Uncategorized

ಅಂಕೋಲಾ ಉಪನೋಂದಣಾಧಿಕಾರಿಗಳ ಕಚೇರಿಗೆ ಸರ್ಚ್ ವಾರೆಂಟ್ ಮೇಲೆ ಬಂದ ಲೋಕಾಯುಕ್ತರ ತಂಡ : ಯಾಕೆ ನೋಡಿ?

Share

ಅಂಕೋಲಾ‌ : ಇಲ್ಲಿನ ಉಪನೋಂದಣಾಧಿಕಾರಿಗಳ ಕಚೇರಿಯಲ್ಲಿ ದಸ್ತಾವೇಜು ನೋಂದಣಿ ಮುಂತಾದ ಕೆಲಸಗಳಲ್ಲಿ ಅನಗತ್ಯ ವಿಳಂಬ ಮತ್ತು ಏಜೆಂಟರ ಹಾವಳಿ ಹೆಚ್ಚಾಗಿರುವ ಕುರಿತು ಸಾರ್ವಜನಿಕರಿಂದ ಆರೋಪಗಳು ಕೇಳಿಬಂದಿದ್ದ ಹಿನ್ನೆಲೆಯಲ್ಲಿ ಗುರುವಾರ ಲೋಕಾಯುಕ್ತ ಅಧಿಕಾರಿಗಳು ಸರ್ಚ ವಾರೆಂಟ್ ಸಹಿತ ಅಂಕೋಲಾ ಉಪನೋಂದಣಾಧಿಕಾರಿಗಳ ಕಚೇರಿಗೆ ದಿಢೀರ್ ದಾಳಿ ಮಾಡಿದ್ದರಿಂದ,ಮಳೆಯ ವಾತಾವರಣದ ನಡುವೆಯೂ ಒಳಗಿದ್ದ ಅಧಿಕಾರಿಗಳು ಮತ್ತು ಕೆಲ ಸಿಬ್ಬಂದಿಗಳು ಕುಳಿತಲ್ಲೇ ಬೆವರುವಂತಾಯಿತು.

ಲೋಕಾಯುಕ್ತ ಅಧಿಕಾರಿ ವಿನಾಯಕ ಬಿಲ್ಲವ ಹಾಗೂ ವಿಜಯ ನೇತೃತ್ವದಲ್ಲಿ 7 ಜನರ ತಂಡ ದಿಡೀರ್ ದಾಳಿ ಮಾಡಿ ನಾಲ್ಕೈದು ತಾಸುಗಳ ಕಾಲ ಕಡತಗಳು ಮತ್ತಿತರ ಕಾಗದ ಪತ್ರಗಳನ್ನು ಪರಿಶೀಲನೆ ನಡೆಸಿ, ಇನ್ನೂ ಹೆಚ್ಚಿನ ಪರಿಶೀಲನೆಗಾಗಿ ಕೆಲವು ಕಡತಗಳ ಪ್ರತಿಗಳನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದ್ದು,ಇದು ಪಟ್ಟಣ ವ್ಯಾಪ್ತಿಯಲ್ಲಿ ಸಾರ್ವಜನಿಕ ವಲಯದಲ್ಲಿ ನಾನಾ ರೀತಿಯ ಚರ್ಚೆಗೆ ಕಾರಣವಾದಂತಿದೆ.

ಲೋಕಾಯುಕ್ತರ ದಿಡೀರ್ ಭೇಟಿಯ ಕುರಿತು ಸಂಬಂಧಿಸಿದ ಅಧಿಕಾರಿಗಳಿಂದ ರಾತ್ರಿ 10 ಗಂಟೆ ನಂತರ ಅಧಿಕೃತ ಮತ್ತು ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.ಜಿಲ್ಲೆಯ ಮುಂಡಗೋಡ ಮತ್ತಿತರಡೆ ಕೆಲ ಉಪ ನೋಂದಣಾಧಿಕಾರಿಗಳ ಕಚೇರಿಗಳಲ್ಲಿ ಲಂಚ ಇಲ್ಲವೇ ಮತ್ತಿತರ ಕಾರಣದಿಂದ ಬೇಕಾಯ್ದೆ ಶೀರ ನೋಂದಣಿ ಮಾಡಿಕೊಡಲಾಗುತ್ತದೆ ಎಂಬ ಆರೋಪ ಕೇಳಿಬರುವಂತಾಗಿದೆ.

ಈ ಹಿನ್ನೆಲೆಯಲ್ಲಿಯೂ ಉಪನೊಂದಣಾಧಿಕಾರಿಗಳ ಕಚೇರಿಗೆ ಲೋಕಾಯುಕ್ತರು ದಾಳಿ, ಮಹತ್ವ ಪಡೆದಿದ್ದು, ಆನ್ ಲೈನ್ ನೊಂದಣಿ ಪ್ರಕ್ರಿಯೆ ಹೊರತಾಗಿಯೂ ನಗದು ಮತ್ತಿತರ ರೀತಿಯ ಒಳ ವ್ಯವಹಾರ ನಡೆದಿದ್ದರೆ ಪರಿಶೀಲನೆ ವೇಳೆ ಅವು ಗೊತ್ತಾಗಲಿವೆ ಎನ್ನಲಾಗಿದೆ.

ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಬೆಂಕಿ ಅವಘಡದಲ್ಲಿ ಅಪಾರಹಾನಿ: ಆದರೆ, ಮಾರಿಕಾಂಬೆಯ ಫೋಟೋ ಮಾತ್ರ ಸೇಫ್

ಅಂಕೋಲಾ: ಪಟ್ಟಣ ವ್ಯಾಪ್ತಿಯ ಲಕ್ಷ್ಮೇಶ್ವರ–ಕುಂಬಾರಕೇರಿ ಪ್ರದೇಶದಲ್ಲಿರುವ ಶ್ರೀ ಮಹಾಲಸಾ ವೆಲ್ಡಿಂಗ್ ಶಾಪ್ನಲ್ಲಿ ಫೆಬ್ರವರಿ 9ರ ಸೋಮವಾರ ರಾತ್ರಿ ಆಕಸ್ಮಿಕವಾಗಿ ಬೆಂಕಿ ಅವಘಡ ಸಂಭವಿಸಿ, ಲಕ್ಷಾಂತರ ರೂಪಾಯಿ ಮೌಲ್ಯದ ಆಸ್ತಿ ಹಾನಿಯಾಗಿರುವ ಘಟನೆ...

ಕಲೆ ಆತ್ಮ ಗೌರವದ ಸಂಕೇತ: ಮಂಕಾಳು ವೈದ್ಯ

ಮುರುಡೇಶ್ವರ: ಮುರುಡೇಶ್ವರದ ಯಕ್ಷರಕ್ಷೆ ವೇದಿಕೆಯಲ್ಲಿ ರಾಗಶ್ರೀ ಸಂಗೀತ ವಿದ್ಯಾಲಯ ಹಡಿನಬಾಳ ಇದರ ಮುರುಡೇಶ್ವರ ಶಾಖೆಯ ಪ್ರಥಮ ವರ್ಷದ ವಾರ್ಷಿಕೋತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಉಸ್ತುವಾರಿ ಸಚಿವರಾದ ಶ್ರೀ ಮಂಕಾಳು ವೈದ್ಯರು ಕಲೆ ಮತ್ತು...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಧರ್ಮಸ್ಥಳಕ್ಕೆ ಕಪ್ಪುಚುಕ್ಕೆ ತರುವ ಪ್ರಯತ್ನ: ಬೃಹತ್ ಜನಾಗ್ರಹ-ಧರ್ಮಸಭೆ

ಹೊನ್ನಾವರ: ಪಟ್ಟಣದ ನಾಮಧಾರಿ ಸಭಾಭವನದ ಆವಾರದಲ್ಲಿ ಶ್ರೀ ಧರ್ಮಸ್ಥಳ ಕ್ಷೇತ್ರ ಭಕ್ತಾಭಿಮಾನಿ ವೇದಿಕೆ ಹೊನ್ನಾವರ ವತಿಯಿಂದ...