Important

ಸಿನೆಮಾ ಶೈಲಿಯಲ್ಲಿ ಹಣ ಸುಲಿಗೆ ಯತ್ನ : ಖಾಕಿ ಬಲೆಗೆ ಬಿದ್ದ ಆರೋಪಿಗಳು

Share
  • ತರಕಾರಿ ವ್ಯಾಪಾರಿಗೆ 20 ಲಕ್ಷಕ್ಕೆ ಬೇಡಿಕೆ
  • ಬ್ಲಾಕ್ ಮೇಲ್ ಮಾಡಿದ್ದು ಯಾಕೆ?
  • ಮೂವರು ಯುವಕರ ಬಂಧನ

ಭಟ್ಕಳ, ಆಗಸ್ಟ್ 24: ಉಪ್ಪು ತಿಂದವನು ನೀರು ಕುಡಿಯಲೇ ಬೇಕು ಎಂಬ ಗಾದೆ ಮಾತಿದೆ. ಆ ಮಾತಿಗೆ ಅನ್ವರ್ಥಕವಾಗಿ ಭಟ್ಕಳ ತಾಲೂಕಿ ಪ್ರಸಿದ್ಧ ತರಕಾರಿ ವ್ಯಾಪಾರಿಯೊಬ್ಬರಿಗೆ ಮಗಳ ಖಾ-ಸಗಿ ವಿಡಿಯೋ ಇದೆ ಎಂದು ಬೆದರಿಸಿ ಇಡೀ ಕುಟುಂಬವನ್ನು ಸತತ ಎಂಟು ದಿನಗಳವರೆಗೆ ಕಾಡಿದ ಚೋರರ ಗ್ಯಾಂಗ್ ನ್ನು ಹೆಡೆಮುರಿ ಕಟ್ಟಲು ಶಹರಾ ಠಾಣೆಯ ಪೋಲಿಸರು ಯಶಸ್ವಿಯಾಗಿದ್ದಾರೆ. ಹೌದು, ನಿವಿಲ್ಲಿ ನೋಡ್ತಾ ಮೋಹಮ್ಮದ್ ಫಾರಿಶ್, ಮೊಹಮ್ಮದ್ ಅರ್ಶದ್, ಅಮನ್ ಮಸೂದ್ ಎಂಬ ಖದೀಮರನ್ನ.

ಪ್ರಕರಣದ ವಿವರ

ಆಗಸ್ಟ್ 16, 2025 ರಂದು, ಅನ್ವರ್ ಭಾಷಾ ಎಂಬ ಪ್ರಸಿದ್ಧ ತರಕಾರಿ ವ್ಯಾಪಾರಿಗೆ, ಮೂವರು ಆರೋಪಿಗಳು ಫೋನ್ ಮಾಡಿ – “ನಿನ್ನ ಮಗಳ ಖಾ-ಸಗಿ ಫೋಟೋ ಮತ್ತು ವಿಡಿಯೋ ನಮ್ಮ ಹತ್ತಿರ ಇದೆ. 20 ಲಕ್ಷ ರೂ. ಕೊಡದಿದ್ದರೆ ಎಲ್ಲರಿಗೂ ಹಂಚುತ್ತೇವೆ” ಎಂದು ಬೆದರಿಕೆ ಹಾಕಿದರು. ಇದಾದ ಎರಡು ದಿನಗಳ ನಂತರ (ಆಗಸ್ಟ್ 18), ಅದೇ ಗ್ಯಾಂಗ್ ವ್ಯಾಪಾರಿಯ ಪತ್ನಿಗೆ ಕರೆ ಮಾಡಿ 15 ಲಕ್ಷ ರೂ. ಬೇಡಿಕೆ ಇಟ್ಟಿತು. ಕುಟುಂಬ ಭಯಗೊಂಡು ತಕ್ಷಣವೇ ಭಟ್ಕಳ ಶಹರಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿತು.

ಪೊಲೀಸರ ಕಾರ್ಯಚರಣೆ

ಪ್ರಕರಣ ಗಂಭೀರವೆಂದು ಪರಿಗಣಿಸಿದ ಪೊಲೀಸರು, ವೃತ್ತ ನಿರೀಕ್ಷಕ ದಿವಾಕರ ಪಿ.ಎಮ್. ಅವರ ಮಾರ್ಗದರ್ಶನದಲ್ಲಿ, ಪಿಎಸ್‌ಐ ನವೀನ್ ಎಸ್ ನಾಯ್ಕ ಅವರ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಯಿತು. ಮೊದಲ ಹಂತದ ಕಾರ್ಯಾಚರಣೆಯಲ್ಲಿ ಆರೋಪಿ ಗ್ಯಾಂಗ್ ಸಿನಿಮಿಯ ಮಾದರಿಯಲ್ಲಿ ತಪ್ಪಿಸಿಕೊಂಡರೂ, ದ್ವಿತೀಯ ಹಂತದಲ್ಲಿ ಪೊಲೀಸರು ಅವರನ್ನು ಬಲೆಗೆ ಬೀಸಿ ಬಂಧಿಸಿದರು. ನಂತರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಯಿತು.

ಖಾಕಿ ಬಲೆಗೆ ಬಿದ್ದ ಭಟ್ಕಳದ ಸುಲಿಗೆಕೋರರ ಗ್ಯಾಂಗ್

ಮೊದಲ ಹಂತದ ಕಾರ್ಯಾಚರಣೆಯಲ್ಲಿ ಆರೋಪಿ ಗ್ಯಾಂಗ್ ಸಿನಿಮಿಯ ಮಾದರಿಯಲ್ಲಿ ತಪ್ಪಿಸಿಕೊಂಡರೂ, ದ್ವಿತೀಯ ಹಂತದಲ್ಲಿ ಪೊಲೀಸರು ಅವರನ್ನು ಬಲೆಗೆ ಬೀಸಿ ಬಂಧಿಸಿದರು. ನಂತರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಯಿತು. ಕೆಲಸ ಕಾರ್ಯ ಮಾಡಿಕೊಳ್ಳದೆ ಊರೂರು ಸುತ್ತುತ್ತಿದ್ದ 20 ವರ್ಷ ಪ್ರಾಯದ ಅಬ್ಬುಹುರೇರಾ ಕಾಲೊನಿ ನಿವಾಸಿ ಮೊಹಮ್ಮದ ಫಾರಿಸ್ ತಂದೆ ಅಬ್ದುಲ್ ಮುತಲ್ಲಬ್, ಗುತ್ತಿಗೆ ಕೆಲಸ ಮಾಡಿಕೊಂಡಿದ್ದ ಮೂಸಾನಗರ ನಿವಾಸಿ 22 ವರ್ಷ ಪ್ರಾಯದ ಮೊಹಮ್ಮದ ಅರ್ಶದ ತಂದೆ ಮೊಹಮ್ಮದ ಜುಬೇರ್ ಬ್ಯಾರಿ, ಇಂಜಿನಿಯರಿಂಗ್ ವಿದ್ಯಾರ್ಥಿ ಹಾಲಾಡಿ ಜನತಾ ಕಾಲೊನಿಯ 20 ವರ್ಷದ ಅಮನ್ ತಂದೆ ಮಸೂದ ಖಾನ್ ನನ್ನು ಬಂಧಿಸುವಲ್ಲಿ ಪೋಲಿಸರು ಯಶಸ್ವಿಯಾಗಿದ್ದು ಆರೋಪಿತರಿಗೆ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.

ಇತ್ತೀಚಿನ ದಿನಗಳಲ್ಲಿ ಉದ್ಯಮಿಗಳು ಮತ್ತು ಹಣವಂತರ ವಿರುದ್ಧ ಸುಲಿಗೆ ಪ್ರಯತ್ನಗಳು ಹೆಚ್ಚಾಗುತ್ತಿವೆ. ಜನರು ಇಂತಹ ಕರೆಗಳು ಬಂದಾಗ ತಕ್ಷಣ ಪೊಲೀಸರ ನೆರವು ಪಡೆಯುವುದು ಅತಿ ಅಗತ್ಯ ಎಂದು ಪೊಲೀಸ್ ಇಲಾಖೆ ಎಚ್ಚರಿಕೆ ನೀಡಿದೆ.

ವಿಸ್ಮಯ ನ್ಯೂಸ್, ಈಶ್ವರ್ ನಾಯ್ಕ, ಭಟ್ಕಳ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಸಮುದ್ರ ದಡಕ್ಕೆ ಬರುತ್ತಿರುವೆ ರಾಶಿ ರಾಶಿ ಜೀವಂತ ಮೀನುಗಳು: ಮುಗಿಬಿದ್ದು ಚೀಲಗಳಲ್ಲಿ ತುಂಬಿಸಿಕೊಳ್ಳುತ್ತಿರುವ ಸ್ಥಳೀಯರು

ಇಲ್ಲಿನ ಸಮುದ್ರ ತೀರದಲ್ಲಿ ಬಲೆ ಬೀಸಬೇಕೆಂದಿಲ್ಲ, ಆದರೂ ನೀವು ರಾಶಿ ರಾಶಿ ಜೀವಂತ ಮೀನುಗಳನ್ನು ಬಾಚಿ ತರಬಹುದು,ಇಂತಹದೊoದು ಪ್ರಕೃತಿ ವಿಸ್ಮಯ ನಡೆದದ್ದು ದೂರದಲ್ಲೆಲ್ಲೋ ಅಲ್ಲ, ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ...

ಅಂಕೋಲಾ ಉಪನೋಂದಣಾಧಿಕಾರಿಗಳ ಕಚೇರಿಗೆ ಸರ್ಚ್ ವಾರೆಂಟ್ ಮೇಲೆ ಬಂದ ಲೋಕಾಯುಕ್ತರ ತಂಡ : ಯಾಕೆ ನೋಡಿ?

ಅಂಕೋಲಾ‌ : ಇಲ್ಲಿನ ಉಪನೋಂದಣಾಧಿಕಾರಿಗಳ ಕಚೇರಿಯಲ್ಲಿ ದಸ್ತಾವೇಜು ನೋಂದಣಿ ಮುಂತಾದ ಕೆಲಸಗಳಲ್ಲಿ ಅನಗತ್ಯ ವಿಳಂಬ ಮತ್ತು ಏಜೆಂಟರ ಹಾವಳಿ ಹೆಚ್ಚಾಗಿರುವ ಕುರಿತು ಸಾರ್ವಜನಿಕರಿಂದ ಆರೋಪಗಳು ಕೇಳಿಬಂದಿದ್ದ ಹಿನ್ನೆಲೆಯಲ್ಲಿ ಗುರುವಾರ ಲೋಕಾಯುಕ್ತ ಅಧಿಕಾರಿಗಳು...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಅಂಕೋಲಾ ಕರಾವಳಿ ಉತ್ಸವ 2025 : ನವೆಂಬರ್ 5 ರಿಂದ 10ರ ವರೆಗೆ ಸಾಂಸ್ಕೃತಿಕ ವೈಭವ

ಅಂಕೋಲಾ: ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಹೊಂದಿರುವ ಅಂಕೋಲಾ ತಾಲೂಕಿನಲ್ಲಿ ಅಂಕೋಲಾ ಸಾಂಸ್ಕೃತಿಕ ಕಲಾಬಳಗ ಉತ್ತರ ಕನ್ನಡ ಸಂಘಟನೆಯ...

ಅಂಕೋಲಾದ ನಾಡವರ ಸಮುದಾಯ ಭವನದಲ್ಲಿ ಬೃಹತ್ ಆಹಾರ ಮತ್ತು ಸ್ವದೇಶೀ ಮೇಳ: ಅಕ್ಟೋಬರ್ 7, 8,9 ರಂದು ಆಯೋಜನೆ

ಅಂಕೋಲಾ : ರಾಘವೇಂದ್ರ ಇವೆಂಟ್ಸ್ ಅಂಕೋಲಾ ಹಾಗೂ ಬೆನಕ ಇವೆಂಟ್ಸ್ ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ...

ಸೇವಾಪರ್ವ ವಿಕಸಿತ ಭಾರತ ವಿಷಯಾಧಾರಿತ ಪೇಟಿಂಗ್ ಸ್ಪರ್ಧೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ದರ್ಶನ ನಾಯ್ಕ

ಭಟ್ಕಳ: ಕೇಂದ್ರ ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ತಂಜಾವೂರು ದಕ್ಷಿಣ ವಲಯ ಸಾಂಸ್ಕೃತಿಕ ಕೇಂದ್ರ ವಿಕ್ಷಿತ್ ಭಾರತ್...

ಸಮುದ್ರ ದಡಕ್ಕೆ ಬರುತ್ತಿರುವೆ ರಾಶಿ ರಾಶಿ ಜೀವಂತ ಮೀನುಗಳು: ಮುಗಿಬಿದ್ದು ಚೀಲಗಳಲ್ಲಿ ತುಂಬಿಸಿಕೊಳ್ಳುತ್ತಿರುವ ಸ್ಥಳೀಯರು

ಇಲ್ಲಿನ ಸಮುದ್ರ ತೀರದಲ್ಲಿ ಬಲೆ ಬೀಸಬೇಕೆಂದಿಲ್ಲ, ಆದರೂ ನೀವು ರಾಶಿ ರಾಶಿ ಜೀವಂತ ಮೀನುಗಳನ್ನು ಬಾಚಿ...

ಪ್ರತಿಷ್ಠಿತ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನಿಯಮಿತ ಹೊನ್ನಾವರ ಇದರ ವಾರ್ಷಿಕ ಸರ್ವ ಸಾಧಾರಣ

ಹೊನ್ನಾವರ : ಇಲ್ಲಿನ ಪ್ರತಿಷ್ಠಿತ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನಿಯಮಿತ...

ಮಾನವೀಯತೆಯ ದೀಪ ಬೆಳಗಿಸಿದ ನೇತ್ರದಾನಿ ಕೃಷ್ಣ ನಾಯ್ಕ ಅಮರ

ಕುಮಟಾ : ತಾಲೂಕಿನ ಧಾರೇಶ್ವರ ಹೋಬಳಿ ಹರನೀರು ತುದಿಮನೆ ನಿವಾಸಿ ಕೃಷ್ಣ ನಾರಾಯಣ ನಾಯ್ಕ (77...

ಬಸ್ ಗೆ ಡಿಕ್ಕಿ ಹೊಡೆದ ಲಾರಿ : ಸ್ಟೇರಿಂಗ್ ಮಧ್ಯ ಸಿಲುಕಿದ ಲಾರಿ ಚಾಲಕ ಸಾವು: ಬಸ್ಸಿನಲ್ಲಿದ್ದ ಓರ್ವ ಪ್ರಯಾಣಿಕ ಸ್ಥಳದಲ್ಲಿಯೇ ನಿಧನ

ಅಂಕೋಲಾ: ಟ್ಯಾಂಕರ್ ಲಾರಿ ಮತ್ತು ಸಾರಿಗೆ ಸಂಸ್ಥೆಯ ಬಸ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ...

ಹೃದಯದಾಕಾರದ ಮುಖದ ಗೂಬೆ: ಶಾಲೆಗೆ ಬಂತು ಗುಮ್ಮ

ಅಂಕೋಲಾ: ಮಕ್ಕಳು ಊಟ, ತಿಂಡಿ, ನಿದ್ದೆ ಸರಿಯಾಗಿ ಮಾಡದಿದ್ದರೆ ಅಥವಾ ಬೇರೆ ಕಾರಣದಿಂದ ಹಠ ಹಿಡಿದರೆ...