Big News

ಬೈಕಿಗೆ ಡಿಕ್ಕಿ ಹೊಡದ ಲಾರಿ: ಸ್ಥಳದಲ್ಲಿಯೇ ಬೈಕ್ ಸವಾರ ದುರ್ಮರಣ: ಹಿಟ್ & ರನ್ ಕೇಸ್ ದಾಖಲು

Share

ಯಲ್ಲಾಪುರ: ಬೈಕಿಗೆ ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು ಹಿಂಬದಿ ಸವಾರ ತೀವ್ರವಾಗಿ ಗಾಯಗೊಂಡ ಘಟನೆ
ತಾಲೂಕಿನ ದೇಶಪಾಂಡೆ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 52 ರಲ್ಲಿ ಸಂಭವಿಸಿದೆ. ಬೈಕ್ ಸವಾರ ರಾಯಚೂರ್ ಜಿಲ್ಲೆಯ ಖಾನಾಪುರ ಉಡಂಗಲ್ ನಿವಾಸಿ ನರಸಿಂಹ ನರಸಪ್ಪ ಬುಗಲಿ(24) ಎಂಬಾತ ಅಪಘಾತದಲ್ಲಿ ಸಾವಿಗೀಡಾಗಿದ್ದು, ಹಿಂಬದಿ ಸವಾರ ವೈ.ನಾಗೇಶ ನಾಯಕ್ ಎನ್ನುವವರು ಗಾಯಗೊಂಡಿದ್ದಾರೆ.

ಯಲ್ಲಾಪುರ ಕಡೆಯಿಂದ ಹುಬ್ಬಳ್ಳಿಯ ಕಡೆ ಸಾಗುತ್ತಿದ್ದ ಲಾರಿ ಚಾಲಕನ ಅತಿವೇಗ ಮತ್ತು ನಿರ್ಲಕ್ಷ್ಯದ ಚಾಲನೆಯಿಂದ ಎದುರಿನಿಂದ ಬರುತ್ತಿದ್ದ ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಕೆಳಗೆ ಬಿದ್ದ ಬೈಕ್ ಸವಾರನ ತಲೆಯ ಮೇಲೆ ಲಾರಿಯ ಹಿಂಬದಿ ಟಯರ್ ಹರಿದು ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಲಾರಿ ಚಾಲಕ ಕಿರವತ್ತಿ ಬಳಿ ಲಾರಿ ನಿಲ್ಲಿಸಿಟ್ಟು ಓಡಿ ಹೋಗಿದ್ದು ಈ ಹಿಟ್ ಎಂಡ್ ರನ್ ಕೇಸ್ ಕುರಿತಂತೆ
ಯಲ್ಲಾಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪೊಲೀಸ್ ನಿರೀಕ್ಷಕ ರಮೇಶ ಖಾನಾಪುರ ಅವರ ಮಾರ್ಗದರ್ಶನದಲ್ಲಿ ಸಂಚಾರ ಪಿ.ಎಸ್.ಐ ಸಿದ್ದಪ್ಪ ಗುಡಿ ಪ್ರಕರಣ
ದಾಖಲಿಸಿ ತನಿಖೆ ಕೈಗೊಂಡಿದ್ದಾರೆ. ಸೆ 18 ರ ಗುರುವಾರ ಇದೇ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಂಕೋಲಾದ ಅಡ್ಲೂರು ಬಳಿ ಟ್ಯಾಂಕರ್ ಲಾರಿ ,ಸಾರಿಗೆ ಸಂಸ್ಥೆಯ ಬಸ್ಸಿಗೆ ಡಿಕ್ಕಿ ಪಡಿಸಿದ ಪರಿಣಾಮ,ಟ್ಯಾಂಕರ್ ಚಾಲಕ, ಮತ್ತು ಬಸ್ಸಿನಲ್ಲಿದ್ದ ಒರ್ವ ಪ್ರಯಾಣಿಕ ದುರ್ಮರಣ ಹೊಂದಿದ್ದು,ಅಂಕೋಲಾ ಯಲ್ಲಾಪುರ ಮಾರ್ಗ ಮಧ್ಯೆ ಹತ್ತಾರು ಕಡೆ ಅಪಾಯಕಾರಿ ಹೊಂಡ ಗುಂಡಿಗಳ ರಸ್ತೆಯಿಂದ ಹಾಗೂ ಮತ್ತಿತರ ಕಾರಣಗಳಿಂದ ದಿನ ನಿತ್ಯ ರಸ್ತೆ ಅಪಘಾತ ಸಾವು ನೋವುಗಳಾಗುತ್ತಿರುವುದು ಈ ಜಿಲ್ಲೆಯ ದುರಂತ ಎಂದೇ ಹೇಳಬಹುದಾಗಿದೆ. ಸಂಬಂಧಿತ ಎನ್ ಹೆಚ್ ಎ ಐ ಗೆ ಮೂಗುದಾರ ತೊಡಿಸಿ ,ರಸ್ತೆ ಅಭಿವೃದ್ಧಿಪಡಿಸುವವರಾರು ಎನ್ನುವುದು ಪ್ರಜ್ಞಾವಂತರ ಅನಿಸಿಕೆ ಆಗಿದೆ.

ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಮುರಿನಕಟ್ಟೆ ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಕಾಗೇರಿ ಆಗ್ರಹ

ಭಟ್ಕಳ:ಮುರಿನಕಟ್ಟೆ ವಿಚಾರವು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಹಿಂದೂಗಳ ಭಾವನೆಗಳಿಗೆ ಸಂಬAಧಿಸಿದ ವಿಷಯವಾಗಿದ್ದು, ಕೆಲ ಮತಾಂಧ ಶಕ್ತಿಗಳು ಇದನ್ನು ಬಳಸಿಕೊಂಡು ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಪ್ರಯತ್ನ ನಡೆಸಿವೆ ಎಂದು ವಿಶ್ವೇಶ್ವರ ಹೆಗಡೆ...

ಅಳ್ವೆಕೋಡಿ ಕಪ್ಪೆಚಿಪ್ಪು ದುರಂತ: ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದ ಕಾಗೇರಿ

ಭಟ್ಕಳ: ತಾಲೂಕಿನ ಅಳ್ವೆಕೋಡಿಯ ಕಪ್ಪೆಚಿಪ್ಪು ದುರಂತದಲ್ಲಿ ಸಾವನ್ನಪ್ಪಿದ ಕುಟುಂಬದವರನ್ನು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಭೇಟಿ ಮಾಡಿ ಸಾಂತ್ವನ ಹೇಳಿದರು. ಈ ವೇಳೆ ಮಾತನಾಡಿದ ಅವರು, ನಡೆಯಬಾರದ ದುರಂತವೊoದು ಸಂಭವಿಸಿದ್ದು, ಈ...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಜಾನುವಾರು ರಕ್ಷಣೆ: ಗೋ ಶಾಲೆಗೆ ರವಾನಿಸುವ ಮೂಲಕ ಗೀರ್ ಹೋರಿಗಳಿಗೆ ಜೀವದಾನ

ಅಂಕೋಲಾ: ವಧೆ ಉದ್ದೇಶದಿಂದ ಹಿಂಸಾತ್ಮಕವಾಗಿ ಸಾಗಿಸುತ್ತಿದ್ದ, ಎರಡು ಭಾರೀ ಗಾತ್ರದ ಗೀರ್ ತಳಿಯ ಹೋರಿಗಳಿಗೆ ಕೊನೆಗೂ...

ಮುರಿನಕಟ್ಟೆ ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಕಾಗೇರಿ ಆಗ್ರಹ

ಭಟ್ಕಳ:ಮುರಿನಕಟ್ಟೆ ವಿಚಾರವು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಹಿಂದೂಗಳ ಭಾವನೆಗಳಿಗೆ ಸಂಬAಧಿಸಿದ ವಿಷಯವಾಗಿದ್ದು, ಕೆಲ ಮತಾಂಧ...

ಅಳ್ವೆಕೋಡಿ ಕಪ್ಪೆಚಿಪ್ಪು ದುರಂತ: ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದ ಕಾಗೇರಿ

ಭಟ್ಕಳ: ತಾಲೂಕಿನ ಅಳ್ವೆಕೋಡಿಯ ಕಪ್ಪೆಚಿಪ್ಪು ದುರಂತದಲ್ಲಿ ಸಾವನ್ನಪ್ಪಿದ ಕುಟುಂಬದವರನ್ನು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಭೇಟಿ...

ಜಿಲ್ಲೆಯ ಆರೋಗ್ಯ ಸೇವೆಗೆ ಐತಿಹಾಸಿಕ ಹೆಜ್ಜೆ : ಶಾಸಕ ಸತೀಶ್ ಸೈಲ್

ಅಂಕೋಲಾ : ಜನರಿಗೆ ಉನ್ನತ ಮಟ್ಟದ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಕಾರವಾರದಲ್ಲಿ 100 ಕೋಟಿ...

ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಲ್ಲಿ ಸಹಾಯಕ ಶಿಕ್ಷಕರು ಬೇಕಾಗಿದ್ದಾರೆ

ಕುಮಟಾ : ಅಂಕೋಲಾದ ಕೆನರಾ ವೆಲ್ಫೇರ್ ಟ್ರಸ್ಟ್ ನ ಕುಮಟಾ ಧಾರೇಶ್ವರದ ದಿನಕರ ಇಂಗ್ಲಿಷ್ ಮೀಡಿಯಂ...

ಅಲಂಕಾರ ಜ್ಯುವೆಲ್ಲರ್ಸ್ : ಅಕ್ಷಯ ತೃತೀಯ ವಿಶೇಷ ಆಫರ್

ಸುವರ್ಣ ಕ್ಷಣವನ್ನು ಇನ್ನಷ್ಟು ವಿಶೇಷವಾಗಿಸಿ : ಈ ಶುಭ ಅಕ್ಷಯ ತೃತೀಯದ ಪ್ರಯುಕ್ತ ಚಿನ್ನ ಮತ್ತು...

ಭಟ್ಕಳದಲ್ಲಿ 14 ಜಾನುವಾರಗಳ ರಕ್ಷಣೆ : ಇಬ್ಬರ ವಿರುದ್ಧ ಪ್ರಕರಣ ದಾಖಲು

ಭಟ್ಕಳ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬAಧಿಸಿದAತೆ ಇಬ್ಬರ ವಿರುದ್ಧ ಭಟ್ಕಳ ಪಟ್ಟಣ ಪೊಲೀಸ್...

ಮಹಾಶಿವರಾತ್ರಿ ಪುಣ್ಯಕಾಲದಲ್ಲಿ ಕಣಕಣೇಶ್ವರ ದೇವರ ನೂತನ ಭವ್ಯ ದೇವಸ್ಥಾನ ಲೋಕಾರ್ಪಣೆ :ಶಿಖರ ಕಲಶ ಪ್ರತಿಷ್ಠೆ – ಅಷ್ಟಬಂಧ ಸಮೇತ ನೂತನ ಶಿವಲಿಂಗ ಪ್ರತಿಷ್ಠಾ ಮಹೋತ್ಸವ

ಅಂಕೋಲಾ: ಪಟ್ಟಣದ ಕಾರವಾರ ರಸ್ತೆಯಲ್ಲಿರುವ ಪುರಾತನ ಪ್ರಸಿದ್ಧ ಶ್ರೀ ಕಣಕಣೇಶ್ವರ ದೇವಾಲಯವು ಮಹಾಶಿವರಾತ್ರಿ ಪುಣ್ಯಸಂದರ್ಭದಲ್ಲಿ ನೂತನ...