ಅಂಕೋಲಾದಲ್ಲಿ ಭೂಮಿತಾಯಿ ಹೊಸ್ತಿನ ಹಬ್ಬದ ಭತ್ತದ ತೆನೆ ಪೂಜೆ
Big News

ಭೂಮಿತಾಯಿಯ ಹೊಸ್ತಿನ ಹಬ್ಬ : ಕೃಷಿ ಮತ್ತು ಶ್ರಮ ಪ್ರಧಾನ ಸಂಸ್ಕೃತಿಯ ಪ್ರತೀಕ

Share

ಅಂಕೋಲಾ: ಭೂಮ್ತಾಯಿ ಎಂದೇ ಪ್ರಸಿದ್ಧಿ ಪಡೆದಿರುವ ತಾಲೂಕಿನ ಹಾಗೂ ಇತರಡೆಯ ಅಸಂಖ್ಯ ಭಕ್ತರ ಪಾಲಿನ ಶಕ್ತಿ ದೇವತೆ, ಶ್ರೀಶಾಂತಾದುರ್ಗಾ ದೇವಿಯ ಹೊಸ್ತಿನ (ಹೊಸತು) ಹಬ್ಬ ಸಕಲ ಧಾರ್ಮಿಕ ಮತ್ತು ಸಾಂಪ್ರದಾಯಿಕವಾಗಿ ವಿಧಿ ವಿಧಾನಗಳೊಂದಿಗೆ ವಿಜೃಂಭಣೆಯಿಂದ ನಡೆಯಿತು.

ಕೃಷಿ ಮತ್ತು ಶ್ರಮ ಪ್ರಧಾನ ಸಂಸ್ಕೃತಿಯ ಪ್ರತೀಕ

ಕೃಷಿ ಮತ್ತು ಶ್ರಮ ಪ್ರಧಾನ ಸಂಸ್ಕೃತಿಯ ಈ ತಾಲೂಕಿನಲ್ಲಿ ಶ್ರೀ ಶಾಂತಾದುರ್ಗಾ ದೇವಿಯನ್ನು ಭೂಮಿ ದೇವತೆ, ಭೂಮ್ತಾಯಿ ಎಂದೇ ಭಕ್ತರು ಪೂಜಿಸಿ ಆರಾಧಿಸಿಕೊಂಡು, ತಾಯಿಯನ್ನೇ ನಂಬಿ ಬಾಳಿ ಬದುಕುತ್ತಿದ್ದಾರೆ. ಕರಾವಳಿಯ ಇತರ ಅನೇಕ ಕಡೆಗಳಲ್ಲಿ ನವರಾತ್ರಿ ಸಂದರ್ಭದಲ್ಲಿ ಹೊಸ್ತಿನ ಹಬ್ಬದ ಹಬ್ಬ ಆಚರಿಸಲಾಗುತ್ತದೆಯಾದರೂ ಶ್ರೀಶಾಂತಾದುರ್ಗಾ ದೇವಿಯ ಹೊಸ್ತಿನ ಹಬ್ಬ ಪೂರ್ವಾ ಮಳೆ ನಕ್ಷತ್ರದಲ್ಲಿ ಆಚರಿಸುತ್ತ ಬರಲಾಗುತ್ತಿದೆ.

ಶ್ರೀದೇವಿಯ ಕಳಸದ ಮೆರವಣಿಗೆ

ಹೊಸ್ತಿನ ಹಬ್ಬದ ಪ್ರಯುಕ್ತ ಶ್ರೀದೇವಿಯ ಕಳಸದ ಮೆರವಣಿಗೆ ಕುಂಬಾರಕೇರಿಯ ಕಳಸ ದೇವಾಲಯದಿಂದ ಪಂಚವಾದ್ಯ ,ಜಾಗಟೆ ಮೇಳದೊಂದಿಗೆ, ದಾರಿ ಮಧ್ಯೆ ಅಲ್ಲಲ್ಲಿ ಭಕ್ತರ ಆರತಿ, ಪೂಜೆ ಸ್ವೀಕರಿಸುತ್ತ ಶ್ರೀಶಾಂತಾದುರ್ಗಾ ದೇವಾಲಯಕ್ಕೆ ಆಗಮಿಸಿತು.
ನಂತರ ದೇವಸ್ಥಾನಕ್ಕೆ ಸಂಬಧಿಸಿದ ಭತ್ತದ ಗದ್ದೆಗೆ ತೆರಳಿ ಅಲ್ಲಿ ಭತ್ತದ ಪೈರಿಗೆ ಪೂಜೆ ಸಲ್ಲಿಸಿ, ತೆನೆಗಳನ್ನು ಕೊಯ್ದು ತಂದು ದೇವಾಲಯದಲ್ಲಿ ಕದಿರು ಹಬ್ಬ ಆಚರಿಸಲಾಯಿತು.

ಪ್ರಸಾದ ರೂಪದಲ್ಲಿ ಭತ್ತದ ಪೈರು ವಿತರಣೆ

ದೇಗುಲದಲ್ಲಿ ಪೂಜಿಸಿದ ಭತ್ತದ ಪೈರುಗಳನ್ನು ಪ್ರಸಾದ ರೂಪದಲ್ಲಿ ಪಡೆದುಕೊಂಡ ನೂರಾರು ಭಕ್ತರು,ತಮ್ಮ ತಮ್ಮ ಮನೆಯ ಪ್ರಧಾನ ಬಾಗಿಲು,ದೇವರ ಕೋಣೆ,ಕೃಷಿ ಯಂತ್ರಗಳು,ವಾಹನ ಮತ್ತಿತರಡೆ ಕಟ್ಟುವ ಮೂಲಕ ಧನ್ಯತೆ ಮೆರೆದರಲ್ಲದೇ,ಭವಿಷ್ಯದ ಒಳಿತಿಗೆ ಪ್ರಾರ್ಥಿಸಿದರು.

ಶ್ರೀದೇವಿಯ ದೇವಸ್ಥಾನಕ್ಕೆ ಸಂಬಂಧಿಸಿದ ಗುನಗರು, ಬಿಡ ಗುನಗರು, ಕಟಗಿದಾರರು, ಮೊಕ್ತೆಸರರು, ಅರ್ಚಕರು,ದೇವಾಲಯ ಅಭಿವೃದ್ಧಿ ಸಮಿತಿ ಅಧ್ಯಕ್ಷರು,ಪದಾಧಿಕಾರಿಗಳು, ಸ್ವಯಂ ಸೇವಕರು,ಹಬ್ಬದ ಆಚರಣೆಗೆ ಸಂಬಂಧಿಸಿದ ಇತರೆ ಪ್ರಮುಖರು ಹಾಗೂ ಭಕ್ತ ಜನರು ಪಾಲ್ಗೊಂಡಿದ್ದರು. ಹೊಸ್ತು ಹಬ್ಬದಂದು ಹೊಸ ಬೆಳೆ ಪೂಜೆ ಮತ್ತು ಅದರ ಪ್ರಸಾದವೂ ಹೊಸತನಕ್ಕೆ ಪೂರಕ ಸಂಪ್ರದಾಯದಂತಿದೆ.

ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಬೆಂಕಿ ಅವಘಡದಲ್ಲಿ ಅಪಾರಹಾನಿ: ಆದರೆ, ಮಾರಿಕಾಂಬೆಯ ಫೋಟೋ ಮಾತ್ರ ಸೇಫ್

ಅಂಕೋಲಾ: ಪಟ್ಟಣ ವ್ಯಾಪ್ತಿಯ ಲಕ್ಷ್ಮೇಶ್ವರ–ಕುಂಬಾರಕೇರಿ ಪ್ರದೇಶದಲ್ಲಿರುವ ಶ್ರೀ ಮಹಾಲಸಾ ವೆಲ್ಡಿಂಗ್ ಶಾಪ್ನಲ್ಲಿ ಫೆಬ್ರವರಿ 9ರ ಸೋಮವಾರ ರಾತ್ರಿ ಆಕಸ್ಮಿಕವಾಗಿ ಬೆಂಕಿ ಅವಘಡ ಸಂಭವಿಸಿ, ಲಕ್ಷಾಂತರ ರೂಪಾಯಿ ಮೌಲ್ಯದ ಆಸ್ತಿ ಹಾನಿಯಾಗಿರುವ ಘಟನೆ...

ಕಲೆ ಆತ್ಮ ಗೌರವದ ಸಂಕೇತ: ಮಂಕಾಳು ವೈದ್ಯ

ಮುರುಡೇಶ್ವರ: ಮುರುಡೇಶ್ವರದ ಯಕ್ಷರಕ್ಷೆ ವೇದಿಕೆಯಲ್ಲಿ ರಾಗಶ್ರೀ ಸಂಗೀತ ವಿದ್ಯಾಲಯ ಹಡಿನಬಾಳ ಇದರ ಮುರುಡೇಶ್ವರ ಶಾಖೆಯ ಪ್ರಥಮ ವರ್ಷದ ವಾರ್ಷಿಕೋತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಉಸ್ತುವಾರಿ ಸಚಿವರಾದ ಶ್ರೀ ಮಂಕಾಳು ವೈದ್ಯರು ಕಲೆ ಮತ್ತು...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಮಹಾಶಿವರಾತ್ರಿ ಪುಣ್ಯಕಾಲದಲ್ಲಿ ಕಣಕಣೇಶ್ವರ ದೇವರ ನೂತನ ಭವ್ಯ ದೇವಸ್ಥಾನ ಲೋಕಾರ್ಪಣೆ :ಶಿಖರ ಕಲಶ ಪ್ರತಿಷ್ಠೆ – ಅಷ್ಟಬಂಧ ಸಮೇತ ನೂತನ ಶಿವಲಿಂಗ ಪ್ರತಿಷ್ಠಾ ಮಹೋತ್ಸವ

ಅಂಕೋಲಾ: ಪಟ್ಟಣದ ಕಾರವಾರ ರಸ್ತೆಯಲ್ಲಿರುವ ಪುರಾತನ ಪ್ರಸಿದ್ಧ ಶ್ರೀ ಕಣಕಣೇಶ್ವರ ದೇವಾಲಯವು ಮಹಾಶಿವರಾತ್ರಿ ಪುಣ್ಯಸಂದರ್ಭದಲ್ಲಿ ನೂತನ...

ಬೆಂಕಿ ಅವಘಡದಲ್ಲಿ ಅಪಾರಹಾನಿ: ಆದರೆ, ಮಾರಿಕಾಂಬೆಯ ಫೋಟೋ ಮಾತ್ರ ಸೇಫ್

ಅಂಕೋಲಾ: ಪಟ್ಟಣ ವ್ಯಾಪ್ತಿಯ ಲಕ್ಷ್ಮೇಶ್ವರ–ಕುಂಬಾರಕೇರಿ ಪ್ರದೇಶದಲ್ಲಿರುವ ಶ್ರೀ ಮಹಾಲಸಾ ವೆಲ್ಡಿಂಗ್ ಶಾಪ್ನಲ್ಲಿ ಫೆಬ್ರವರಿ 9ರ ಸೋಮವಾರ...

ಅಂಕೋಲಾದಲ್ಲಿ ಕರಾಳ ದಿನಾಚರಣೆ ಮತ್ತು ಬಂದ್ ಗೆ ಕರೆ

ಅಂಕೋಲಾ: ಕೇಣಿ ವಾಣಿಜ್ಯ ಬಂದರು ಯೋಜನೆ ವಿರೋಧಿಸಿ ನಡೆಯುತ್ತಿರುವ ಹೋರಾಟಕ್ಕೆ ನವೆಂಬರ್ 15ರಂದು ಒಂದು ವರ್ಷವಾಗಲಿದ್ದು...

ಕಲಾಸಿರಿ ಪ್ರಶಸ್ತಿಯು ಬದುಕಿನ ಸಾರ್ಥಕತೆಯ ಜ್ಞಾನದ ಬೆಳಕು ಬೆಳಗಲು ಸಾಧ್ಯ:ಪಿ. ಆರ್. ನಾಯ್ಕ

ಭಟ್ಕಳ : ಒಂದು ಹಣತೆಯಿಂದ ಹಲವು ಹಣತೆಗಳು ಬೆಳಗುವಂತೆ, ಕಲಾಸಿರಿಯು ಬದುಕಿನ ಸಾರ್ಥಕತೆಯ ಜ್ಞಾನದ ಬೆಳಕು...

ವರ್ಷಾಂತ್ಯಕ್ಕೆ 12 ಲಕ್ಷ ಲಾಭ ಗಳಿಸಿದ ಸೀತಾರಾಮ ಸಹಕಾರಿ ಸಂಘ

ಭಟ್ಕಳ: ಆರ್ಥಿಕ ವರ್ಷಾಂತ್ಯಕ್ಕೆ ಸಹಕಾರಿಯು 12 ಲಕ್ಷ ಲಾಭ ಗಳಿಸಿದೆ ಎಂದು ಶ್ರೀ ಸೀತಾರಾಮ ಸೌಹಾರ್ಧ...

ಬೈಕಿಗೆ ಡಿಕ್ಕಿ ಹೊಡದ ಲಾರಿ: ಸ್ಥಳದಲ್ಲಿಯೇ ಬೈಕ್ ಸವಾರ ದುರ್ಮರಣ: ಹಿಟ್ & ರನ್ ಕೇಸ್ ದಾಖಲು

ಯಲ್ಲಾಪುರ: ಬೈಕಿಗೆ ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು ಹಿಂಬದಿ ಸವಾರ ತೀವ್ರವಾಗಿ...

ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿಟ್ಟಿದ್ದ ಬೈಕ್ ಕಳ್ಳತನ : ಆರೋಪಿ ಬಂಧನ

ಅಂಕೋಲಾ: ಪಟ್ಟಣದಲ್ಲಿ ನಿಲ್ಲಿಸಿಟ್ಟ ಮೋಟಾರ್ ಬೈಕ್ ಕಳ್ಳತನ ಮಾಡಿದ್ದ ಆರೋಪಿತನನ್ನು ಅಂಕೋಲಾ ಪೊಲೀಸರು ವಾಹನ ಸಮೇತ...