ಆರ್‌ಸಿಬಿ ವಿಜಯೋತ್ಸವ ಮಾದರಿಯ ಗಣೇಶ ಮೂರ್ತಿ – ಅವರ್ಸಾ ಸಾರ್ವಜನಿಕ ಗಣೇಶೋತ್ಸವ 2025
Important

ಕಪ್ ಎತ್ತಿ ಹಿಡಿದ ಗಣಪತಿ: ಗಮನ ಸೆಳೆದ ಆರ್‌ಸಿಬಿ ವಿಜಯೋತ್ಸವ ಶೈಲಿಯ ಗಣೇಶ

Share

ಅಂಕೋಲಾ: ಇತ್ತೀಚೆಗೆ ನಡೆದಿದ್ದ ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಆರ್‌ಸಿಬಿ ತಂಡದ ವಿಜಯವನ್ನು ಸಂಭ್ರಮಿಸುವಂತೆ,ಮೂಡಿ ಬಂದ ಗಣಪನ ಮಾದರಿ ದೃಶ್ಯ ಸಾಮಾಜಿಕ ಜಾಲತಾಣಗಳು ಸೇರಿದಂತೆ ಎಲ್ಲೆಡೆ ಭಾರೀ ವೈರಲ್ ಆಗುತ್ತಿದೆ .

IPL ಕಪ್ ಎತ್ತಿ ಹಿಡಿದ ಗಣಪ

ಅಂಕೋಲಾ ತಾಲೂಕಿನ ಅವರ್ಸಾ ಗ್ರಾಮದ ಸಾರ್ವಜನಿಕ ಗಣೇಶೋತ್ಸವ ತನ್ನ ಶಿಸ್ತು ಬದ್ಧ ಸಂಘಟನೆ ಮತ್ತಿತರ ಕಾರಣಗಳಿಂದ ಆಗಾಗ ಸಖತ್ ಸುದ್ದಿಯಾಗುತ್ತಲೇ ಇರುತ್ತದೆ. ಇಲ್ಲಿನ ಗಣೇಶೋತ್ಸವ ಮಂಡಳಿ 42 ನೇ ವರ್ಷದ ವಿಶೇಷ ಆಕರ್ಷಣೆಯಾಗಿ ರೂಪಿಸಿದ ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆರ್ ಸಿ ಬಿ ತಂಡದ ವಿಜಯೋತ್ಸವ ಮಾದರಿ ಗಮನ ಸೆಳೆಯುತ್ತಿದ್ದು ದಿನನಿತ್ಯ ಸಾವಿರಾರು ಜನರು ಆಗಮಿಸಿ ಗಣೇಶೋತ್ಸವದ ಆನಂದವನ್ನು ಸವಿಯುತ್ತಿದ್ದು, ಇಲ್ಲಿನ ದೃಶ್ಯಾವಳಿ ಸಾಮಾಜಿಕ ಜಾಲತಾಣಗಳಲ್ಲಿ ಜೋರಾದ ಸದ್ದು ಮಾಡುತ್ತ, ಐಪಿಎಲ್ ಚಾಂಪಿಯನ್ ಕಪ್ ಎತ್ತಿ ಹಿಡಿದ ಗಣೇಶ ಮೂರ್ತಿ ಎಲ್ಲಡೆ ವೈರಲ್ ಆಗುತ್ತಿದೆ.

ವಿರಾಟ್ ಕೊಹ್ಲಿ ಜೊತೆಯಲ್ಲೇ ಆರ್‌ಸಿಬಿ ವಿಜಯೋತ್ಸವ ಗಣಪ

ಸ್ಥಳೀಯರೇ ಆದ ಹೆಸರಾಂತ ಯುವ ಕಲಾವಿದ ದಿನೇಶ ಮೇತ್ರಿ ಅವರ ಪರಿಕಲ್ಪನೆ ಮತ್ತು ಕಲಾತ್ಮಕತೆಯಿಂದ ಟ್ರಾನ್ಸಪೋರ್ಟ್ ಉದ್ಯಮಿ ತುಳಸಿದಾಸ ಕಾಮತ್ ಮತ್ತು ಅವರ ಕುಟುಂಬದವರ ಸಹಕಾರದಲ್ಲಿ ಐ.ಪಿ.ಎಲ್ ಟ್ರೊಪಿ ಎತ್ತಿ ಹಿಡಿದು, ಜಿಲ್ಲೆಯ ಪ್ರತಿಷ್ಠಿತ ವರದಾ ರೋಡಲೈನ್ಸ್ ಬಸ್ಸಿನ ಮೇಲೆರಿ ವಿಜಯೋತ್ಸವದ ರೀತಿ ನಿಂತ ಭಂಗಿಯಲ್ಲಿ ಇಲ್ಲಿನ ಗಣಪ ಮೂಡಿಬಂದಿದ್ದು ಆರ್.ಸಿ.ಬಿ ಜೆರ್ಸಿಯಲ್ಲಿ ಇರುವ
ನಿಂತ ಗಣೇಶನ ಪಕ್ಕದಲ್ಲಿ ವಿಶ್ವ ಪ್ರಸಿದ್ಧ ಆಟಗಾರ ವಿರಾಟ ಕೊಹ್ಲಿ ಅವರ ಕಲಾಕೃತಿಯೂ ಗಣೇಶನ ಭಕ್ತರ,ಕ್ರಿಕೆಟ್ ಪ್ರಿಯರ ಹಾಗೂ ಕೊಹ್ಲಿ ಅಭಿಮಾನಿಗಳ ಮನಸೂರೆಗೊಳ್ಳುತ್ತಿದೆ.

ಭಟ್ಕಳದಲ್ಲಿ ದೇವಸ್ಥಾನದ ಹುಂಡಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಬಂಧನ

ಗಣೇಶನ ವಾಹನ ಮೂಷಿಕ ,ಬಸ್ಸಿನ ಚಾಲಕನ ಸ್ಥಾನದಲ್ಲಿ ಕುಳಿತು ಬಿಳಿ ಬಣ್ಣದ ಸುಂದರ ಬಸ್ಸನ್ನು ಚಲಾಯಿಸುತ್ತಿರುವಂತೆ ಕಲಾತ್ಮಕತೆ ಕಂಡುಬರುತ್ತಿದೆ. ಕೋಟ್ಯಂತರ ಅಭಿಮಾನಿಗಳ ನಿರೀಕ್ಷೆಯಂತೆ ಈ ಸಲ ಐಪಿಎಲ್ ಕಪ್ ತನ್ನದಾಗಿಸಿಕೊಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ,ಗೆಲುವಿನ ಸಂಭ್ರಮಾಚರಣೆಯ ವರುಷ ಹಾಗೂ ಹರುಷದ ಸಂದರ್ಭದಲ್ಲಿ ಸುಮಾರು ಹನ್ನೊಂದು ಅಡಿ ಎತ್ತರದ ಈ ವಿಶೇಷ ಗಣೇಶ ಮೂರ್ತಿ ತನ್ನ ವಿಭಿನ್ನತೆಯಿಂದಾಗಿ ಶೋಭಿಸುತ್ತಿದ್ದು ಆರ್.ಸಿ.ಬಿ ಅಭಿಮಾನಿಗಳಂತೂ ಸಂತಸದಿಂದ ಜಯದೇವತೆಯನ್ನು ನೋಡಲು ಮುಗಿ ಬೀಳುತ್ತಿದ್ದಾರೆ.

ಅವರ್ಸಾದಲ್ಲಿ ಸಾರ್ವಜನಿಕ ಗಣೇಶೋತ್ಸವ ಪ್ರತಿ ವರ್ಷ ಹಲವು ವೈಶಿಷ್ಟ್ಯಗಳೊಂದಿಗೆ ಗಮನ ಸೆಳೆಯುತ್ತ ಬಂದಿದ್ದು
ಗಣೇಶೋತ್ಸವದ ಸಂದರ್ಭದಲ್ಲಿ ಧಾರ್ಮಿಕ ಕಾರ್ಯಕ್ರಮಗಳ ಜೊತೆಗೆ, ಸಾಂಸ್ಕೃತಿಕ , ಮನೋರಂಜನೆ ಸೇರಿದಂತೆ ಹತ್ತಾರು ವಿಧಾಯಕ ಕಾರ್ಯಗಳ ಮೂಲಕ ತನ್ನದೇ ಆದ ಪ್ರಸಿದ್ಧಿ ಪಡೆದಿದೆ.

ಈ ಬಾರಿಯ ಗಣೇಶೋತ್ಸವದಲ್ಲಿ ಮೂಡಿಬಂದ ಆರ್.ಸಿ.ಬಿ ವಿಜಯೋತ್ಸವದ ಮಾದರಿಯಂತಿರುವ ಗಣಪ ರಾಜ್ಯಾದ್ಯಂತ ಅಷ್ಟೇ ಅಲ್ಲದೇ ದೇಶ ವಿದೇಶಗಳಲ್ಲಿಯೂ ಸಖತ್ ಸುದ್ದಿ ಮಾಡುವಂತಾಗಿದ್ದು,ಸ್ಥಳೀಯ ಸಂಘಟನೆ ಹಾಗೂ ಕಲಾವಿದನ ಬಗ್ಗೆ ಮೆಚ್ಚುಗೆಯ ಮಾತುಗಳು ಕೇಳಿ ಬರಲಾರಂಭಿಸಿವೆ.

ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಮುರಿನಕಟ್ಟೆ ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಕಾಗೇರಿ ಆಗ್ರಹ

ಭಟ್ಕಳ:ಮುರಿನಕಟ್ಟೆ ವಿಚಾರವು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಹಿಂದೂಗಳ ಭಾವನೆಗಳಿಗೆ ಸಂಬAಧಿಸಿದ ವಿಷಯವಾಗಿದ್ದು, ಕೆಲ ಮತಾಂಧ ಶಕ್ತಿಗಳು ಇದನ್ನು ಬಳಸಿಕೊಂಡು ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಪ್ರಯತ್ನ ನಡೆಸಿವೆ ಎಂದು ವಿಶ್ವೇಶ್ವರ ಹೆಗಡೆ...

ಅಳ್ವೆಕೋಡಿ ಕಪ್ಪೆಚಿಪ್ಪು ದುರಂತ: ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದ ಕಾಗೇರಿ

ಭಟ್ಕಳ: ತಾಲೂಕಿನ ಅಳ್ವೆಕೋಡಿಯ ಕಪ್ಪೆಚಿಪ್ಪು ದುರಂತದಲ್ಲಿ ಸಾವನ್ನಪ್ಪಿದ ಕುಟುಂಬದವರನ್ನು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಭೇಟಿ ಮಾಡಿ ಸಾಂತ್ವನ ಹೇಳಿದರು. ಈ ವೇಳೆ ಮಾತನಾಡಿದ ಅವರು, ನಡೆಯಬಾರದ ದುರಂತವೊoದು ಸಂಭವಿಸಿದ್ದು, ಈ...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಪ್ರಗತಿ ವಿದ್ಯಾಲಯದಲ್ಲಿ ಶಾಲಾ ಪ್ರಾರಂಭೋತ್ಸವ; ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ

ಕುಮಟಾ: ಮೂರೂರಿನ ಪ್ರಗತಿ ವಿದ್ಯಾಲಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ಅತ್ಯಂತ ವಿಜೃಂಭಣೆಯಿoದ ನೆರವೇರಿತು....

ಬಿಜಿಎಸ್ ಸೆಂಟ್ರಲ್ ಸ್ಕೂಲ್ & ಪಿಯು ಕಾಲೇಜಿನಲ್ಲಿ ನೇಮಕಾತಿ: ಕೂಡಲೇ ಸಂಪರ್ಕಿಸಿ

ಉತ್ತರಕನ್ನಡ ಜಿಲ್ಲೆಯ ಮಿರ್ಜಾನಿನ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಬಿಜಿಎಸ್ ಸೆಂಟ್ರಲ್ ಸ್ಕೂಲ್ & ಆದಿಚುಂಚನಗಿರಿ...

ಅಂಕೋಲಾದಬಾಳೇಗುಳಿ ಬೊಗ್ರಿಬೈಲಿನಲ್ಲಿ ಶ್ರೀ ಉದ್ಭವ ನಾಗಚೌಡೇಶ್ವರಿ–ವೀರಾಂಜನೇಯ ದೇವರ ಚತುರ್ಥ ವರ್ಧಂತಿ ಮಹೋತ್ಸವ

ಅಂಕೋಲಾ: ತಾಲೂಕಿನ ಬಾಳೇಗುಳಿ ಬೊಗ್ರಿಬೈಲಿನಲ್ಲಿರುವ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶ್ರೀ ಉದ್ಭವ ನಾಗಚೌಡೇಶ್ವರಿ ಅಮ್ಮನವರು ಹಾಗೂ...

ಹೋಮಿಯೋಪತಿ ಸಂಸ್ಥಾಪಕ ಹಾನಿಮ್ಯಾನ್ ಅವರ 271ನೇ ಜನ್ಮ ದಿನಾಚರಣೆ

ಅಂಕೋಲಾ: ಇಂಗ್ಲಿಷ್ ಔಷಧಿಗಳನ್ನು ಸೇವಿಸಿದಾಗ ತಾತ್ಕಾಲಿಕವಾಗಿ ಕಾಯಿಲೆ ವಾಸಿಯಾದಂತೆ ಅನ್ನಿಸಿದರೂ, ಕೆಲವೇ ದಿನಗಳಲ್ಲಿ ಅದು ಮರುಕಳಿಸುವ...

ಗೋಕರ್ಣಕ್ಕೆ ಆಗಮಿಸಲಿದೆ ವರದಹಳ್ಳಿಯ ಶ್ರೀಧರ ಸ್ವಾಮಿಗಳ ಪಾದುಕೆ: ದರ್ಶನ ಮತ್ತು ಫಲಸಮರ್ಪಣೆಗೆ ಸುವರ್ಣಾವಕಾಶ

ಗೋಕರ್ಣ: ವರದಹಳ್ಳಿಯ ಸದ್ಗುರು ಶ್ರೀಧರ ಸ್ವಾಮಿಗಳ ಪಾದುಕೆ ಇದೇ ಏಪ್ರಿಲ್ 8ರ ಬುಧರವಾರ ಮತ್ತು 9ರ...

ವಿಸ್ಮಯ ಟಿ.ವಿ ಹೆಸರಿನಲ್ಲಿ ಮೋಸ: ವೀಕ್ಷಕರ, ಜಾಹೀರಾತುದಾರರ ಗಮನಕ್ಕೆ

ಕುಮಟಾ: ಕಳೆದ 13 ವರ್ಷಗಳಿಂದ ಸದಭಿರುಚಿಯ ಕಾರ್ಯಕ್ರಮಗಳ ಮೂಲಕ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಮನೆಮಾತಾಗಿರುವ ವಿಸ್ಮಯ...

ಫೋಟೋಗ್ರಾಫರ್ ಪ್ರಶಾಂತ ವಿಧಿವಶ : ಪಚ್ಚು ಎಂದೇ ಚಿರಪರಿಚಿತನಾಗಿದ್ದ ಯುವಕ ಇನ್ನು ನೆನಪು ಮಾತ್ರ

ಅಂಕೋಲಾ : ಪಟ್ಟಣ ವ್ಯಾಪ್ತಿಯ ಲಕ್ಷ್ಮೇಶ್ವರ ಕುಂಬಾರಕೇರಿ ನಿವಾಸಿ, ಪ್ರಶಾಂತ (ಪಚ್ಚು ) ಕೆ ನಾಯ್ಕ...

ತರಂಗ ಎಲೆಕ್ಟ್ರಾನಿಕ್ಸ್ ನಲ್ಲಿ ಯುಗಾದಿ ಉತ್ಸವ: ಏ.ಸಿ ಮೇಲೆ ಬಂಪರ್ ಆಫರ್

ಕುಮಟಾ: ಉತ್ತರಕನ್ನಡ ಜಿಲ್ಲೆಯ ಅತ್ಯಂತ ವಿಶ್ವಾಸಾರ್ಹ ಮತ್ತು ಅತಿದೊಡ್ಡ ಶೋರೂಮ್ ತರಂಗ ಎಲೆಕ್ಟ್ರಾನಿಕ್ಸ್ ನಲ್ಲಿ ಯುಗಾದಿ...