ಉತ್ತರ ಕನ್ನಡ ಪ್ರಮುಖ ಕ್ರೈಮ್ ಮತ್ತು ಅಪಘಾತ ಸುದ್ದಿಗಳ ರೌಂಡ್‌ಅಪ್ 2025
Important

Uttara Kannada Roundup 2025: ಇಂದಿನ ಪ್ರಮುಖ ಸುದ್ದಿಗಳು

Share

ಅರಣ್ಯಕ್ಕೆ ಓಡಿ ಕಾಣೆಯಾದ ವ್ಯಕ್ತಿ

ಬನವಾಸಿ: ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬ ಅರಣ್ಯದೊಳಗೆ ಓಡಿಹೋಗಿ ಕಾಣೆಯಾದ ಕುರಿತು ಬನವಾಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿರಸಿ ತಾಲೂಕಿನ ಎಸಳೆಯ ಸಂತೋಷ ಮಂಜಾ ನಾಪತ್ತೆಯಾದ ವ್ಯಕ್ತಿ.

ಅರಣ್ಯದೊಳಗೆ ಓಡಿ ಕಾಣೆಯಾದ ವ್ಯಕ್ತಿಯ ಕುರಿತು ಬನವಾಸಿ ಪೊಲೀಸರಿಗೆ ದಾಖಲಾಗಿರುವ ಪ್ರಕರಣ

ಈತನನ್ನು ಆಸ್ಪತ್ರೆಗೆ ಓಮಿನಿಯಲ್ಲಿ ಕರೆದುಕೊಂಡು ಹೋಗುತ್ತಿರುವಾಗ ಮರೆಗುಡ್ಡಿ ಬಸ್ ನಿಲ್ದಾಣದ ಹತ್ತಿರ ರಸ್ತೆಯಲ್ಲಿ ದೊಡ್ಡ ಗುಂಡಿ ಇದ್ದಿದ್ದರಿಂದ ಓಮಿನಿಯ ವೇಗವನ್ನು ಕಡಿಮೆ ಮಾಡಿದಾಗ, ವಾಹನದ ಬಾಗಿಲನ್ನು ತೆಗೆದು ಅಲ್ಲೆ ಇದ್ದ ಅರಣ್ಯ ಪ್ರದೇಶದೊಳಗೆ ಓಡಿ ಹೋಗಿ ಕಾಣೆಯಾಗಿದ್ದಾನೆ. ಈತ ಎಲ್ಲಿಯಾದರೂ ಪತ್ತೆಯಾದಲ್ಲಿ ಬನವಾಸಿ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ತಿಳಿಸಿದ್ದಾರೆ.

ಧರೆಗೆ ಗುದ್ದಿದ ಬಸ್: ಕೆಲ ಪ್ರಯಾಣಿಕರಿಗೆ ಗಾಯ

ಶಿರಸಿ: ಚಾಲಕನ ನಿಯಂತ್ರಣ ತಪ್ಪಿದ ಸಾರಿಗೆ ಬಸ್ಸೊಂದು ಧರೆಗೆ ಗುದ್ದಿದ ಪರಿಣಾಮ ಪ್ರಯಾಣಿಕರು ಗಾಯಗೊಂಡ ಘಟನೆ ನಡೆದಿದೆ. ಸಾಗರದಿಂದ ಶಿರಸಿ ಕಡೆ ತೆರಳಿತ್ತಿದ್ದ ಸಾಗರ ಸಾರಿಗೆ ಘಟಕದ ಬಸ್ಸೊಂದು ಸ್ಟೇರಿಂಗ್ ತುಂಡಾಗಿ ಚಾಲನ ನಿಯಂತ್ರಣ ತಪ್ಪಿ ಶಿರಸಿ-ಸಿದ್ದಾಪುರ ರಸ್ತೆಯ ಜಾಗನಳ್ಳಿ, ಅಜ್ಜಿಬಳ ಮಧ್ಯದಲ್ಲಿ ಧರೆಗೆ ಗುದ್ದಿದೆ.

ಶಿರಸಿಯಲ್ಲಿ ನಿಯಂತ್ರಣ ತಪ್ಪಿ ಧರೆಗೆ ಗುದ್ದಿದ ಸಾರಿಗೆ ಬಸ್ ದೃಶ್ಯ

ಅಪಘಾತದ ರಭಸಕ್ಕೆ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ಕೆಲ ಪ್ರಯಾಣಿಕರು ಗಾಯಗೊಂಡಿದ್ದಾರೆ.

ಕಾಲುಜಾರಿ ಜಲಪಾತಕ್ಕೆ ಬಿದ್ದು ಓರ್ವ ನೀರುಪಾಲು

ಶಿರಸಿ: ಬೆಣ್ಣೆ ಹೊಳೆ ಜಲಪಾತದಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು , ಓರ್ವ ವಿದ್ಯಾರ್ಥಿ ನೀರುಪಾಲಾದ್ದಾನೆ. ಇನ್ನೊಬ್ಬ ವಿದ್ಯಾರ್ಥಿ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಶಿರಸಿಯ ಅರಣ್ಯ ಮಹಾವಿದ್ಯಾಲಯದ ನಾಲ್ವರು ವಿದ್ಯಾರ್ಥಿಗಳು ರವಿವಾರ ರಜೆ ಇರುವುದರಿಂದ ಬೆಣ್ಣೆಹೊಳೆ ಜಲಪಾತ ವೀಕ್ಷಣೆಗೆ ತೆರಳಿದ್ದರು.

ಬೆಣ್ಣೆ ಹೊಳೆ ಜಲಪಾತದಲ್ಲಿ ಕಾಲು ಜಾರಿ ವಿದ್ಯಾರ್ಥಿ ನೀರುಪಾಲು

ಕಾಲು ತೊಳೆಯಲು ಇಬ್ಬರು ವಿದ್ಯಾರ್ಥಿಗಳು ನೀರಿಗೆ ಇಳಿದಾಗ ನೀರಿನ ರಭಸಕ್ಕೆ ರಾಹುಲ್ ಕೊಚ್ಚಿ ಹೋದರೆ , ಶ್ರೀನಿವಾಸ ಎಂಬಾತನನ್ನು ರಕ್ಷಣೆ ಮಾಡಲಾಗಿದೆ. ತೀವ್ರ ಅಸ್ವಸ್ಥಗೊಂಡ ಶ್ರೀನಿವಾಸನನ್ನು ಶಿರಸಿ ಪಂಡಿತ ಸಾರ್ವಜನಿಕ ಆಸ್ಪತ್ರೆಗೆ ದಾಖಲಿ, ಚಿಕಿತ್ಸೆ ನೀಡಲಾಗುತ್ತಿದೆ. ರಾಹುಲ್ ಪತ್ತೆಗೆ ಕಾರ್ಯಾಚರಣೆ ಮುಂದುವರಿದಿದೆ.

ಇದನ್ನೂ ಓದಿ: ಉತ್ತರಕನ್ನಡದ ಸುದ್ದಿಗಳು

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಕುಮಟಾದ ಬ್ರೌನ್ಸ್ ವಿಲೇಜ್ ಫ್ಯಾಮಿಲಿ ಗಾರ್ಡನ್ ರೆಸ್ಟೋರೆಂಟ್ ನಲ್ಲಿ ಖ್ಯಾತ ಕಲಾವಿದರಿಂದ ಲೈವ್ ಮ್ಯೂಜಿಕ್ ನೋಡುತ್ತಾ ರುಚಿ-ಶುಚಿಯಾದ ಆಹಾರ ಸವಿಯುವ ಅವಕಾಶ

ಕುಮಟಾ: ಬ್ರೌನ್ಸ್ ವಿಲೇಜ್ ಫ್ಯಾಮಿಲಿ ಗಾರ್ಡನ್ ರೆಸ್ಟೋರೆಂಟ್ ಕುಮಟಾ, ಇದು ಉತ್ತರಕನ್ನಡ ಜಿಲ್ಲೆಯ ಅತ್ಯುತ್ತಮ ಫ್ಯಾಮಿಲಿ ಗಾರ್ಡನ್ ರೆಸ್ಟೋರೆಂಟ್ ಆಗಿದ್ದು, ಇದೀಗ ಶನಿವಾರ ( ನವೆಂಬರ್ 8 ರಂದು ) ರಾತ್ರಿ...

ಕಲಾಸಿರಿ ಪ್ರಶಸ್ತಿಯು ಬದುಕಿನ ಸಾರ್ಥಕತೆಯ ಜ್ಞಾನದ ಬೆಳಕು ಬೆಳಗಲು ಸಾಧ್ಯ:ಪಿ. ಆರ್. ನಾಯ್ಕ

ಭಟ್ಕಳ : ಒಂದು ಹಣತೆಯಿಂದ ಹಲವು ಹಣತೆಗಳು ಬೆಳಗುವಂತೆ, ಕಲಾಸಿರಿಯು ಬದುಕಿನ ಸಾರ್ಥಕತೆಯ ಜ್ಞಾನದ ಬೆಳಕು ಇತರರ ಬದುಕಿನಲ್ಲೂ ಸದಾ ಬೆಳಗಲು ಸಾಧ್ಯ ಎಂದು ಕಲಾಸಿರಿ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಪಿ....

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಆಯಕಟ್ಟಿನ ಪ್ರದೇಶದಲ್ಲಿರುವ 8 ಗುಂಟೆ ಜಾಗ ಮಾರಾಟಕ್ಕಿದೆ

ಅಂಕೋಲಾ: ತಾಲೂಕಿನ ಬಳಲೆಯಲ್ಲಿ ಅತ್ಯುತ್ತಮ ಸೌಕರ್ಯ ಹೊಂದಿರುವ, ಆಯಕಟ್ಟಿನ ಪ್ರದೇಶದಲ್ಲಿರುವ NA ಆದ ಜಾಗ ಮಾರಾಟಕ್ಕಿದೆ....

ಕುಮಟಾದ ಬ್ರೌನ್ಸ್ ವಿಲೇಜ್ ಫ್ಯಾಮಿಲಿ ಗಾರ್ಡನ್ ರೆಸ್ಟೋರೆಂಟ್ ನಲ್ಲಿ ಖ್ಯಾತ ಕಲಾವಿದರಿಂದ ಲೈವ್ ಮ್ಯೂಜಿಕ್ ನೋಡುತ್ತಾ ರುಚಿ-ಶುಚಿಯಾದ ಆಹಾರ ಸವಿಯುವ ಅವಕಾಶ

ಕುಮಟಾ: ಬ್ರೌನ್ಸ್ ವಿಲೇಜ್ ಫ್ಯಾಮಿಲಿ ಗಾರ್ಡನ್ ರೆಸ್ಟೋರೆಂಟ್ ಕುಮಟಾ, ಇದು ಉತ್ತರಕನ್ನಡ ಜಿಲ್ಲೆಯ ಅತ್ಯುತ್ತಮ ಫ್ಯಾಮಿಲಿ...

ಆಂಬ್ಯುಲೆನ್ಸ್ ಡಿಕ್ಕಿ : ಭಟ್ಕಳದ ದಂಪತಿ ಬೆಂಗಳೂರಿನಲ್ಲಿ ದುರಂತ ಸಾವು

ಭಟ್ಕಳ: ವೇಗವಾಗಿ ಬಂದ ಆಂಬ್ಯುಲೆನ್ಸ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಭಟ್ಕಳ ಮೂಲದ ದಂಪತಿ...

ಪಲ್ಟಿಯಾದ ಬಸ್: 45 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಅಂಕೋಲಾ: ಪ್ರಮುಖ ಸಂಪರ್ಕ ರಸ್ತೆಗಳಲ್ಲಿ ಒಂದಾಗಿರುವ ಗೋಕರ್ಣ ವಡ್ದೀಘಾಟ ಹೆದ್ದಾರಿ ತಿರುವಿನಲ್ಲಿ ಸಾರಿಗೆ ಸಂಸ್ಥೆಯ ಬಸ್ಸೊಂದು...

KDCC ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ವಸಂತ ನಾಯಕ ಜಮಗೋಡ : ಈ ಬಾರಿ ಹೆಚ್ಚಿದ ಗೆಲುವಿನ ನಿರೀಕ್ಷೆ

ಅಂಕೋಲಾ : ಸಹಕಾರಿ ಮತ್ತು ಸಾಮಾಜಿಕ, ಧಾರ್ಮಿಕ ಮತ್ತಿತರ ಕ್ಷೇತ್ರಗಳಲ್ಲಿ ಸದಾ ಮಂಚೂಣಿಯಲ್ಲಿರುವ ನಾಯಕ ಎಂದು...

ಅಂಕೋಲಾ ಕರಾವಳಿ ಉತ್ಸವ 2025 : ನವೆಂಬರ್ 5 ರಿಂದ 10ರ ವರೆಗೆ ಸಾಂಸ್ಕೃತಿಕ ವೈಭವ

ಅಂಕೋಲಾ: ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಹೊಂದಿರುವ ಅಂಕೋಲಾ ತಾಲೂಕಿನಲ್ಲಿ ಅಂಕೋಲಾ ಸಾಂಸ್ಕೃತಿಕ ಕಲಾಬಳಗ ಉತ್ತರ ಕನ್ನಡ ಸಂಘಟನೆಯ...

ಅಂಕೋಲಾದ ನಾಡವರ ಸಮುದಾಯ ಭವನದಲ್ಲಿ ಬೃಹತ್ ಆಹಾರ ಮತ್ತು ಸ್ವದೇಶೀ ಮೇಳ: ಅಕ್ಟೋಬರ್ 7, 8,9 ರಂದು ಆಯೋಜನೆ

ಅಂಕೋಲಾ : ರಾಘವೇಂದ್ರ ಇವೆಂಟ್ಸ್ ಅಂಕೋಲಾ ಹಾಗೂ ಬೆನಕ ಇವೆಂಟ್ಸ್ ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ...

ಸೇವಾಪರ್ವ ವಿಕಸಿತ ಭಾರತ ವಿಷಯಾಧಾರಿತ ಪೇಟಿಂಗ್ ಸ್ಪರ್ಧೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ದರ್ಶನ ನಾಯ್ಕ

ಭಟ್ಕಳ: ಕೇಂದ್ರ ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ತಂಜಾವೂರು ದಕ್ಷಿಣ ವಲಯ ಸಾಂಸ್ಕೃತಿಕ ಕೇಂದ್ರ ವಿಕ್ಷಿತ್ ಭಾರತ್...