ಉತ್ತರ ಕನ್ನಡ ಕ್ರೈಮ್ ರೌಂಡಪ್
Important

Uttara Kannada Crime Roundup: ಪ್ರಮುಖ ಸುದ್ದಿಗಳು

Share

ಕೆರೆಗೆ ಹಾರಿ ಸಾವಿಗೆ ಶರಣಾದ ವಿದ್ಯಾರ್ಥಿನಿ

ಶಿರಸಿ ಸೆಪ್ಟೆಂಬರ್ 2: ಕೆರೆಗೆ ಹಾರಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ಶಿರಸಿ ತಾಲೂಕಿನ ಇಸಳೂರಿನಲ್ಲಿ ನಡೆದಿದೆ. ಇಸಳೂರು ಕೆರೆಯಲ್ಲಿ ಮೃತದೇಹ ಪತ್ತೆಯಾಗಿದ್ದು, ಮೃತಳನ್ನು ಸ್ನೇಹಾ ಎಂದು ಗುರುತಿಸಲಾಗಿದೆ.

ಪ್ರಥಮ ವರ್ಷದ ವಿಜ್ಞಾನ ವಿಷಯವನ್ನು ಅಧ್ಯಯನ ಮಾಡುತ್ತಿದ್ದ ಸ್ನೇಹಾ, ಚೀಟಿ ಬರೆದಿಟ್ಟು, ಸಾವಿಗೆ ಶರಣಾಗಿದ್ದಾಳೆ. ಮೃತಳ ಸ್ನೇಹಾ ತಂದೆ ಪೋಲಿಸ್ ಇಲಾಖೆಯ ಡಿಆರ್ ನಲ್ಲಿ ಎಆರ್‌ಐ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ಆರಂಭಿಸಿದ್ದಾರೆ.

ಅಡ್ಡ ಬಂದ ಕಾಡುಹಂದಿ: ಪತ್ನಿಯನ್ನು ತವರು ಮನೆಯಲ್ಲಿ ಬಿಟ್ಟು ಬರುತ್ತಿದ್ದ ಬೈಕ್ ಸವಾರ ಸ್ಥಳದಲ್ಲೇ ಸಾವು

ಹೊನ್ನಾವರದಲ್ಲಿ ಕಾಡುಹಂದಿ ಅಡ್ಡ ಬಂದ ಪರಿಣಾಮ ಬೈಕ್ ಸವಾರ ನಾಗರಾಜ ಜಟ್ಟು ಗೌಡ ಸ್ಥಳದಲ್ಲೇ ಮೃತಪಟ್ಟ ಘಟನೆ

ಹೊನ್ನಾವರ ಸೆಪ್ಟೆಂಬರ್ 2 : ರಸ್ತೆಯಲ್ಲಿ ತೆರಳುತ್ತಿದ್ದ ವೇಳೆ ಕಾಡುಹಂದಿ ಒಮ್ಮೆಲೆ ಅಡ್ಡ ಬಂದಿದೆ. ಕಾಡುಹಂದಿಯನ್ನು ತಪ್ಪಿಸಲು ಹೋದ ವೇಳೆ ಬೈಕ್ ನಿಯಂತ್ರಣ ತಪ್ಪಿದ್ದು, ಸವಾರ ಕೆಳಗಡೆ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಮೃತ ಬೈಕ್ ಸವಾರನನ್ನು ತಾಲೂಕಿನ ಕಡ್ಲೆಯ ನಿವಾಸಿ ನಾಗರಾಜ ಜಟ್ಟು ಗೌಡ (32) ಎಂದು ಗುರುತಿಸಲಾಗಿದೆ. ಪತ್ನಿಯನ್ನು ತವರು ಮನೆಯಲ್ಲಿ ಬಿಟ್ಟು ವಾಪಸ್ ಮನೆಗೆ ಅರೇಅಂಗಡಿ ಮಾರ್ಗದ ಮೂಲಕ ತೆರಳುವಾಗ ಈ ದುರ್ಘಟನೆ ಸಂಭವಿಸಿದೆ.

ಕೊಲೆ ಆರೋಪ: ಪತಿ, ಪತ್ನಿಗೆ ಜೀವಾವಧಿ ಶಿಕ್ಷೆ

ಕಾರವಾರ ಸೆಪ್ಟೆಂಬರ್ 2 : ಯಾವುದೋ ದ್ವೇಷದಿಂದ ವ್ಯಕ್ತಿಯೋರ್ವನನ್ನು ಕೊಲೆ ಮಾಡಿದ ಅಪರಾಧಿಗೆ ಜೀವಾವಧಿ ಶಿಕ್ಷೆ ಹಾಗೂ 10 ಸಾವಿರ ದಂಡ ಮತ್ತು ಕೊಲೆಗೆ ಸಹಕರಿಸಿದ ಇಬ್ಬರೂ ಅಪರಾಧಿಗಳಿಗೆ 3 ವರ್ಷ ಶಿಕ್ಷೆ ಹಾಗೂ 3 ಸಾವಿರ ದಂಡ ವಿಧಿಸಿ ಕೊಲೆಯಾದ ವ್ಯಕ್ತಿಯ ಪತ್ನಿಗೆ 25 ಸಾವಿರ ಪರಿಹಾರ ನೀಡುವಂತೆ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಕಾರವಾರ ಆದೇಶ ನೀಡಿದೆ.

ಮುಂಡಗೋಡ ತಾಲೂಕಿನ ಇಂದಿರಾ ನಗರದ ನಿವಾಸಿಯಾಗಿರುವ ಮೆಹಬೂಬಲಿ ಎಂಬಾತನನ್ನು ಡಿಸೆಂಬರ್ 31 2021 ರಂದು ಕೊಲೆ ಮಾಡಿ ಆತನ ಮೃತದೇಹವನ್ನು ಕಲ್ಲಳ್ಳಿ ಹಾಗೂ ಹನಮಾಪೂರ ಗ್ರಾಮಗಳ ಮಧ್ಯದಲ್ಲಿರುವ ಕಲ್ಲಳ್ಳಿ ಹಳ್ಳದಲ್ಲಿ ಆತನ ಮೋಟಾರ ಸೈಕಲ್ ಸಮೇತ ಎಸೆದು ಹೋಗಿದ್ದರು.

ಕಾರವಾರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಪತಿ-ಪತ್ನಿಗೆ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ವಿಧಿಸಿದ ಘಟನೆ

ಈ ಬಗ್ಗೆ ಮುಂಡಗೋಡ ಪೋಲೀಸ್ ಠಾಣೆಯಲ್ಲಿ ಮೃತ ವ್ಯಕ್ತಿಯ ತಮ್ಮ ದೂರು ದಾಖಲಿಸಿದ್ದರು. ಪ್ರಕರಣದ ತನಿಖೆ ಕೈಗೊಂಡ ಪೋಲೀಸರು ಕೊಲೆ ಆರೋಪಿಗಳಾದ ಮುಂಡಗೋಡ ತಾಲೂಕಿನ ಸಾಲಕೊಳ್ಳಿ ನಿವಾಸಿಸಿಗಳಾದ ಇಬ್ರಾಹಿಂ, ಷರೀಪ್ ಹಾಗೂ ನಾಝಿಯಾ ಎನ್ನುವವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು.

ಇದನ್ನೂ ಓದಿ: ಗಂಟಲಲ್ಲಿ ಅನ್ನ ಸಿಲುಕಿ ಯುವಕ ದುರ್ಮರಣ

ನ್ಯಾಯಾಲಯದ ಧೀರ್ಘ ಕಾಲ ವಿಚಾರಣೆಯಾಗಿ ಕೊಲೆ ಮಾಡಿದ ಅಪರಾಧಿಗೆ ಜೀವಾವಧಿ ಶಿಕ್ಷೆ ಹಾಗೂ 10 ಸಾವಿರ ದಂಡ ಮತ್ತು ಕೊಲೆಗೆ ಸಹಕರಿಸಿದ ಇಬ್ಬರೂ ಅಪರಾಧಿಗಳಿಗೆ 3 ವರ್ಷ ಶಿಕ್ಷೆ ಹಾಗೂ 3 ಸಾವಿರ ದಂಡ ವಿಧಿಸಿ ಕೊಲೆಯಾದ ವ್ಯಕ್ತಿಯ ಪತ್ನಿಗೆ 25 ಸಾವಿರ ಪರಿಹಾರ ನೀಡುವಂತೆ ಆದೇಶ ನೀಡಿದೆ.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಮುರಿನಕಟ್ಟೆ ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಕಾಗೇರಿ ಆಗ್ರಹ

ಭಟ್ಕಳ:ಮುರಿನಕಟ್ಟೆ ವಿಚಾರವು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಹಿಂದೂಗಳ ಭಾವನೆಗಳಿಗೆ ಸಂಬAಧಿಸಿದ ವಿಷಯವಾಗಿದ್ದು, ಕೆಲ ಮತಾಂಧ ಶಕ್ತಿಗಳು ಇದನ್ನು ಬಳಸಿಕೊಂಡು ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಪ್ರಯತ್ನ ನಡೆಸಿವೆ ಎಂದು ವಿಶ್ವೇಶ್ವರ ಹೆಗಡೆ...

ಅಳ್ವೆಕೋಡಿ ಕಪ್ಪೆಚಿಪ್ಪು ದುರಂತ: ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದ ಕಾಗೇರಿ

ಭಟ್ಕಳ: ತಾಲೂಕಿನ ಅಳ್ವೆಕೋಡಿಯ ಕಪ್ಪೆಚಿಪ್ಪು ದುರಂತದಲ್ಲಿ ಸಾವನ್ನಪ್ಪಿದ ಕುಟುಂಬದವರನ್ನು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಭೇಟಿ ಮಾಡಿ ಸಾಂತ್ವನ ಹೇಳಿದರು. ಈ ವೇಳೆ ಮಾತನಾಡಿದ ಅವರು, ನಡೆಯಬಾರದ ದುರಂತವೊoದು ಸಂಭವಿಸಿದ್ದು, ಈ...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಪ್ರಗತಿ ವಿದ್ಯಾಲಯದಲ್ಲಿ ಶಾಲಾ ಪ್ರಾರಂಭೋತ್ಸವ; ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ

ಕುಮಟಾ: ಮೂರೂರಿನ ಪ್ರಗತಿ ವಿದ್ಯಾಲಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ಅತ್ಯಂತ ವಿಜೃಂಭಣೆಯಿoದ ನೆರವೇರಿತು....

ಬಿಜಿಎಸ್ ಸೆಂಟ್ರಲ್ ಸ್ಕೂಲ್ & ಪಿಯು ಕಾಲೇಜಿನಲ್ಲಿ ನೇಮಕಾತಿ: ಕೂಡಲೇ ಸಂಪರ್ಕಿಸಿ

ಉತ್ತರಕನ್ನಡ ಜಿಲ್ಲೆಯ ಮಿರ್ಜಾನಿನ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಬಿಜಿಎಸ್ ಸೆಂಟ್ರಲ್ ಸ್ಕೂಲ್ & ಆದಿಚುಂಚನಗಿರಿ...

ಅಂಕೋಲಾದಬಾಳೇಗುಳಿ ಬೊಗ್ರಿಬೈಲಿನಲ್ಲಿ ಶ್ರೀ ಉದ್ಭವ ನಾಗಚೌಡೇಶ್ವರಿ–ವೀರಾಂಜನೇಯ ದೇವರ ಚತುರ್ಥ ವರ್ಧಂತಿ ಮಹೋತ್ಸವ

ಅಂಕೋಲಾ: ತಾಲೂಕಿನ ಬಾಳೇಗುಳಿ ಬೊಗ್ರಿಬೈಲಿನಲ್ಲಿರುವ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶ್ರೀ ಉದ್ಭವ ನಾಗಚೌಡೇಶ್ವರಿ ಅಮ್ಮನವರು ಹಾಗೂ...

ಹೋಮಿಯೋಪತಿ ಸಂಸ್ಥಾಪಕ ಹಾನಿಮ್ಯಾನ್ ಅವರ 271ನೇ ಜನ್ಮ ದಿನಾಚರಣೆ

ಅಂಕೋಲಾ: ಇಂಗ್ಲಿಷ್ ಔಷಧಿಗಳನ್ನು ಸೇವಿಸಿದಾಗ ತಾತ್ಕಾಲಿಕವಾಗಿ ಕಾಯಿಲೆ ವಾಸಿಯಾದಂತೆ ಅನ್ನಿಸಿದರೂ, ಕೆಲವೇ ದಿನಗಳಲ್ಲಿ ಅದು ಮರುಕಳಿಸುವ...

ಗೋಕರ್ಣಕ್ಕೆ ಆಗಮಿಸಲಿದೆ ವರದಹಳ್ಳಿಯ ಶ್ರೀಧರ ಸ್ವಾಮಿಗಳ ಪಾದುಕೆ: ದರ್ಶನ ಮತ್ತು ಫಲಸಮರ್ಪಣೆಗೆ ಸುವರ್ಣಾವಕಾಶ

ಗೋಕರ್ಣ: ವರದಹಳ್ಳಿಯ ಸದ್ಗುರು ಶ್ರೀಧರ ಸ್ವಾಮಿಗಳ ಪಾದುಕೆ ಇದೇ ಏಪ್ರಿಲ್ 8ರ ಬುಧರವಾರ ಮತ್ತು 9ರ...

ವಿಸ್ಮಯ ಟಿ.ವಿ ಹೆಸರಿನಲ್ಲಿ ಮೋಸ: ವೀಕ್ಷಕರ, ಜಾಹೀರಾತುದಾರರ ಗಮನಕ್ಕೆ

ಕುಮಟಾ: ಕಳೆದ 13 ವರ್ಷಗಳಿಂದ ಸದಭಿರುಚಿಯ ಕಾರ್ಯಕ್ರಮಗಳ ಮೂಲಕ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಮನೆಮಾತಾಗಿರುವ ವಿಸ್ಮಯ...

ಫೋಟೋಗ್ರಾಫರ್ ಪ್ರಶಾಂತ ವಿಧಿವಶ : ಪಚ್ಚು ಎಂದೇ ಚಿರಪರಿಚಿತನಾಗಿದ್ದ ಯುವಕ ಇನ್ನು ನೆನಪು ಮಾತ್ರ

ಅಂಕೋಲಾ : ಪಟ್ಟಣ ವ್ಯಾಪ್ತಿಯ ಲಕ್ಷ್ಮೇಶ್ವರ ಕುಂಬಾರಕೇರಿ ನಿವಾಸಿ, ಪ್ರಶಾಂತ (ಪಚ್ಚು ) ಕೆ ನಾಯ್ಕ...

ತರಂಗ ಎಲೆಕ್ಟ್ರಾನಿಕ್ಸ್ ನಲ್ಲಿ ಯುಗಾದಿ ಉತ್ಸವ: ಏ.ಸಿ ಮೇಲೆ ಬಂಪರ್ ಆಫರ್

ಕುಮಟಾ: ಉತ್ತರಕನ್ನಡ ಜಿಲ್ಲೆಯ ಅತ್ಯಂತ ವಿಶ್ವಾಸಾರ್ಹ ಮತ್ತು ಅತಿದೊಡ್ಡ ಶೋರೂಮ್ ತರಂಗ ಎಲೆಕ್ಟ್ರಾನಿಕ್ಸ್ ನಲ್ಲಿ ಯುಗಾದಿ...