ಸಿದ್ದಾಪುರದಲ್ಲಿ ಮನೆಯ ಮೆಟ್ಟಿಲುಗಳ ಮೇಲೆ ಚಿರತೆ ಓಡಾಡಿದ ದೃಶ್ಯ
Big News

ಮನೆಯ ಮೆಟ್ಟಿಲುಗಳ ಮೇಲೆ ಚಿರತೆ ಓಡಾಟ : ಗ್ರಾಮಸ್ಥರಲ್ಲಿ ಆತಂಕ

Share
  • ಚಿರತೆ ಓಡಾಟದ ದೃಶ್ಯ CCTV ಕ್ಯಾಮೆರಾದಲ್ಲಿ ಸೆರೆ
  • ಕೂಡಲೇ ಕಾರ್ಯಾಚರಣೆಗೆ ಆಗ್ರಹ
  • ಅರಣ್ಯ ಇಲಾಖೆ ವಿರುದ್ಧ ಆಕ್ರೋಶ

ಸಿದ್ದಾಪುರ: ಚಿರತೆಯೊಂದು ರಾತ್ರಿಯ ವೇಳೆ ಮನೆಯ ಸುತ್ತಮುತ್ತಲಿನ ಪ್ರದೇಶದಲ್ಲಿ ಓಡಾಡಿ ಮನೆ ಮಂದಿಯವರೆಲ್ಲ ಆತಂಕಗೊoಡ ಘಟನೆ ಸಿದ್ದಾಪುರ ತಾಲೂಕಿನ ಬೇಡ್ಕಣಿ ಸಮೀಪದ ಕುಂಬ್ರಿಗದ್ದೆಯಲ್ಲಿ ನಡೆದಿದೆ. ಇಲ್ಲಿನ ಪ್ರಶಾಂತ ನಾಯ್ಕ್ ಅವರ ಮನೆಯಲ್ಲಿ ಚಿರತೆ ಓಡಾಡಿದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸರಿಯಾಗಿದೆ. ಮನೆಯ ಮೆಟ್ಟಿಲುಗಳ ಮೇಲೆ ಚಿರತೆ ಓಡಾಡಿದ್ದು, ಕುಟುಂಬಸ್ಥರು ಮತ್ತು ಸುತ್ತಮುತ್ತಲಿನ ಜನರು ಆತಂಕಗೊoಡಿದ್ದಾರೆ.

ಗೋಕರ್ಣ ಮಾದನಗೇರಿ ಶಿವನಾಥ ಮಂದಿರದಲ್ಲಿದೆ ಸಂತಾನ ಗಣಪತಿ

ಸoಬoಧಪಟ್ಟ ಅರಣ್ಯ ಇಲಾಖೆಯವರು ಚಿರತೆಯನ್ನು ಹಿಡಿದು ಜನರಲ್ಲಿ ಉಂಟಾದ ಆತಂಕ ದೂರ ಮಾಡಬೇಕು ಎನ್ನುವ ಒತ್ತಾಯ ಕೇಳಿ ಬಂದಿದೆ. ಕೆಲ ದಿನಗಳ ಹಿಂದೆ ಇಲ್ಲಿನ ಸಮೀಪದ ಭುವನಗಿರಿಯಲ್ಲಿ ವ್ಯಕ್ತಿಯೋರ್ವನ ಮೇಲೆ ದಾಳಿ ಮಾಡಿತ್ತು. ಆತನಿಗೆ ಗಾಯವಾದ ಘಟನೆ ನಡೆದಿತ್ತು. ಆ ಸಂದರ್ಭದಲ್ಲಿ ಅರಣ್ಯ ಇಲಾಖೆಯವರಿಗೆ ಸ್ಥಳೀಯರು ಮಾಹಿತಿ ನೀಡಿದ್ದರು. ಆದರೂ ಕೂಡ ಚಿರತೆ ಹಿಡಿಯದೇ ಇರುವುದು ಜನರಲ್ಲಿ ಇಲಾಖೆ ಮೇಲೆ ಆಕ್ರೋಶಕ್ಕೆ ಕಾರಣವಾಗಿದೆ.

ಸಂಬoಧಪಟ್ಟ ಇಲಾಖೆಯವರು ಚಿರತೆಯನ್ನು ಬಂಧಿಸಿ ಮೃಗಾಲಯಕ್ಕೆ ನೀಡಬೇಕು ಎನ್ನುವ ಒತ್ತಾಯ ಕೇಳಿ ಬಂದಿದೆ. ಒಂದು ವೇಳೆ ಚಿರತೆಯು ಜನರಿಗೆ ತೊಂದರೆ ನೀಡಿದರೆ ಪ್ರಾಣಾಪಾಯಗಳಾದರೆ ನೇರವಾಗಿ ಅರಣ್ಯ ಇಲಾಖೆ ಜವಾಬ್ದಾರಿ ಆಗುತ್ತದೆ ಎಂದು ಪ್ರಶಾಂತ ನಾಯ್ಕ್ ಎಚ್ಚರಿಕೆ ನೀಡಿದ್ದಾರೆ.

ವಿಸ್ಮಯ ನ್ಯೂಸ್, ದಿವಾಕರ ಸಂಪಖoಡ, ಸಿದ್ದಾಪುರ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಗೋಕರ್ಣಕ್ಕೆ ಆಗಮಿಸಲಿದೆ ವರದಹಳ್ಳಿಯ ಶ್ರೀಧರ ಸ್ವಾಮಿಗಳ ಪಾದುಕೆ: ದರ್ಶನ ಮತ್ತು ಫಲಸಮರ್ಪಣೆಗೆ ಸುವರ್ಣಾವಕಾಶ

ಗೋಕರ್ಣ: ವರದಹಳ್ಳಿಯ ಸದ್ಗುರು ಶ್ರೀಧರ ಸ್ವಾಮಿಗಳ ಪಾದುಕೆ ಇದೇ ಏಪ್ರಿಲ್ 8ರ ಬುಧರವಾರ ಮತ್ತು 9ರ ಗುರುವಾರ, 10ರ ಶುಕ್ರವಾರ ಶ್ರೀಕ್ಷೇತ್ರ ಗೋಕರ್ಣಕ್ಕೆ ಆಗಮಿಸಲಿದೆ. ಏಪ್ರಿಲ್ 9 ರಂದು ರಥಬೀದಿಯಲ್ಲಿರುವ ರಾಮಚಂದ್ರ...

ಬಂಗಾರಮಕ್ಕಿಯಲ್ಲಿ ‘ಪ್ರಾಚೀನ ಆರೋಗ್ಯ ಪರಂಪರಾ ವೈದ್ಯ ಸಂಗಮ

ಹೊನ್ನಾವರ: ರಾಜ್ಯದ ಪ್ರತಿ ಗ್ರಾಮದಲ್ಲಿ ಔಷಧಿ ಗಿಡಗಳ ಪಾರ್ಕ್ ನಿರ್ಮಾಣ ಮಾಡಲಾಗುವುದು ಎಂದು ವಡ್ನಾಳ್ ಜಗದೀಶ್ ರವರು ಹೊನ್ನಾವರ ತಾಲೂಕಿನ ಬಂಗಾರಮಕ್ಕಿಯಲ್ಲಿ ‘ಪ್ರಾಚೀನ ಆರೋಗ್ಯ ಪರಂಪರಾ ವೈದ್ಯ ಸಂಗಮ’ ದಲ್ಲಿ ಹೇಳಿದರು....

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಲ್ಲಿ ಸಹಾಯಕ ಶಿಕ್ಷಕರು ಬೇಕಾಗಿದ್ದಾರೆ

ಕುಮಟಾ : ಅಂಕೋಲಾದ ಕೆನರಾ ವೆಲ್ಫೇರ್ ಟ್ರಸ್ಟ್ ನ ಕುಮಟಾ ಧಾರೇಶ್ವರದ ದಿನಕರ ಇಂಗ್ಲಿಷ್ ಮೀಡಿಯಂ...

ಅಲಂಕಾರ ಜ್ಯುವೆಲ್ಲರ್ಸ್ : ಅಕ್ಷಯ ತೃತೀಯ ವಿಶೇಷ ಆಫರ್

ಸುವರ್ಣ ಕ್ಷಣವನ್ನು ಇನ್ನಷ್ಟು ವಿಶೇಷವಾಗಿಸಿ : ಈ ಶುಭ ಅಕ್ಷಯ ತೃತೀಯದ ಪ್ರಯುಕ್ತ ಚಿನ್ನ ಮತ್ತು...

ಭಟ್ಕಳದಲ್ಲಿ 14 ಜಾನುವಾರಗಳ ರಕ್ಷಣೆ : ಇಬ್ಬರ ವಿರುದ್ಧ ಪ್ರಕರಣ ದಾಖಲು

ಭಟ್ಕಳ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬAಧಿಸಿದAತೆ ಇಬ್ಬರ ವಿರುದ್ಧ ಭಟ್ಕಳ ಪಟ್ಟಣ ಪೊಲೀಸ್...

ಮಹಾಶಿವರಾತ್ರಿ ಪುಣ್ಯಕಾಲದಲ್ಲಿ ಕಣಕಣೇಶ್ವರ ದೇವರ ನೂತನ ಭವ್ಯ ದೇವಸ್ಥಾನ ಲೋಕಾರ್ಪಣೆ :ಶಿಖರ ಕಲಶ ಪ್ರತಿಷ್ಠೆ – ಅಷ್ಟಬಂಧ ಸಮೇತ ನೂತನ ಶಿವಲಿಂಗ ಪ್ರತಿಷ್ಠಾ ಮಹೋತ್ಸವ

ಅಂಕೋಲಾ: ಪಟ್ಟಣದ ಕಾರವಾರ ರಸ್ತೆಯಲ್ಲಿರುವ ಪುರಾತನ ಪ್ರಸಿದ್ಧ ಶ್ರೀ ಕಣಕಣೇಶ್ವರ ದೇವಾಲಯವು ಮಹಾಶಿವರಾತ್ರಿ ಪುಣ್ಯಸಂದರ್ಭದಲ್ಲಿ ನೂತನ...

ಬೆಂಕಿ ಅವಘಡದಲ್ಲಿ ಅಪಾರಹಾನಿ: ಆದರೆ, ಮಾರಿಕಾಂಬೆಯ ಫೋಟೋ ಮಾತ್ರ ಸೇಫ್

ಅಂಕೋಲಾ: ಪಟ್ಟಣ ವ್ಯಾಪ್ತಿಯ ಲಕ್ಷ್ಮೇಶ್ವರ–ಕುಂಬಾರಕೇರಿ ಪ್ರದೇಶದಲ್ಲಿರುವ ಶ್ರೀ ಮಹಾಲಸಾ ವೆಲ್ಡಿಂಗ್ ಶಾಪ್ನಲ್ಲಿ ಫೆಬ್ರವರಿ 9ರ ಸೋಮವಾರ...

ಅಂಕೋಲಾದಲ್ಲಿ ಕರಾಳ ದಿನಾಚರಣೆ ಮತ್ತು ಬಂದ್ ಗೆ ಕರೆ

ಅಂಕೋಲಾ: ಕೇಣಿ ವಾಣಿಜ್ಯ ಬಂದರು ಯೋಜನೆ ವಿರೋಧಿಸಿ ನಡೆಯುತ್ತಿರುವ ಹೋರಾಟಕ್ಕೆ ನವೆಂಬರ್ 15ರಂದು ಒಂದು ವರ್ಷವಾಗಲಿದ್ದು...

ಕಲಾಸಿರಿ ಪ್ರಶಸ್ತಿಯು ಬದುಕಿನ ಸಾರ್ಥಕತೆಯ ಜ್ಞಾನದ ಬೆಳಕು ಬೆಳಗಲು ಸಾಧ್ಯ:ಪಿ. ಆರ್. ನಾಯ್ಕ

ಭಟ್ಕಳ : ಒಂದು ಹಣತೆಯಿಂದ ಹಲವು ಹಣತೆಗಳು ಬೆಳಗುವಂತೆ, ಕಲಾಸಿರಿಯು ಬದುಕಿನ ಸಾರ್ಥಕತೆಯ ಜ್ಞಾನದ ಬೆಳಕು...