"ಅಂಕೋಲಾ ಪೊಲೀಸರು ಕಳುವಾದ ಡಿಎಲ್ಎಕ್ಸ್ ಬೈಕ್ ಮತ್ತು ಆರೋಪಿ ವಶಕ್ಕೆ ಪಡೆದ ಘಟನೆ"
Big News

ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿಟ್ಟಿದ್ದ ಬೈಕ್ ಕಳ್ಳತನ : ಆರೋಪಿ ಬಂಧನ

Share

ಅಂಕೋಲಾ: ಪಟ್ಟಣದಲ್ಲಿ ನಿಲ್ಲಿಸಿಟ್ಟ ಮೋಟಾರ್ ಬೈಕ್ ಕಳ್ಳತನ ಮಾಡಿದ್ದ ಆರೋಪಿತನನ್ನು ಅಂಕೋಲಾ ಪೊಲೀಸರು ವಾಹನ ಸಮೇತ ವಶಕ್ಕೆ ಪಡೆದಿದ್ದಾರೆ. ಕಾರವಾರ ಕೋಡಿಭಾಗದ ಅಳ್ವೇವಾಡ ನಿವಾಸಿ ಅಮಿತ ಭಂಡಾರಿ(40) ಬಂಧಿತ ಆರೋಪಿಯಾಗಿದ್ದು, ಸೆ. 3 ರಂದು ಅಂಕೋಲಾ ಪಟ್ಟಣದ ಪ್ರಭು ಪೆಟ್ರೋಲ್ ಪಂಪ್ ಆವರಣ ಗೋಡೆ ಹತ್ತಿರ ನಿಲ್ಲಿಸಿಟ್ಟಿದ್ದ ಬೈಕ್ ಕಳ್ಳತನ ಆರೋಪದ ಮೇಲೆ ಪೊಲೀಸರು ಈತನನ್ನು ವಶಕ್ಕೆ ಪಡೆದು ಕಾನೂನು ಕ್ರಮ ಮುಂದುವರಿಸಿದ್ದಾರೆ.

ಅಂಕೋಲಾ ತಾಲೂಕಿನ ಶಿರಕುಳಿ ನಿವಾಸಿ ನಾಗರಾಜ ಸುರೇಶ ನಾಯ್ಕ ಎನ್ನುವವರು ತಮ್ಮ ಹೀರೋ ಹೊಂಡಾ ಸಿಡಿ ಡಾನ್ ಡಿಎಲ್ ಎಕ್ಸ್ ಮೋಟಾರ್ ಸೈಕಲ್ ನ್ನು ಸೆಪ್ಟೆಂಬರ್ 3 ರಂದು ಬೆಳಿಗ್ಗೆ ಪೆಟ್ರೋಲ್ ಪಂಪ್ ಆವರಣ ಗೋಡೆಯ ಬಳಿ ನಿಲ್ಲಿಸಿಟ್ಟ ಸಂದರ್ಭದಲ್ಲಿ ಯಾರೋ ಕಳ್ಳತನ ಮಾಡಿರುವ ಕುರಿತು ಅಂಕೋಲಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಹಿರಿಯ ಪೊಲೀಸ್ ಅಧಿಕಾರಿಗಳ ಶ್ಲಾಘನೆ

ಜಿಲ್ಲಾ ಪೊಲೀಸ್ ವರಿಷ್ಠ ದೀಪನ್ ಎಂ.ಎನ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ. ಜಿ, ಜಗದೀಶ. ಎಂ, ಡಿ.ವೈ.ಎಸ್.ಪಿ, ಎಸ್ ವಿ ಗಿರೀಶ್ ಮಾರ್ಗದರ್ಶನದಲ್ಲಿ ಅಂಕೋಲಾ ಪೊಲೀಸ್ ನಿರೀಕ್ಷಕ ಚಂದ್ರಶೇಖರ ಮಠಪತಿ, ಪಿ.ಎಸ್.ಐ (ತನಿಖೆ 1 ) ವಿಶ್ವನಾಥ್ ನಿಂಗೊಳ್ಳಿ ಮತ್ತು ಸಿಬ್ಬಂದಿಗಳಾದ ಪ್ರಶಾಂತ ನಾಯ್ಕ, ಮಹಾದೇವ ಸಿದ್ದಿ, ಸತೀಶ ಅಂಬಿಗ, ಆಸೀಪ ಆರ್ ಕುಂಕೂರ, ರವರು ಈ ಪ್ರಕರಣದಲ್ಲಿ ಮೋಟಾರ್ ಸೈಕಲ್ ಕಳ್ಳತನ ಮಾಡುತ್ತಿದ್ದ ಆರೋಪಿತ್ತಿನ ಬಗ್ಗೆ ಮಾಹಿತಿ ಸಂಗ್ರಹಿಸಿ,ಆರೋಪಿ ಹಾಗೂ ಕಳುವಾದ ಮೋಟಾರ್ ಸೈಕಲ್ ಅನ್ನು ಪತ್ತೆ ಮಾಡಿ,ತನಿಖೆ ಕೈಗೊಂಡಿದ್ದಾರೆ.

ಪತ್ತೆ ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಅಂಕೋಲಾ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಕಾರ್ಯಕ್ಕೆ ,ಜಿಲ್ಲೆಯ ಹಿರಿಯ ಅಧಿಕಾರಿಗಳು ಇಲಾಖೆ ಪರವಾಗಿ ಶ್ಲಾಘಿಗಿಸಿದ್ದಾರೆ.

ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಕುಮಟಾದ ಬ್ರೌನ್ಸ್ ವಿಲೇಜ್ ಫ್ಯಾಮಿಲಿ ಗಾರ್ಡನ್ ರೆಸ್ಟೋರೆಂಟ್ ನಲ್ಲಿ ಖ್ಯಾತ ಕಲಾವಿದರಿಂದ ಲೈವ್ ಮ್ಯೂಜಿಕ್ ನೋಡುತ್ತಾ ರುಚಿ-ಶುಚಿಯಾದ ಆಹಾರ ಸವಿಯುವ ಅವಕಾಶ

ಕುಮಟಾ: ಬ್ರೌನ್ಸ್ ವಿಲೇಜ್ ಫ್ಯಾಮಿಲಿ ಗಾರ್ಡನ್ ರೆಸ್ಟೋರೆಂಟ್ ಕುಮಟಾ, ಇದು ಉತ್ತರಕನ್ನಡ ಜಿಲ್ಲೆಯ ಅತ್ಯುತ್ತಮ ಫ್ಯಾಮಿಲಿ ಗಾರ್ಡನ್ ರೆಸ್ಟೋರೆಂಟ್ ಆಗಿದ್ದು, ಇದೀಗ ಶನಿವಾರ ( ನವೆಂಬರ್ 8 ರಂದು ) ರಾತ್ರಿ...

ಕಲಾಸಿರಿ ಪ್ರಶಸ್ತಿಯು ಬದುಕಿನ ಸಾರ್ಥಕತೆಯ ಜ್ಞಾನದ ಬೆಳಕು ಬೆಳಗಲು ಸಾಧ್ಯ:ಪಿ. ಆರ್. ನಾಯ್ಕ

ಭಟ್ಕಳ : ಒಂದು ಹಣತೆಯಿಂದ ಹಲವು ಹಣತೆಗಳು ಬೆಳಗುವಂತೆ, ಕಲಾಸಿರಿಯು ಬದುಕಿನ ಸಾರ್ಥಕತೆಯ ಜ್ಞಾನದ ಬೆಳಕು ಇತರರ ಬದುಕಿನಲ್ಲೂ ಸದಾ ಬೆಳಗಲು ಸಾಧ್ಯ ಎಂದು ಕಲಾಸಿರಿ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಪಿ....

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಅಂಕೋಲಾದಲ್ಲಿ ಕರಾಳ ದಿನಾಚರಣೆ ಮತ್ತು ಬಂದ್ ಗೆ ಕರೆ

ಅಂಕೋಲಾ: ಕೇಣಿ ವಾಣಿಜ್ಯ ಬಂದರು ಯೋಜನೆ ವಿರೋಧಿಸಿ ನಡೆಯುತ್ತಿರುವ ಹೋರಾಟಕ್ಕೆ ನವೆಂಬರ್ 15ರಂದು ಒಂದು ವರ್ಷವಾಗಲಿದ್ದು...

ಕಲಾಸಿರಿ ಪ್ರಶಸ್ತಿಯು ಬದುಕಿನ ಸಾರ್ಥಕತೆಯ ಜ್ಞಾನದ ಬೆಳಕು ಬೆಳಗಲು ಸಾಧ್ಯ:ಪಿ. ಆರ್. ನಾಯ್ಕ

ಭಟ್ಕಳ : ಒಂದು ಹಣತೆಯಿಂದ ಹಲವು ಹಣತೆಗಳು ಬೆಳಗುವಂತೆ, ಕಲಾಸಿರಿಯು ಬದುಕಿನ ಸಾರ್ಥಕತೆಯ ಜ್ಞಾನದ ಬೆಳಕು...

ವರ್ಷಾಂತ್ಯಕ್ಕೆ 12 ಲಕ್ಷ ಲಾಭ ಗಳಿಸಿದ ಸೀತಾರಾಮ ಸಹಕಾರಿ ಸಂಘ

ಭಟ್ಕಳ: ಆರ್ಥಿಕ ವರ್ಷಾಂತ್ಯಕ್ಕೆ ಸಹಕಾರಿಯು 12 ಲಕ್ಷ ಲಾಭ ಗಳಿಸಿದೆ ಎಂದು ಶ್ರೀ ಸೀತಾರಾಮ ಸೌಹಾರ್ಧ...

ಬೈಕಿಗೆ ಡಿಕ್ಕಿ ಹೊಡದ ಲಾರಿ: ಸ್ಥಳದಲ್ಲಿಯೇ ಬೈಕ್ ಸವಾರ ದುರ್ಮರಣ: ಹಿಟ್ & ರನ್ ಕೇಸ್ ದಾಖಲು

ಯಲ್ಲಾಪುರ: ಬೈಕಿಗೆ ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು ಹಿಂಬದಿ ಸವಾರ ತೀವ್ರವಾಗಿ...

ರಾಷ್ಟ್ರೀಯ ಮೆಗಾ ಲೋಕ ಅದಾಲತ್ ನಲ್ಲಿ ಒಟ್ಟೂ 167 ಪ್ರಕರಣಗಳು ರಾಜೀ ಸಂಧಾನದಲ್ಲಿ ಇತ್ಯರ್ಥ

ಅಂಕೋಲಾ: ತಾಲೂಕಿನ ನ್ಯಾಯಾಲಯಗಳ ಸಂಕೀರ್ಣದಲ್ಲಿ ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮ ಸೆ 13 ರ ಶನಿವಾರ...

ಮೂರೂರಿನ ಪ್ರಗತಿ ವಿದ್ಯಾಲಯದಲ್ಲಿ ಶಿಕ್ಷಕ ದಿನಾಚರಣೆ: ಶಿಕ್ಷಕ ರಾಷ್ಟ್ರ ರಕ್ಷಕ ಕಾರ್ಯಕ್ರಮ

ಕುಮಟಾ: ತಾಯಿ ಮಗುವಿಗೆ ಜನ್ಮ ನೀಡುತ್ತಾಳೆ, ಶಿಕ್ಷಕ ಆ ಮಗುವಿಗೆ ಜ್ಞಾನ ನೀಡಿ ಕಣ್ತೆರೆಯಿಸಿ ಒಳ್ಳೆಯ...

ಭೂಮಿತಾಯಿಯ ಹೊಸ್ತಿನ ಹಬ್ಬ : ಕೃಷಿ ಮತ್ತು ಶ್ರಮ ಪ್ರಧಾನ ಸಂಸ್ಕೃತಿಯ ಪ್ರತೀಕ

ಅಂಕೋಲಾ: ಭೂಮ್ತಾಯಿ ಎಂದೇ ಪ್ರಸಿದ್ಧಿ ಪಡೆದಿರುವ ತಾಲೂಕಿನ ಹಾಗೂ ಇತರಡೆಯ ಅಸಂಖ್ಯ ಭಕ್ತರ ಪಾಲಿನ ಶಕ್ತಿ...