ಅಂಕೋಲಾ ಬಾಳೆಗುಳಿ ಕ್ರಾಸ್ ಬಳಿ ಹೆದ್ದಾರಿ ಹೊಂಡದಲ್ಲಿ ಸಿಲುಕಿದ ಲಾರಿ
Big News

ಹೆದ್ದಾರಿ ಹೊಂಡದಲ್ಲಿ ಲಾರಿ ಸಿಲುಕಿ ಸಂಚಾರ ಅಸ್ತವ್ಯಸ್ತ: ಈ ನರಕ ಯಾತನೆಗೆ ಕೊನೆ ಎಂದು?

Share

ಅಂಕೋಲಾ, ಸೆಪ್ಟೆಂಬರ್ 3: ಹೊಂಡ ಗುಂಡಿಗಳ ಹೆದ್ದಾರಿ, ಸಾವು ನೋವು ಹಾಗೂ ಅಪಘಾತ ಮತ್ತು ಅವಾಂತರಗಳಿಗೆ ರಹದಾರಿ ಎನ್ನುವುದು ಅಂಕೋಲಾದಲ್ಲಿ ಸಾಮಾನ್ಯ ಎನಿಸುವಂತಾಗಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕಣ್ಣಿದ್ದೂ ಕುರುಡುತನ ಮುಂದುವರಿಸಿದoತಿದ್ದು ಅವರ ನಿರ್ಲಕ್ಷ್ಯ ಮತ್ತು ಬೇಜವಾಬ್ದಾರಿಯಿಂದ ಹೆದ್ದಾರಿ ಸಂಚಾರ ಮಾಡುವಾಗ ಹೆದರಿ ಹೆದರಿ ಸವಾರಿ ಮಾಡ ಬೇಕಾದ ದುಸ್ಥಿತಿ ತರದೋರಿದೆ.

ಅದಕ್ಕೆ ಉದಾಹರಣೆ ಎಂಬoತೆ ತಾಲೂಕಿನ ಬಾಳೆಗುಳಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ ಮಧ್ಯೆ ನಿರ್ಮಾಣವಾಗಿರುವ ಬೃಹತ್ ಹೊಂಡದಲ್ಲಿ ಸರಕು ತುಂಬಿದ ಲಾರಿಯೊಂದರ ಟಯರ್ ಸಿಲುಕಿದ ಪರಿಣಾಮ ಲಾರಿ ಮುಂದೆ ಚಲಿಸಲಾಗದೇ ಬಿಡಿ ಭಾಗಗಳಿಗೆ ಹಾನಿ ಸಂಭವಿಸಿ ಲಾರಿ ಅಪಾಯಕಾರಿ ರೀತಿಯಲ್ಲಿ ಕೆಟ್ಟು ನಿಂತ ಘಟನೆ ಸಂಭವಿಸಿದೆ.

ಹೆದ್ದಾರಿ ಹೊಂಡಗಳಿಂದ ಪ್ರತಿದಿನ ವಾಹನ ಹಾನಿ, ಅಪಘಾತ ಭೀತಿ

ತಾಲೂಕಿನ ಬಾಳೆಗುಳಿ ಕ್ರಾಸ್ ನಿಂದ ಯಲ್ಲಾಪುರ ಕಡೆ ಸಾಗುವ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಕೆಟ್ಟು ಹೊಂಡಮಯವಾಗಿ ಹಲವಾರು ಅಪಘಾತಗಳಿಗೆ ಕಾರಣವಾಗುತ್ತಿದ್ದು ರಸ್ತೆ ಹೊಂಡಗಳಿoದಾಗಿ ಪ್ರತಿದಿನ , ಹಲವಾರು ವಾಹನಗಳು ಕೆಟ್ಟು ನಿಲ್ಲುತ್ತಿವೆಯಲ್ಲದೇ, ಸುಮಾರು ಒಂದುವರೆ ತಾಸು ಪ್ರಯಾಣದ ಅವಧಿ ಈಗ ಎರಡೂವರೆ ತಾಸು ತೆಗೆದುಕೊಳ್ಳುತ್ತಿದೆ.

ಹುಬ್ಬಳ್ಳಿ ಕಡೆಯಿಂದ ಬರುತ್ತಿದ್ದ ಲಾರಿಯೊಂದು ಬಾಳೆಗುಳಿ ಕ್ರಾಸ್ ಬಳಿ ಬೃಹತ್ ರಸ್ತೆ ಹೊಂಡಕ್ಕೆ ಬಿದ್ದು ಲಾರಿಯ ಹಿಂಬದಿ ಟಯರ್ ಎಕ್ಸಲ್ ತುಂಡಾಗಿ ಲಾರಿ ರಸ್ತೆಗೆ ಉರುಳಿ ಬೀಳುವ ರೀತಿಯಲ್ಲಿ ಒರಗಿ ನಿಂತಿದ್ದು, ರಸ್ತೆಯಲ್ಲಿ ಸಂಚರಿಸುವ ಕಾರು ಮತ್ತಿತರ ವಾಹನಗಳ ಚಾಲಕರು ಲಾರಿ ತಮ್ಮ ವಾಹನಗಳ ಮೇಲೆ ಉರುಳಿ ಬೀಳುವುದೋ ಎನ್ನುವ ಭಯದಿಂದ ಸಂಚರಿಸುವoತಾಯ್ತು.

ಹೆದ್ದಾರಿ ಹೊಂಡಗಳಿಂದ ವಾಹನ ಹಾನಿ, ಅಪಘಾತ ಭೀತಿ

ರಾಷ್ಟ್ರೀಯ ಹೆದ್ದಾರಿ ರಸ್ತೆ ಹೊಂಡಗಳು ಇದೀಗ ವಾಹನಗಳ ಚಾಲಕರಿಗೆ ಭಯ ಹುಟ್ಟಿಸಿದರೆ ವಾಹನಗಳ ಬಿಡಿ ಭಾಗ ಕೆಟ್ಟು ಮಾಲಕರು ಸಾವಿರಾರು ರೂಪಾಯಿ ನಷ್ಟ ಅನುಭವಿಸುತ್ತಿದ್ದಾರೆ. ಈ ರಾಷ್ಟ್ರೀಯ ಹೆದ್ದಾರಿಯ ದುಸ್ಥಿತಿ ಇದೀಗ ದೇಶಾದ್ಯಂತ ಚರ್ಚೆಗೆ ಕಾರಣವಾಗಿದ್ದು, ಸುದ್ದಿ ಮಾಧ್ಯಮಗಳಲ್ಲಿ ಪ್ರಕಟವಾದಾಗ ಹೊಂಡ ಸರಿ ಪಡಿಸುವ ಕೆಲ ತೇಪೆ ಕಾರ್ಯ ನಡೆಸುವುದನ್ನು ಕಾಣಬಹುದಾಗಿದೆ.

ಅಂಕೋಲಾ ಹೆದ್ದಾರಿ ಅವ್ಯವಸ್ಥೆ: ಈ ಸುದ್ದಿಯನ್ನೂ ಓದಿ: ಹೊಂಡದಲ್ಲಿ ಗಿಡನೆಟ್ಟು ಸಾರ್ವಜನಿಕರ ಆಕ್ರೋಶ

ಬಹಳಷ್ಟು ಜನ ವಾಹನಗಳ ಮಾಲಿಕರು ಇಲ್ಲಿನ ರಸ್ತೆ ಮೂಲಕ ತಮ್ಮ ವಾಹನಗಳನ್ನು ಓಡಿಸಲು ಬಾಡಿಗೆ ಪಡೆಯಲು ನಿರಾಕರಿಸುತ್ತಿದ್ದಾರೆ ಎನ್ನುವ ಮಾತುಗಳು ಸಾರಿಗೆ ಉದ್ಯಮಿ ಗಣಪತಿ ನಾಯಕ ಮೂಲೆಮನೆ ಮತ್ತಿತರರಿಂದ ಕೇಳಿ ಬಂದಿದ್ದು, ಹೆದ್ದಾರಿ ಸಂಚಾರ ನರಕ ಯಾತನೆಗೆ ಕೊನೆ ಇಲ್ಲವೇ ಎಂದು ನಾಗರಿಕರು ಪ್ರಶ್ನಿಸುತ್ತಿದ್ದಾರೆ.

ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಗೋಕರ್ಣಕ್ಕೆ ಆಗಮಿಸಲಿದೆ ವರದಹಳ್ಳಿಯ ಶ್ರೀಧರ ಸ್ವಾಮಿಗಳ ಪಾದುಕೆ: ದರ್ಶನ ಮತ್ತು ಫಲಸಮರ್ಪಣೆಗೆ ಸುವರ್ಣಾವಕಾಶ

ಗೋಕರ್ಣ: ವರದಹಳ್ಳಿಯ ಸದ್ಗುರು ಶ್ರೀಧರ ಸ್ವಾಮಿಗಳ ಪಾದುಕೆ ಇದೇ ಏಪ್ರಿಲ್ 8ರ ಬುಧರವಾರ ಮತ್ತು 9ರ ಗುರುವಾರ, 10ರ ಶುಕ್ರವಾರ ಶ್ರೀಕ್ಷೇತ್ರ ಗೋಕರ್ಣಕ್ಕೆ ಆಗಮಿಸಲಿದೆ. ಏಪ್ರಿಲ್ 9 ರಂದು ರಥಬೀದಿಯಲ್ಲಿರುವ ರಾಮಚಂದ್ರ...

ಬಂಗಾರಮಕ್ಕಿಯಲ್ಲಿ ‘ಪ್ರಾಚೀನ ಆರೋಗ್ಯ ಪರಂಪರಾ ವೈದ್ಯ ಸಂಗಮ

ಹೊನ್ನಾವರ: ರಾಜ್ಯದ ಪ್ರತಿ ಗ್ರಾಮದಲ್ಲಿ ಔಷಧಿ ಗಿಡಗಳ ಪಾರ್ಕ್ ನಿರ್ಮಾಣ ಮಾಡಲಾಗುವುದು ಎಂದು ವಡ್ನಾಳ್ ಜಗದೀಶ್ ರವರು ಹೊನ್ನಾವರ ತಾಲೂಕಿನ ಬಂಗಾರಮಕ್ಕಿಯಲ್ಲಿ ‘ಪ್ರಾಚೀನ ಆರೋಗ್ಯ ಪರಂಪರಾ ವೈದ್ಯ ಸಂಗಮ’ ದಲ್ಲಿ ಹೇಳಿದರು....

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಲ್ಲಿ ಸಹಾಯಕ ಶಿಕ್ಷಕರು ಬೇಕಾಗಿದ್ದಾರೆ

ಕುಮಟಾ : ಅಂಕೋಲಾದ ಕೆನರಾ ವೆಲ್ಫೇರ್ ಟ್ರಸ್ಟ್ ನ ಕುಮಟಾ ಧಾರೇಶ್ವರದ ದಿನಕರ ಇಂಗ್ಲಿಷ್ ಮೀಡಿಯಂ...

ಅಲಂಕಾರ ಜ್ಯುವೆಲ್ಲರ್ಸ್ : ಅಕ್ಷಯ ತೃತೀಯ ವಿಶೇಷ ಆಫರ್

ಸುವರ್ಣ ಕ್ಷಣವನ್ನು ಇನ್ನಷ್ಟು ವಿಶೇಷವಾಗಿಸಿ : ಈ ಶುಭ ಅಕ್ಷಯ ತೃತೀಯದ ಪ್ರಯುಕ್ತ ಚಿನ್ನ ಮತ್ತು...

ಭಟ್ಕಳದಲ್ಲಿ 14 ಜಾನುವಾರಗಳ ರಕ್ಷಣೆ : ಇಬ್ಬರ ವಿರುದ್ಧ ಪ್ರಕರಣ ದಾಖಲು

ಭಟ್ಕಳ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬAಧಿಸಿದAತೆ ಇಬ್ಬರ ವಿರುದ್ಧ ಭಟ್ಕಳ ಪಟ್ಟಣ ಪೊಲೀಸ್...

ಮಹಾಶಿವರಾತ್ರಿ ಪುಣ್ಯಕಾಲದಲ್ಲಿ ಕಣಕಣೇಶ್ವರ ದೇವರ ನೂತನ ಭವ್ಯ ದೇವಸ್ಥಾನ ಲೋಕಾರ್ಪಣೆ :ಶಿಖರ ಕಲಶ ಪ್ರತಿಷ್ಠೆ – ಅಷ್ಟಬಂಧ ಸಮೇತ ನೂತನ ಶಿವಲಿಂಗ ಪ್ರತಿಷ್ಠಾ ಮಹೋತ್ಸವ

ಅಂಕೋಲಾ: ಪಟ್ಟಣದ ಕಾರವಾರ ರಸ್ತೆಯಲ್ಲಿರುವ ಪುರಾತನ ಪ್ರಸಿದ್ಧ ಶ್ರೀ ಕಣಕಣೇಶ್ವರ ದೇವಾಲಯವು ಮಹಾಶಿವರಾತ್ರಿ ಪುಣ್ಯಸಂದರ್ಭದಲ್ಲಿ ನೂತನ...

ಬೆಂಕಿ ಅವಘಡದಲ್ಲಿ ಅಪಾರಹಾನಿ: ಆದರೆ, ಮಾರಿಕಾಂಬೆಯ ಫೋಟೋ ಮಾತ್ರ ಸೇಫ್

ಅಂಕೋಲಾ: ಪಟ್ಟಣ ವ್ಯಾಪ್ತಿಯ ಲಕ್ಷ್ಮೇಶ್ವರ–ಕುಂಬಾರಕೇರಿ ಪ್ರದೇಶದಲ್ಲಿರುವ ಶ್ರೀ ಮಹಾಲಸಾ ವೆಲ್ಡಿಂಗ್ ಶಾಪ್ನಲ್ಲಿ ಫೆಬ್ರವರಿ 9ರ ಸೋಮವಾರ...

ಅಂಕೋಲಾದಲ್ಲಿ ಕರಾಳ ದಿನಾಚರಣೆ ಮತ್ತು ಬಂದ್ ಗೆ ಕರೆ

ಅಂಕೋಲಾ: ಕೇಣಿ ವಾಣಿಜ್ಯ ಬಂದರು ಯೋಜನೆ ವಿರೋಧಿಸಿ ನಡೆಯುತ್ತಿರುವ ಹೋರಾಟಕ್ಕೆ ನವೆಂಬರ್ 15ರಂದು ಒಂದು ವರ್ಷವಾಗಲಿದ್ದು...

ಕಲಾಸಿರಿ ಪ್ರಶಸ್ತಿಯು ಬದುಕಿನ ಸಾರ್ಥಕತೆಯ ಜ್ಞಾನದ ಬೆಳಕು ಬೆಳಗಲು ಸಾಧ್ಯ:ಪಿ. ಆರ್. ನಾಯ್ಕ

ಭಟ್ಕಳ : ಒಂದು ಹಣತೆಯಿಂದ ಹಲವು ಹಣತೆಗಳು ಬೆಳಗುವಂತೆ, ಕಲಾಸಿರಿಯು ಬದುಕಿನ ಸಾರ್ಥಕತೆಯ ಜ್ಞಾನದ ಬೆಳಕು...