Big News

ಕೃಷ್ಣಲೀಲಾ ಧಾರ್ಮಿಕ ಸ್ಪರ್ಧೆ: ವಿಜೇತರಿಗೆ ಬಹುಮಾನ ವಿತರಣೆ

Share

ಭಟ್ಕಳ: ಊರಲ್ಲಿ ಯಾವುದೇ ಕಾರ್ಯಕ್ರಮಗಳು ನಡೆದಾಗ ಒಮ್ಮೆ ಅಲ್ಲಿ ಹೋಗಿ ನೋಡಿಕೊಂಡು ಬರುವ ಮನೋಭಾವ ನಮ್ಮಲ್ಲಿ ಬೆಳೆಯಬೇಕು ಇದು ನಮ್ಮ ನಡುವೆ ಸಾಮರಸ್ಯದ ಭಾವನೆಯನ್ನುಬೆಳೆಯಲು ಸಹಕರಿಸುತ್ತದೆ ಎಂದು ಸ್ವಾಮಿ ವಿವೇಕಾನಂದ ಜನಸ್ಪಂದನಾ ಫೌಂಡೆಷನ್ ಅಧ್ಯಕ್ಷ ವಸಂತ ನಾಯ್ಕ ಹೇಳಿದರು.

ತಾಲೂಕಿನ ಜಾಲಿಯಲ್ಲಿರುವ ಶ್ರೀ ವೆಂಕಟೇಶ್ವರ ವಿದ್ಯಾವರ್ಧಕ ಸಭಾಭವನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಅಂಗವಾಗಿ ಸ್ವಾಮಿ ವಿವೇಕಾನಂದ ಜನಸ್ಪಂದನಾ ಫೌಂಡೇಶನ್ ವತಿಯಿಂತ ರವಿವಾರ ನಡೆದ ಕೃಷ್ಣಲೀಲಾ ಧಾರ್ಮಿಕ ಸ್ಪರ್ಧಾ ಚಟುವಟಿಕೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಈ ಹಿಂದೆ ಹಬ್ಬಗಳು ಮನೆಯಲ್ಲಿ ಮಾತ್ರ ಆಚರಿಸಲ್ಪಡುತ್ತಿದ್ದು ಧಾರ್ಮಿಕ ಸ್ಪರ್ಧಾ ಚಟುವಟಿಕೆಯ ಕಾರಣಕ್ಕೆ ಎಲ್ಲರೂ ಒಂದು ಕಡೆ ಸೇರಿ ಸಂತಸದಿoದ ಕಳೆಯಲು ಸಂದರ್ಭ ದೊರೆತಂತಾಗಿದೆ.

ಶ್ರೀ ಬ್ರಹ್ಮಾನಂದ ಸರಸ್ವತಿ ಶ್ರೀಗಳ ಸೀಮೋಲ್ಲಂಘನ : ಗಮನಸೆಳೆದ ಬೃಹತ್ ಮೆರವಣಿಗೆ

ಮಕ್ಕಳ ಕಾರ್ಯಕ್ರಮದ ಜತೆ ಮಹಿಳೆಯರಿಗೂ ರಂoಗೋಲಿ ಕಾರ್ಯಕ್ರಮ ಏರ್ಪಡಿಸಿರುವುದರಿಂದ ಸದಾಕಾಲ ಮನೆಯಲ್ಲಿ ಕಾಲಕಳೆಯುವ ಮಹಿಳೆಯರಿಗೆ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶ ಸಿಕ್ಕಿದಂತಾಗಿದೆ. ಸ್ವಾಮಿ ವಿವೇಕಾನಂದ ಪೌಂಡೆಷನ್ ಇಂತಹ ಸಾಮಾಜಿಕ, ಧಾರ್ಮಿಕ ಕಾರ್ಯಕ್ರಮಗಳನ್ನು ನಿರಂತರವಾಗಿ ಹಮ್ಮಿಕೊಂಡು ಬರುತ್ತಿದೆ ಎಂದರು.

ಕಾರ್ಯಕ್ರಮ ಉದ್ಘಾಟಿಸಿ ನಿವೃತ್ತ ಶಿಕ್ಷಕ ಡಿಬಿ ನಾಯ್ಕ ಮಾತನಾಡಿ ಜಾಲಿಯಲ್ಲಿ ಇತ್ತಿಚೆಗೆ ಇಂತಹ ಅಪರೂಪದ ಕಾರ್ಯಕ್ರಮಗಳು ನಡೆಯುತ್ತಿದೆ. ಸ್ಪರ್ಧೆಯಲ್ಲಿ ಸೋಲು ಗೆಲುವು ಸಹಜವಾಗಿದ್ದು ಸೋತ ಸ್ಪರ್ಧಿಗಳು ಬೆಸರಿಸಿಕೊಳ್ಳದೆ ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು ಎಂದರು. ಕಾರ್ಯಕ್ರಮದಲ್ಲಿ ಮುದ್ದು ಕೃಷ್ಣ ಮುದ್ದು ರಾಧೆ, ಚೆಲ್ವ ಕೃಷ್ಣ ಚೆಲ್ವೆ ರಾಧೆ, ಭಗವತ್ ಗೀತಾ ಶ್ಲೋಕ ಸಾರ, ರಂಗೋಲಿ ಸ್ಪರ್ಧೆಯನ್ನು ಏರ್ಪಡಿಸಲಾಗಿದ್ದು. ಮಕ್ಕಳು ಕೃಷ್ಣ ರಾಧೆಯ ವೇಷ ತೊಟ್ಟ ವೇದಿಕೆಯಲ್ಲಿ ಪ್ರದರ್ಶನ ನೀಡಿದರು.

ಭಗವತ್ ಗೀತಾ ಶ್ಲೋಕ ಸಾರ ಸ್ಪರ್ಧೆಯಲ್ಲಿ ಭಾಗವಹಿಸಿದ ಮಕ್ಕಳು ತಮ್ಮ ತೊದಲು ನುಡಿಯಲ್ಲಿ ಭಗವತ್ವಗೀತೆಯ ಶ್ಲೋಕವನ್ನು ಪಠಿಸಿ, ಅದರ ಅರ್ಥ ವಿವರಿಸಿದ್ದು ವಿಶೇಷವಾಗಿತ್ತು. ರಂಗೋಲಿ ಸ್ಪರ್ಧೆಯಲ್ಲಿ ಯುವತಿಯರು, ಮಹಿಳೆಯರು ಭಾಗವಹಿಸಿ ಆಕರ್ಷಕ ರಂಗೋಲಿಯನ್ನು ಬಿಡಿಸಿ ಗಮನಸೆಳೆದರು. ಸ್ಪರ್ಧೆಯಲ್ಲಿ ಗೆದ್ದ ಅಬ್ಯರ್ಥಿಗಳಿಗೆ ಸಂಘಟಕರ ಕಡೆಯಿಂದ ಬಹುಮಾನವನ್ನು ವಿತರಿಸಲಾಯಿತು.

ವಿಸ್ಮಯ ನ್ಯೂಸ್ ಈಶ್ವರ ನಾಯ್ಕ ಭಟ್ಕಳ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಕ್ಷುಲ್ಲಕ ಕಾರಣಕ್ಕೆ ಜಗಳ: ವ್ಯಕ್ತಿಗೆ ಇರಿತ

ಭಟ್ಕಳ: ವಾರದ ಸಂತೆಯಲ್ಲಿ ವ್ಯಾಪಾರಿಯೊಬ್ಬರ ಹತ್ತಿರ ಕೆಲಸ ಮಾಡುತ್ತಿದ್ದ ಇಬ್ಬರು ಕೆಲಸಗಾರರ ನಡುವೆ ಕ್ಷುಲ್ಲಕ ಕಾರಣಕ್ಕಾಗಿ ಮಾತಿಗೆ ಮಾತು ಬೆಳೆದ ಚೂ-ರಿ ಇರಿತದಲ್ಲಿ ಕೊನೆಗೊಂಡ ಘಟನೆ ನಡೆದಿದೆ. ಹಾನಗಲ್ ಮೂಲದ ಹಾಲಿ...

35 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯ ಬಂಧನ

ಶಿರಸಿ: ಕಳೆದ 35 ವರ್ಷಗಳಿಂದ ದೆಹಲಿಯಲ್ಲಿ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಶಿರಸಿ ಪೊಲೀಸರು ಬಂಧಿಸಿದ್ದಾರೆ. ಶಿರಸಿ ಕುಮಟಾ ರಸ್ತೆ ಅಗಸೆ ಬಾಗಿಲು ಚರ್ಚ್ ಎದುರು ಹಾಲಿ ದೆಹಲಿಯ ಚಾಣಕ್ಯ ಪುರಿ ನಿವಾಸಿ...

📰 ನಿಮ್ಮ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರಿನ ಸಭೆ, ಸಮಾರಂಭ, ಪ್ರತಿಭಟನೆ ಮತ್ತು ವಿಶೇಷ ವರದಿಗಳನ್ನು ನಮಗೆ ಕಳುಹಿಸಿ.

✉️ Gmail: [email protected]

📲 WhatsApp ಮೂಲಕ ಕಳುಹಿಸಿ ✉️ Gmail ಮೂಲಕ ಕಳುಹಿಸಿ

ಗಣಪತಿಗೆ ಜೀವ ಕಳೆ ತುಂಬುವ ಗಂಗಾವಳಿಯ ಶರತ್ ನಾಯ್ಕ್

ಕುಮಟಾ, ಆಗಸ್ಟ್ 26: ಪ್ರತಿಭೆ ಯಾರ ಸೊತ್ತಲ್ಲ. ಅದು ಸಾಧಕನ ಸ್ವತ್ತು ಎನ್ನುವ ಮಾತಿಗೆ ಅನುಗುಣವಾಗಿ ಇರುವವರು ಕುಮಟಾ ತಾಲೂಕಿನ ಗಂಗಾವಳಿಯ ಹೆಮ್ಮೆಯ ಪ್ರತಿಭೆ ಶರತ್ ನಾಯ್ಕ್ ಅವರು ಈಗಾಗಲೇ ಬೃಹತ್...

ವಿಶ್ವಾಸದ ಮತ್ತೊಂದು ಹೆಸರೇ ಅಲಂಕಾರ ಜ್ಯುವೆಲರ್ಸ್: ಅಂಕೋಲಾದಲ್ಲಿ ಭವ್ಯ ಶುಭಾರಂಭ

ಅಂಕೋಲಾ, ಆಗಸ್ಟ್ 24: ಪಟ್ಟಣದ ಬಂಡಿಬಜಾರ ಮುಖ್ಯ ರಸ್ತೆಯಂಚಿಗೆ ನವೀಕೃತಗೊಂಡಿರುವ ಭವ್ಯವಾದ ಕಟ್ಟಡದಲ್ಲಿ ಅಲಂಕಾರ ಜ್ಯುವೆಲರ್ಸ್ ನ ಬೃಹತ್ತ ಮಳಿಗೆ ಅಗಸ್ಟ್ 24 ರ ರವಿವಾರ ಶುಭ ಮುಹೂರ್ತದಲ್ಲಿ ಗ್ರಾಹಕರ ಸೇವೆಗೆ...

ಭಟ್ಕಳದಲ್ಲಿ ಬೆಂಕಿ ಅನಾಹುತ

ಭಟ್ಕಳ: ತಾಲೂಕಿನ ಜಾಲಿ ಕ್ರಾಸ್‌ ಬಳಿಭೀಕರ ಬೆಂಕಿ ಅವಘಡ ಸಂಭವಿಸಿ, ಇಪ್ತಿಕಾರ್ ಮೋಹಿದೀನ್ ಮಾಲಕತ್ವದ “ತಾಸಿನ್ ಫ್ರೂಟ್ಸ್ & ವೆಜಿಟೇಬಲ್ಸ್” ಹೋಲ್‌ಸೇಲ್ ಅಂಗಡಿ ಭಸ್ಮವಾದ ಘಟನೆ ನಡೆದಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ...

ಕ್ಷುಲ್ಲಕ ಕಾರಣಕ್ಕೆ ಜಗಳ: ವ್ಯಕ್ತಿಗೆ ಇರಿತ

ಭಟ್ಕಳ: ವಾರದ ಸಂತೆಯಲ್ಲಿ ವ್ಯಾಪಾರಿಯೊಬ್ಬರ ಹತ್ತಿರ ಕೆಲಸ ಮಾಡುತ್ತಿದ್ದ ಇಬ್ಬರು ಕೆಲಸಗಾರರ ನಡುವೆ ಕ್ಷುಲ್ಲಕ ಕಾರಣಕ್ಕಾಗಿ ಮಾತಿಗೆ ಮಾತು ಬೆಳೆದ ಚೂ-ರಿ ಇರಿತದಲ್ಲಿ ಕೊನೆಗೊಂಡ ಘಟನೆ ನಡೆದಿದೆ. ಹಾನಗಲ್ ಮೂಲದ ಹಾಲಿ...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Current date Tuesday , 26 August 2025
Related Articles

ಧರ್ಮಸ್ಥಳದ ವಿರುದ್ಧ ಅಪಪ್ರಚಾರ: ಭಟ್ಕಳದಿಂದ ರಾಜ್ಯಪಾಲರಿಗೆ ಮನವಿ

ಭಟ್ಕಳ, ಆಗಸ್ಟ್ 22: ಹಿಂದೂಗಳ ಶ್ರದ್ಧಾ ಕೇಂದ್ರವಾಗಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಅಪಪ್ರಚಾರವನ್ನು...

ಕುಮಟಾದಲ್ಲಿ ಕೊಂಕಣಿ ಮಾನ್ಯತಾ ದಿವಸ್ ಆಚರಣೆ

ಕುಮಟಾ: ದಿನಾಂಕ 20-08-2025 ರಂದು ರೋಟರಿ ಹಾಲ್ ಕುಮಟಾ ದಲ್ಲಿ ಕೊಂಕಣಿ ಮಾನ್ಯತಾ ದಿವಸ್ ಆಚರಣೆ...

ಸ್ಥಳೀಯ ಮೀನುಗಾರರಿಗೆ,ರೈತರಿಗೆ ತಮ್ಮ ಅಹವಾಲು ಸಲ್ಲಿಸಲು ಮುಕ್ತ ಅವಕಾಶ ಕೊಡಿ: ಜಿಲ್ಲಾಧಿಕಾರಿಗಳಿಗೆ ಮತ್ತು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ಮನವಿ

ಕಾರವಾರ : ಅಂಕೋಲಾ ತಾಲೂಕಿನ ಕೇಣಿಯಲ್ಲಿ ಖಾಸಗಿ ಮೂಲದ ಗ್ರೀನ್ ಫೀಲ್ಡ್ ಬಂದರು ನಿರ್ಮಾಣಕ್ಕೆ ರಾಷ್ಟ್ರೀಯ...

ಸುರಿಯುವ ಮಳೆಯಲ್ಲಿಯೇ ಗದ್ದೆ ನಾಟಿ : ಹೊಸ ತಳಿಯನ್ನ ತಾಲೂಕಿಗೆ ಪರಿಚಯಿಸಿದ ವಿದ್ಯಾರ್ಥಿಗಳು

ಸಿದ್ದಾಪುರ: ತಾಲೂಕಿನ ಹಿರಿಯ ಪ್ರಾಥಮಿಕ ಶಾಲೆ ಹುಲ್ಕುತ್ರಿಯ ವಿದ್ಯಾರ್ಥಿಗಳು ಇಕೋ ಕ್ಲಬ್ ನ ಅಡಿಯಲ್ಲಿ ಶಿವಮೊಗ್ಗ...