ಅಂಕೋಲಾದಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ತಹಶೀಲ್ದಾರ ಡಾ. ಚಿಕ್ಕಪ್ಪ ನಾಯಕ ಮಾತನಾಡುತ್ತಿರುವ ದೃಶ್ಯ"
Important

ಗುರು ಶಿಷ್ಯರ ಸಂಬಂಧ ಚಿರಸ್ಥಾಯಿ: ತಹಶೀಲ್ದಾರ ಡಾ. ಚಿಕ್ಕಪ್ಪ ನಾಯಕ

Share

ಅಂಕೋಲಾ : ಶಿಕ್ಷಕರು ವೃತ್ತಿಯಿಂದ ನಿವೃತ್ತರಾದರೂ ಜನಮಾನಸದಿಂದ ಎಂದಿಗೂ ನಿವೃತ್ತರಾಗುವುದಿಲ್ಲ. ಗುರು ಶಿಷ್ಯರ ಸಂಬಂಧ ಎಂದಿಗೂ ಚಿರಸ್ಥಾಯಿಯಾಗಿರುತ್ತದೆ ಎಂದು ತಹಶೀಲ್ದಾರ ಡಾ. ಚಿಕ್ಕಪ್ಪ ನಾಯಕ ಹೇಳಿದರು. ಅವರು ಪಟ್ಟಣದ ನಾಡವರ ಸಮುದಾಯ ಭವನದಲ್ಲಿ ಸೆ 5 ರ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ತಾಲೂಕ ಮಟ್ಟದ ಶಿಕ್ಷಕ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ತಾಲೂಕಿನ ನಿವೃತ್ತ ಮತ್ತು ಉತ್ತಮ ಶಿಕ್ಷಕರಿಗೆ ಗೌರವ

ಜಿಲ್ಲಾ ಪಂ . ಉ.ಕ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ಶಿಕ್ಷಕರ ದಿನಾಚರಣೆ ಸಮಿತಿ ಅಂಕೋಲಾ ಹಾಗೂ ದಿ ಅಂಕೋಲಾ ಅರ್ಬನ್ ಕೋ-ಅಪರೇಟಿವ್ ಬ್ಯಾಂಕ್ ಲಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮದಿನಾಚರಣೆ ಪ್ರಯುಕ್ತ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಅಂಕೋಲಾದಲ್ಲಿ ಅರ್ಥಪೂರ್ಣವಾಗಿ ಆಚರಣೆಗೊಂಡಿತು.

ತಹಶೀಲ್ದಾರ ಡಾ ಚಿಕ್ಕಪ್ಪ ನಾಯಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಶಿಕ್ಷಕರ ಕಾರ್ಯ ತುಂಬಾ ಮಹತ್ವಪೂರ್ಣವಾದದ್ದು, ಶಿಕ್ಷಕರು ತಮ್ಮ ವಿದ್ಯಾರ್ಥಿಗಳ ಏಳಿಗೆಯನ್ನು ಸಂಭ್ರಮಿಸುತ್ತಾರೆ‌. ನಾನೊಬ್ಬ ಅನರಕ್ಷಸ್ಥ ಕುಟುಂಬದಲ್ಲಿ ಹುಟ್ಟಿದ್ದು ಇಂದು ಎಂ ಬಿ ಬಿ ಎಸ್ ಹಾಗೂ ಕೆ ಎ ಎಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ತಹಸೀಲ್ದಾರ್ ಆಗಿ ನಿಂತಿದ್ದೇನೆ ಅಂದರೆ ನನ್ನ ತಂದೆ ತಾಯಿಯರ ಪರಿಶ್ರಮದಂತೆ ನನ್ನನ್ನು ತಿದ್ದಿ ತೀಡಿದ ಗುರುಗಳು ಮುಖ್ಯ ಕಾರಣ ಎಂದರು.

ಸಮಾಜದಲ್ಲಿ ಶಿಕ್ಷಕರ ಮಹತ್ವದ ಕುರಿತು ಉಪನ್ಯಾಸ

ಗ್ಯಾರಂಟಿ ಪ್ರಾಧಿಕಾರದ ತಾಲೂಕ ಅಧ್ಯಕ್ಷ ಪಾಂಡುರಂಗ ಗೌಡ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಉಪನ್ಯಾಸಕ ಉಲ್ಲಾಸ ಹುದ್ದಾರ ಸಮಾಜದಲ್ಲಿ ಶಿಕ್ಷಕರ ಮಹತ್ವದ ಕುರಿತು ಉಪನ್ಯಾಸ ನೀಡಿದರು. ಅಂಕೋಲಾ ಅರ್ಬನ್ ಬ್ಯಾಂಕ್ ನಿರ್ದೇಶಕ ನ್ಯಾಯವಾದಿ ನಾಗಾನಂದ‌ಬಂಟ ಮಾತನಾಡಿ ಶಿಕ್ಷಕರಿಗೆ ಶುಭಾಶಯ ಕೋರಿದರು. ಪ್ರಭಾರಿ ಕ್ಷೇತ್ರ ಶಿಕ್ಷಣಾಧಿಕಾರಿ ನಾಗರಾಜ ರಾಯ್ಕರ ಪ್ರಾಸ್ತಾವಿಕ ಮಾತನಾಡಿದರು. ತಾ.ಪಂ. ಹೆಚ್ಚುವರಿ ಪ್ರಭಾರಿ ಕಾರ್ಯನಿರ್ವಹಣಾಧಿಕಾರಿ ರಾಮು ಗುನಗಿ ಸ್ವಾಗತಿಸಿದರು. ಬಿ ಆರ್ ಸಿ ಮಂಜುನಾಥ ನಾಯ್ಕ ವಂದಿಸಿದರು.

ವೇದಿಕೆಯಲ್ಲಿ ಡಿ ವಾಯ್ ಪಿ ಸಿ ಭಾಸ್ಕರ ಗಾಂವಕರ, ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯಾಧಿಕಾರಿ ದೇವರಾಯ ನಾಯಕ, ತಾಲೂಕ ದೈಹಿಕ ಶಿಕ್ಷಣ ಪರಿವೀಕ್ಷಕ ಮಂಜುನಾಥ ಎಂ ನಾಯಕ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಜಗದೀಶ ನಾಯಕ, ಮಾದ್ಯಮಿಕ ಶಾಲಾ ಶಿಕ್ಷಕರ‌ ಸಂಘದ ಅಧ್ಯಕ್ಷ ಗಣಪತಿ ನಾಯಕ, ಸರ್ಕಾರಿ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ರಮಾನಂದ ನಾಯಕ, ಮಂಜುನಾಥ ನಾಯಕ, ರಾಜೇಶ ನಾಯ್ಕ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಜಗದೀಶ ನಾಯಕ ಹೊಸ್ಕೇರಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ತಾಲೂಕಿನ ನಿವೃತ್ತ ಪ್ರಾಥಮಿಕ, ಪ್ರೌಢ ಹಾಗೂ ಪದವಿಪೂರ್ವ ಶಿಕ್ಷಕ, ಶಿಕ್ಷಕಿಯರನ್ನು, ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕ್ರತರನ್ನು ಸನ್ಮಾನಿಸಿ ಗೌರವಿಸಲಾಯಿತು. ಅಗಲಿದ ಶಿಕ್ಷಕರಿಗೆ ಶೃದ್ಧಾಂಜಲಿ ಸಲ್ಲಿಸಲಾಯಿತು. ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಜಗದೀಶ ಜಿ‌ ನಾಯಕ ಹೊಸ್ಕೇರಿ ಸನ್ಮಾನ ಕಾರ್ಯಕ್ರಮವನ್ನು ನಿರ್ವಹಿಸಿದರು. ಶಿಕ್ಷಕರ ದಿನಾಚರಣೆ ಸಮಿತಿ ಮತ್ತು ಇತರ ಸಂಘಟನೆಗಳ ಸಹಯೋಗದಲ್ಲಿ ಅಚ್ಚುಕಟ್ಟಾಗಿ ನಡೆದ ಕಾರ್ಯಕ್ರಮ ಶಿಸ್ತಿನ ಸಂಘಟನೆಗೆ ಸಾಕ್ಷಿಯಾಯಿತು.

ಅಗ್ರಗೋಣ ಸ.ಹಿ ಪ್ರಾ ಶಾಲೆಯ ಶಿಕ್ಷಕ ರಾಜೇಶ ನಾಯಕ ಸೂರ್ವೆ ಹಾಗೂ ಕೇಣಿ ಸ.ಮಾ.ಹಿ. ಪ್ರಾ. ಶಾಲೆಯ ಶಿಕ್ಷಕಿ ರಶೀದಾ ಎಸ್. ಶೇಖ್ ಕಾರ್ಯಕ್ರಮವನ್ನು ನಿರ್ವಹಿಸಿದರು. ಮೇಘನಾ ಗೋವಿಂದ ಗೌಡ ಯಕ್ಷನೃತ್ಯವನ್ನು ಮತ್ತು ಶ್ರುತಿ ಮಡಿವಾಳ ಭರತ ನಾಟ್ಯವನ್ನು ಪ್ರದರ್ಶಿಸಿದರು. ಶಿಕ್ಷಕ ರಾಮನಾಥ ಸಂಗಡಿಗರು ಪ್ರಾರ್ಥಿಸಿ ನಾಡಗೀತೆಯನ್ನು ಪ್ರಸ್ತುತಪಡಿಸಿದರು.

ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಮನೆಯಿಂದ ಹೋದ ಅಂಕೋಲಾ ಯುವತಿ ನಾಪತ್ತೆ: ಪೊಲೀಸರ ತನಿಖೆ ಆರಂಭ

ಅಂಕೋಲಾ: ತಾಲೂಕಿನ ಅಗ್ರಗೋಣ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಡಿಗೋಣ ಬೈಲಕೇರಿಯಲ್ಲಿ ಯುವತಿಯೋರ್ವಳು ಮನೆಯಿಂದ ಕಾಣೆಯಾದ ಘಟನೆ ಸ್ಥಳೀಯರಲ್ಲಿ ಆತಂಕ ಉಂಟುಮಾಡಿದೆ. ಕಾಣೆಯಾದವರು ಚಂದ್ರಕಲಾ ನೀಲಕಂಠ ಗೌಡ (20) ಎಂದು ತಿಳಿದು ಬಂದಿದೆ....

ಅಂಕೋಲಾ ಕಲ್ಲೇಶ್ವರದಲ್ಲಿ ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮ

ಅಂಕೋಲಾ : ಒನ್‌ ಲೈಟ್‌ ಎಸ್ಸಿಲಾರ್ ಲಕ್ಸೊಟಿಕಾ ಫೌಂಡೇಶನ್, ಸ್ಪಂದನ ಸೇವಾ ಟ್ರಸ್ಟ್ ಹಡಿನಬಾಳ ಹೊನ್ನಾವರ,ಸಂಗಮ ಸೇವಾ ಸಂಸ್ಥೆ ಅಂಕೋಲಾ, ಗ್ರಾಂ ಪಂ ಡೊಂಗ್ರಿ ಇವರ ಸಂಯುಕ್ತ ಆಶ್ರಯದಲ್ಲಿ ಇತ್ತೀಚೆಗೆ ಆಯೋಜಿಸಿದ್ದ...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಬಲು ಅಪರೂಪ ಕೆಂಪು ಬಣ್ಣದ ಈ ಸಿಂಧೂರ ಗಣಪ: ದರ್ಶನ ಮಾತ್ರದಿಂದಲೇ ಪರಿಹಾರವಾಗುವುದಂತೆ ಜನ್ಮಾಂತರಗಳ ಪಾಪ

ಅಂಕೋಲಾ: ವಿಶ್ವದಾದ್ಯಂತ ಪ್ರಥಮ ಪೂಜಿತ, ಏಕದಂತನ ಆರಾಧನೆ ಜೋರಾಗಿ ನಡೆದಿದ್ದು ಚೌತಿಯ ಸಂಭ್ರಮ ಎಲ್ಲೆಡೆ ಕಂಡುಬರುತ್ತಿದೆ....

ಐತಿಹಾಸಿಕ ಚಂದ್ರಗ್ರಹಣ: ಆರಂಭ-ಮುಕ್ತಾಯ: ಚಂದ್ರಗ್ರಹಣ ಕುರಿತ ಸಾಮಾನ್ಯ ಪ್ರಶ್ನೆಗಳಿಗೆ ಉತ್ತರ

ವಿಸ್ಮಯ ಟಿ.ವಿ ನ್ಯೂಸ್ ಡೆಸ್ಕ್: ಭಾರತ ಸೇರಿದಂತೆ ವಿಶ್ವದಾದ್ಯಂತ 2025ರ ಎರಡನೇ ಮತ್ತು ವರ್ಷದ ಕೊನೆಯ...

ಮನೆಯಿಂದ ಹೋದ ಅಂಕೋಲಾ ಯುವತಿ ನಾಪತ್ತೆ: ಪೊಲೀಸರ ತನಿಖೆ ಆರಂಭ

ಅಂಕೋಲಾ: ತಾಲೂಕಿನ ಅಗ್ರಗೋಣ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಡಿಗೋಣ ಬೈಲಕೇರಿಯಲ್ಲಿ ಯುವತಿಯೋರ್ವಳು ಮನೆಯಿಂದ ಕಾಣೆಯಾದ ಘಟನೆ...

ಮನೆಯಿಂದ ಹೋದ ಮಹಿಳೆ ನಾಪತ್ತೆ: ಸುಳಿವು ಸಿಕ್ಕರೆ ಮಾಹಿತಿ ನೀಡುವಂತೆ ಮನವಿ

ಮುಂಡಗೋಡ: ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಕಾಣೆಯಾದವರ ಬಗ್ಗೆ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಮುಂಡಗೋಡು ನಿವಾಸಿಯಾಗಿದ್ದ...

ಮಗಳ ಹುಟ್ಟುಹಬ್ಬದಂದು ಸೇವಾಶ್ರಮ ನಿವಾಸಿಗಳಿಗೆ ಪ್ರೀತಿಯ ಸೇವೆ: ವಸಂತ ನಾಯಕ ಕುಟುಂಬದ ಮಾನವೀಯ ನೆರವು

ಅಂಕೋಲಾ: ಜಿಲ್ಲೆಯ ಸಹಕಾರಿ ಕ್ಷೇತ್ರದಲ್ಲಿ ಅಪಾರ ಅನುಭವ, ಹಾಗೂ ಸಮಾಜದಲ್ಲಿ ಹಲವು ವಿದಾಯಕ ಕೆಲಸಗಳ ಮೂಲಕ...

ಅಬ್ದುಲ್ ಕಲಾಂ ಉತ್ತಮ ಶಿಕ್ಷಕ ಪ್ರಶಸ್ತಿಗೆ ಸಿದ್ದಾಪುರ ತಾಲೂಕಿನ ಆರು ಶಿಕ್ಷಕರು ಆಯ್ಕೆ

ಸಿದ್ದಾಪುರ: 2025ನೇ ಸಾಲಿನ ಸಿದ್ದಾಪುರ ತಾಲೂಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿoದ ನೀಡುವ ಡಾ. ಎ.ಪಿ.ಜೆ...

ಸೆಪ್ಟೆಂಬರ್ 6ರ ವರೆಗೆ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ ಏನು?

ಕಾರವಾರ, ಸೆಪ್ಟೆಂಬರ್ 3: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಚಂಡಮಾರುತದ ಪ್ರಭಾವದಿಂದಾಗಿ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ....

Uttara Kannada Crime Roundup: ಪ್ರಮುಖ ಸುದ್ದಿಗಳು

ಕೆರೆಗೆ ಹಾರಿ ಸಾವಿಗೆ ಶರಣಾದ ವಿದ್ಯಾರ್ಥಿನಿ ಶಿರಸಿ ಸೆಪ್ಟೆಂಬರ್ 2: ಕೆರೆಗೆ ಹಾರಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ...