10 ಲಕ್ಷ ಮೌಲ್ಯದ ಜಾನುವಾರುಗಳನ್ನು ವಶಪಡಿಸಿಕೊಂಡ ಪೊಲೀಸರು
Big News

ಅಕ್ರಮ ಗೋಸಾಗಾಟ: 7 ಲಕ್ಷ ಮೌಲ್ಯದ ಜಾನುವಾರು ವಶಕ್ಕೆ

Share

ಭಟ್ಕಳ: ತಾಲೂಕಿನಲ್ಲಿ ಅಕ್ರಮ ಗೋಸಾಗಾಟ ಪ್ರಕರಣ ಪದೇ ಪದೇ ಸದ್ದು ಮಾಡುತ್ತಿದ್ದು, ಬೆಳಗಿನ ಜಾವ ಗ್ರಾಮೀಣ ಠಾಣಾ ಪೋಲಿಸರು ಅಕ್ರಮ ಗೋಸಾಗಾಟದ ವಾಹನದ ಮೇಲೆ ದಾಳಿ ನಡೆಸಿ ಬಾರಿ ಮೌಲ್ಯದ ಜಾನುವಾರುಗಳನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕೇರಳದಿಂದ ಭಟ್ಕಳ ಹನೀಫಾಬಾದ್ ಕಡೆಗೆ ಸಾಗಿಸುತ್ತಿದ್ದ ಅಶೋಕ್ ಲೈಲೆಂಡ್ ಕಂಟೇನರ್‌ನ್ನು ಪೊಲೀಸರು ಹನೀಫಾಬಾದ್ ಪೆಟ್ರೋಲ್ ಬಂಕ್ ಹತ್ತಿರ ವಾಹನವನ್ನು ತಡೆದು ವಶಕ್ಕೆ ಪಡೆದಿದ್ದಾರೆ. ಯಾವುದೇ ಪರವಾನಿಗೆ ಇಲ್ಲದೆ ಆಹಾರವನ್ನು ಒದಗಿಸದೆ ಹಿಂಸಾತ್ಮಕವಾಗಿ ಕಟ್ಟಿಹಾಕಿ ಕಸಾಯಿಖಾನೆಗೆ ಸಾಗಿಸಲಾಗುತ್ತಿದ್ದ ಜಾನುವಾರುಗಳನ್ನು ಪೊಲೀಸರು ರಕ್ಷಿಸಿದ್ದಾರೆ.

ಅಬುಬಕ್ಕರ್ ಗಂಗಾವಳಿ , ಹಮೀದ್ , ಆಸೀಫ್, ಶಾಹುಲ್ ಹಮೀದ ಕೆ, ಬಂಧಿತ ಆರೋಪಿಗಳಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ. ಈ ಮಹತ್ವದ ಕಾರ್ಯಾಚರಣೆಯಲ್ಲಿ 10 ಜಾನುವಾರುಗಳನ್ನು ರಕ್ಷಣೆ ಮಾಡಲಾಗಿದ್ದು, ಇವುಗಳ ಮೌಲ್ಯ ಸುಮಾರು 7 ಲಕ್ಷ ಎಂದು ಅಂದಾಜಿಸಲಾಗಿದೆ.

ಗೋವುಗಳಿಗೆ ಮೇವು, ನೀರು ಒದಗಿಸಲು ಸಂಘಟನೆಗಳ ಒತ್ತಾಯ

ಮಾಹಿತಿ ತಿಳಿದ ಹಿಂದೂ ಸಂಘಟನೆ ಕಾರ್ಯಕರ್ತರು ಶನಿವಾರ ಬೆಳಿಗ್ಗೆ ಗ್ರಾಮೀಣ ಠಾಣೆಗೆ ಭೇಟಿ ನೀಡಿ ಗೋವುಗಳಿಗೆ ಮೇವು, ನೀರನ್ನು ನೀಡಿ ಗೋಶಾಲೆಗೆ ಕಳುಹಿಸುವಂತೆ ಒತ್ತಾಯಿಸಿದ್ದಾರೆ ಎಂದು ತಿಳಿದು ಬಂದಿದೆ.

ವಿಸ್ಮಯ ನ್ಯೂಸ್, ಈಶ್ವರ್ ನಾಯ್ಕ, ಭಟ್ಕಳ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಬಲು ಅಪರೂಪ ಕೆಂಪು ಬಣ್ಣದ ಈ ಸಿಂಧೂರ ಗಣಪ: ದರ್ಶನ ಮಾತ್ರದಿಂದಲೇ ಪರಿಹಾರವಾಗುವುದಂತೆ ಜನ್ಮಾಂತರಗಳ ಪಾಪ

ಅಂಕೋಲಾ: ವಿಶ್ವದಾದ್ಯಂತ ಪ್ರಥಮ ಪೂಜಿತ, ಏಕದಂತನ ಆರಾಧನೆ ಜೋರಾಗಿ ನಡೆದಿದ್ದು ಚೌತಿಯ ಸಂಭ್ರಮ ಎಲ್ಲೆಡೆ ಕಂಡುಬರುತ್ತಿದೆ. ಈ ನಡುವೆ ಅಂಕೋಲಾ ತಾಲೂಕಿನ ಸಾರ್ವಜನಿಕ ಗಣಪತಿಗಳಲ್ಲಿ ಮೊದಲ ಗಣಪ ಎನ್ನುವ ಪ್ರಸಿದ್ಧಿ ಪಡೆದಿರುವುದು...

ಐತಿಹಾಸಿಕ ಚಂದ್ರಗ್ರಹಣ: ಆರಂಭ-ಮುಕ್ತಾಯ: ಚಂದ್ರಗ್ರಹಣ ಕುರಿತ ಸಾಮಾನ್ಯ ಪ್ರಶ್ನೆಗಳಿಗೆ ಉತ್ತರ

ವಿಸ್ಮಯ ಟಿ.ವಿ ನ್ಯೂಸ್ ಡೆಸ್ಕ್: ಭಾರತ ಸೇರಿದಂತೆ ವಿಶ್ವದಾದ್ಯಂತ 2025ರ ಎರಡನೇ ಮತ್ತು ವರ್ಷದ ಕೊನೆಯ ಚಂದ್ರಗ್ರಹಣ ಸೆಪ್ಟೆಂಬರ್ 7 ರಂದು ಸಂಭವಿಸಲಿದೆ. ಈ ಸಮಯದಲ್ಲಿ ಚಂದ್ರ ಕೆಂಪು ಬಣ್ಣದಲ್ಲಿ ಗೋಚರಿಸಲಿದ್ದು,...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಕುಮಟಾ ಪೊಲೀಸ್ ಗಣೇಶೋತ್ಸವ ಸಂಭ್ರಮ: ನೂರಾರು ಭಕ್ತರಿಂದ ಪ್ರಸಾದ ಸ್ವೀಕಾರ

ಕುಮಟಾ: ಪಟ್ಟಣದ ಎಲ್ಲಡೆ ಸಂಭ್ರಮದಿoದ ಗಣೇಶ ಚತುರ್ಥಿಯನ್ನು ಆಚರಿಸಲಾಗಿದ್ದು ಕುಮಟಾ ಪೊಲೀಸ್ ಠಾಣೆಯ ಆರಾಧ್ಯ ದೇವರು...

ಹೆದ್ದಾರಿ ಹೊಂಡದಲ್ಲಿ ಲಾರಿ ಸಿಲುಕಿ ಸಂಚಾರ ಅಸ್ತವ್ಯಸ್ತ: ಈ ನರಕ ಯಾತನೆಗೆ ಕೊನೆ ಎಂದು?

ಅಂಕೋಲಾ, ಸೆಪ್ಟೆಂಬರ್ 3: ಹೊಂಡ ಗುಂಡಿಗಳ ಹೆದ್ದಾರಿ, ಸಾವು ನೋವು ಹಾಗೂ ಅಪಘಾತ ಮತ್ತು ಅವಾಂತರಗಳಿಗೆ...

ನಾಕುತಂತಿ ಬದುಕಿನ ಸಮನ್ವಯತೆಯ ಸಾರ ಹೊಂದಿದೆ: ಸಾಹಿತಿ ಪುಟ್ಟ ಕುಲಕರ್ಣಿ

ಕುಮಟಾ: ಬದುಕಿಗೂ ಮತ್ತು ಸಂಸ್ಕೃತಿಗೂ ಇರುವ ಅವಿನಾಭಾವ ಸಂಬಂಧ ಗಟ್ಟಿಯಾದಗ ಮಾತ್ರ ಬಾಳು ಸುಂದರವಾಗುತ್ತದೆ ....

ಮನೆಯ ಮೆಟ್ಟಿಲುಗಳ ಮೇಲೆ ಚಿರತೆ ಓಡಾಟ : ಗ್ರಾಮಸ್ಥರಲ್ಲಿ ಆತಂಕ

ಸಿದ್ದಾಪುರ: ಚಿರತೆಯೊಂದು ರಾತ್ರಿಯ ವೇಳೆ ಮನೆಯ ಸುತ್ತಮುತ್ತಲಿನ ಪ್ರದೇಶದಲ್ಲಿ ಓಡಾಡಿ ಮನೆ ಮಂದಿಯವರೆಲ್ಲ ಆತಂಕಗೊoಡ ಘಟನೆ...

ರಾಜ್ಯ ಹೆದ್ದಾರಿಯಲ್ಲಿ ಹೊಂಡ–ಗುಂಡಿಗಳ ರಸ್ತೆಗೆ ಜನಾಕ್ರೋಶ: ಹೊಂಡದಲ್ಲಿ ಗಿಡ ನೆಟ್ಟ ಸಾರ್ವಜನಿಕರು!

ಅಂಕೋಲಾ: ಪ್ರಮುಖ ರಾಜ್ಯ ಹೆದ್ದಾರಿಯೊಂದರಲ್ಲಿ ಹೊಂಡ ಗುಂಡಿಗಳಾಗಿ ರಸ್ತೆ ಹದಗೆಟ್ಟು, ಸಂಚಾರ ವ್ಯವಸ್ಥೆಗೆ ತೀವೃ ತೊಂದರೆಯಾಗುತ್ತಿದೆ....

ಭಾಗೀರಥಿ ಹೆಗಡೆ ನಿಧನ: ಗಣ್ಯರ ಸಂತಾಪ

ಹೊನ್ನಾವರ, ಆಗಸ್ಟ್ 28: ಹೊಸಾಕುಳಿ ಗ್ರಾಮದ ಮೂಲದವರಾದ ಹಾಗೂ ಜಲವಳ್ಳಿಯ ಮರಬಳ್ಳಿ ಜಮೀನಿನಲ್ಲಿ ವಾಸವಾಗಿದ್ದ ಶ್ರೀಮತಿ...

ಸರ್ಕಾರಿ ಇಲಾಖೆಯ ಕಟ್ಟಡದ ಇಕ್ಕಟ್ಟಾದ ಗೋಡೆಗಳ ಮಧ್ಯೆ ಪತ್ತೆಯಾದ ಸೂಟ್ ಕೇಸ್ ! ? ಕೊನೆಗೂ ಸೂಟ್ಕೇಸ್ ರಹಸ್ಯ

ಅಂಕೋಲಾ, ಆಗಸ್ಟ್ 26 : ಸರ್ಕಾರಿ ಇಲಾಖೆ ಒಂದರ ಕಟ್ಟಡದ ಗೋಡೆಗಳ ನಡುವಿನ ಇಕ್ಕಟ್ಟಾದ ಸ್ಥಳದಲ್ಲಿ...

ಧರ್ಮಸ್ಥಳದ ವಿರುದ್ಧ ಅಪಪ್ರಚಾರ: ಭಟ್ಕಳದಿಂದ ರಾಜ್ಯಪಾಲರಿಗೆ ಮನವಿ

ಭಟ್ಕಳ, ಆಗಸ್ಟ್ 22: ಹಿಂದೂಗಳ ಶ್ರದ್ಧಾ ಕೇಂದ್ರವಾಗಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಅಪಪ್ರಚಾರವನ್ನು...