Important

ಸಮುದ್ರ ದಡಕ್ಕೆ ಬರುತ್ತಿರುವೆ ರಾಶಿ ರಾಶಿ ಜೀವಂತ ಮೀನುಗಳು: ಮುಗಿಬಿದ್ದು ಚೀಲಗಳಲ್ಲಿ ತುಂಬಿಸಿಕೊಳ್ಳುತ್ತಿರುವ ಸ್ಥಳೀಯರು

Share

ಇಲ್ಲಿನ ಸಮುದ್ರ ತೀರದಲ್ಲಿ ಬಲೆ ಬೀಸಬೇಕೆಂದಿಲ್ಲ, ಆದರೂ ನೀವು ರಾಶಿ ರಾಶಿ ಜೀವಂತ ಮೀನುಗಳನ್ನು ಬಾಚಿ ತರಬಹುದು,ಇಂತಹದೊoದು ಪ್ರಕೃತಿ ವಿಸ್ಮಯ ನಡೆದದ್ದು ದೂರದಲ್ಲೆಲ್ಲೋ ಅಲ್ಲ, ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹಾರವಾಡದಲ್ಲಿ,ಅದನ್ನು ನೀವೇ ನೋಡಿ.

ಅಂಕೋಲಾ : ತಾಲೂಕಿನ ಹಾರವಾಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಗಾಬಿತವಾಡ ಕಡಲ ಕಿನಾರೆಯಲ್ಲಿ ಮೀನುಗಾರರು ಬಲೆ ಬೀಸದಿದ್ದರೂ, ಜೀವಂತ ಮೀನುಗಳು ತಾವೇ ತಾವಾಗಿ ಬಂದು ಕಡಲಂಚಿನಲ್ಲಿ ಬೀಳುವ ಮೂಲಕ ಮೀನಿನ ಸುಗ್ಗಿ ಕಂಡು ಬಂದು ,ಪ್ರಕೃತಿ ವಿಸ್ಮಯಕ್ಕೆ ಎಂಥವರು ಬೆರಗಾಗುವಂತೆ ಮಾಡಿದೆ.

ತರ್ಲೆ ಮೀನು , ತೋರಿ ಮೀನು, ಎಂಬಿತ್ಯಾದಿ ಹೆಸರುಗಳಿಂದ ಗುರುತಿಸಿಕೊಂಡ ಗಾಬಿತವಾಡ ವ್ಯಾಪ್ತಿಯಲ್ಲಿ,ಸಮುದ್ರದ ಅಲೆಗಳೊಂದಿಗೆ ಬಂದು ಕಡಲ ತಡಿಯಲ್ಲಿ ಚಡಪಡಿಸುವುದನ್ನು ಕಂಡ ಮೀನುಗಾರ ಮಹಿಳೆಯರು, ಮಕ್ಕಳು ಸೇರಿದಂತೆ ಸ್ಥಳೀಯರು ಮೀನಿಗಾಗಿ ಮುಗಿಬಿದ್ದು ಕೈಗೆ ಸಿಕ್ಕಷ್ಟು ಬಾಚಿಕೊಂಡು,ಸಖತ್ ಖುಷಿಗೊಂಡಿದ್ದಾರೆ.

ದಡದಲ್ಲಿ ರಾಶಿ ರಾಶಿ ಮೀನುಗಳು ಬಂದು ಬೀಳುತ್ತಿರುವ ಸುದ್ದಿ ಗ್ರಾಮದಲ್ಲಿ ಸಖತ್ ವೈರಲ್ ಆಗಿದೆ. ಹಲವರು ಮೀನುಗಳನ್ನು ಹಿಡಿದು, ಚೀಲ ಬುಟ್ಟಿಗೆ ತುಂಬಿಸಿಕೊಳ್ಳಲು ಮುಂದಾದರೆ,ಇನ್ನು ಕೆಲವರು ಈ ಪ್ರಕೃತಿ ವಿಸ್ಮಯವನ್ನು ತಮ್ಮ ಮೊಬೈಲ್ ಕ್ಯಾಮೆರಾ ಗಳಲ್ಲಿ ಸೆರೆಹಿಡಿದು ಸಂತಸ ಹಂಚಿಕೊoಡಿದ್ದಾರೆ.

ಸ್ಥಳೀಯ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಮಂಜುನಾಥ್ ಠಾಕೇಕರ್ ಮತ್ತಿತರ ಪ್ರಮುಖರು ಈ ಕುರಿತು ವಿಸ್ಮಯ ವಾಹಿನಿ ಯೊಂದಿಗೆ ಮಾತನಾಡಿ, ಕಡಲ ಮಕ್ಕಳಾದ ನಾವು ಸಮುದ್ರ ದೇವತೆಯನ್ನು ಈ ಮೊದಲಿನಿಂದಲೂ ಪೂಜಿಸಿಕೊಂಡು ಬರುತ್ತಿದ್ದು,ಅದನ್ನೇ ನಂಬಿ ನಮ್ಮ ಜೀವನ ನಡೆಸುತ್ತಿದ್ದೇವೆ.ನವರಾತ್ರಿಯ ಶುಭ ಸಂದರ್ಭದಲ್ಲಿ ದುರ್ಗಾದೇವಿ ಕೃಪೆ ಎನ್ನುವಂತೆ ಈ ದಿನ ಭೂತಾಯಿ ಎನ್ನುವ ಮೀನು ತಾನೇ ತಾನಾಗಿ ಕಡಲ ತಡಿಯಲ್ಲಿ ಬಂದು ನಮ್ಮವರಿಗೆ ಸಿಕ್ಕಿದ್ದು,ಒಂದರ್ಥದಲ್ಲಿ ವರದಾನ ಎಂದೇ ನಂಬುತ್ತೇವೆ ಎಂದಿದ್ದಾರೆ.

ವಿಸ್ಮಯ ನ್ಯೂಸ್, ವಿಲಾಸ ನಾಯಕ ಅಂಕೋಲಾ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಬೆಂಕಿ ಅವಘಡದಲ್ಲಿ ಅಪಾರಹಾನಿ: ಆದರೆ, ಮಾರಿಕಾಂಬೆಯ ಫೋಟೋ ಮಾತ್ರ ಸೇಫ್

ಅಂಕೋಲಾ: ಪಟ್ಟಣ ವ್ಯಾಪ್ತಿಯ ಲಕ್ಷ್ಮೇಶ್ವರ–ಕುಂಬಾರಕೇರಿ ಪ್ರದೇಶದಲ್ಲಿರುವ ಶ್ರೀ ಮಹಾಲಸಾ ವೆಲ್ಡಿಂಗ್ ಶಾಪ್ನಲ್ಲಿ ಫೆಬ್ರವರಿ 9ರ ಸೋಮವಾರ ರಾತ್ರಿ ಆಕಸ್ಮಿಕವಾಗಿ ಬೆಂಕಿ ಅವಘಡ ಸಂಭವಿಸಿ, ಲಕ್ಷಾಂತರ ರೂಪಾಯಿ ಮೌಲ್ಯದ ಆಸ್ತಿ ಹಾನಿಯಾಗಿರುವ ಘಟನೆ...

ಕಲೆ ಆತ್ಮ ಗೌರವದ ಸಂಕೇತ: ಮಂಕಾಳು ವೈದ್ಯ

ಮುರುಡೇಶ್ವರ: ಮುರುಡೇಶ್ವರದ ಯಕ್ಷರಕ್ಷೆ ವೇದಿಕೆಯಲ್ಲಿ ರಾಗಶ್ರೀ ಸಂಗೀತ ವಿದ್ಯಾಲಯ ಹಡಿನಬಾಳ ಇದರ ಮುರುಡೇಶ್ವರ ಶಾಖೆಯ ಪ್ರಥಮ ವರ್ಷದ ವಾರ್ಷಿಕೋತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಉಸ್ತುವಾರಿ ಸಚಿವರಾದ ಶ್ರೀ ಮಂಕಾಳು ವೈದ್ಯರು ಕಲೆ ಮತ್ತು...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಕಲೆ ಆತ್ಮ ಗೌರವದ ಸಂಕೇತ: ಮಂಕಾಳು ವೈದ್ಯ

ಮುರುಡೇಶ್ವರ: ಮುರುಡೇಶ್ವರದ ಯಕ್ಷರಕ್ಷೆ ವೇದಿಕೆಯಲ್ಲಿ ರಾಗಶ್ರೀ ಸಂಗೀತ ವಿದ್ಯಾಲಯ ಹಡಿನಬಾಳ ಇದರ ಮುರುಡೇಶ್ವರ ಶಾಖೆಯ ಪ್ರಥಮ...

ಬಡ, ಮಧ್ಯಮವರ್ಗ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಒಟ್ಟು 3 ಕೋಟಿ ಮೌಲ್ಯದ ವಿದ್ಯಾರ್ಥಿವೇತನ

ಉಡುಪಿ: ರಾಜ್ಯದಲ್ಲೇ ಪ್ರಸಿದ್ಧ ಪಡೆದ ಉಡುಪಿ ಲಾರ್ಡ್ಸ್ ಇಂಟರ್‌ನ್ಯಾಷನಲ್ ರೆಸಿಡೆನ್ಷಿಯಲ್ ಸ್ಕೂಲ್ , ಬಡ, ಮಧ್ಯಮವರ್ಗ...

ಶತರುದ್ರ ಮತ್ತು ಶತಚಂಡಿಕಾ ಯಾಗಕ್ಕೆ ಆತ್ಮೀಯ ಸ್ವಾಗತ

ಕಾರವಾರ: ದಿವಂಗತ ಕೃಷ್ಣ ಸೈಲ್ ಹಾಗೂ ಗಿರಿಜಾ ಕೃಷ್ಣ ಸೈಲ್ ರವರ ಆರ್ಶೀವಾದದೊಂದಿಗೆ ಈ ಕ್ಷೇತ್ರದ...

ಸಹಕಾರದ ಬೆಳಕಿನಲ್ಲಿ ಮಹತ್ವದ ಹೆಜ್ಜೆಯಿಟ್ಟ ‘ಸೂರ್ಯ’: ಹೊಸ ಶಾಖೆಗಳತ್ತ ನಾಗರಾಜ ನಾಯಕರ ದೃಷ್ಟಿ”

ಅಂಕೋಲಾ: ಅಂಕೋಲೆ ಎಂದಾಗ ಕರಿ ಇಸಾಡು ಮಾವಿನಹಣ್ಣು ನೆನಪಾದರೆ, “ಸೂರ್ಯ” ಸಹಕಾರಿ ಎಂದಾಗ ನಾಗರಾಜ ನಾಯಕ...

ಆಟೋರಿಕ್ಷಾಗೆ ಪ್ರವಾಸಿಗರಿದ್ದ ಟಿ.ಟಿ ವಾಹನ ಡಿಕ್ಕಿ : ಮಹಿಳೆಗೆ ಗಾಯ

ಅಂಕೋಲಾ: ಸಹೋದರಿಯ ಮನೆಗೆ ಬಂದು ವಾಪಸ್ ಮನೆಗೆ ಮರಳುತ್ತಿದ್ದ ಗೃಹಿಣಿ ಇದ್ದ ಆಟೋರಿಕ್ಷಾಗೆ ಪ್ರವಾಸಿಗರಿದ್ದ ಟಿ.ಟಿ...

ಶಾಲಾ ಮಕ್ಕಳ ಬಸ್ ಪಲ್ಟಿ: ವಿದ್ಯಾರ್ಥಿ ಸಾವು

ಹೊನ್ನಾವರ: ಗೇರುಸೊಪ್ಪ ಸುಳೆಮುರ್ಕಿ ಕ್ರಾಸ್ ಹತ್ತಿರ ಶಾಲಾಮಕ್ಕಳ ಪ್ರವಾಸಿ ಬಸ್ ಪಲ್ಟಿಯಾಗಿ, ವಿಧ್ಯಾರ್ಥಿ ಸಾವನಪ್ಪಿರುವ ಘಟನೆ...