ಅಂಕೋಲಾ ಕಲ್ಲೇಶ್ವರದಲ್ಲಿ ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮ
Focus News

ಅಂಕೋಲಾ ಕಲ್ಲೇಶ್ವರದಲ್ಲಿ ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮ

Share

ಅಂಕೋಲಾ : ಒನ್‌ ಲೈಟ್‌ ಎಸ್ಸಿಲಾರ್ ಲಕ್ಸೊಟಿಕಾ ಫೌಂಡೇಶನ್, ಸ್ಪಂದನ ಸೇವಾ ಟ್ರಸ್ಟ್ ಹಡಿನಬಾಳ ಹೊನ್ನಾವರ,ಸಂಗಮ ಸೇವಾ ಸಂಸ್ಥೆ ಅಂಕೋಲಾ, ಗ್ರಾಂ ಪಂ ಡೊಂಗ್ರಿ ಇವರ ಸಂಯುಕ್ತ ಆಶ್ರಯದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಉಚಿತ ಕಣ್ಣು ತಪಾಸಣಾ ಶಿಬಿರದಲ್ಲಿ ತಪಾಸಣೆ ಮಾಡಿಸಿಕೊಂಡಿದ್ದ ಅರ್ಹ ಫಲಾನುಭವಿಗಳಿಗೆ ಸೆ 4 ರ ಗುರುವಾರ ಬೆಳಿಗ್ಗೆ 10 ಗಂಟೆಗೆ ಕಲ್ಲೇಶ್ವರ ಶ್ರೀ ದೇವಿ ಮತ್ತು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಕನ್ನಡಕಗಳನ್ನು ಉಚಿತವಾಗಿ ವಿತರಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ನೂರಾರು ಜನರಿಗೆ ಅನುಕೂಲ

ಡೋಂಗ್ರಿ ಗ್ರಾ ಪಂ ಅಧ್ಯಕ್ಷರಾದ ವಿನೋದ ಭಟ್ಟ ಈ ಸಂದರ್ಭದಲ್ಲಿ ಮಾತನಾಡಿ ನಮ್ಮ ಪಂಚಾಯತ ಬಾಗದಲ್ಲಿ ಇಂತಹ ಕಾರ್ಯಕ್ರಮ ಮಾಡಿದ್ದಕ್ಕೆ ಸಂತಸ ವ್ಯಕ್ತ ಪಡಿಸಿದರು. ಸಂಘಟಕ ಪ್ರಮುಖ ವಿ ಎಸ್‌ ಭಟ್ಟ ಕಲ್ಲೇಶ್ವರ ಮಾತನಾಡಿ ನೂರಾರು ಜನರಿಗೆ ಈ ಕಣ್ಣು ತಪಾಸಣಾ ಶಿಬಿರದಿಂದ ಅನುಕೂಲವಾಗಿದೆ ಎಂದರು.

ಉಚಿತ ಕನ್ನಡಕ ವಿತರಣೆ

ನಮ್ಮ ಪಂಚಾಯತ ತಾಲೂಕು ಕೇಂದ್ರದಿಂದ ಬಹುದೂರದಲ್ಲಿದ್ದು, ಅಂಕೋಲಾ ಪಟ್ಟಣಕ್ಕೆ ಹೊಗಿ ಬರುವುದು ಕಷ್ಟವಾಗಿದ್ದು, ದೃಷ್ಟಿ ದೋಷ ಉಳ್ಳ ಹಲವರಿಗೆ ಶಿಬಿರದ ಪ್ರಯೋಜನ ನಮ್ಮ ಊರಲ್ಲೇ ಸಿಗುವಂತಾಗಿದ್ದು, ಸಂಘಟಕರಲ್ಲರಿಗೂ ಈ ಸೇವಾ ಕಾರ್ಯ ಸಮಾಧಾನ ತಂದಿದೆ ಎಂದರು ಪ್ರಮುಖರಾದ ಶೇಖರ ಗಾಂವ್ಕರ,ಜನಾರ್ದನ ಹೆಗಡೆ,ಮಂಜುನಾಥ ಗಾಂವ್ಕರ, ಇತರರಿದ್ದರು. ನೂರಾರು ಜನರಿಗೆ ಕನ್ನಡವನ್ನು ಉಚಿತವಾಗಿ ವಿತರಿಸಲಾಯಿತು.

ಇದನ್ನೂ ಓದಿ: ಅಂಕೋಲಾ ತಾಲೂಕಿಗೆ ಸಂಬoಧಿಸಿದ ಸುದ್ದಿಗಳು

ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ
Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಕುಮಟಾ ಪೊಲೀಸ್ ಗಣೇಶೋತ್ಸವ ಸಂಭ್ರಮ: ನೂರಾರು ಭಕ್ತರಿಂದ ಪ್ರಸಾದ ಸ್ವೀಕಾರ

ಕುಮಟಾ: ಪಟ್ಟಣದ ಎಲ್ಲಡೆ ಸಂಭ್ರಮದಿoದ ಗಣೇಶ ಚತುರ್ಥಿಯನ್ನು ಆಚರಿಸಲಾಗಿದ್ದು ಕುಮಟಾ ಪೊಲೀಸ್ ಠಾಣೆಯ ಆರಾಧ್ಯ ದೇವರು ಶ್ರೀ ಗೊಂಬೆ ದೇವಸ್ಥಾನದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಶ್ರೀ ಮಹಾ ಗಣಪತಿ ಪ್ರತಿಷ್ಠಾಪಿಸಿ...

ಮಗಳ ಹುಟ್ಟುಹಬ್ಬದಂದು ಸೇವಾಶ್ರಮ ನಿವಾಸಿಗಳಿಗೆ ಪ್ರೀತಿಯ ಸೇವೆ: ವಸಂತ ನಾಯಕ ಕುಟುಂಬದ ಮಾನವೀಯ ನೆರವು

ಅಂಕೋಲಾ: ಜಿಲ್ಲೆಯ ಸಹಕಾರಿ ಕ್ಷೇತ್ರದಲ್ಲಿ ಅಪಾರ ಅನುಭವ, ಹಾಗೂ ಸಮಾಜದಲ್ಲಿ ಹಲವು ವಿದಾಯಕ ಕೆಲಸಗಳ ಮೂಲಕ ತಮ್ಮನ್ನು ಗುರುತಿಸಿಕೊಂಡಿರುವ ಶ್ರೀರಾಮ ಪರಿಸರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ವಸಂತ ನಾಯಕ...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಹೊನ್ನಾವರದಲ್ಲಿ ಸಾರ್ವಜನಿಕ ಗಣೇಶೋತ್ಸವ ಮೂರ್ತಿಯ ವಿಸರ್ಜನೆ: ಅದ್ಧೂರಿ ಮೆರವಣಿಗೆ

ಹೊನ್ನಾವರ: ಪಟ್ಟಣದಲ್ಲಿ ಸಾರ್ವಜನಿಕ ಗಣೇಶೋತ್ಸವ ಸಮಿತಿಯವರು ಚವತಿಯ ದಿನದಂದು ಪ್ರತಿಷ್ಠಾಪಿಸಿದ ಗಣಪನನ್ನು ವಿಜೃಂಭಣೆಯಿoದ ಆಚರಿಸಿ 7...

KEB ಗಣಪನಿಗೆ 48 ನೇ ವಾರ್ಷಿಕ ಸಂಭ್ರಮ: ಸೆ.4 ಮಹಾಪೂಜೆ – ಸೆ.5 ರಂದು ಭವ್ಯ ಮೆರವಣಿಗೆಯೊಂದಿಗೆ ವಿಸರ್ಜನೆ

ಅಂಕೋಲಾ: ತಾಲೂಕಿನ ಹೆಸ್ಕಾಂ ಇಲಾಖೆ ವತಿಯಿಂದ 48 ನೇ ವರ್ಷದ ಗಣೇಶೋತ್ಸವ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ...

ವಿಶ್ರಾಂತ ಶಿಕ್ಷಕ ಉಮೇಶ ನಾಯ್ಕ ಅವರಿಗೆ ಬರ್ಗಿಯ ಶ್ರೀ ಮಹಾಲಿಂಗೇಶ್ವರ ವಿದ್ಯಾಪೀಠದಿಂದ ಸನ್ಮಾನ: “ಸದ್ಗುರು ಸಂಪನ್ನ” ಅಭಿದಾನ ಪ್ರದಾನ

ಕುಮಟಾ: ತಾಲ್ಲೂಕಿನ ಬರ್ಗಿಯ ಶ್ರೀ ಮಹಾಲಿಂಗೇಶ್ವರ ವಿದ್ಯಾಪೀಠದಿಂದ ಶಿಕ್ಷಕ ವೃತ್ತಿಯಿಂದ ವಯೋನಿವೃತ್ತಿಗೊಂಡ ಸ್ಥಳೀಯರಾದ ಉಮೇಶ ನಾಯ್ಕರವರನ್ನು...

ಉತ್ತರ ಕನ್ನಡದಲ್ಲಿ ಭಾರೀ ಮಳೆ : ಮೂರು ತಾಲೂಕುಗಳ ಶಾಲಾ ಕಾಲೇಜುಗಳಿಗೆ ರಜೆ

ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಭಾರೀ ಮಳೆ ಸುರಿಯುತ್ತಿದ್ದು, ಪ್ರವಾಹದ ಭೀತಿ ಹೆಚ್ಚಾಗಿದೆ.  ತಗ್ಗು ಪ್ರದೇಶಗಳಿಗೆ...

35 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯ ಬಂಧನ

ಶಿರಸಿ: ಕಳೆದ 35 ವರ್ಷಗಳಿಂದ ದೆಹಲಿಯಲ್ಲಿ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಶಿರಸಿ ಪೊಲೀಸರು ಬಂಧಿಸಿದ್ದಾರೆ. ಶಿರಸಿ...

ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ: ದೀಕ್ಷಾ ಮಂಜುನಾಥ ನಾಯ್ಕ ಪ್ರಥಮ ಸ್ಥಾನ

ಹೊನ್ನಾವರ: ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಹೊನ್ನಾವರದ ಕು. ದೀಕ್ಷಾ ಮಂಜುನಾಥ ನಾಯ್ಕ ಪ್ರಥಮ ಸ್ಥಾನ ಪಡೆದುಕೊಂಡಿದ್ದಾಳೆ....

ಹಿಮಾಲಯ ಬಿಸಿಎ ಕಾಲೇಜಿನಲ್ಲಿ ಉದ್ಯೋಗ ತರಬೇತಿ

ಅಂಕೋಲಾ : ತಾಲೂಕಿನ ಹಾಗೂ ಜಿಲ್ಲೆಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾಗಿರುವ ಹಿಮಾಲಯ ಶಿಕ್ಷಣ ಸಂಸ್ಥೆಯ...

ಕುಮಟಾದಲ್ಲಿ ಬಿಜೆಪಿ ಮಂಡಲ ಕಾರ್ಯಕಾರಿಣಿ: ಗಮನಸೆಳೆದ ತಿರಂಗಾ ಬೈಕ್ ರ‍್ಯಾಲಿ

ಕುಮಟಾ: ತಾಲೂಕಾ ಭಾರತೀಯ ಜನತಾ ಪಾರ್ಟಿಯ ಕಾರ್ಯಾಲಯದಲ್ಲಿ ಬಿಜೆಪಿ ಮಂಡಲ ಕಾರ್ಯಕಾರಿಣಿ ಸಭೆಯನ್ನು ಆಯೋಜನೆ ಮಾಡಲಾಗಿತ್ತು....