Big News

ಸರ್ಕಾರಿ ಇಲಾಖೆಯ ಕಟ್ಟಡದ ಇಕ್ಕಟ್ಟಾದ ಗೋಡೆಗಳ ಮಧ್ಯೆ ಪತ್ತೆಯಾದ ಸೂಟ್ ಕೇಸ್ ! ? ಕೊನೆಗೂ ಸೂಟ್ಕೇಸ್ ರಹಸ್ಯ

Share

ಅಂಕೋಲಾ, ಆಗಸ್ಟ್ 26 : ಸರ್ಕಾರಿ ಇಲಾಖೆ ಒಂದರ ಕಟ್ಟಡದ ಗೋಡೆಗಳ ನಡುವಿನ ಇಕ್ಕಟ್ಟಾದ ಸ್ಥಳದಲ್ಲಿ ಯಾರೋ ತಂದಿಟ್ಟು ಹೋಗಿದ್ದರೆನ್ನಲಾದ ಸೂಟ್ ಕೇಸ್ ಒಂದು ಪಟ್ಟಣ ವ್ಯಾಪ್ತಿಯಲ್ಲಿ ಕೆಲಕಾಲ ಆತಂಕ ಸೃಷ್ಟಿಸಿದ್ದಲ್ಲದೇ,ಸೂಟ್ಕೇಸ್ ನಲ್ಲಿ ಏನಿರಬಹುದೆಂಬ ಕುತೂಹಲವು ಹಲವರಲ್ಲಿ ಮೂಡುವಂತಾಗಿತ್ತು.

ಅಂಕೋಲಾ ಪಟ್ಟಣ ವ್ಯಾಪ್ತಿಯ ಬಸ್ ನಿಲ್ದಾಣದ ಅತಿ ಹತ್ತಿರದಲ್ಲಿರುವ ಪಂಚಾಯತ ರಾಜ್ ಇಂಜಿನಿಯರಿಂಗ್ ಉಪ ವಿಭಾಗಕ್ಕೆ ಸಂಬಂಧಿಸಿದ ಕಛೇರಿಯ ಗೋಡೆ ಮತ್ತು ಪಕ್ಕದ ಇನ್ನೊಂದು ಕಟ್ಟಡದ ಗೋಡೆಗಳ ಮಧ್ಯೆ ಇಕ್ಕಟ್ಟಾದ ಸ್ಥಳದಲ್ಲಿ ಅದ್ಯಾರೋ ಎಂದೋ ಇಟ್ಟು ಹೋಗಿದ್ದ ಸೂಟ್ ಕೇಸ್ ನ್ನು ಆಗಸ್ಟ್ 26 ರ ಮಂಗಳವಾರ ಬೆಳಿಗ್ಗೆ ಗಮನಿಸಿದ ಸ್ಥಳೀಯರು ಪೊಲೀಸ್ ಇಲಾಖೆಗೆ ಮಾಹಿತಿ ನೀಡಿದ್ದಾರೆ.

ಹಾಗಾದರೆ ಈ ಸೂಟ್ ಕೇಸಿನಲ್ಲಿ ಹಣದ ಕಂತೆ ಕಂತೆಗಳಿರಬಹುದೇ? ಬಾಂಬ್ ಮತ್ತಿತರ ಸ್ಪೋಟಕಗಳಿರಬಹುದೇ ? ಅಥವಾ ಇನ್ನೇನಿರಬಹುದು ? ತಂದಿಟ್ಟವರಾರು ಎಂಬಿತ್ಯಾದಿ ಪ್ರಶ್ನೆಗಳು ಸಾರ್ವಜನಿಕ ವಲಯದಿಂದ ಕೇಳಿ ಬರುವಂತಾಗಿ, ಸೂಟಕೇಸ್ ಸುತ್ತ ಅನುಮಾನದ ಹುತ್ತ ಬೆಳೆವಂತಾಗಿ ,ಒಬ್ಬೊಬ್ಬರು ಒಂದೊಂದು ರೀತಿ ಮಾತಾಡುತ್ತಾ, ಪಟ್ಟಣದಲ್ಲಿ ಕೆಲ ಕಾಲ ಕೆಲವರಲ್ಲಿ ಆತಂಕ ಮೂಡುವಂತಾದರೆ, ಇನ್ನು ಕೆಲವರು ಮುಂದೇನಾಗಬಹುದು ಎಂದು ಕುತೂಹಲದಿಂದ ಕಾದು ಕುಳಿತಂತಿತ್ತು.

ಇದನ್ನೂ ಓದಿ: ಭಟ್ಕಳದಲ್ಲಿ ಬೆಂಕಿ ಅನಾಹುತ

ಕೂಡಲೇ ಸ್ಥಳಕ್ಕೆ ಬಂದ ಅಂಕೋಲಾ ಪೊಲೀಸರು , ಸೂಟ್ ಕೇಸ್ ಇರುವ ಸ್ಥಳ ಪರಿಶೀಲಿಸಿ, ಕಾರವಾರದ ಎ ಎಸ್ ಸಿ ಟೀಮ್ ಗೆ ಕರೆ ಮಾಡಿದ್ದಲ್ಲದೇ , ತನಿಖೆ ಮತ್ತು ಸುರಕ್ಷತೆ ದೃಷ್ಟಿಯಿಂದ ಸೂಟಕೇಸ್ ಪತ್ತೆಯಾದ ಸ್ಥಳದ ಸುತ್ತ ಸಾರ್ವಜನಿಕ ಪ್ರವೇಶ ನಿರ್ಭಂಧಿಸಿದ್ದರು. ಕೆಲ ಹೊತ್ತಿನಲ್ಲೇ ಕಾರವಾರದಿಂದ ಅಂಕೋಲಾಕ್ಕೆ ಬಂದಿಳಿದ ವಿಧ್ವಂಸಕ ಕೃತ್ಯ ತಪಾಸಣಾ ತಂಡದವರು, ಶ್ವಾನ ದಳ ಸಮೇತ ತಪಾಸಣಾ ಕಾರ್ಯ ಶುರು ಹಚ್ಚಿಕೊಂಡಿದ್ದಾರೆ. ಸೂಟ್ ಕೇಸ್ ಇದ್ದ ಸ್ಥಳಗಳನ್ನು ಡಿಟೆಕ್ಟರ್ ಬಳಸಿ, ಶ್ವಾನ ದಳದೊಂದಿಗೆ ತೀವೃ ತಪಾಸಣೆಗೊಳಪಡಿಸಿ, ಬಳಿಕ ಇಕ್ಕಟ್ಟಾದ ಜಾಗದಿಂದ ಹಗ್ಗ ಬಳಿಸಿ ನಿಧಾನವಾಗಿ ಹೊರಗಡೆ ಎಳೆದು ತಂದಿದ್ದಾರೆ.

ಈ ವೇಳೆ ಅಲ್ಲಿ ನೆರೆದ ಕೆಲವರಲ್ಲಿ ಸೂಟ್ ಕೇಸಿನಲ್ಲಿ ಏನಿರಬಹುದು ಎಂಬ ಆತಂಕ ಒಂದೆಡೆಯಾದರೆ,ಇನ್ನೊಂದೆಡೆ ಕುತೂಹಲವು ಮೂಡಿದಂತಿತ್ತು. ಅಂತೂ ಇಂತೂ ನಿಧಾನವಾಗಿ ಸೂಟಕೇಸ್ ತೆರೆದು ನೋಡಿದರೆ ಅದರ ಒಳಗಡೆ ಬಟ್ಟೆ ಬರೆಗಳು, ಔಷಧಿ – ಮಾತ್ರೆ ಪೊಟ್ಟಣ, ಮತ್ತಿತರ ವಸ್ತುಗಳು ಕಂಡುಬಂದಿದ್ದಲ್ಲದೇ ಭಾವಚಿತ್ರ ಸಹಿತ ಬ್ಯಾಂಕ್ ಪಾಸ್ ಬುಕ್ , ಚೆಕ್ ಬುಕ್ ಮತ್ತಿತರ ದಾಖಲೆ ಪತ್ರಗಳು ಸಿಗುವ ಮೂಲಕ ಸ್ಥಳೀಯರಲ್ಲಿ ಕೆಲ ಕಾಲ ಮೂಡಿದ್ದ ಆತಂಕ ಮರೆಯಾದಂತಾಗಿದೆ.

ದಾಖಲಾತಿಗಳಲ್ಲಿ ಯಲ್ಲಾಪುರ ಮೂಲದ ಒರ್ವ ರ ವಿಳಾಸ ಪತ್ತೆಯಾಗಿದ್ದು , ಪೊಲೀಸರು ಅಲ್ಲಿರುವ ಫೋನ್ ನಂಬರಿಗೆ ಸಂಪರ್ಕಿಸಿದರೆ ದೂರದ ದಾವಣಗೆರೆ ಅಥವಾ ಇನ್ನೆಲ್ಲಿಯವರೋ ಕರೆ ಸ್ವೀಕರಿಸಿದರು ಎನ್ನಲಾಗಿದ್ದು,ವಿಳಾಸ ಖಚಿತಪಡಿಸಿಕೊಳ್ಳಲು ಮತ್ತು ಸೂಟ್ ಕೇಸ್ ಬಿಟ್ಟವರಾರು,ಮತ್ತು ಯಾಕೆ ಇಟ್ಟು ಹೋಗಿದ್ದರು ಎನ್ನುವ ಕುರಿತು ಪೊಲೀಸ್ ತನಿಕೆಯಿಂದ ಹೆಚ್ಚಿನ ಮಾಹಿತಿಗಳು ತಿಳಿದು ಬರಬೇಕಿದೆ.

ಸರಕಾರಿ ಇಲಾಖೆ ಬಳಿ ಪತ್ತೆಯಾದ ಸೂಟ್ಕೇಸಿನಲ್ಲಿ ಕಂತೆ ಕಂತೆ ನೋಟುಗಳಿರಬಹುದೇ,ಬಾ ಮತ್ತಿತರ ಸ್ಪೋಟಕ ವಸ್ತುಗಳಿರಬಹುದೇ ಎಂಬ ಪ್ರಶ್ನೆಗಳಿಗೆ ಸಿಪಿಐ ಚಂದ್ರಶೇಖರ್ ಮಠಪತಿ ನೇತೃತ್ವದಲ್ಲಿ ವಿದ್ವಂಸಕ ಕೃತ್ಯ ತಪಾಸಣ ತಂಡ ಮತ್ತು ಪೊಲೀಸ್ ಸಿಬ್ಬಂದಿಗಳ ಕಾರ್ಯಾಚರಣೆಯಿಂದ ಉತ್ತರ ದೊರೆಯುವ ಮೂಲಕ ಸ್ಥಳೀಯರ ಆತಂಕವೂ ದೂರವಾದಂತಿದೆ.

ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಸಮುದ್ರ ದಡಕ್ಕೆ ಬರುತ್ತಿರುವೆ ರಾಶಿ ರಾಶಿ ಜೀವಂತ ಮೀನುಗಳು: ಮುಗಿಬಿದ್ದು ಚೀಲಗಳಲ್ಲಿ ತುಂಬಿಸಿಕೊಳ್ಳುತ್ತಿರುವ ಸ್ಥಳೀಯರು

ಇಲ್ಲಿನ ಸಮುದ್ರ ತೀರದಲ್ಲಿ ಬಲೆ ಬೀಸಬೇಕೆಂದಿಲ್ಲ, ಆದರೂ ನೀವು ರಾಶಿ ರಾಶಿ ಜೀವಂತ ಮೀನುಗಳನ್ನು ಬಾಚಿ ತರಬಹುದು,ಇಂತಹದೊoದು ಪ್ರಕೃತಿ ವಿಸ್ಮಯ ನಡೆದದ್ದು ದೂರದಲ್ಲೆಲ್ಲೋ ಅಲ್ಲ, ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ...

ಅಂಕೋಲಾ ಉಪನೋಂದಣಾಧಿಕಾರಿಗಳ ಕಚೇರಿಗೆ ಸರ್ಚ್ ವಾರೆಂಟ್ ಮೇಲೆ ಬಂದ ಲೋಕಾಯುಕ್ತರ ತಂಡ : ಯಾಕೆ ನೋಡಿ?

ಅಂಕೋಲಾ‌ : ಇಲ್ಲಿನ ಉಪನೋಂದಣಾಧಿಕಾರಿಗಳ ಕಚೇರಿಯಲ್ಲಿ ದಸ್ತಾವೇಜು ನೋಂದಣಿ ಮುಂತಾದ ಕೆಲಸಗಳಲ್ಲಿ ಅನಗತ್ಯ ವಿಳಂಬ ಮತ್ತು ಏಜೆಂಟರ ಹಾವಳಿ ಹೆಚ್ಚಾಗಿರುವ ಕುರಿತು ಸಾರ್ವಜನಿಕರಿಂದ ಆರೋಪಗಳು ಕೇಳಿಬಂದಿದ್ದ ಹಿನ್ನೆಲೆಯಲ್ಲಿ ಗುರುವಾರ ಲೋಕಾಯುಕ್ತ ಅಧಿಕಾರಿಗಳು...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ವರ್ಷಾಂತ್ಯಕ್ಕೆ 12 ಲಕ್ಷ ಲಾಭ ಗಳಿಸಿದ ಸೀತಾರಾಮ ಸಹಕಾರಿ ಸಂಘ

ಭಟ್ಕಳ: ಆರ್ಥಿಕ ವರ್ಷಾಂತ್ಯಕ್ಕೆ ಸಹಕಾರಿಯು 12 ಲಕ್ಷ ಲಾಭ ಗಳಿಸಿದೆ ಎಂದು ಶ್ರೀ ಸೀತಾರಾಮ ಸೌಹಾರ್ಧ...

ಬೈಕಿಗೆ ಡಿಕ್ಕಿ ಹೊಡದ ಲಾರಿ: ಸ್ಥಳದಲ್ಲಿಯೇ ಬೈಕ್ ಸವಾರ ದುರ್ಮರಣ: ಹಿಟ್ & ರನ್ ಕೇಸ್ ದಾಖಲು

ಯಲ್ಲಾಪುರ: ಬೈಕಿಗೆ ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು ಹಿಂಬದಿ ಸವಾರ ತೀವ್ರವಾಗಿ...

ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿಟ್ಟಿದ್ದ ಬೈಕ್ ಕಳ್ಳತನ : ಆರೋಪಿ ಬಂಧನ

ಅಂಕೋಲಾ: ಪಟ್ಟಣದಲ್ಲಿ ನಿಲ್ಲಿಸಿಟ್ಟ ಮೋಟಾರ್ ಬೈಕ್ ಕಳ್ಳತನ ಮಾಡಿದ್ದ ಆರೋಪಿತನನ್ನು ಅಂಕೋಲಾ ಪೊಲೀಸರು ವಾಹನ ಸಮೇತ...

ರಾಷ್ಟ್ರೀಯ ಮೆಗಾ ಲೋಕ ಅದಾಲತ್ ನಲ್ಲಿ ಒಟ್ಟೂ 167 ಪ್ರಕರಣಗಳು ರಾಜೀ ಸಂಧಾನದಲ್ಲಿ ಇತ್ಯರ್ಥ

ಅಂಕೋಲಾ: ತಾಲೂಕಿನ ನ್ಯಾಯಾಲಯಗಳ ಸಂಕೀರ್ಣದಲ್ಲಿ ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮ ಸೆ 13 ರ ಶನಿವಾರ...

ಮೂರೂರಿನ ಪ್ರಗತಿ ವಿದ್ಯಾಲಯದಲ್ಲಿ ಶಿಕ್ಷಕ ದಿನಾಚರಣೆ: ಶಿಕ್ಷಕ ರಾಷ್ಟ್ರ ರಕ್ಷಕ ಕಾರ್ಯಕ್ರಮ

ಕುಮಟಾ: ತಾಯಿ ಮಗುವಿಗೆ ಜನ್ಮ ನೀಡುತ್ತಾಳೆ, ಶಿಕ್ಷಕ ಆ ಮಗುವಿಗೆ ಜ್ಞಾನ ನೀಡಿ ಕಣ್ತೆರೆಯಿಸಿ ಒಳ್ಳೆಯ...

ಭೂಮಿತಾಯಿಯ ಹೊಸ್ತಿನ ಹಬ್ಬ : ಕೃಷಿ ಮತ್ತು ಶ್ರಮ ಪ್ರಧಾನ ಸಂಸ್ಕೃತಿಯ ಪ್ರತೀಕ

ಅಂಕೋಲಾ: ಭೂಮ್ತಾಯಿ ಎಂದೇ ಪ್ರಸಿದ್ಧಿ ಪಡೆದಿರುವ ತಾಲೂಕಿನ ಹಾಗೂ ಇತರಡೆಯ ಅಸಂಖ್ಯ ಭಕ್ತರ ಪಾಲಿನ ಶಕ್ತಿ...

ಅಕ್ರಮ ಗೋಸಾಗಾಟ: 7 ಲಕ್ಷ ಮೌಲ್ಯದ ಜಾನುವಾರು ವಶಕ್ಕೆ

ಭಟ್ಕಳ: ತಾಲೂಕಿನಲ್ಲಿ ಅಕ್ರಮ ಗೋಸಾಗಾಟ ಪ್ರಕರಣ ಪದೇ ಪದೇ ಸದ್ದು ಮಾಡುತ್ತಿದ್ದು, ಬೆಳಗಿನ ಜಾವ ಗ್ರಾಮೀಣ...

ಕುಮಟಾ ಪೊಲೀಸ್ ಗಣೇಶೋತ್ಸವ ಸಂಭ್ರಮ: ನೂರಾರು ಭಕ್ತರಿಂದ ಪ್ರಸಾದ ಸ್ವೀಕಾರ

ಕುಮಟಾ: ಪಟ್ಟಣದ ಎಲ್ಲಡೆ ಸಂಭ್ರಮದಿoದ ಗಣೇಶ ಚತುರ್ಥಿಯನ್ನು ಆಚರಿಸಲಾಗಿದ್ದು ಕುಮಟಾ ಪೊಲೀಸ್ ಠಾಣೆಯ ಆರಾಧ್ಯ ದೇವರು...