ಭಟ್ಕಳ: ತಾಲೂಕಿನ ಜಾಲಿ ಕ್ರಾಸ್ ಬಳಿ
ಭೀಕರ ಬೆಂಕಿ ಅವಘಡ ಸಂಭವಿಸಿ, ಇಪ್ತಿಕಾರ್ ಮೋಹಿದೀನ್ ಮಾಲಕತ್ವದ “ತಾಸಿನ್ ಫ್ರೂಟ್ಸ್ & ವೆಜಿಟೇಬಲ್ಸ್” ಹೋಲ್ಸೇಲ್ ಅಂಗಡಿ ಭಸ್ಮವಾದ ಘಟನೆ ನಡೆದಿದೆ.
ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಕೆಲವೇ ನಿಮಿಷಗಳಲ್ಲಿ ಅಂಗಡಿ ಕೆನ್ನಾಲಿಗೆಗೆ ಸಿಕ್ಕಿ ಬಾರಿ ಮೌಲ್ಯದ ಹಣ್ಣು–ತರಕಾರಿ ಹಾಗೂ ಇತರ ಸಾಮಗ್ರಿಗಳು ಸುಟ್ಟುಹೋದವು.
ಘಟನಾ ಸ್ಥಳಕ್ಕೆ ಧಾವಿಸಿದ ಭಟ್ಕಳ ಅಗ್ನಿಶಾಮಕ ದಳ ಬೆಂಕಿ ನಂದಿಸಲು ಹರಸಾಹಸ ಪಟ್ಟರೂ ಬೆಂಕಿ ತಿವೃತೆಗೆ ನಂದಿಸಲು ಕಷ್ಟ ಸಾಧ್ಯವಾಯಿತು. ಬಳಿಕ ಹೊನ್ನಾವರ ಮತ್ತು ಬೈಂದೂರು ಅಗ್ನಿಶಾಮಕ ವಾಹನಗಳು ಸಹ ಸ್ಥಳಕ್ಕೆ ಧಾವಿಸಿ, ಜಂಟಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಯಿತು.
ಸ್ಥಳಕ್ಕೆ ತಹಶೀಲ್ದಾರ ನಾಗೇಂದ್ರ ಕೋಳಶೆಟ್ಟಿ ಹಾಗೂ ಹೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ವಿಸ್ಮಯ ನ್ಯೂಸ್, ಈಶ್ವರ್ ನಾಯ್ಕ, ಭಟ್ಕಳ