ಉತ್ತರ ಕನ್ನಡದಲ್ಲಿ ಸೆಪ್ಟೆಂಬರ್ 6ರವರೆಗೆ ಮಳೆ | ಕುಮಟಾ–ಸಿದ್ದಾಪುರ ಗುಡ್ಡ ಕುಸಿತ ಸುದ್ದಿ
Important

ಸೆಪ್ಟೆಂಬರ್ 6ರ ವರೆಗೆ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ ಏನು?

Share

ಕಾರವಾರ, ಸೆಪ್ಟೆಂಬರ್ 3: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಚಂಡಮಾರುತದ ಪ್ರಭಾವದಿಂದಾಗಿ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿಯೂ ಸಹ ಸೆಪ್ಟೆಂಬರ್ 6ರ ವರೆಗೆ ಮಳೆ ಅಬ್ಬರಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 6 ರ ವರೆಗೆ ಅಲರ್ಟ್ ಘೋಷಿಸಲಾಗಿದೆ.

ಇದೇ ವೇಳೆ, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ಅಲ್ಲದೇ ಜಿಲ್ಲೆಯ ಸಾರ್ವಜನಿಕರು ಹಾಗೂ ಪ್ರವಾಸಿಗರು ನದಿ, ಜಲಪಾತ ಮತ್ತು ಸಮುದ್ರ ತೀರಕ್ಕೆ ತೆರಳದಂತೆ ಜಿಲ್ಲಾಡಳಿತ ಅದೇಶ ನೀಡಿದೆ.

ಕುಮಟಾ-ಸಿದ್ದಾಪುರ ರಾಜ್ಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ

ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು ಕುಮಟಾ-ಸಿದ್ದಾಪುರ ರಾಜ್ಯ ಹೆದ್ದಾರಿ ಸಮೀಪದ ಬಡಾಳದ ಹುಲಿದೇವರ ಕೊಡ್ಲ ಸಮೀಪ ಗುಡ್ಡ ಕುಸಿತ ಸಂಭವಿಸಿ ಕೆಲಕಾಲ ರಸ್ತೆ ಸಂಚಾರ ಸ್ಥಗಿತವಾದ ಘಟನೆ ನಡೆದಿದೆ. ಗುಡ್ಡ ಕುಸಿತವಾಗಿ ರಾಜ್ಯ ಹೆದ್ದಾರಿಯಲ್ಲಿ ಮಣ್ಣು ತುಂಬಿಕೊoಡಿತ್ತು. ಈ ಹಿನ್ನೆಲೆಯಲ್ಲಿ ರಸ್ತೆಯ ಒಂದು ಬದಿಯಲ್ಲಿ ಮಾತ್ರ ವಾಹನಗಳ ಸಂಚಾರ ನಡೆಸುವಂತಾಗಿತ್ತು.

ಗುಡ್ಡದ ಮಣ್ಣು ರಸ್ತೆಯಲ್ಲಿ ಆವರಿಸಿ ಹೆದ್ದಾರಿ ಬಂದ್ ಆಗುವ ಆತಂಕ ಎದುರಾಗಿತ್ತು. ವಿಷಯ ತಿಳಿದ ತಾಲೂಕಾಡಳಿತದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಜೆಸಿಬಿ ಯಂತ್ರಗಳ ಮೂಲಕ ಕಾರ್ಯಾಚರಣೆ ನಡೆಸಿ ರಸ್ತೆಯಲ್ಲಿ ಬಿದ್ದಿದ್ದ ಮಣ್ಣನ್ನು ತೆರವುಗೊಳಿಸಿದ್ದಾರೆ.

ದಟ್ಟಾರಣ್ಯ ಪ್ರದೇಶದಲ್ಲಿ ಮತ್ತೆ ಆತಂಕ

ಬಡಾಳದ ದಟ್ಟಾರಣ್ಯದಲ್ಲಿ ಗುಡ್ಡ ಕುಸಿತ ಸಂಭವಿಸಿರುವ ವಿಚಾರ ತಿಳಿದ ಬಳಿಕ ಅಲ್ಲಿಯ ಸುತ್ತಮುತ್ತ ಪ್ರದೇಶಗಳಲ್ಲಿ ಮತ್ತೆ ಆತಂಕದ ಪರಿಸ್ಥಿತಿ ನಿರ್ಮಾಣವಾಗಿದೆ. ಗುಡ್ಡದಿಂದ ಕಲ್ಲು-ಮಣ್ಣು ಹೆದ್ದಾರಿಯ ಮೇಲೆ ಬಂದು ಬೀಳುತ್ತಿರುವುದರಿಂದ ವಾಹನ ಸವಾರರು ಹಾಗೂ ಸ್ಥಳೀಯರು ಆತಂಕಗೊoಡಿದ್ದಾರೆ.

ವಿಸ್ಮಯ ನ್ಯೂಸ್, ದೀಪೇಶ್ ನಾಯ್ಕ, ಕುಮಟಾ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಕುಮಟಾ ಪೊಲೀಸ್ ಗಣೇಶೋತ್ಸವ ಸಂಭ್ರಮ: ನೂರಾರು ಭಕ್ತರಿಂದ ಪ್ರಸಾದ ಸ್ವೀಕಾರ

ಕುಮಟಾ: ಪಟ್ಟಣದ ಎಲ್ಲಡೆ ಸಂಭ್ರಮದಿoದ ಗಣೇಶ ಚತುರ್ಥಿಯನ್ನು ಆಚರಿಸಲಾಗಿದ್ದು ಕುಮಟಾ ಪೊಲೀಸ್ ಠಾಣೆಯ ಆರಾಧ್ಯ ದೇವರು ಶ್ರೀ ಗೊಂಬೆ ದೇವಸ್ಥಾನದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಶ್ರೀ ಮಹಾ ಗಣಪತಿ ಪ್ರತಿಷ್ಠಾಪಿಸಿ...

ಮಗಳ ಹುಟ್ಟುಹಬ್ಬದಂದು ಸೇವಾಶ್ರಮ ನಿವಾಸಿಗಳಿಗೆ ಪ್ರೀತಿಯ ಸೇವೆ: ವಸಂತ ನಾಯಕ ಕುಟುಂಬದ ಮಾನವೀಯ ನೆರವು

ಅಂಕೋಲಾ: ಜಿಲ್ಲೆಯ ಸಹಕಾರಿ ಕ್ಷೇತ್ರದಲ್ಲಿ ಅಪಾರ ಅನುಭವ, ಹಾಗೂ ಸಮಾಜದಲ್ಲಿ ಹಲವು ವಿದಾಯಕ ಕೆಲಸಗಳ ಮೂಲಕ ತಮ್ಮನ್ನು ಗುರುತಿಸಿಕೊಂಡಿರುವ ಶ್ರೀರಾಮ ಪರಿಸರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ವಸಂತ ನಾಯಕ...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಮನೆಯಿಂದ ಹೋದ ಮಹಿಳೆ ನಾಪತ್ತೆ: ಸುಳಿವು ಸಿಕ್ಕರೆ ಮಾಹಿತಿ ನೀಡುವಂತೆ ಮನವಿ

ಮುಂಡಗೋಡ: ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಕಾಣೆಯಾದವರ ಬಗ್ಗೆ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಮುಂಡಗೋಡು ನಿವಾಸಿಯಾಗಿದ್ದ...

ಮಗಳ ಹುಟ್ಟುಹಬ್ಬದಂದು ಸೇವಾಶ್ರಮ ನಿವಾಸಿಗಳಿಗೆ ಪ್ರೀತಿಯ ಸೇವೆ: ವಸಂತ ನಾಯಕ ಕುಟುಂಬದ ಮಾನವೀಯ ನೆರವು

ಅಂಕೋಲಾ: ಜಿಲ್ಲೆಯ ಸಹಕಾರಿ ಕ್ಷೇತ್ರದಲ್ಲಿ ಅಪಾರ ಅನುಭವ, ಹಾಗೂ ಸಮಾಜದಲ್ಲಿ ಹಲವು ವಿದಾಯಕ ಕೆಲಸಗಳ ಮೂಲಕ...

ಅಬ್ದುಲ್ ಕಲಾಂ ಉತ್ತಮ ಶಿಕ್ಷಕ ಪ್ರಶಸ್ತಿಗೆ ಸಿದ್ದಾಪುರ ತಾಲೂಕಿನ ಆರು ಶಿಕ್ಷಕರು ಆಯ್ಕೆ

ಸಿದ್ದಾಪುರ: 2025ನೇ ಸಾಲಿನ ಸಿದ್ದಾಪುರ ತಾಲೂಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿoದ ನೀಡುವ ಡಾ. ಎ.ಪಿ.ಜೆ...

Uttara Kannada Crime Roundup: ಪ್ರಮುಖ ಸುದ್ದಿಗಳು

ಕೆರೆಗೆ ಹಾರಿ ಸಾವಿಗೆ ಶರಣಾದ ವಿದ್ಯಾರ್ಥಿನಿ ಶಿರಸಿ ಸೆಪ್ಟೆಂಬರ್ 2: ಕೆರೆಗೆ ಹಾರಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ...

ಗಂಟಲಲ್ಲಿ ಅನ್ನ ಸಿಲುಕಿ ಯುವಕ ದುರ್ಮರಣ

ಕಾರವಾರ: ಊಟ ಮಾಡುವಾಗ ಅನ್ನ ಗಂಟಲಲ್ಲಿ ಸಿಲುಕಿ ಯುವಕನೊಬ್ಬ ಸಾವನ್ನಪ್ಪಿದ ಘಟನೆ ಕಾರವಾರ ತಾಲೂಕಿನ ಬಿಣಗಾದಲ್ಲಿ...

ಕಪ್ ಎತ್ತಿ ಹಿಡಿದ ಗಣಪತಿ: ಗಮನ ಸೆಳೆದ ಆರ್‌ಸಿಬಿ ವಿಜಯೋತ್ಸವ ಶೈಲಿಯ ಗಣೇಶ

ಅಂಕೋಲಾ: ಇತ್ತೀಚೆಗೆ ನಡೆದಿದ್ದ ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಆರ್‌ಸಿಬಿ ತಂಡದ ವಿಜಯವನ್ನು ಸಂಭ್ರಮಿಸುವಂತೆ,ಮೂಡಿ ಬಂದ ಗಣಪನ...

ಭಟ್ಕಳದಲ್ಲಿ ದೇವಸ್ಥಾನದ ಹುಂಡಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಬಂಧನ

ಭಟ್ಕಳ: ಶ್ರೀ ಕಂಚಿನ ದುರ್ಗಾ ಪರಮೇಶ್ವರಿ ದೇವಸ್ಥಾನದ ಹುಂಡಿ ಕಳ್ಳತನ ಪ್ರಕರಣದಲ್ಲಿ ಪೊಲೀಸರು ಇಬ್ಬರು ಆರೋಪಿಗಳನ್ನು...

ಗೋಕರ್ಣ ಮಾದನಗೇರಿ ಶಿವನಾಥ ಮಂದಿರದಲ್ಲಿದೆ ಸಂತಾನ ಗಣಪತಿ

ಗೋಕರ್ಣ, ಆಗಸ್ಟ್ 30: ಶ್ರೀ ಕ್ಷೇತ್ರ ಗೋಕರ್ಣ ಮಾದನಗೇರಿ ಶಿವನಾಥ ಮಂದಿರದಲ್ಲಿ ಮಹಾಲೆ ಮನೆತನದ ಗಣಪತಿ...