"ಕುಮಟಾ ಪೊಲೀಸ್ ಠಾಣೆಯಲ್ಲಿ ಗಣೇಶ ಚತುರ್ಥಿ ಪೂಜೆ"
Big News

ಕುಮಟಾ ಪೊಲೀಸ್ ಗಣೇಶೋತ್ಸವ ಸಂಭ್ರಮ: ನೂರಾರು ಭಕ್ತರಿಂದ ಪ್ರಸಾದ ಸ್ವೀಕಾರ

Share

ಕುಮಟಾ: ಪಟ್ಟಣದ ಎಲ್ಲಡೆ ಸಂಭ್ರಮದಿoದ ಗಣೇಶ ಚತುರ್ಥಿಯನ್ನು ಆಚರಿಸಲಾಗಿದ್ದು ಕುಮಟಾ ಪೊಲೀಸ್ ಠಾಣೆಯ ಆರಾಧ್ಯ ದೇವರು ಶ್ರೀ ಗೊಂಬೆ ದೇವಸ್ಥಾನದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಶ್ರೀ ಮಹಾ ಗಣಪತಿ ಪ್ರತಿಷ್ಠಾಪಿಸಿ ಪೂಜಿಸಲಾಯಿತು. 59 ನೇ ವರ್ಷದ ಗಣೇಶ ಚತುರ್ಥಿಯ ಅಂಗವಾಗಿ ಇಂದು ಸತ್ಯನಾರಾಯಣ ಪೂಜೆಯನ್ನು ಹಮ್ಮಿಕೊಳ್ಳಲಾಗಿತ್ತು. ಶ್ರೀದೇವರ ಸನ್ನಿಧಿಯಲ್ಲಿ ಪೋಲೀಸ್ ಸಿಬ್ಬಂದಿಗಳು ಹಾಗೂ ಖ್ಯಾತಕಲಾವಿದರಿಂದ ಭಕ್ತಿ ಭಜನೆ ಕಾರ್ಯಕ್ರಮ ನಡೆದವು.

ಕುಮಟಾ ಪೊಲೀಸ್ ಠಾಣೆಯ ಆರಾಧ್ಯ ದೇವರು ಶ್ರೀ ಗೊಂಬೆ ಗಣಪತಿ

ಗಣೇಶ ಮಂಟಪವನ್ನು ಸುಂದರವಾಗಿ ಅಲಂಕೃತಗೊಳಿಸಲಾಗಿತ್ತು. ವಿವಿಧ ಹೂವುಗಳಿಂದ ಮೂರ್ತಿಯನ್ನು ಶೃಂಗರಿಸಲಾಗಿತ್ತು. ಪೋಲೀಸ್ ಸಿಬ್ಬಂದಿಗಳು ಕುಟುಂಬ ಸಮೇತರಾಗಿ ಆಗಮಿಸಿ ಗಣೇಶನಿಗೆ ಹಣ್ಣುಕಾಯಿ ಸೇವೆ, ಪಂಚಗಜ್ಜಾಯ ಸೇವೆ ಸಲ್ಲಿಸಿ ತಮ್ಮ ಇಷ್ಠಾರ್ಥ ಸಿದ್ದಿಗಾಗಿ ಪ್ರಾರ್ಥಿಸಿಕೊಂಡರು.

ಕುಮಟಾ ಪೊಲೀಸ್ ಗಣಪತಿ ಪ್ರಸಾದ ಭೋಜನ

ನoತರ ದೇವರಿಗೆ ಮಹಾಮಂಗಳಾರತಿ ಮಾಡಿ ತೀರ್ಥ ಪ್ರಸಾದವಿತರಣೆ ನಡೆಯಿತು. ನಂತರ ಕುಮಟಾ ಪೋಲೀಸ್ ಠಾಣೆಯ ವತಿಯಿಂದ ಪ್ರಸಾದ ಭೋಜನದ ವ್ಯವಸ್ಥೆ ಮಾಡಲಾಗಿತ್ತು. ನೂರಾರು ಜನರು ಆಗಮಿಸಿ ಪ್ರಸಾದ ಭೋಜನ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಕುಮಟಾ ತಹಶೀಲ್ದಾರ ಶ್ರೀಕೃಷ್ಣ ಕಾಮ್ಕರ್, ಗ್ರೇಡ್ 2 ತಹಶೀಲ್ದಾರ್ ಸತೀಶ ಗೌಡ, ಖ್ಯಾತ ವೈದ್ಯರಾದ ಡಾ. ಜಿ.ಜಿ. ಹೆಗಡೆ, ಕಾಂಗ್ರೆಸ್ ಮುಖಂಡರಾದ ಭುವನ್ ಭಾಗ್ವತ್, ಹೊನ್ನಪ್ಪ ನಾಯ್ಕ, ಕುಮಟಾ ವೃತ್ತ ನಿರೀಕ್ಷಕರಾದ ಯೋಗೇಶ ಕೆ.ಎಂ. ಪಿ.ಎಸ್.ಐಗಳಾದ ರವಿ ಗುಡ್ಡಿ, ಮಂಜುನಾಥ ಗೌಡರ್, ಮಯೂರ ಪಟ್ಟಣ ಶೆಟ್ಟಿ, ಸಾವಿತ್ರಿ ನಾಯಕ್ ಸೇರಿದಂತೆ ಪೋಲೀಸ್ ಸಿಬ್ಬಂದಿಗಳು ಹಾಜರಿದ್ದರು.

ಇದನ್ನೂ ಓದಿ: KEB ಗಣಪನಿಗೆ 48 ನೇ ವಾರ್ಷಿಕ ಸಂಭ್ರಮ

ವಿಸ್ಮಯ ನ್ಯೂಸ್ ದೀಪೇಶ ನಾಯ್ಕ ಕುಮಟಾ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಆಯಕಟ್ಟಿನ ಪ್ರದೇಶದಲ್ಲಿರುವ 8 ಗುಂಟೆ ಜಾಗ ಮಾರಾಟಕ್ಕಿದೆ

ಅಂಕೋಲಾ: ತಾಲೂಕಿನ ಬಳಲೆಯಲ್ಲಿ ಅತ್ಯುತ್ತಮ ಸೌಕರ್ಯ ಹೊಂದಿರುವ, ಆಯಕಟ್ಟಿನ ಪ್ರದೇಶದಲ್ಲಿರುವ NA ಆದ ಜಾಗ ಮಾರಾಟಕ್ಕಿದೆ. NA ಆದ ( ರೆಸಿಡೆನ್ಷಿಯಲ್ ) 8 ಗುಂಟೆ ಜಾಗ ಮಾರಾಟಕ್ಕಿದೆ. 56 ಲಕ್ಷ...

ಅಂಕೋಲಾದಲ್ಲಿ ಇಂದು ಪಂಚದೇವರ ದೊಡ್ಡ ಕಾರ್ತಿಕೋತ್ಸವ : ಶಿರ ಕುಳಿ ಕಾನದೇವಿ ದೇವಸ್ಥಾನದ ಹತ್ತಿರ ವನಭೋಜನಕ್ಕೆ ನಡೆಯುತ್ತಿದೆ ಸಿದ್ದತೆ

ಅಂಕೋಲಾ: ತಾಲೂಕಿನ ಸಂಸ್ಕೃತಿಯ ಆರಾಧನಾ ಪದ್ಧತಿಯಾಗಿ ಹಲವು ತಲೆಮಾರುಗಳಿಂದ ಆಚರಿಸಲ್ಪಡುತ್ತಬಂದಿರುವ ಪಂಚ ದೇವರುಗಳ ದೊಡ್ಡ ಕಾರ್ತಿಕೋತ್ಸವ ಮತ್ತು ವನಭೋಜನ ಮಹೋತ್ಸವ ಈ ಬಾರಿ ನವೆಂಬರ್ 7ರ ಶುಕ್ರವಾರ (ಇಂದು), ಮತ್ತು 8...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಅಂಕೋಲಾದಲ್ಲಿ ಕರಾಳ ದಿನಾಚರಣೆ ಮತ್ತು ಬಂದ್ ಗೆ ಕರೆ

ಅಂಕೋಲಾ: ಕೇಣಿ ವಾಣಿಜ್ಯ ಬಂದರು ಯೋಜನೆ ವಿರೋಧಿಸಿ ನಡೆಯುತ್ತಿರುವ ಹೋರಾಟಕ್ಕೆ ನವೆಂಬರ್ 15ರಂದು ಒಂದು ವರ್ಷವಾಗಲಿದ್ದು...

ಕಲಾಸಿರಿ ಪ್ರಶಸ್ತಿಯು ಬದುಕಿನ ಸಾರ್ಥಕತೆಯ ಜ್ಞಾನದ ಬೆಳಕು ಬೆಳಗಲು ಸಾಧ್ಯ:ಪಿ. ಆರ್. ನಾಯ್ಕ

ಭಟ್ಕಳ : ಒಂದು ಹಣತೆಯಿಂದ ಹಲವು ಹಣತೆಗಳು ಬೆಳಗುವಂತೆ, ಕಲಾಸಿರಿಯು ಬದುಕಿನ ಸಾರ್ಥಕತೆಯ ಜ್ಞಾನದ ಬೆಳಕು...

ವರ್ಷಾಂತ್ಯಕ್ಕೆ 12 ಲಕ್ಷ ಲಾಭ ಗಳಿಸಿದ ಸೀತಾರಾಮ ಸಹಕಾರಿ ಸಂಘ

ಭಟ್ಕಳ: ಆರ್ಥಿಕ ವರ್ಷಾಂತ್ಯಕ್ಕೆ ಸಹಕಾರಿಯು 12 ಲಕ್ಷ ಲಾಭ ಗಳಿಸಿದೆ ಎಂದು ಶ್ರೀ ಸೀತಾರಾಮ ಸೌಹಾರ್ಧ...

ಬೈಕಿಗೆ ಡಿಕ್ಕಿ ಹೊಡದ ಲಾರಿ: ಸ್ಥಳದಲ್ಲಿಯೇ ಬೈಕ್ ಸವಾರ ದುರ್ಮರಣ: ಹಿಟ್ & ರನ್ ಕೇಸ್ ದಾಖಲು

ಯಲ್ಲಾಪುರ: ಬೈಕಿಗೆ ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು ಹಿಂಬದಿ ಸವಾರ ತೀವ್ರವಾಗಿ...

ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿಟ್ಟಿದ್ದ ಬೈಕ್ ಕಳ್ಳತನ : ಆರೋಪಿ ಬಂಧನ

ಅಂಕೋಲಾ: ಪಟ್ಟಣದಲ್ಲಿ ನಿಲ್ಲಿಸಿಟ್ಟ ಮೋಟಾರ್ ಬೈಕ್ ಕಳ್ಳತನ ಮಾಡಿದ್ದ ಆರೋಪಿತನನ್ನು ಅಂಕೋಲಾ ಪೊಲೀಸರು ವಾಹನ ಸಮೇತ...

ರಾಷ್ಟ್ರೀಯ ಮೆಗಾ ಲೋಕ ಅದಾಲತ್ ನಲ್ಲಿ ಒಟ್ಟೂ 167 ಪ್ರಕರಣಗಳು ರಾಜೀ ಸಂಧಾನದಲ್ಲಿ ಇತ್ಯರ್ಥ

ಅಂಕೋಲಾ: ತಾಲೂಕಿನ ನ್ಯಾಯಾಲಯಗಳ ಸಂಕೀರ್ಣದಲ್ಲಿ ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮ ಸೆ 13 ರ ಶನಿವಾರ...

ಮೂರೂರಿನ ಪ್ರಗತಿ ವಿದ್ಯಾಲಯದಲ್ಲಿ ಶಿಕ್ಷಕ ದಿನಾಚರಣೆ: ಶಿಕ್ಷಕ ರಾಷ್ಟ್ರ ರಕ್ಷಕ ಕಾರ್ಯಕ್ರಮ

ಕುಮಟಾ: ತಾಯಿ ಮಗುವಿಗೆ ಜನ್ಮ ನೀಡುತ್ತಾಳೆ, ಶಿಕ್ಷಕ ಆ ಮಗುವಿಗೆ ಜ್ಞಾನ ನೀಡಿ ಕಣ್ತೆರೆಯಿಸಿ ಒಳ್ಳೆಯ...