Important

ಪ್ರತಿಷ್ಠಿತ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನಿಯಮಿತ ಹೊನ್ನಾವರ ಇದರ ವಾರ್ಷಿಕ ಸರ್ವ ಸಾಧಾರಣ

Share

ಹೊನ್ನಾವರ : ಇಲ್ಲಿನ ಪ್ರತಿಷ್ಠಿತ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನಿಯಮಿತ ಹೊನ್ನಾವರ ಇದರ 2024-25 ಸಾಲಿನ 58ನೇ ವಾರ್ಷಿಕ ಸರ್ವ ಸಾಧಾರಣ ಸಭೆಯು ಪಟ್ಟಣದ ನ್ಯೂ ಇಂಗ್ಲಿಷ್ ಶಾಲೆಯ ಸಭಾಭವನದಲ್ಲಿ ಜರುಗಿತು.

ಎವಿ : ಸಹಕಾರಿ ಅಭಿವೃದ್ಧಿ ಅಧಿಕಾರಿ,ಆಡಳಿತಾಧಿಕಾರಿ ಸರಿತಾ ಎನ್.ಬೇತಾಳಕರ ಅದ್ಯಕ್ಷತೆಯಲ್ಲಿ, ಚರ್ಚೆಯ ವಿಷಯದ ಕುರಿತು ಸದಸ್ಯರು ಚರ್ಚಿಸಿ ಉತ್ತರ ಪಡೆದುಕೊಂಡು ಅನುಮೋದನೆ ಪಡೆಯಲಾಯಿತು. 2024-25ನೇ ಸಾಲಿನಲ್ಲಿ 170.93 ಲಕ್ಷ ನಿವ್ವಳ ಲಾಭಗಳಿಸಿದೆ. ಶೇರು ಸದಸ್ಯರಿಗೆ 15% ಡಿವಿಡೆಂಡ್ ಘೋಷಿಸಿದೆ. ಬ್ಯಾಂಕ್ ಅತ್ಯುತ್ತಮ ನಿರ್ವಹಣೆಗೆ ರಾಜ್ಯ ಮಟ್ಟದ ಪ್ರಶಸ್ತಿ ನೀಡುತ್ತಿದ್ದು ಜಿಲ್ಲೆಗೆ 2ನೇ ಸ್ಥಾನ ಬ್ಯಾಂಕ್ ಪಡೆದುಕೊಂಡಿದೆ. ಇದು ಹೆಮ್ಮೆಯ ಸಂಗತಿ. ಪ್ರಶಸ್ತಿ ಪ್ರದಾನ ಬೆಂಗಳೂರಿನಲ್ಲಿ ಜರುಗಲಿದ್ದು ಬ್ಯಾಂಕ್ ನ ಪ್ರಧಾನ ವ್ಯವಸ್ಥಾಪಕ ಎಂ.ಡಿ.ಮುಕ್ರಿ ಸ್ವೀಕರಿಸಲಿದ್ದಾರೆ ಎಂದು ಆಡಳಿತಾಧಿಕಾರಿ ಸರಿತಾ ಬೇತಾಳಕರ ಸಭೆಗಯಲ್ಲಿ ತಿಳಿಸಿದರು.

ಉಪನಿಯಮಗಳಿಗೆ ಅನುಸಾರವಾಗಿ ಅಧ್ಯಕ್ಷರ ಅನುಮತಿ ಮೇರೆಗೆ ಸಭೆಯಲ್ಲಿ ಇತರ ವಿಷಯದ ಮೇಲೆ ಚರ್ಚೆ ವೇಳೆ ಬ್ಯಾಂಕಿನ ಮಾಜಿ ಅಧ್ಯಕ್ಷ ಚಂದ್ರಶೇಖರ ಗೌಡ ಮಾತನಾಡಿ ಬ್ಯಾಂಕನ ನಿಕಟಪೂರ್ವ ಅಧ್ಯಕರಾದ ವಿ.ಎನ್.ಭಟ್ಟ ಅಳ್ಳಂಕಿಯವರು ನಮ್ಮ ಬ್ಯಾಂಕಿನ ಒಂದು ಕೋಟಿ ಹಣ ಬೇರೆ ಬ್ಯಾಂಕಿನಲ್ಲಿ ಪ್ರಧಾನ ವ್ಯವಸ್ಥಾಪಕರ ಗಮನಕ್ಕೆ ಇಲ್ಲದೆ ಬೇರೆ ಬ್ಯಾಂಕಿಗೆ ವರ್ಗಾಯಿಸಿರುವ ಬಗ್ಗೆ ಬ್ಯಾಂಕಿನ ಸಿಬ್ಬಂದಿಗಳೇ ತನಗೆ ತಿಳಿಸಿದ್ದಾರೆ ಎಂದು ಮಾಧ್ಯಮದ ಮುಂದೆ ಹೇಳೀದ್ದಾರೆ, ಇದರಿಂದ ಬ್ಯಾಂಕಿನ ಗ್ರಾಹಕರಿಗೆ,ರೈತ ಬಾಂಧವರಿಗೆ ತಪ್ಪು ಸಂದೇಶ ಹೋಗುತ್ತದೆ. ಇದರ ಕುರಿತು ಸೃಷ್ಟನೆ ಸಭೆಗೆ ನೀಡಬೇಕು ಎಂದು ಆಗ್ರಹಿಸಿದರು.

ಅದಕ್ಕೆ ಉತ್ತರಿಸಿದ ಬ್ಯಾಂಕ್ ವ್ಯವಸ್ಥಾಪಕ ಎಂ.ಡಿ.ಮುಕ್ರಿ ಇದು ಸತ್ಯಕ್ಕೆ ದೂರವಾಗಿದೆ. ನಮ್ಮ ಬ್ಯಾಂಕಿನಲ್ಲಿ ಅವರು ಹೇಳಿದ ರೀತಿ ಯಾವುದೇ ವ್ಯವಹಾರ ನಡೆದಿದ್ದು ಇರುವುದಿಲ್ಲ. ಸಿಬ್ಬಂದಿಗಳು ನನ್ನ ಗಮನಕ್ಕೆ ತಾರದೇ ಬ್ಯಾಂಕಿನ ಯಾವುದೇ ವ್ಯವಹಾರ ನಡೆಸುವುದಿಲ್ಲ ಎಂದು ಸೃಷ್ಟನೆ ನೀಡಿದರು. ಈ ಕುರಿತು ಮಾಧ್ಯಮದವರಿಗೆ ಬ್ಯಾಂಕ್ ಪತ್ರಿಕಾ ಪ್ರಕಟಣೆ ನೀಡಬೇಕು ಎಂದು ನಿಕಟಪೂರ್ವ ನಿರ್ದೇಶಕ ರಾದ ಗೋವಿಂದ ನಾಯ್ಕ,ಕೃಷ ಗೌಡ , ವಿಶಾಲ್ ಭಟ್ಟ, ವಂದೂರು, ಗೋವಿಂದ ಗೌಡ, ವಂದೂರು ಹಾಗೂ ಇತರರು ಧ್ವನಿಗೂಡಿ ಮಾಜಿ ಅಧಯಕ್ಷರ ಈ ಬೇಜವ್ದಾರಿ ಹೇಳಿಕೆಯನ್ನು ಖಂಡಿಸಿ ಠರಾವು ಮಾಡಬೇಕು ಮತ್ತು ಕಾಯ್ದೆಯಲ್ಲಿ ಅವಕಾಶ ಇದ್ದರೆ ಆ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಈ ಬಗ್ಗೆ ಬ್ಯಾಂಕಿನಿoದ ಮಾಧ್ಯಮ ದವರಿಗೆ ಸೃಷ್ಟನೆ ನೀಡಲಾಗುವುದು ಎಂದು ಪ್ರಧಾನ ವ್ಯವಸ್ಥಾಪಕರು ಸಭೆಗೆ ತಿಳಸಿದರು. ಚರ್ಚಿತ ವಿಷಯಗಳ ವಿವರಣೆಯನ್ನು ಹಿರಿಯ ಮೇಲ್ವಿಚಾರಕ ಬಾಲಚಂದ್ರ ಗಣಪಯ್ಯ ಗೌಡ ನೀಡಿದರು. ಶಾಖಾ ವ್ಯವಸ್ಥಾಪಕ ಹನುಮಂತ ನಾಯ್ಕ ವಂದಿಸಿದರು.

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಬೆಂಕಿ ಅವಘಡದಲ್ಲಿ ಅಪಾರಹಾನಿ: ಆದರೆ, ಮಾರಿಕಾಂಬೆಯ ಫೋಟೋ ಮಾತ್ರ ಸೇಫ್

ಅಂಕೋಲಾ: ಪಟ್ಟಣ ವ್ಯಾಪ್ತಿಯ ಲಕ್ಷ್ಮೇಶ್ವರ–ಕುಂಬಾರಕೇರಿ ಪ್ರದೇಶದಲ್ಲಿರುವ ಶ್ರೀ ಮಹಾಲಸಾ ವೆಲ್ಡಿಂಗ್ ಶಾಪ್ನಲ್ಲಿ ಫೆಬ್ರವರಿ 9ರ ಸೋಮವಾರ ರಾತ್ರಿ ಆಕಸ್ಮಿಕವಾಗಿ ಬೆಂಕಿ ಅವಘಡ ಸಂಭವಿಸಿ, ಲಕ್ಷಾಂತರ ರೂಪಾಯಿ ಮೌಲ್ಯದ ಆಸ್ತಿ ಹಾನಿಯಾಗಿರುವ ಘಟನೆ...

ಕಲೆ ಆತ್ಮ ಗೌರವದ ಸಂಕೇತ: ಮಂಕಾಳು ವೈದ್ಯ

ಮುರುಡೇಶ್ವರ: ಮುರುಡೇಶ್ವರದ ಯಕ್ಷರಕ್ಷೆ ವೇದಿಕೆಯಲ್ಲಿ ರಾಗಶ್ರೀ ಸಂಗೀತ ವಿದ್ಯಾಲಯ ಹಡಿನಬಾಳ ಇದರ ಮುರುಡೇಶ್ವರ ಶಾಖೆಯ ಪ್ರಥಮ ವರ್ಷದ ವಾರ್ಷಿಕೋತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಉಸ್ತುವಾರಿ ಸಚಿವರಾದ ಶ್ರೀ ಮಂಕಾಳು ವೈದ್ಯರು ಕಲೆ ಮತ್ತು...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಕಲೆ ಆತ್ಮ ಗೌರವದ ಸಂಕೇತ: ಮಂಕಾಳು ವೈದ್ಯ

ಮುರುಡೇಶ್ವರ: ಮುರುಡೇಶ್ವರದ ಯಕ್ಷರಕ್ಷೆ ವೇದಿಕೆಯಲ್ಲಿ ರಾಗಶ್ರೀ ಸಂಗೀತ ವಿದ್ಯಾಲಯ ಹಡಿನಬಾಳ ಇದರ ಮುರುಡೇಶ್ವರ ಶಾಖೆಯ ಪ್ರಥಮ...

ಬಡ, ಮಧ್ಯಮವರ್ಗ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಒಟ್ಟು 3 ಕೋಟಿ ಮೌಲ್ಯದ ವಿದ್ಯಾರ್ಥಿವೇತನ

ಉಡುಪಿ: ರಾಜ್ಯದಲ್ಲೇ ಪ್ರಸಿದ್ಧ ಪಡೆದ ಉಡುಪಿ ಲಾರ್ಡ್ಸ್ ಇಂಟರ್‌ನ್ಯಾಷನಲ್ ರೆಸಿಡೆನ್ಷಿಯಲ್ ಸ್ಕೂಲ್ , ಬಡ, ಮಧ್ಯಮವರ್ಗ...

ಶತರುದ್ರ ಮತ್ತು ಶತಚಂಡಿಕಾ ಯಾಗಕ್ಕೆ ಆತ್ಮೀಯ ಸ್ವಾಗತ

ಕಾರವಾರ: ದಿವಂಗತ ಕೃಷ್ಣ ಸೈಲ್ ಹಾಗೂ ಗಿರಿಜಾ ಕೃಷ್ಣ ಸೈಲ್ ರವರ ಆರ್ಶೀವಾದದೊಂದಿಗೆ ಈ ಕ್ಷೇತ್ರದ...

ಸಹಕಾರದ ಬೆಳಕಿನಲ್ಲಿ ಮಹತ್ವದ ಹೆಜ್ಜೆಯಿಟ್ಟ ‘ಸೂರ್ಯ’: ಹೊಸ ಶಾಖೆಗಳತ್ತ ನಾಗರಾಜ ನಾಯಕರ ದೃಷ್ಟಿ”

ಅಂಕೋಲಾ: ಅಂಕೋಲೆ ಎಂದಾಗ ಕರಿ ಇಸಾಡು ಮಾವಿನಹಣ್ಣು ನೆನಪಾದರೆ, “ಸೂರ್ಯ” ಸಹಕಾರಿ ಎಂದಾಗ ನಾಗರಾಜ ನಾಯಕ...

ಆಟೋರಿಕ್ಷಾಗೆ ಪ್ರವಾಸಿಗರಿದ್ದ ಟಿ.ಟಿ ವಾಹನ ಡಿಕ್ಕಿ : ಮಹಿಳೆಗೆ ಗಾಯ

ಅಂಕೋಲಾ: ಸಹೋದರಿಯ ಮನೆಗೆ ಬಂದು ವಾಪಸ್ ಮನೆಗೆ ಮರಳುತ್ತಿದ್ದ ಗೃಹಿಣಿ ಇದ್ದ ಆಟೋರಿಕ್ಷಾಗೆ ಪ್ರವಾಸಿಗರಿದ್ದ ಟಿ.ಟಿ...

ಶಾಲಾ ಮಕ್ಕಳ ಬಸ್ ಪಲ್ಟಿ: ವಿದ್ಯಾರ್ಥಿ ಸಾವು

ಹೊನ್ನಾವರ: ಗೇರುಸೊಪ್ಪ ಸುಳೆಮುರ್ಕಿ ಕ್ರಾಸ್ ಹತ್ತಿರ ಶಾಲಾಮಕ್ಕಳ ಪ್ರವಾಸಿ ಬಸ್ ಪಲ್ಟಿಯಾಗಿ, ವಿಧ್ಯಾರ್ಥಿ ಸಾವನಪ್ಪಿರುವ ಘಟನೆ...