ಚುಟುಕು ಬ್ರಹ್ಮ ದಿನಕರ ದೇಸಾಯಿ ಜನ್ಮದಿನಾಚರಣೆ ಹೊನ್ನಾವರದಲ್ಲಿ ನಡೆದ ಕಾರ್ಯಕ್ರಮ
Important

ಚುಟುಕು ಬ್ರಹ್ಮ ದಿನಕರ ದೇಸಾಯಿ ಜನ್ಮದಿನಾಚರಣೆ

Share

ಹೊನ್ನಾವರ: ಚುಟುಕು ಬ್ರಹ್ಮ ದಿನಕರ ದೇಸಾಯಿ ಜನ್ಮದಿನಾಚರಣೆ ಹೊನ್ನಾವರ ತಾಲೂಕಿನ ಕಾಸರಕೋಡದ ಜನತಾ ವಿದ್ಯಾಲಯದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಘಟಕದ ಸಹಯೋಗದಲ್ಲಿ ನಡೆಯಿತು.

ಉತ್ತರ ಕನ್ನಡದ ಧ್ರುವತಾರೆ ದಿನಕರ ದೇಸಾಯಿ

ಕಾರ್ಯಕ್ರಮ ಉದ್ಘಾಟಿಸಿದ ನಿವೃತ್ತ ಬ್ಯಾಂಕ್ ವ್ಯವಸ್ಥಾಪಕ ಎಸ್.ಟಿ.ಹೊರ್ಟಾ ಮಾತನಾಡಿ, ಸಮಾಜದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಮಾತ್ರವಲ್ಲ ವಿವಿಧ ಕ್ಷೇತ್ರಗಳಲ್ಲಿ ಅವರ ಕೊಡುಗೆ ಅಪಾರವಾದುದು. ಅವರು ಕಾರ್ಮಿಕ ಮುಖಂಡರಾಗಿ ಕಾರ್ಮಿಕರಿಗೆ ನ್ಯಾಯ ಒದಗಿಸಿಕೊಟ್ಟಿದ್ದಾರೆ. ರಾಜಕೀಯ ಕ್ಷೇತ್ರದಲ್ಲಿ ಸೇವೆಯನ್ನು ನೀಡಿದ್ದಾರೆ. ಹಲವಾರು ಕೃತಿಗಳನ್ನು ರಚಿಸಿ ಜನಸೇವೆಯನ್ನು ಮಾಡಿದ್ದಾರೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಅಧ್ಯಕ್ಷ ಎಚ್.ಎಸ್.ಗೌಡ ಮಾತನಾಡಿ, ಚುಟುಕು ಬ್ರಹ್ಮ ಎಂದು ಪ್ರಸಿದ್ಧಿ ಪಡೆದಿರುವ ದಿನಕರ ದೇಸಾಯಿ ಅವರು ಸಾಹಿತ್ಯದ ಜೊತೆಗೆ ಹಲವು ಕ್ಷೇತ್ರಗಳಲ್ಲಿ ಬ್ರಹ್ಮ ಎನಿಸಿಕೊಂಡಿದ್ದಾರೆ. ಸರಳ ಜೀವನದಿಂದ ಎಲ್ಲರಿಗೂ ಮಾದರಿಯಾಗಿದ್ದಾರೆ. ಅವರ ಜನ್ಮದಿನಾಚರಣೆಯನ್ನು ಸಾಹಿತಿಗಳು, ಶಿಕ್ಷಕರು, ವಿದ್ಯಾರ್ಥಿಗಳನ್ನು ಸೇರಿಸಿಕೊಂಡು ಸಂಭ್ರಮದಿoದ ಆಚರಿಸಲಾಗುತ್ತಿದೆ ಎಂದರು.

ಸಾಹಿತಿ ಎಚ್.ಎಸ್.ಗುನಗ ಮಾತನಾಡಿ ದಿನಕರ ದೇಸಾಯಿ ಅವರು ಸಾಹಿತ್ಯ ಮತ್ತು ಶಿಕ್ಷಣ ಕ್ಷೇತ್ರಕ್ಕೆ ದೊಡ್ಡ ಕೊಡುಗೆಯನ್ನು ನೀಡಿ ಉತ್ತರ ಕನ್ನಡ ಜಿಲ್ಲೆಯ ಧ್ರುವತಾರೆಯಾಗಿದ್ದಾರೆ. ನಿಜವಾದ ಧರ್ಮ ಎಂದರೆ ಶಿಕ್ಷಣ; ಶಿಕ್ಷಣದಿಂದ ಎಲ್ಲವನ್ನೂ ಸಾಧಿಸಬಹುದು ಎಂಬುದನ್ನು ಅವರು ತೋರಿಸಿದ್ದಾರೆ ಎಂದು ಹೇಳಿದರು.

ವೇದಿಕೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಎಚ್.ಎಂ.ಮಾರುತಿ, ನಿವೃತ್ತ ಮುಖ್ಯಾಧ್ಯಾಪಕ ಎಂ.ಎಚ್.ನಾಯ್ಕ, ಗ್ರಂಥಪಾಲಕ ಮಂಜುನಾಥ ಗೌಡ, ಕ.ಸಾ.ಪ ಕೋಶಾಧ್ಯಕ್ಷ ನಾರಾಯಣ ಹೆಗಡೆ, ಸದಸ್ಯರಾದ ಶುಭಾ ವಿಷ್ಣು ಸಭಾಹಿತ, ಎಂ.ಡಿ.ಹರಿಕಾoತ, ಶಿಕ್ಷಕರಾದ ಸಬಿತಾ ನರೋನ್ಹಾ, ಸೌಮ್ಯ ಹೆಗಡೆ, ರಾಜೇಶ ಕಾಕಡೆ, ಶಿವಣ್ಣ ಸವದಿ ಹಾಜರಿದ್ದರು.
ಈ ಸಂದರ್ಭದಲ್ಲಿ ದಿನಕರ ದೇಸಾಯಿ ಜನ್ಮದಿನಾಚರಣೆ ಪ್ರಯುಕ್ತ ಆಯೋಜಿಸಿದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ವಿಸ್ಮಯ ನ್ಯೂಸ್, ವಿವೇಕ್ ಶೇಟ್, ಹೊನ್ನಾವರ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಮೂರೂರಿನ ಪ್ರಗತಿ ವಿದ್ಯಾಲಯದಲ್ಲಿ ಶಿಕ್ಷಕ ದಿನಾಚರಣೆ: ಶಿಕ್ಷಕ ರಾಷ್ಟ್ರ ರಕ್ಷಕ ಕಾರ್ಯಕ್ರಮ

ಕುಮಟಾ: ತಾಯಿ ಮಗುವಿಗೆ ಜನ್ಮ ನೀಡುತ್ತಾಳೆ, ಶಿಕ್ಷಕ ಆ ಮಗುವಿಗೆ ಜ್ಞಾನ ನೀಡಿ ಕಣ್ತೆರೆಯಿಸಿ ಒಳ್ಳೆಯ ಸಂಸ್ಕಾರ ರೂಪಿಸಿ ಮೂರ್ತ ಸ್ವರೂಪ ಕೊಟ್ಟು ಸಮಾಜದಲ್ಲಿ ಒಳ್ಳೆಯ ವ್ಯಕ್ತಿತ್ವ ರೂಪಿಸಿಕೊಳ್ಳಲು ಶಿಕ್ಷಕ ದಾರಿ...

Uttara Kannada Roundup 2025: ಇಂದಿನ ಪ್ರಮುಖ ಸುದ್ದಿಗಳು

ಅರಣ್ಯಕ್ಕೆ ಓಡಿ ಕಾಣೆಯಾದ ವ್ಯಕ್ತಿ ಬನವಾಸಿ: ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬ ಅರಣ್ಯದೊಳಗೆ ಓಡಿಹೋಗಿ ಕಾಣೆಯಾದ ಕುರಿತು ಬನವಾಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿರಸಿ ತಾಲೂಕಿನ ಎಸಳೆಯ ಸಂತೋಷ ಮಂಜಾ...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ತಾತ್ಕಾಲಿಕ ವಿದ್ಯುತ್ ಸಂಪರ್ಕ ನೀಡಿ: ಹೆಸ್ಕಾಂ ಅಧಿಕಾರಿಗೆ ಸಚಿವ ಮಂಕಾಳ ವೈದ್ಯ ತಾಕೀತು

ಭಟ್ಕಳ: ಜನರಿಗೆ ಮೂಲಭೂತ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಸಿ.ಸಿ ಓಸಿ ಪ್ರಮಾಣ ಪತ್ರವಿಲ್ಲದಿದ್ದರು, ಜನರಿಗೆ ಪಂಚಾಯತ್...

Uttara Kannada Roundup 2025: ಇಂದಿನ ಪ್ರಮುಖ ಸುದ್ದಿಗಳು

ಅರಣ್ಯಕ್ಕೆ ಓಡಿ ಕಾಣೆಯಾದ ವ್ಯಕ್ತಿ ಬನವಾಸಿ: ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬ ಅರಣ್ಯದೊಳಗೆ ಓಡಿಹೋಗಿ ಕಾಣೆಯಾದ...

ಹೊಟೇಲ್ ಮೇಲೆ ದಾಳಿ: ಹೆಗ್ಗಣಗಳ ರಾಶಿ, ಹಾಳಾದ ಎಣ್ಣೆ, ಅಶುಚಿತ್ವ ನೋಡಿ ಅಧಿಕಾರಿಗಳೇ ದಂಗು

ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಬಗ್ಗೆ ದೂರು ಕೇಳಿ ಬಂದಿದ್ದ ಹಿನ್ನೆಲೆಯಲ್ಲಿ ಪಟ್ಟಣ ವ್ಯಾಪ್ತಿಯ ಸಾಮಾನ್ಯ...

ಗುರು ಶಿಷ್ಯರ ಸಂಬಂಧ ಚಿರಸ್ಥಾಯಿ: ತಹಶೀಲ್ದಾರ ಡಾ. ಚಿಕ್ಕಪ್ಪ ನಾಯಕ

ಅಂಕೋಲಾ : ಶಿಕ್ಷಕರು ವೃತ್ತಿಯಿಂದ ನಿವೃತ್ತರಾದರೂ ಜನಮಾನಸದಿಂದ ಎಂದಿಗೂ ನಿವೃತ್ತರಾಗುವುದಿಲ್ಲ. ಗುರು ಶಿಷ್ಯರ ಸಂಬಂಧ ಎಂದಿಗೂ...

ಬಲು ಅಪರೂಪ ಕೆಂಪು ಬಣ್ಣದ ಈ ಸಿಂಧೂರ ಗಣಪ: ದರ್ಶನ ಮಾತ್ರದಿಂದಲೇ ಪರಿಹಾರವಾಗುವುದಂತೆ ಜನ್ಮಾಂತರಗಳ ಪಾಪ

ಅಂಕೋಲಾ: ವಿಶ್ವದಾದ್ಯಂತ ಪ್ರಥಮ ಪೂಜಿತ, ಏಕದಂತನ ಆರಾಧನೆ ಜೋರಾಗಿ ನಡೆದಿದ್ದು ಚೌತಿಯ ಸಂಭ್ರಮ ಎಲ್ಲೆಡೆ ಕಂಡುಬರುತ್ತಿದೆ....

ಐತಿಹಾಸಿಕ ಚಂದ್ರಗ್ರಹಣ: ಆರಂಭ-ಮುಕ್ತಾಯ: ಚಂದ್ರಗ್ರಹಣ ಕುರಿತ ಸಾಮಾನ್ಯ ಪ್ರಶ್ನೆಗಳಿಗೆ ಉತ್ತರ

ವಿಸ್ಮಯ ಟಿ.ವಿ ನ್ಯೂಸ್ ಡೆಸ್ಕ್: ಭಾರತ ಸೇರಿದಂತೆ ವಿಶ್ವದಾದ್ಯಂತ 2025ರ ಎರಡನೇ ಮತ್ತು ವರ್ಷದ ಕೊನೆಯ...

ಮನೆಯಿಂದ ಹೋದ ಅಂಕೋಲಾ ಯುವತಿ ನಾಪತ್ತೆ: ಪೊಲೀಸರ ತನಿಖೆ ಆರಂಭ

ಅಂಕೋಲಾ: ತಾಲೂಕಿನ ಅಗ್ರಗೋಣ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಡಿಗೋಣ ಬೈಲಕೇರಿಯಲ್ಲಿ ಯುವತಿಯೋರ್ವಳು ಮನೆಯಿಂದ ಕಾಣೆಯಾದ ಘಟನೆ...

ಮನೆಯಿಂದ ಹೋದ ಮಹಿಳೆ ನಾಪತ್ತೆ: ಸುಳಿವು ಸಿಕ್ಕರೆ ಮಾಹಿತಿ ನೀಡುವಂತೆ ಮನವಿ

ಮುಂಡಗೋಡ: ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಕಾಣೆಯಾದವರ ಬಗ್ಗೆ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಮುಂಡಗೋಡು ನಿವಾಸಿಯಾಗಿದ್ದ...