Important

ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ಕೇಂದ್ರ ಸಚಿವರಿಗೆ ಮನವಿ: ಏನೇನು ಚರ್ಚೆ?

Share
  • ಅಕ್ರಮ ಆಮದು ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ
  • ತೇವಾಂಶ & ಗುಣಮಟ್ಟದ ಮಾನದಂಡಗಳ ಪರಿಷ್ಕರಣೆ ಮಾಡಬೇಕು
  • ದೋಟಿ ಮೇಲೆ ಸುಂಕ ಕಡಿಮೆ ಮಾಡಿ
  • ಬೆಳೆ ವಿಮಾ ಸೌಲಭ್ಯ ಬಲಪಡಿಸಿ

ದೆಹಲಿ: ದೆಹಲಿಯಲ್ಲಿ ಕೇಂದ್ರ ಸಚಿವರು ಹಾಗೂ ಕರ್ನಾಟಕದ ರಾಜ್ಯದ ಅಡಿಕೆ ಬೆಳೆಯುವ ಪ್ರದೇಶದ ಲೋಕಸಭಾ ಸದಸ್ಯರು ಮತ್ತು ಅಡಿಕೆ ಬೆಳೆಗಾರರ ಸಂಘಗಳ ಪ್ರತಿನಿಧಿಗಳ ನಿಯೋಗವು ಕೇಂದ್ರ ಸರ್ಕಾರಕ್ಕೆ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ನಿಯೋಗವು ಭೇಟಿ ಮಾಡಿತು.

ಗಣೇಶ ಚತುರ್ಥಿ 2025: ಸರ್ಕಾರದ ಮಾರ್ಗಸೂಚಿ ಹೀಗಿದೆ: ಕಡ್ಡಾಯವಾಗಿ ಪಾಲಿಸಬೇಕಾದ ನಿಯಮಗಳು

ನಿಯೋಗವು ತಮ್ಮ ಮನವಿಯಲ್ಲಿ ಪ್ರಮುಖವಾಗಿ ಹಳದಿ ಎಲೆ ರೋಗ ಮತ್ತು ಕೊಳೆ ರೋಗದಂತಹ ಮಾರಕ ರೋಗಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ, ಹಾಗೂ ಅಡಿಕೆ ಬೆಳೆ ಮತ್ತು ಮಾನವನ ಆರೋಗ್ಯದ ಕುರಿತು ವೈಜ್ಞಾನಿಕ ವರದಿಯನ್ನು ತುರ್ತಾಗಿ ತರಿಸಿಕೊಳ್ಳಬೇಕು ಎಂದು ಸಚಿವರಿಗೆ ಒತ್ತಾಯಿಸಿತು.

ಅಕ್ರಮ ಆಮದು ನಿಯಂತ್ರಣಕ್ಕೆ ಕಠಿಣ ಕ್ರಮಗಳಿಗೆ ಒತ್ತಾಯ

ಅಡಿಕೆಯ ಅಕ್ರಮ ಆಮದನ್ನು ತಡೆಯಲು ಕಸ್ಟಮ್ಸ್ ವ್ಯವಸ್ಥೆಯನ್ನು ಬಲಪಡಿಸುವಂತೆ ನಿಯೋಗವು ಸರ್ಕಾರವನ್ನು ಒತ್ತಾಯಿಸಿತು. ಇದರ ಜೊತೆಗೆ, ಅಕ್ರಮ ವ್ಯಾಪಾರವನ್ನು ಹತ್ತಿಕ್ಕಲು ದೊಡ್ಡ ಪ್ರಮಾಣದ ಅಡಿಕೆ ಸಾಗಣೆಗಳಿಗೆ ಜಿಪಿಎಸ್ ಟ್ರ‍್ಯಾಕಿಂಗ್ ಅಳವಡಿಸುವಂತೆ ಮತ್ತು ಅಡಿಕೆ ಆಮದು ಮಾಡುವ ಮೊದಲು ಸ್ಥಳೀಯ ಸಹಕಾರಿ ಸಂಸ್ಥೆಗಳಾದ ಕ್ಯಾಂಪ್ಕೋ, ಟಿಎಸ್‌ಎಸ್, ಮಾಮ್ಕೋಸ್ ಹಾಗೂ ಇನ್ನಿತರ ಸಂಸ್ಥೆಗಳೊoದಿಗೆ ಸಮಾಲೋಚನೆ ನಡೆಸುವಂತೆ ಮನವಿ ಮಾಡಿದರು.

ಇದನ್ನೂ ಓದಿ: 26 ಮತ್ತು 14 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿಗಳ ಬಂಧನ

ತೇವಾಂಶ ಮತ್ತು ಗುಣಮಟ್ಟದ ಮಾನದಂಡಗಳ ಪರಿಷ್ಕರಣೆ

ರೈತರಿಗೆ ಅನುಕೂಲವಾಗುವಂತೆ ಅಡಿಕೆಯಲ್ಲಿನ ತೇವಾಂಶ ಮಟ್ಟವನ್ನು ಶೇ.7 ರಿಂದ ಶೇ.11-12ಕ್ಕೆ ಹೆಚ್ಚಿಸುವಂತೆ ಎಫ್‌ಎಸ್‌ಎಸ್‌ಎಐಗೆ ಮನವಿ ಸಲ್ಲಿಸಲಾಯಿತು. ಸೂರ್ಯನ ಬೆಳಕಿನಲ್ಲಿ ಶೇ.7 ತೇವಾಂಶವನ್ನು ಕಾಯ್ದುಕೊಳ್ಳುವುದು ರೈತರಿಗೆ ಕಷ್ಟಕರ ಎಂದು ನಿಯೋಗವು ವಿವರಿಸಿತು. ಅಲ್ಲದೆ, ಭಾರತೀಯ ಮಾನದಂಡಗಳ ಬ್ಯೂರೋ (ಬಿಐಎಸ್) ನಿಗದಿಪಡಿಸಿರುವ ಅಡಿಕೆ ಗ್ರೇಡಿಂಗ್ ಮಾನದಂಡಗಳನ್ನು ಪುನರ್ ಪರಿಶೀಲಿಸಿ, ಸ್ಥಳೀಯ ಭೌಗೋಳಿಕ ವ್ಯತ್ಯಾಸಗಳನ್ನು ಗಣನೆಗೆ ತೆಗೆದುಕೊಳ್ಳುವಂತೆ ಕೋರಿದರು.

ಬೆಳೆಗಾರರಿಗೆ ಆರ್ಥಿಕ ನೆರವು ಮತ್ತು ತೆರಿಗೆ ಕಡಿತಕ್ಕೆ ಮನವಿ

ಸಹಕಾರಿ ಸಂಸ್ಥೆಗಳಿಗೆ ನೀಡುವ ಸಾಲಗಳ ಮೇಲಿನ ಬಡ್ಡಿದರ ಕಡಿಮೆ ಮಾಡಿ, ಕಾರ್ಪೊರೇಟ್‌ಗಳ ಮಾದರಿಯಲ್ಲಿ ಕ್ರೆಡಿಟ್ ರೇಟಿಂಗ್ ಅನ್ವಯಿಸದೆ ಹೊಸ ಮಾನದಂಡಗಳನ್ನು ರೂಪಿಸುವಂತೆ ನಿಯೋಗವು ಸಚಿವರನ್ನು ಒತ್ತಾಯಿಸಿತು. ಇದರಿಂದ ರೈತರಿಗೆ ಸುಲಭವಾಗಿ ಸಾಲ ದೊರೆಯಲು ಸಹಾಯವಾಗುತ್ತದೆ ಎಂದು ನಿಯೋಗ ಹೇಳಿತು.ಅಲ್ಲದೆ, ಅಡಿಕೆಗೆ ಬಳಸುವ ಕಾಪರ್ ಸಲ್ಫೇಟ್ ಮೇಲಿನ ಜಿಎಸ್‌ಟಿ ದರವನ್ನು ಶೇ.18 ರಿಂದ ಶೇ.5ಕ್ಕೆ ಮತ್ತು ಅಡಿಕೆ ಮೇಲಿನ ಜಿಎಸ್‌ಟಿ ದರವನ್ನು ಇಳಿಸುವಂತೆ ಕೋರಿಕೆ ಸಲ್ಲಿಸಲಾಯಿತು.

ಬೆಳೆ ವಿಮೆ ಮತ್ತು ಸಂಗ್ರಹಣಾ ಸೌಲಭ್ಯಗಳ ಬೇಡಿಕೆ

ಬೆಳೆ ನಷ್ಟದಿಂದ ರೈತರನ್ನು ರಕ್ಷಿಸಲು ಬೆಳೆ ವಿಮಾ ಸೌಲಭ್ಯಗಳನ್ನು ಬಲಪಡಿಸುವಂತೆ ನಿಯೋಗವು ಮನವಿ ಮಾಡಿತು. ಇದರ ಜೊತೆಗೆ, ರೈತರು ಕಡಿಮೆ ಬೆಲೆಗೆ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡುವುದನ್ನು ತಪ್ಪಿಸಲು ಸಹಕಾರಿ ಸಂಸ್ಥೆಗಳಿಗೆ ಸಬ್ಸಿಡಿ ದರದಲ್ಲಿ ಹಣಕಾಸು ಒದಗಿಸಿ ಗೋದಾಮಿನ ಸೌಲಭ್ಯಗಳನ್ನು ನಿರ್ಮಿಸಲು ನೆರವಾಗುವಂತೆ ಕೋರಲಾಯಿತು.

ಇತರೆ ಪ್ರಮುಖ ಬೇಡಿಕೆಗಳು

ಅಮೆರಿಕಾದಲ್ಲಿ ಅಡಿಕೆ ಎಲೆಗಳಿಂದ ಮಾಡಿದ ಬಯೋಡಿಗ್ರೇಡಬಲ್ ಪ್ಲೇಟ್‌ಗಳನ್ನು ಕ್ಯಾನ್ಸರ್-ಕಾರಕ ಎಂದು ಘೋಷಿಸಿರುವುದರಿಂದ ಉಂಟಾದ ರಫ್ತು ಸಮಸ್ಯೆಗಳನ್ನು ಬಗೆಹರಿಸಲು ವೈಜ್ಞಾನಿಕ ಅಧ್ಯಯನ ನಡೆಸುವಂತೆ ಒತ್ತಾಯ. ಕಾರ್ಬನ್ ಫೈಬರ್ ದೋಟಿ ಮತ್ತು ಇತರೆ ಕೃಷಿ ಉಪಕರಣಗಳ ಮೇಲಿನ ಕಸ್ಟಮ್ಸ್ ಸುಂಕವನ್ನು ಕಡಿಮೆ ಮಾಡಲು ಮನವಿ. ನಿಯೋಗದ ಎಲ್ಲಾ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು, ಎಲ್ಲಾ ವಿಷಯಗಳನ್ನು ಪರಿಶೀಲಿಸಿ ಅಡಿಕೆ ಬೆಳೆಗಾರರಿಗೆ ಅನುಕೂಲವಾಗುವಂತಹ ಕ್ರಮಗಳನ್ನು ಕೈಗೊಳ್ಳುವ ಭರವಸೆ ನೀಡಿದ್ದಾರೆ ಎನ್ನಲಾಗಿದೆ.

ಈ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಶ್ರೀ ಪ್ರಹ್ಲಾದ್ ಜೋಶಿ, ಶ್ರೀ ಎಚ್ ಡಿ ಕುಮಾರಸ್ವಾಮಿ, ಶ್ರೀ ವಿ ಸೋಮಣ್ಣ, ಸಂಸದರಾದ ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿ, ಶ್ರೀ ಗೋವಿಂದ ಕಾರಜೋಳ, ಶ್ರೀ ಕೋಟ ಶ್ರೀನಿವಾಸ್ ಪೂಜಾರಿ, ಶ್ರೀ ಬಿ ವೈ ರಾಘವೇಂದ್ರ, ಶ್ರೀ ಬ್ರಿಜೇಶ್ ಚೌಟ, ಶ್ರೀ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಶ್ರೀಮತಿ ಪ್ರಭಾ ಮಲ್ಲಿಕಾರ್ಜುನ್ ಶಾಸಕರು ಮತ್ತು ಅಡಿಕೆ ಮಹಾಮಂಡಳದ ಅಧ್ಯಕ್ಷರಾದ ಶ್ರೀ ಅರಗ ಜ್ಞಾನೇಂದ್ರ, ಕ್ಯಾಂಪ್ಕೋ ಅಧ್ಯಕ್ಷರಾದ ಕಿಶೋರ್ ಕುಮಾರ್ ಕೊಡಗಿ, ಸೇರಿದಂತೆ ಅಡಿಕೆ ಬೆಳೆಗಾರರ ವಿವಿಧ ಸಂಘಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಸಹಕಾರದ ಬೆಳಕಿನಲ್ಲಿ ಮಹತ್ವದ ಹೆಜ್ಜೆಯಿಟ್ಟ ‘ಸೂರ್ಯ’: ಹೊಸ ಶಾಖೆಗಳತ್ತ ನಾಗರಾಜ ನಾಯಕರ ದೃಷ್ಟಿ”

ಅಂಕೋಲಾ: ಅಂಕೋಲೆ ಎಂದಾಗ ಕರಿ ಇಸಾಡು ಮಾವಿನಹಣ್ಣು ನೆನಪಾದರೆ, “ಸೂರ್ಯ” ಸಹಕಾರಿ ಎಂದಾಗ ನಾಗರಾಜ ನಾಯಕ ಅರೆಗದ್ದೆ ನೆನಪಾಗುತ್ತಾರೆ. ಅದರ ಬೆನ್ನಲ್ಲೇ ರಿಯಲ್ ಎಸ್ಟೇಟ್ ಉದ್ಯಮ, ಆಯ್ಸಪ್ಲಾಂಟ್. ಸಹನಾ ಪ್ಯಾಲೇಸ್ ಲಾಡ್ಜ್,...

ಆಟೋರಿಕ್ಷಾಗೆ ಪ್ರವಾಸಿಗರಿದ್ದ ಟಿ.ಟಿ ವಾಹನ ಡಿಕ್ಕಿ : ಮಹಿಳೆಗೆ ಗಾಯ

ಅಂಕೋಲಾ: ಸಹೋದರಿಯ ಮನೆಗೆ ಬಂದು ವಾಪಸ್ ಮನೆಗೆ ಮರಳುತ್ತಿದ್ದ ಗೃಹಿಣಿ ಇದ್ದ ಆಟೋರಿಕ್ಷಾಗೆ ಪ್ರವಾಸಿಗರಿದ್ದ ಟಿ.ಟಿ ವಾಹನ ಬಡಿದ ಪರಿಣಾಮ ಮಹಿಳೆ ಗಾಯಗೊಂಡ ಘಟನೆ ಪಟ್ಟಣದ ಅರಣ್ಯ ಇಲಾಖೆ ಕಛೇರಿ ಹತ್ತಿರ...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಬಡ, ಮಧ್ಯಮವರ್ಗ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಒಟ್ಟು 3 ಕೋಟಿ ಮೌಲ್ಯದ ವಿದ್ಯಾರ್ಥಿವೇತನ

ಉಡುಪಿ: ರಾಜ್ಯದಲ್ಲೇ ಪ್ರಸಿದ್ಧ ಪಡೆದ ಉಡುಪಿ ಲಾರ್ಡ್ಸ್ ಇಂಟರ್‌ನ್ಯಾಷನಲ್ ರೆಸಿಡೆನ್ಷಿಯಲ್ ಸ್ಕೂಲ್ , ಬಡ, ಮಧ್ಯಮವರ್ಗ...

ಶತರುದ್ರ ಮತ್ತು ಶತಚಂಡಿಕಾ ಯಾಗಕ್ಕೆ ಆತ್ಮೀಯ ಸ್ವಾಗತ

ಕಾರವಾರ: ದಿವಂಗತ ಕೃಷ್ಣ ಸೈಲ್ ಹಾಗೂ ಗಿರಿಜಾ ಕೃಷ್ಣ ಸೈಲ್ ರವರ ಆರ್ಶೀವಾದದೊಂದಿಗೆ ಈ ಕ್ಷೇತ್ರದ...

ಸಹಕಾರದ ಬೆಳಕಿನಲ್ಲಿ ಮಹತ್ವದ ಹೆಜ್ಜೆಯಿಟ್ಟ ‘ಸೂರ್ಯ’: ಹೊಸ ಶಾಖೆಗಳತ್ತ ನಾಗರಾಜ ನಾಯಕರ ದೃಷ್ಟಿ”

ಅಂಕೋಲಾ: ಅಂಕೋಲೆ ಎಂದಾಗ ಕರಿ ಇಸಾಡು ಮಾವಿನಹಣ್ಣು ನೆನಪಾದರೆ, “ಸೂರ್ಯ” ಸಹಕಾರಿ ಎಂದಾಗ ನಾಗರಾಜ ನಾಯಕ...

ಆಟೋರಿಕ್ಷಾಗೆ ಪ್ರವಾಸಿಗರಿದ್ದ ಟಿ.ಟಿ ವಾಹನ ಡಿಕ್ಕಿ : ಮಹಿಳೆಗೆ ಗಾಯ

ಅಂಕೋಲಾ: ಸಹೋದರಿಯ ಮನೆಗೆ ಬಂದು ವಾಪಸ್ ಮನೆಗೆ ಮರಳುತ್ತಿದ್ದ ಗೃಹಿಣಿ ಇದ್ದ ಆಟೋರಿಕ್ಷಾಗೆ ಪ್ರವಾಸಿಗರಿದ್ದ ಟಿ.ಟಿ...

ಶಾಲಾ ಮಕ್ಕಳ ಬಸ್ ಪಲ್ಟಿ: ವಿದ್ಯಾರ್ಥಿ ಸಾವು

ಹೊನ್ನಾವರ: ಗೇರುಸೊಪ್ಪ ಸುಳೆಮುರ್ಕಿ ಕ್ರಾಸ್ ಹತ್ತಿರ ಶಾಲಾಮಕ್ಕಳ ಪ್ರವಾಸಿ ಬಸ್ ಪಲ್ಟಿಯಾಗಿ, ವಿಧ್ಯಾರ್ಥಿ ಸಾವನಪ್ಪಿರುವ ಘಟನೆ...

ಆಯಕಟ್ಟಿನ ಪ್ರದೇಶದಲ್ಲಿರುವ 8 ಗುಂಟೆ ಜಾಗ ಮಾರಾಟಕ್ಕಿದೆ

ಅಂಕೋಲಾ: ತಾಲೂಕಿನ ಬಳಲೆಯಲ್ಲಿ ಅತ್ಯುತ್ತಮ ಸೌಕರ್ಯ ಹೊಂದಿರುವ, ಆಯಕಟ್ಟಿನ ಪ್ರದೇಶದಲ್ಲಿರುವ NA ಆದ ಜಾಗ ಮಾರಾಟಕ್ಕಿದೆ....

ಕುಮಟಾದ ಬ್ರೌನ್ಸ್ ವಿಲೇಜ್ ಫ್ಯಾಮಿಲಿ ಗಾರ್ಡನ್ ರೆಸ್ಟೋರೆಂಟ್ ನಲ್ಲಿ ಖ್ಯಾತ ಕಲಾವಿದರಿಂದ ಲೈವ್ ಮ್ಯೂಜಿಕ್ ನೋಡುತ್ತಾ ರುಚಿ-ಶುಚಿಯಾದ ಆಹಾರ ಸವಿಯುವ ಅವಕಾಶ

ಕುಮಟಾ: ಬ್ರೌನ್ಸ್ ವಿಲೇಜ್ ಫ್ಯಾಮಿಲಿ ಗಾರ್ಡನ್ ರೆಸ್ಟೋರೆಂಟ್ ಕುಮಟಾ, ಇದು ಉತ್ತರಕನ್ನಡ ಜಿಲ್ಲೆಯ ಅತ್ಯುತ್ತಮ ಫ್ಯಾಮಿಲಿ...