ಉತ್ತರ ಕನ್ನಡ ಕ್ರೈಮ್ ರೌಂಡಪ್
Important

Uttara Kannada Crime Roundup: ಪ್ರಮುಖ ಸುದ್ದಿಗಳು

Share

ಕೆರೆಗೆ ಹಾರಿ ಸಾವಿಗೆ ಶರಣಾದ ವಿದ್ಯಾರ್ಥಿನಿ

ಶಿರಸಿ ಸೆಪ್ಟೆಂಬರ್ 2: ಕೆರೆಗೆ ಹಾರಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ಶಿರಸಿ ತಾಲೂಕಿನ ಇಸಳೂರಿನಲ್ಲಿ ನಡೆದಿದೆ. ಇಸಳೂರು ಕೆರೆಯಲ್ಲಿ ಮೃತದೇಹ ಪತ್ತೆಯಾಗಿದ್ದು, ಮೃತಳನ್ನು ಸ್ನೇಹಾ ಎಂದು ಗುರುತಿಸಲಾಗಿದೆ.

ಪ್ರಥಮ ವರ್ಷದ ವಿಜ್ಞಾನ ವಿಷಯವನ್ನು ಅಧ್ಯಯನ ಮಾಡುತ್ತಿದ್ದ ಸ್ನೇಹಾ, ಚೀಟಿ ಬರೆದಿಟ್ಟು, ಸಾವಿಗೆ ಶರಣಾಗಿದ್ದಾಳೆ. ಮೃತಳ ಸ್ನೇಹಾ ತಂದೆ ಪೋಲಿಸ್ ಇಲಾಖೆಯ ಡಿಆರ್ ನಲ್ಲಿ ಎಆರ್‌ಐ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ಆರಂಭಿಸಿದ್ದಾರೆ.

ಅಡ್ಡ ಬಂದ ಕಾಡುಹಂದಿ: ಪತ್ನಿಯನ್ನು ತವರು ಮನೆಯಲ್ಲಿ ಬಿಟ್ಟು ಬರುತ್ತಿದ್ದ ಬೈಕ್ ಸವಾರ ಸ್ಥಳದಲ್ಲೇ ಸಾವು

ಹೊನ್ನಾವರದಲ್ಲಿ ಕಾಡುಹಂದಿ ಅಡ್ಡ ಬಂದ ಪರಿಣಾಮ ಬೈಕ್ ಸವಾರ ನಾಗರಾಜ ಜಟ್ಟು ಗೌಡ ಸ್ಥಳದಲ್ಲೇ ಮೃತಪಟ್ಟ ಘಟನೆ

ಹೊನ್ನಾವರ ಸೆಪ್ಟೆಂಬರ್ 2 : ರಸ್ತೆಯಲ್ಲಿ ತೆರಳುತ್ತಿದ್ದ ವೇಳೆ ಕಾಡುಹಂದಿ ಒಮ್ಮೆಲೆ ಅಡ್ಡ ಬಂದಿದೆ. ಕಾಡುಹಂದಿಯನ್ನು ತಪ್ಪಿಸಲು ಹೋದ ವೇಳೆ ಬೈಕ್ ನಿಯಂತ್ರಣ ತಪ್ಪಿದ್ದು, ಸವಾರ ಕೆಳಗಡೆ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಮೃತ ಬೈಕ್ ಸವಾರನನ್ನು ತಾಲೂಕಿನ ಕಡ್ಲೆಯ ನಿವಾಸಿ ನಾಗರಾಜ ಜಟ್ಟು ಗೌಡ (32) ಎಂದು ಗುರುತಿಸಲಾಗಿದೆ. ಪತ್ನಿಯನ್ನು ತವರು ಮನೆಯಲ್ಲಿ ಬಿಟ್ಟು ವಾಪಸ್ ಮನೆಗೆ ಅರೇಅಂಗಡಿ ಮಾರ್ಗದ ಮೂಲಕ ತೆರಳುವಾಗ ಈ ದುರ್ಘಟನೆ ಸಂಭವಿಸಿದೆ.

ಕೊಲೆ ಆರೋಪ: ಪತಿ, ಪತ್ನಿಗೆ ಜೀವಾವಧಿ ಶಿಕ್ಷೆ

ಕಾರವಾರ ಸೆಪ್ಟೆಂಬರ್ 2 : ಯಾವುದೋ ದ್ವೇಷದಿಂದ ವ್ಯಕ್ತಿಯೋರ್ವನನ್ನು ಕೊಲೆ ಮಾಡಿದ ಅಪರಾಧಿಗೆ ಜೀವಾವಧಿ ಶಿಕ್ಷೆ ಹಾಗೂ 10 ಸಾವಿರ ದಂಡ ಮತ್ತು ಕೊಲೆಗೆ ಸಹಕರಿಸಿದ ಇಬ್ಬರೂ ಅಪರಾಧಿಗಳಿಗೆ 3 ವರ್ಷ ಶಿಕ್ಷೆ ಹಾಗೂ 3 ಸಾವಿರ ದಂಡ ವಿಧಿಸಿ ಕೊಲೆಯಾದ ವ್ಯಕ್ತಿಯ ಪತ್ನಿಗೆ 25 ಸಾವಿರ ಪರಿಹಾರ ನೀಡುವಂತೆ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಕಾರವಾರ ಆದೇಶ ನೀಡಿದೆ.

ಮುಂಡಗೋಡ ತಾಲೂಕಿನ ಇಂದಿರಾ ನಗರದ ನಿವಾಸಿಯಾಗಿರುವ ಮೆಹಬೂಬಲಿ ಎಂಬಾತನನ್ನು ಡಿಸೆಂಬರ್ 31 2021 ರಂದು ಕೊಲೆ ಮಾಡಿ ಆತನ ಮೃತದೇಹವನ್ನು ಕಲ್ಲಳ್ಳಿ ಹಾಗೂ ಹನಮಾಪೂರ ಗ್ರಾಮಗಳ ಮಧ್ಯದಲ್ಲಿರುವ ಕಲ್ಲಳ್ಳಿ ಹಳ್ಳದಲ್ಲಿ ಆತನ ಮೋಟಾರ ಸೈಕಲ್ ಸಮೇತ ಎಸೆದು ಹೋಗಿದ್ದರು.

ಕಾರವಾರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಪತಿ-ಪತ್ನಿಗೆ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ವಿಧಿಸಿದ ಘಟನೆ

ಈ ಬಗ್ಗೆ ಮುಂಡಗೋಡ ಪೋಲೀಸ್ ಠಾಣೆಯಲ್ಲಿ ಮೃತ ವ್ಯಕ್ತಿಯ ತಮ್ಮ ದೂರು ದಾಖಲಿಸಿದ್ದರು. ಪ್ರಕರಣದ ತನಿಖೆ ಕೈಗೊಂಡ ಪೋಲೀಸರು ಕೊಲೆ ಆರೋಪಿಗಳಾದ ಮುಂಡಗೋಡ ತಾಲೂಕಿನ ಸಾಲಕೊಳ್ಳಿ ನಿವಾಸಿಸಿಗಳಾದ ಇಬ್ರಾಹಿಂ, ಷರೀಪ್ ಹಾಗೂ ನಾಝಿಯಾ ಎನ್ನುವವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು.

ಇದನ್ನೂ ಓದಿ: ಗಂಟಲಲ್ಲಿ ಅನ್ನ ಸಿಲುಕಿ ಯುವಕ ದುರ್ಮರಣ

ನ್ಯಾಯಾಲಯದ ಧೀರ್ಘ ಕಾಲ ವಿಚಾರಣೆಯಾಗಿ ಕೊಲೆ ಮಾಡಿದ ಅಪರಾಧಿಗೆ ಜೀವಾವಧಿ ಶಿಕ್ಷೆ ಹಾಗೂ 10 ಸಾವಿರ ದಂಡ ಮತ್ತು ಕೊಲೆಗೆ ಸಹಕರಿಸಿದ ಇಬ್ಬರೂ ಅಪರಾಧಿಗಳಿಗೆ 3 ವರ್ಷ ಶಿಕ್ಷೆ ಹಾಗೂ 3 ಸಾವಿರ ದಂಡ ವಿಧಿಸಿ ಕೊಲೆಯಾದ ವ್ಯಕ್ತಿಯ ಪತ್ನಿಗೆ 25 ಸಾವಿರ ಪರಿಹಾರ ನೀಡುವಂತೆ ಆದೇಶ ನೀಡಿದೆ.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಬೆಂಕಿ ಅವಘಡದಲ್ಲಿ ಅಪಾರಹಾನಿ: ಆದರೆ, ಮಾರಿಕಾಂಬೆಯ ಫೋಟೋ ಮಾತ್ರ ಸೇಫ್

ಅಂಕೋಲಾ: ಪಟ್ಟಣ ವ್ಯಾಪ್ತಿಯ ಲಕ್ಷ್ಮೇಶ್ವರ–ಕುಂಬಾರಕೇರಿ ಪ್ರದೇಶದಲ್ಲಿರುವ ಶ್ರೀ ಮಹಾಲಸಾ ವೆಲ್ಡಿಂಗ್ ಶಾಪ್ನಲ್ಲಿ ಫೆಬ್ರವರಿ 9ರ ಸೋಮವಾರ ರಾತ್ರಿ ಆಕಸ್ಮಿಕವಾಗಿ ಬೆಂಕಿ ಅವಘಡ ಸಂಭವಿಸಿ, ಲಕ್ಷಾಂತರ ರೂಪಾಯಿ ಮೌಲ್ಯದ ಆಸ್ತಿ ಹಾನಿಯಾಗಿರುವ ಘಟನೆ...

ಕಲೆ ಆತ್ಮ ಗೌರವದ ಸಂಕೇತ: ಮಂಕಾಳು ವೈದ್ಯ

ಮುರುಡೇಶ್ವರ: ಮುರುಡೇಶ್ವರದ ಯಕ್ಷರಕ್ಷೆ ವೇದಿಕೆಯಲ್ಲಿ ರಾಗಶ್ರೀ ಸಂಗೀತ ವಿದ್ಯಾಲಯ ಹಡಿನಬಾಳ ಇದರ ಮುರುಡೇಶ್ವರ ಶಾಖೆಯ ಪ್ರಥಮ ವರ್ಷದ ವಾರ್ಷಿಕೋತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಉಸ್ತುವಾರಿ ಸಚಿವರಾದ ಶ್ರೀ ಮಂಕಾಳು ವೈದ್ಯರು ಕಲೆ ಮತ್ತು...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಕಲೆ ಆತ್ಮ ಗೌರವದ ಸಂಕೇತ: ಮಂಕಾಳು ವೈದ್ಯ

ಮುರುಡೇಶ್ವರ: ಮುರುಡೇಶ್ವರದ ಯಕ್ಷರಕ್ಷೆ ವೇದಿಕೆಯಲ್ಲಿ ರಾಗಶ್ರೀ ಸಂಗೀತ ವಿದ್ಯಾಲಯ ಹಡಿನಬಾಳ ಇದರ ಮುರುಡೇಶ್ವರ ಶಾಖೆಯ ಪ್ರಥಮ...

ಬಡ, ಮಧ್ಯಮವರ್ಗ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಒಟ್ಟು 3 ಕೋಟಿ ಮೌಲ್ಯದ ವಿದ್ಯಾರ್ಥಿವೇತನ

ಉಡುಪಿ: ರಾಜ್ಯದಲ್ಲೇ ಪ್ರಸಿದ್ಧ ಪಡೆದ ಉಡುಪಿ ಲಾರ್ಡ್ಸ್ ಇಂಟರ್‌ನ್ಯಾಷನಲ್ ರೆಸಿಡೆನ್ಷಿಯಲ್ ಸ್ಕೂಲ್ , ಬಡ, ಮಧ್ಯಮವರ್ಗ...

ಶತರುದ್ರ ಮತ್ತು ಶತಚಂಡಿಕಾ ಯಾಗಕ್ಕೆ ಆತ್ಮೀಯ ಸ್ವಾಗತ

ಕಾರವಾರ: ದಿವಂಗತ ಕೃಷ್ಣ ಸೈಲ್ ಹಾಗೂ ಗಿರಿಜಾ ಕೃಷ್ಣ ಸೈಲ್ ರವರ ಆರ್ಶೀವಾದದೊಂದಿಗೆ ಈ ಕ್ಷೇತ್ರದ...

ಸಹಕಾರದ ಬೆಳಕಿನಲ್ಲಿ ಮಹತ್ವದ ಹೆಜ್ಜೆಯಿಟ್ಟ ‘ಸೂರ್ಯ’: ಹೊಸ ಶಾಖೆಗಳತ್ತ ನಾಗರಾಜ ನಾಯಕರ ದೃಷ್ಟಿ”

ಅಂಕೋಲಾ: ಅಂಕೋಲೆ ಎಂದಾಗ ಕರಿ ಇಸಾಡು ಮಾವಿನಹಣ್ಣು ನೆನಪಾದರೆ, “ಸೂರ್ಯ” ಸಹಕಾರಿ ಎಂದಾಗ ನಾಗರಾಜ ನಾಯಕ...

ಆಟೋರಿಕ್ಷಾಗೆ ಪ್ರವಾಸಿಗರಿದ್ದ ಟಿ.ಟಿ ವಾಹನ ಡಿಕ್ಕಿ : ಮಹಿಳೆಗೆ ಗಾಯ

ಅಂಕೋಲಾ: ಸಹೋದರಿಯ ಮನೆಗೆ ಬಂದು ವಾಪಸ್ ಮನೆಗೆ ಮರಳುತ್ತಿದ್ದ ಗೃಹಿಣಿ ಇದ್ದ ಆಟೋರಿಕ್ಷಾಗೆ ಪ್ರವಾಸಿಗರಿದ್ದ ಟಿ.ಟಿ...

ಶಾಲಾ ಮಕ್ಕಳ ಬಸ್ ಪಲ್ಟಿ: ವಿದ್ಯಾರ್ಥಿ ಸಾವು

ಹೊನ್ನಾವರ: ಗೇರುಸೊಪ್ಪ ಸುಳೆಮುರ್ಕಿ ಕ್ರಾಸ್ ಹತ್ತಿರ ಶಾಲಾಮಕ್ಕಳ ಪ್ರವಾಸಿ ಬಸ್ ಪಲ್ಟಿಯಾಗಿ, ವಿಧ್ಯಾರ್ಥಿ ಸಾವನಪ್ಪಿರುವ ಘಟನೆ...