿದ್ದ, ಎರಡು ಭಾರೀ ಗಾತ್ರದ ಗೀರ್ ತಳಿಯ ಹೋರಿಗಳಿಗೆ ಕೊನೆಗೂ...

ಮುರಿನಕಟ್ಟೆ ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಕಾಗೇರಿ ಆಗ್ರಹ

ಭಟ್ಕಳ:ಮುರಿನಕಟ್ಟೆ ವಿಚಾರವು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಹಿಂದೂಗಳ ಭಾವನೆಗಳಿಗೆ ಸಂಬAಧಿಸಿದ ವಿಷಯವಾಗಿದ್ದು, ಕೆಲ ಮತಾಂಧ...

ಅಳ್ವೆಕೋಡಿ ಕಪ್ಪೆಚಿಪ್ಪು ದುರಂತ: ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದ ಕಾಗೇರಿ

ಭಟ್ಕಳ: ತಾಲೂಕಿನ ಅಳ್ವೆಕೋಡಿಯ ಕಪ್ಪೆಚಿಪ್ಪು ದುರಂತದಲ್ಲಿ ಸಾವನ್ನಪ್ಪಿದ ಕುಟುಂಬದವರನ್ನು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಭೇಟಿ...

ಜಿಲ್ಲೆಯ ಆರೋಗ್ಯ ಸೇವೆಗೆ ಐತಿಹಾಸಿಕ ಹೆಜ್ಜೆ : ಶಾಸಕ ಸತೀಶ್ ಸೈಲ್

ಅಂಕೋಲಾ : ಜನರಿಗೆ ಉನ್ನತ ಮಟ್ಟದ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಕಾರವಾರದಲ್ಲಿ 100 ಕೋಟಿ...

ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಲ್ಲಿ ಸಹಾಯಕ ಶಿಕ್ಷಕರು ಬೇಕಾಗಿದ್ದಾರೆ

ಕುಮಟಾ : ಅಂಕೋಲಾದ ಕೆನರಾ ವೆಲ್ಫೇರ್ ಟ್ರಸ್ಟ್ ನ ಕುಮಟಾ ಧಾರೇಶ್ವರದ ದಿನಕರ ಇಂಗ್ಲಿಷ್ ಮೀಡಿಯಂ...

ಅಲಂಕಾರ ಜ್ಯುವೆಲ್ಲರ್ಸ್ : ಅಕ್ಷಯ ತೃತೀಯ ವಿಶೇಷ ಆಫರ್

ಸುವರ್ಣ ಕ್ಷಣವನ್ನು ಇನ್ನಷ್ಟು ವಿಶೇಷವಾಗಿಸಿ : ಈ ಶುಭ ಅಕ್ಷಯ ತೃತೀಯದ ಪ್ರಯುಕ್ತ ಚಿನ್ನ ಮತ್ತು...