ಚಂದ್ರಗ್ರಹಣ 2025 ಸಮಯ ಮತ್ತು ಸೂತಕ ಕಾಲ ವಿವರ
Important

ಐತಿಹಾಸಿಕ ಚಂದ್ರಗ್ರಹಣ: ಆರಂಭ-ಮುಕ್ತಾಯ: ಚಂದ್ರಗ್ರಹಣ ಕುರಿತ ಸಾಮಾನ್ಯ ಪ್ರಶ್ನೆಗಳಿಗೆ ಉತ್ತರ

Share

ವಿಸ್ಮಯ ಟಿ.ವಿ ನ್ಯೂಸ್ ಡೆಸ್ಕ್: ಭಾರತ ಸೇರಿದಂತೆ ವಿಶ್ವದಾದ್ಯಂತ 2025ರ ಎರಡನೇ ಮತ್ತು ವರ್ಷದ ಕೊನೆಯ ಚಂದ್ರಗ್ರಹಣ ಸೆಪ್ಟೆಂಬರ್ 7 ರಂದು ಸಂಭವಿಸಲಿದೆ. ಈ ಸಮಯದಲ್ಲಿ ಚಂದ್ರ ಕೆಂಪು ಬಣ್ಣದಲ್ಲಿ ಗೋಚರಿಸಲಿದ್ದು, ಹೀಗಾಗಿ “ಬ್ಲಡ್ ಮೂನ್” ಎಂದು ಕರೆಯಲಾಗುತ್ತದೆ.

ಗ್ರಹಣ ಅಂದ ತಕ್ಷಣ ಕೆಲ ಗೊಂದಲಗಳು ಸಾಮಾನ್ಯ. ಗ್ರಹಣದ ವೇಳೆ ಏನು ಮಾಡಬೇಕು? ಏನು ಮಾಡಬಾರದು. ಆರಂಭ-ಮುಕ್ತಾಯ ಯಾವಾಗ? ಬರಿಗಣ್ಣಿನಲ್ಲಿ ನೋಡಬಹುದಾ? ಚಂದ್ರಗ್ರಹಣ ಕುರಿತ ಇಂತ ಸಾಮಾನ್ಯ ಪ್ರಶ್ನೆಗಳಿಗೆ ಉತ್ತರಿಸುವ ಪ್ರಯತ್ನ ಇಲ್ಲಿದೆ. ಗ್ರಹಣದ ಸಮಯ, ಸೂತಕ, ವೀಕ್ಷಣೆ, ಜ್ಯೋತಿಷ್ಯ ಪ್ರಭಾವ ಸೇರಿದಂತೆ ಸಾಮಾನ್ಯವಾಗಿ ಕೇಳುವ ಪ್ರಶ್ನೆಗಳಿಗೆ ಉತ್ತರ ಇಲ್ಲಿದೆ.

ಭಾರತದಲ್ಲಿ ಚಂದ್ರಗ್ರಹಣದ ಸಮಯ

ಆರಂಭ: ಸೆಪ್ಟೆಂಬರ್ 7ರ ರಾತ್ರಿ 09:57 ನಿಮಿಷ
ಮುಕ್ತಾಯದ ಸಮಯ: ಸೆಪ್ಟೆಂಬರ್ 8ರ ಬೆಳಿಗ್ಗೆ 01:26 ನಿಮಿಷ
ಉತ್ತುಂಗದ ಸಮಯ: ರಾತ್ರಿ 11:00 ರಿಂದ 12:22 ನಿಮಿಷದ ವರೆಗೆ
ಒಟ್ಟು ಸಮಯ: 3 ಗಂಟೆ 29 ನಿಮಿಷ

ಸೂತಕ ಕಾಲ ಯಾವಾಗ ಪ್ರಾರಂಭ

ಭಾರತೀಯ ಪರಂಪರೆ ಮತ್ತು ಹಿಂದು ಧಾರ್ಮಿಕ ನಂಬಿಕೆ ಪ್ರಕಾರ, ಚಂದ್ರಗ್ರಹಣ ಆರಂಭಕ್ಕೂ 9 ಗಂಟೆಗಳ ಮೊದಲು ಸೂತಕ ಕಾಲ ಪ್ರಾರಂಭವಾಗುತ್ತದೆ. ಸೆಪ್ಟೆಂಬರ್ 7ರ ಮಧ್ಯಾಹ್ನ 12:57ಕ್ಕೆ ಸೂತಕ ಕಾಲ ಪ್ರಾರಂಭವಾಗಲಿದ್ದು, ಗ್ರಹಣ ಮುಗಿದ ತಕ್ಷಣ ಸೂತಕ ಕಾಲವೂ ಮುಕ್ತಾಯವಾಗಲಿದೆ. ಸಾಮಾನ್ಯವಾಗಿ ಸೂತಕ ಕಾಲದಲ್ಲಿ ದೇವಾಲಯಗಳು ಮುಚ್ಚಲ್ಪಟ್ಟು, ಗ್ರಹಣದ ನಂತರ ಶುದ್ಧೀಕರಣ ವಿಧಿಗಳೊಂದಿಗೆ ತೆರೆಯಲಾಗುತ್ತದೆ. ಇದು ಅವರವರ ನಂಬಿಕೆಯ ಪ್ರಶ್ನೆ. ನಂಬಿಕೆಯಿದ್ದವರು ಅನುಸರಿಸಬಹುದು.

ಈ ಗ್ರಹಣ ಭಾರತದಲ್ಲಿ ಎಲ್ಲಿ ಗೋಚರಿಸುತ್ತದೆ?

ದೇಶವ್ಯಾಪಿಯಾಗಿ ಪೂರ್ಣವಾಗಿ ಕಾಣಸಿಗುತ್ತದೆ. ಆದರೆ ಹವಾಮಾನ ಸಹಕಾರ ಅವಶ್ಯಕ. ಮೋಡೆ ಅಥವಾ ಮಳೆಯ ವಾತಾವರಣ ಇದ್ದಲ್ಲಿ ಕಷ್ಟಸಾಧ್ಯವಾಗಬಹುದು. ಸಾಮಾನ್ಯವಾಗಿ ಚಂದ್ರಗ್ರಹಣವು ಕೆಲವು ಪ್ರದೇಶಗಳಲ್ಲಿ ಮಾತ್ರ ಗೋಚರಿಸುತ್ತದೆ. ಆದರೆ, ಈ ಬಾರಿಯ ಗ್ರಹಣ ಏಷ್ಯಾ, ಆಫ್ರಿಕಾ, ಯುರೋಪ್, ಅಮೆರಿಕಾ ಸೇರಿಂದತೆ ಹೆಚ್ಚಿನ ಭಾಗಗಳಿಂದ ವೀಕ್ಷಿಸಲು ಸಾಧ್ಯವಾಗುವುದು ವಿಶೇಷ.

Blood Moon 2025: ಬರಿಗಣ್ಣಿನಿಂದ ವೀಕ್ಷಿಸಬಹುದಾ?

ಹೌದು. ಹೌದು, ಈ ರಕ್ತ ಚಂದ್ರಗ್ರಹಣವನ್ನು ಬೈನಾಕ್ಯುಲರ್, ಟೆಲಿಸ್ಕೋಪ್ ಅಥವಾ ಬರಿಗಣ್ಣಿನಿಂದ ಸುರಕ್ಷಿತವಾಗಿ ವೀಕ್ಷಿಸಬಹುದಾಗಿದೆ. ಈ ಚಂದ್ರ ಗ್ರಹಣವನ್ನು ವೀಕ್ಷಿಸಲು ಯಾವುದೇ ವಿಶೇಷ ಕನ್ನಡಕ ಅಗತ್ಯವಿಲ್ಲ. ಸೂರ್ಯ ಗ್ರಹಣದಂತೆ ಚಂದ್ರ ಗ್ರಹಣವು ಕಣ್ಣಿಗೆ ಅಪಾಯವಲ್ಲ. ಚಂದ್ರ ಗ್ರಹಣ ಸುರಕ್ಷಿತ. ಬರಿಗಣ್ಣಿನಿಂದ ನೋಡಬಹುದು.

ಜ್ಯೋತಿಷ್ಯದ ಪ್ರಕಾರ ರಾಶಿ ಫಲ

ಶುಭಫಲ: ಕನ್ಯಾ, ಧನು, ಮೇಷ, ವೃಷಭ
ಅಶುಭಫಲ: ಮೀನು, ಕರ್ಕ, ವೃಶ್ಚಿಕ, ಕುಂಭ
ಮಿಶ್ರಫಲ: ಸಿಂಹ, ಮಕರ, ಮಿಥುನ, ತುಲಾ

ಯಾವ ಸಮಯದಲ್ಲಿ ಚಂದ್ರನು ಕೆಂಪಾಗಿರುತ್ತಾನೆ?

ರಾತ್ರಿ 11:00-12:23ರ ಅವಧಿಯಲ್ಲಿ ಚಂದ್ರ ಕೆಂಪಾಗುತ್ತಾನೆ.

ಮುಂದಿನ ಸಂಪೂರ್ಣ ಚಂದ್ರಗ್ರಹಣ ಯಾವಾಗ?

ಜಗತ್ತಿನ ಬೇರೆ ಭಾಗಗಳಿಗೆ ಮಾರ್ಚ್ 2-3, 2026 ರಂದು ಸಂಪೂರ್ಣ ಚಂದ್ರಗ್ರಹಣ ಸಂಭವಿಸಲಿದೆ.

ಈ ಚಂದ್ರಗ್ರಹಣದ ಲೈವ್ ವೀಕ್ಷಿಸುವುದು ಹೇಗೆ?

ಹವಾಮಾನ ಅಥವಾ ಸ್ಥಳೀಯ ಕಾರಣಗಳಿಂದ ನೋಡಲು ಸಾಧ್ಯವಾಗದಿದ್ದರೂ, ಆನ್‌ಲೈನ್‌ನಲ್ಲಿ ಲೈವ್ ವೀಕ್ಷಿಸಬಹುದು.

ಗ್ರಹಣ ಹೇಗೆ ಸಂಭವಿಸುತ್ತದೆ

ಸೂರ್ಯ, ಭೂಮಿ ಹಾಗು ಚಂದ್ರರು ಒಂದೇ ರೇಖೆಯಲ್ಲಿ ಬಂದಾಗ, ಭೂಮಿಯು ಸೂರ್ಯನ ಬೆಳಕನ್ನು ಚಂದ್ರನನ್ನು ತಲುಪುವುದನ್ನು ತಡೆ ಹಿಡಿಯುತ್ತದೆ. ಈ ವೇಳೆ ಚಂದ್ರನು ಗೋಚರಿಸುವುದಿಲ್ಲ. ಇದನ್ನು ಚಂದ್ರಗ್ರಹಣ ಎಂದು ಕರೆಯಲಾಗುತ್ತದೆ.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಸಹಕಾರದ ಬೆಳಕಿನಲ್ಲಿ ಮಹತ್ವದ ಹೆಜ್ಜೆಯಿಟ್ಟ ‘ಸೂರ್ಯ’: ಹೊಸ ಶಾಖೆಗಳತ್ತ ನಾಗರಾಜ ನಾಯಕರ ದೃಷ್ಟಿ”

ಅಂಕೋಲಾ: ಅಂಕೋಲೆ ಎಂದಾಗ ಕರಿ ಇಸಾಡು ಮಾವಿನಹಣ್ಣು ನೆನಪಾದರೆ, “ಸೂರ್ಯ” ಸಹಕಾರಿ ಎಂದಾಗ ನಾಗರಾಜ ನಾಯಕ ಅರೆಗದ್ದೆ ನೆನಪಾಗುತ್ತಾರೆ. ಅದರ ಬೆನ್ನಲ್ಲೇ ರಿಯಲ್ ಎಸ್ಟೇಟ್ ಉದ್ಯಮ, ಆಯ್ಸಪ್ಲಾಂಟ್. ಸಹನಾ ಪ್ಯಾಲೇಸ್ ಲಾಡ್ಜ್,...

ಆಟೋರಿಕ್ಷಾಗೆ ಪ್ರವಾಸಿಗರಿದ್ದ ಟಿ.ಟಿ ವಾಹನ ಡಿಕ್ಕಿ : ಮಹಿಳೆಗೆ ಗಾಯ

ಅಂಕೋಲಾ: ಸಹೋದರಿಯ ಮನೆಗೆ ಬಂದು ವಾಪಸ್ ಮನೆಗೆ ಮರಳುತ್ತಿದ್ದ ಗೃಹಿಣಿ ಇದ್ದ ಆಟೋರಿಕ್ಷಾಗೆ ಪ್ರವಾಸಿಗರಿದ್ದ ಟಿ.ಟಿ ವಾಹನ ಬಡಿದ ಪರಿಣಾಮ ಮಹಿಳೆ ಗಾಯಗೊಂಡ ಘಟನೆ ಪಟ್ಟಣದ ಅರಣ್ಯ ಇಲಾಖೆ ಕಛೇರಿ ಹತ್ತಿರ...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಬಡ, ಮಧ್ಯಮವರ್ಗ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಒಟ್ಟು 3 ಕೋಟಿ ಮೌಲ್ಯದ ವಿದ್ಯಾರ್ಥಿವೇತನ

ಉಡುಪಿ: ರಾಜ್ಯದಲ್ಲೇ ಪ್ರಸಿದ್ಧ ಪಡೆದ ಉಡುಪಿ ಲಾರ್ಡ್ಸ್ ಇಂಟರ್‌ನ್ಯಾಷನಲ್ ರೆಸಿಡೆನ್ಷಿಯಲ್ ಸ್ಕೂಲ್ , ಬಡ, ಮಧ್ಯಮವರ್ಗ...

ಶತರುದ್ರ ಮತ್ತು ಶತಚಂಡಿಕಾ ಯಾಗಕ್ಕೆ ಆತ್ಮೀಯ ಸ್ವಾಗತ

ಕಾರವಾರ: ದಿವಂಗತ ಕೃಷ್ಣ ಸೈಲ್ ಹಾಗೂ ಗಿರಿಜಾ ಕೃಷ್ಣ ಸೈಲ್ ರವರ ಆರ್ಶೀವಾದದೊಂದಿಗೆ ಈ ಕ್ಷೇತ್ರದ...

ಸಹಕಾರದ ಬೆಳಕಿನಲ್ಲಿ ಮಹತ್ವದ ಹೆಜ್ಜೆಯಿಟ್ಟ ‘ಸೂರ್ಯ’: ಹೊಸ ಶಾಖೆಗಳತ್ತ ನಾಗರಾಜ ನಾಯಕರ ದೃಷ್ಟಿ”

ಅಂಕೋಲಾ: ಅಂಕೋಲೆ ಎಂದಾಗ ಕರಿ ಇಸಾಡು ಮಾವಿನಹಣ್ಣು ನೆನಪಾದರೆ, “ಸೂರ್ಯ” ಸಹಕಾರಿ ಎಂದಾಗ ನಾಗರಾಜ ನಾಯಕ...

ಆಟೋರಿಕ್ಷಾಗೆ ಪ್ರವಾಸಿಗರಿದ್ದ ಟಿ.ಟಿ ವಾಹನ ಡಿಕ್ಕಿ : ಮಹಿಳೆಗೆ ಗಾಯ

ಅಂಕೋಲಾ: ಸಹೋದರಿಯ ಮನೆಗೆ ಬಂದು ವಾಪಸ್ ಮನೆಗೆ ಮರಳುತ್ತಿದ್ದ ಗೃಹಿಣಿ ಇದ್ದ ಆಟೋರಿಕ್ಷಾಗೆ ಪ್ರವಾಸಿಗರಿದ್ದ ಟಿ.ಟಿ...

ಶಾಲಾ ಮಕ್ಕಳ ಬಸ್ ಪಲ್ಟಿ: ವಿದ್ಯಾರ್ಥಿ ಸಾವು

ಹೊನ್ನಾವರ: ಗೇರುಸೊಪ್ಪ ಸುಳೆಮುರ್ಕಿ ಕ್ರಾಸ್ ಹತ್ತಿರ ಶಾಲಾಮಕ್ಕಳ ಪ್ರವಾಸಿ ಬಸ್ ಪಲ್ಟಿಯಾಗಿ, ವಿಧ್ಯಾರ್ಥಿ ಸಾವನಪ್ಪಿರುವ ಘಟನೆ...

ಆಯಕಟ್ಟಿನ ಪ್ರದೇಶದಲ್ಲಿರುವ 8 ಗುಂಟೆ ಜಾಗ ಮಾರಾಟಕ್ಕಿದೆ

ಅಂಕೋಲಾ: ತಾಲೂಕಿನ ಬಳಲೆಯಲ್ಲಿ ಅತ್ಯುತ್ತಮ ಸೌಕರ್ಯ ಹೊಂದಿರುವ, ಆಯಕಟ್ಟಿನ ಪ್ರದೇಶದಲ್ಲಿರುವ NA ಆದ ಜಾಗ ಮಾರಾಟಕ್ಕಿದೆ....

ಕುಮಟಾದ ಬ್ರೌನ್ಸ್ ವಿಲೇಜ್ ಫ್ಯಾಮಿಲಿ ಗಾರ್ಡನ್ ರೆಸ್ಟೋರೆಂಟ್ ನಲ್ಲಿ ಖ್ಯಾತ ಕಲಾವಿದರಿಂದ ಲೈವ್ ಮ್ಯೂಜಿಕ್ ನೋಡುತ್ತಾ ರುಚಿ-ಶುಚಿಯಾದ ಆಹಾರ ಸವಿಯುವ ಅವಕಾಶ

ಕುಮಟಾ: ಬ್ರೌನ್ಸ್ ವಿಲೇಜ್ ಫ್ಯಾಮಿಲಿ ಗಾರ್ಡನ್ ರೆಸ್ಟೋರೆಂಟ್ ಕುಮಟಾ, ಇದು ಉತ್ತರಕನ್ನಡ ಜಿಲ್ಲೆಯ ಅತ್ಯುತ್ತಮ ಫ್ಯಾಮಿಲಿ...