ಹೃದಯದಾಕಾರದ ಮುಖ ಹೊಂದಿರುವ ಅಪರೂಪದ ಗೂಬೆ ಬೇಳಾ ಬಂದರ ಸರ್ಕಾರಿ ಶಾಲೆಯಲ್ಲಿ
Important

ಹೃದಯದಾಕಾರದ ಮುಖದ ಗೂಬೆ: ಶಾಲೆಗೆ ಬಂತು ಗುಮ್ಮ

Share

ಅಂಕೋಲಾ: ಮಕ್ಕಳು ಊಟ, ತಿಂಡಿ, ನಿದ್ದೆ ಸರಿಯಾಗಿ ಮಾಡದಿದ್ದರೆ ಅಥವಾ ಬೇರೆ ಕಾರಣದಿಂದ ಹಠ ಹಿಡಿದರೆ ,ಮನೆಯ ಹಿರಿಯರು ಗುಮ್ಮ ಬಂತು ಗುಮ್ಮಎಂಬ ಮಾತು ಹೇಳಿ ಸಣ್ಣಹೆದರಿಕೆ ಹಾಕಿ ಮಕ್ಕಳನ್ನು ಸರಿದಾರಿಗೆ ತರುವ ಪ್ರಯತ್ನ ಮಾಡುವುದನ್ನು ಕೆಲವೊಮ್ಮೆ ಕೆಲವೆಡೆ ಕೇಳಿದ್ದೇವೆ ನೋಡಿದ್ದೇವೆ.

ಆ ಗುಮ್ಮನ ಕಥೆ ಆಧುನಿಕತೆಯ ಇಂದಿನ ದಿನಗಳಲ್ಲಿ ಅಷ್ಟಾಗಿ ಕೇಳಿ ಬರದಿದ್ದರೂ ಗುಮ್ಮ ಎಂದೊಡನೆ ಅದೇನೋ ಕುತೂಹಲ ಹಲವರಲ್ಲಿರುತ್ತದೆ. ಗುಮ್ಮನ ಬಗ್ಗೆ ಸರಿಯಾಗಿ ತಿಳಿದಿರದ ಮತ್ತು ನೋಡಿರದ ಕೆಲ ಮಕ್ಕಳಿರುವ ಶಾಲೆಗೆ ಗುಮ್ಮ ಬಂದರೆ ಹೇಗಿರ ಬೇಡ?!

ಮಕ್ಕಳಲ್ಲಿ ಆತಂಕ ಮತ್ತು ಕುತೂಹಲ

ಅಂಕೋಲಾ ತಾಲೂಕಿನ ಬೇಳಾ ಬಂದರ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಕಳೆದ ಕೆಲ ದಿನಗಳಿಂದ ಗುಮ್ಮವೊಂದು ಆಗಾಗ ಕಾಣಿಸಿಕೊಂಡು,ವಿದ್ಯಾರ್ಥಿಗಳ ಆತಂಕ ಹಾಗೂ ಕುತೂಹಲಕ್ಕೆ ಕಾರಣವಾಗಿತ್ತು ಎನ್ನಲಾಗಿದೆ. ಶಾಲೆಗೆ ಬಂದಿದ್ದ ಈ ಅಪರೂಪದ ಗೂಬೆಯನ್ನು ಸ್ಥಳೀಯರಾದ ಉಮೇಶ್ ಮುಕುಂದ ನಾಯ್ಕ ಎನ್ನುವವರು ಸುರಕ್ಷಿತವಾಗಿ ಹಿಡಿದು, ಎ ಸಿ ಎಫ್ ಜಯೇಶ್ ಅವರ ಮಾರ್ಗದರ್ಶನದಲ್ಲಿ ಅರಣ್ಯ ಇಲಾಖೆಗೆ ಹಸ್ತಾಂತರಿಸುವ ಮೂಲಕ ಸ್ಥಳೀಯರ ಆತಂಕ ದೂರ ಮಾಡಿದ್ದಾರೆ.

ಸ್ಥಳೀಯ ಭಾಷೆಯಲ್ಲಿ ಗುಮ್ಮ ಎಂದು ಕರೆಸಿಕೊಳ್ಳುವ ಅಪರೂಪದ ಜೀವಸಂಕುಲಗಳಲ್ಲಿ , ಗೂಬೆಯೂ ಒಂದಾಗಿದ್ದು, ಅದರಲ್ಲಿ ಬೇರೆ ಬೇರೆ ರೀತಿಯವುಗಳನ್ನು ಕಾಣಬಹುದಾಗಿದ್ದರೂ, ಬೇಳಾ ಬಂದರಿನಲ್ಲಿ ಕಾಣಿಸಿಕೊಂಡ ಹೃದಯದಾಕಾರದ ಮುಖವುಳ್ಳ ಈ ಸುಂದರ ಬಣ್ಣದ ಗೂಬೆಯನ್ನು ಪಟ್ಟಣಿಗರು ಸೇರಿದಂತೆ ಹಲವರು ಕಣ್ತುಂಬಿಸಿಕೊಂಡರು.

ಗೂಬೆಯ ಬಗ್ಗೆ ನಂಬಿಕೆಗಳು

ಸ್ಥಳೀಯ ಹೆಸರಾಂತ ಯುವ ಉದ್ಯಮಿ ಸುಜಿತ ನಾರಾಯಣ ನಾಯ್ಕ ಎನ್ನುವವರೂ ಗೂಬೆಯ ಕೆಲ ಫೋಟೋಗಳನ್ನು ತಮ್ಮ ಮೊಬೈಲ್ ಕ್ಯಾಮರಾದಲ್ಲಿ ಸೆರೆ ಹಿಡಿದಿದ್ದರು. ಗೂಬೆ ಹಿಡಿದ ಸುದ್ದಿ ಕೇಳಿದ ಕೆಲವರು ಗೂಬೆ ಅಶುಭ ಕಾರಕ ಎಂದರೆ, ಇನ್ನು ಕೆಲವರು ಲಕ್ಷ್ಮೀಗೆ ಅತೀ ಪ್ರಿಯವಾದ ಪಕ್ಷಿ ಎಂದು ಹೇಳುತ್ತಿರುವುದು ಕಂಡು ಬಂದಿದೆ. ಒಟ್ಟಿನಲ್ಲಿ ಶಾಲೆಗೆ ಬಂದಿದ್ದ ಅಪರೂಪದ ಗೂಬೆ ಸ್ಥಳೀಯರ ಮೂಲಕ ,ಅರಣ್ಯ ಇಲಾಖೆಯವರ ಕೈ ಸೇರಿ ಸುರಕ್ಷಿತ ವಾಗುವಂತಾಗಿದೆ.

ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಕುಮಟಾದ ಬ್ರೌನ್ಸ್ ವಿಲೇಜ್ ಫ್ಯಾಮಿಲಿ ಗಾರ್ಡನ್ ರೆಸ್ಟೋರೆಂಟ್ ನಲ್ಲಿ ಖ್ಯಾತ ಕಲಾವಿದರಿಂದ ಲೈವ್ ಮ್ಯೂಜಿಕ್ ನೋಡುತ್ತಾ ರುಚಿ-ಶುಚಿಯಾದ ಆಹಾರ ಸವಿಯುವ ಅವಕಾಶ

ಕುಮಟಾ: ಬ್ರೌನ್ಸ್ ವಿಲೇಜ್ ಫ್ಯಾಮಿಲಿ ಗಾರ್ಡನ್ ರೆಸ್ಟೋರೆಂಟ್ ಕುಮಟಾ, ಇದು ಉತ್ತರಕನ್ನಡ ಜಿಲ್ಲೆಯ ಅತ್ಯುತ್ತಮ ಫ್ಯಾಮಿಲಿ ಗಾರ್ಡನ್ ರೆಸ್ಟೋರೆಂಟ್ ಆಗಿದ್ದು, ಇದೀಗ ಶನಿವಾರ ( ನವೆಂಬರ್ 8 ರಂದು ) ರಾತ್ರಿ...

ಕಲಾಸಿರಿ ಪ್ರಶಸ್ತಿಯು ಬದುಕಿನ ಸಾರ್ಥಕತೆಯ ಜ್ಞಾನದ ಬೆಳಕು ಬೆಳಗಲು ಸಾಧ್ಯ:ಪಿ. ಆರ್. ನಾಯ್ಕ

ಭಟ್ಕಳ : ಒಂದು ಹಣತೆಯಿಂದ ಹಲವು ಹಣತೆಗಳು ಬೆಳಗುವಂತೆ, ಕಲಾಸಿರಿಯು ಬದುಕಿನ ಸಾರ್ಥಕತೆಯ ಜ್ಞಾನದ ಬೆಳಕು ಇತರರ ಬದುಕಿನಲ್ಲೂ ಸದಾ ಬೆಳಗಲು ಸಾಧ್ಯ ಎಂದು ಕಲಾಸಿರಿ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಪಿ....

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಆಯಕಟ್ಟಿನ ಪ್ರದೇಶದಲ್ಲಿರುವ 8 ಗುಂಟೆ ಜಾಗ ಮಾರಾಟಕ್ಕಿದೆ

ಅಂಕೋಲಾ: ತಾಲೂಕಿನ ಬಳಲೆಯಲ್ಲಿ ಅತ್ಯುತ್ತಮ ಸೌಕರ್ಯ ಹೊಂದಿರುವ, ಆಯಕಟ್ಟಿನ ಪ್ರದೇಶದಲ್ಲಿರುವ NA ಆದ ಜಾಗ ಮಾರಾಟಕ್ಕಿದೆ....

ಕುಮಟಾದ ಬ್ರೌನ್ಸ್ ವಿಲೇಜ್ ಫ್ಯಾಮಿಲಿ ಗಾರ್ಡನ್ ರೆಸ್ಟೋರೆಂಟ್ ನಲ್ಲಿ ಖ್ಯಾತ ಕಲಾವಿದರಿಂದ ಲೈವ್ ಮ್ಯೂಜಿಕ್ ನೋಡುತ್ತಾ ರುಚಿ-ಶುಚಿಯಾದ ಆಹಾರ ಸವಿಯುವ ಅವಕಾಶ

ಕುಮಟಾ: ಬ್ರೌನ್ಸ್ ವಿಲೇಜ್ ಫ್ಯಾಮಿಲಿ ಗಾರ್ಡನ್ ರೆಸ್ಟೋರೆಂಟ್ ಕುಮಟಾ, ಇದು ಉತ್ತರಕನ್ನಡ ಜಿಲ್ಲೆಯ ಅತ್ಯುತ್ತಮ ಫ್ಯಾಮಿಲಿ...

ಆಂಬ್ಯುಲೆನ್ಸ್ ಡಿಕ್ಕಿ : ಭಟ್ಕಳದ ದಂಪತಿ ಬೆಂಗಳೂರಿನಲ್ಲಿ ದುರಂತ ಸಾವು

ಭಟ್ಕಳ: ವೇಗವಾಗಿ ಬಂದ ಆಂಬ್ಯುಲೆನ್ಸ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಭಟ್ಕಳ ಮೂಲದ ದಂಪತಿ...

ಪಲ್ಟಿಯಾದ ಬಸ್: 45 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಅಂಕೋಲಾ: ಪ್ರಮುಖ ಸಂಪರ್ಕ ರಸ್ತೆಗಳಲ್ಲಿ ಒಂದಾಗಿರುವ ಗೋಕರ್ಣ ವಡ್ದೀಘಾಟ ಹೆದ್ದಾರಿ ತಿರುವಿನಲ್ಲಿ ಸಾರಿಗೆ ಸಂಸ್ಥೆಯ ಬಸ್ಸೊಂದು...

KDCC ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ವಸಂತ ನಾಯಕ ಜಮಗೋಡ : ಈ ಬಾರಿ ಹೆಚ್ಚಿದ ಗೆಲುವಿನ ನಿರೀಕ್ಷೆ

ಅಂಕೋಲಾ : ಸಹಕಾರಿ ಮತ್ತು ಸಾಮಾಜಿಕ, ಧಾರ್ಮಿಕ ಮತ್ತಿತರ ಕ್ಷೇತ್ರಗಳಲ್ಲಿ ಸದಾ ಮಂಚೂಣಿಯಲ್ಲಿರುವ ನಾಯಕ ಎಂದು...

ಅಂಕೋಲಾ ಕರಾವಳಿ ಉತ್ಸವ 2025 : ನವೆಂಬರ್ 5 ರಿಂದ 10ರ ವರೆಗೆ ಸಾಂಸ್ಕೃತಿಕ ವೈಭವ

ಅಂಕೋಲಾ: ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಹೊಂದಿರುವ ಅಂಕೋಲಾ ತಾಲೂಕಿನಲ್ಲಿ ಅಂಕೋಲಾ ಸಾಂಸ್ಕೃತಿಕ ಕಲಾಬಳಗ ಉತ್ತರ ಕನ್ನಡ ಸಂಘಟನೆಯ...

ಅಂಕೋಲಾದ ನಾಡವರ ಸಮುದಾಯ ಭವನದಲ್ಲಿ ಬೃಹತ್ ಆಹಾರ ಮತ್ತು ಸ್ವದೇಶೀ ಮೇಳ: ಅಕ್ಟೋಬರ್ 7, 8,9 ರಂದು ಆಯೋಜನೆ

ಅಂಕೋಲಾ : ರಾಘವೇಂದ್ರ ಇವೆಂಟ್ಸ್ ಅಂಕೋಲಾ ಹಾಗೂ ಬೆನಕ ಇವೆಂಟ್ಸ್ ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ...

ಸೇವಾಪರ್ವ ವಿಕಸಿತ ಭಾರತ ವಿಷಯಾಧಾರಿತ ಪೇಟಿಂಗ್ ಸ್ಪರ್ಧೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ದರ್ಶನ ನಾಯ್ಕ

ಭಟ್ಕಳ: ಕೇಂದ್ರ ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ತಂಜಾವೂರು ದಕ್ಷಿಣ ವಲಯ ಸಾಂಸ್ಕೃತಿಕ ಕೇಂದ್ರ ವಿಕ್ಷಿತ್ ಭಾರತ್...