Important

ಅಂಕೋಲಾದ ನಾಡವರ ಸಮುದಾಯ ಭವನದಲ್ಲಿ ಬೃಹತ್ ಆಹಾರ ಮತ್ತು ಸ್ವದೇಶೀ ಮೇಳ: ಅಕ್ಟೋಬರ್ 7, 8,9 ರಂದು ಆಯೋಜನೆ

Share
  • ಖಾದಿ ವಸ್ತುಗಳು, ಸಾವಯವ ಉತ್ಪನ್ನಗಳು
  • ನೈಸರ್ಗಿಕ ಸೌಂದರ್ಯ ವರ್ಧಕಗಳು
  • ಇಳಕಲ್ ಸೀರೆಗಳು, ಒನ್ ಗ್ರಾಂ ಗೋಲ್ಡ್ ಆಭರಣಗಳು
  • ಹ್ಯಾಂಡ್ ಮೇಡ್ ಬ್ರೌಸ್‌ಗಳು, ಫ್ಯಾನ್ಸಿ ಡ್ರೆಸ್‌ಗಳು
  • ಹಪ್ಪಳ, ಸಂಡಿಗೆ, ಹೋಮ್ ಮೇಡ್ ಉಪ್ಪಿನಕಾಯಿಗಳು
  • ಆದಿವಾಸಿ ಹರ್ಬಲ್ ಹೇರ್ ಆಯಿಲ್ ಮತ್ತು ಕಾಂಡಿಮೆಂಟ್ಸ್

ಅಂಕೋಲಾ : ರಾಘವೇಂದ್ರ ಇವೆಂಟ್ಸ್ ಅಂಕೋಲಾ ಹಾಗೂ ಬೆನಕ ಇವೆಂಟ್ಸ್ ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ಅಕ್ಟೋಬರ 7, 8 ಹಾಗೂ 9 ರಂದು ಪಟ್ಟಣದ ನಾಡವರ ಸಮುದಾಯ ಭವನದಲ್ಲಿ ಬೃಹತ್ ಆಹಾರ ಮತ್ತು ಸ್ವದೇಶಿ ಮೇಳವನ್ನು ಆಯೋಜಿಸಲಾಗಿದೆ ಎಂದು ಸಂಘಟನೆಯ ಪ್ರಮುಖರಾದ ಭಾಸ್ಕರ ಪೂಜಾರಿ ಹೇಳಿದರು.

ಸಾರ್ವಜನಿಕರಿಗೆ ಉಚಿತ ಪ್ರವೇಶ

ಅವರು ಪಟ್ಟಣದ ಖಾಸಗಿ ಹೊಟೇಲಿನಲ್ಲಿ ಸುದ್ದಿಗೋಷ್ಠಿ ನಡೆಸಿ ಈ ಕುರಿತು ಮಾಹಿತಿ ನೀಡಿದರು. ಸ್ವದೇಶೀ ಆಹಾರ ಮತ್ತು ಸ್ವದೇಶೀ ಉತ್ಪನ್ನಗಳನ್ನು ಉತ್ತೇಜಿಸುವ ಉದ್ದೇಶದಿಂದ ಮೇಳವನ್ನು ಆಯೋಜಿಸಿದ್ದು ಪ್ರತಿ ದಿನ ಬೆಳಿಗ್ಗೆ 10 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ನಡೆಯುವ ಮೇಳದಲ್ಲಿ ಸಾರ್ವಜನಿಕರಿಗೆ ಉಚಿತ ಪ್ರವೇಶವಿರುತ್ತದೆ.

ಆಹಾರ ಮೇಳದ ಆಕರ್ಷಣೆಗಳು

  • ದೇಶೀಯ ಮತ್ತು ಆಯುರ್ವೇದ ಆಹಾರ ಪದಾರ್ಥಗಳು
  • ನ್ಯಾಚುರಲ್ ಮಟ್ಕಾ ಕುಲ್ಫಿ, ಸ್ಪೆಷಲ್ ಕುಲ್ಪೀಸ್
  • ಉತ್ತರ ಮತ್ತು ದಕ್ಷಿಣ ಭಾರತದ ಸವಿರುಚಿಗಳು
  • ತಾಜಾ ಜಿಲೇಬಿ ಮತ್ತು ಹೋಳಿಗೆ ಸ್ಟಾಲ್‌ಗಳು

ಆಹಾರ ಮೇಳದಲ್ಲಿ ನೈಸರ್ಗಿಕ ಸೌಂದರ್ಯ ವರ್ಧಕಗಳು, ಖಾದಿ ಉತ್ಪನ್ನಗಳು ದೇಶೀಯ ಆಹಾರಗಳು, ನಿತ್ಯ ಬಳಕೆ ವಸ್ತುಗಳು, ಸಾವಯವ ಉತ್ಪನ್ನಗಳು, ಸಿರಿಧಾನ್ಯಗಳು, ಆಯುರ್ವೇದ ಉತ್ಪನ್ನಗಳು, ಫ್ಯಾನ್ಸಿ ಸೀರೆಗಳು, ಗೃಹ ಅಲಂಕಾರಿಕ ವಸ್ತುಗಳು, ರೆಡಿಮೆಡ್ ಡ್ರೆಸ್‌ಗಳು, ಹ್ಯಾಂಡ್ ಮೇಡ್ ಬ್ರೌಸ್‌ಗಳು, ಚನ್ನಪಟ್ಟಣದ ಬೊಂಬೆಗಳು, ಇಳಕಲ್ ಸೀರೆಗಳು, ಒನ್ ಗ್ರಾಂ ಗೋಲ್ಡ್ ಜ್ಯುವೆಲರಿ, ಮಕ್ಕಳ ಉಡುಪುಗಳು, ಹಪ್ಪಳ, ಸಂಡಿಗೆ, ಆದಿವಾಸಿ ಹರ್ಬಲ್ ಹೇರ್ ಆಯಿಲ್ಸ್, ಹೋಮ್ ಮೇಡ್ ಕಾಂಡಿಮೆಂಡ್ಸ್, ಉಪ್ಪಿನಕಾಯಿಗಳು, ನ್ಯಾಚುರಲ್ ಮಟ್ಕಾ ಕುಲ್ಫಿ ಮತ್ತು ಸ್ಪೇಷಲ್ ಕುಲ್ಪೀಸ್, ಉತ್ತರ ಮತ್ತು ದಕ್ಷಿಣ ಭಾರತದ ಆಹಾರಗಳು ಇನ್ನೂ ಹತ್ತು ಹಲವು ಉತ್ಪನ್ನಗಳು ಮಾರಾಟಕ್ಕೆ ಲಭ್ಯವಿದ್ದು ತಾಜಾ ಜಿಲೇಬಿ ಮತ್ತು ಹೋಳಿಗೆ ಸ್ಟಾಲುಗಳೂ ಇರಲಿವೆ.

ಸ್ವದೇಶೀ ಉತ್ಪನ್ನಗಳನ್ನು ಖರೀದಿಸಿ : ಸ್ಥಳೀಯ ಉದ್ಯಮಕ್ಕೆ ಪ್ರೋತ್ಸಾಹ ನೀಡಿ

ವಿಶೇಷ ಆಕರ್ಷಣೆಯಾಗಿ ಹಲಸು ಮತ್ತು ಮಾವಿನ ಹಣ್ಣಿನ ಗಿಡಗಳು, ಹೂವಿನ ಗಿಡಗಳು, ಗೆಡ್ಡೆಗಳು ತರಕಾರಿ ಬೀಜಗಳು ಇನ್ನೂ ಅನೇಕ ಕೃಷಿ ಪದಾರ್ಥಗಳೂ ಸಿಗಲಿವೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಪ್ರೋತ್ಸಾಹಿಸುವಂತೆ ಕೋರಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಗಣೇಶ ಗುನಗಾ ಮಂಜುನಾಥ ಕಾಮತ, ಅಭಿಷೇಕ ಗೌಡ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು. ಸ್ಪದೇಶಿ ಉತ್ಪನ್ನಗಳ ಮಾರಾಟ ಮತ್ತು ಖರೀದಿಯನ್ನು ಪ್ರೋತ್ಸಾಹಿಸಿಲು ತಪ್ಪದೇ ತಾವು ಭಾಗವಹಿಸಿ. ಇತರರಿಗೂ ವಿಷಯ ತಿಳಿಸಿ.

ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಕುಮಟಾದ ಬ್ರೌನ್ಸ್ ವಿಲೇಜ್ ಫ್ಯಾಮಿಲಿ ಗಾರ್ಡನ್ ರೆಸ್ಟೋರೆಂಟ್ ನಲ್ಲಿ ಖ್ಯಾತ ಕಲಾವಿದರಿಂದ ಲೈವ್ ಮ್ಯೂಜಿಕ್ ನೋಡುತ್ತಾ ರುಚಿ-ಶುಚಿಯಾದ ಆಹಾರ ಸವಿಯುವ ಅವಕಾಶ

ಕುಮಟಾ: ಬ್ರೌನ್ಸ್ ವಿಲೇಜ್ ಫ್ಯಾಮಿಲಿ ಗಾರ್ಡನ್ ರೆಸ್ಟೋರೆಂಟ್ ಕುಮಟಾ, ಇದು ಉತ್ತರಕನ್ನಡ ಜಿಲ್ಲೆಯ ಅತ್ಯುತ್ತಮ ಫ್ಯಾಮಿಲಿ ಗಾರ್ಡನ್ ರೆಸ್ಟೋರೆಂಟ್ ಆಗಿದ್ದು, ಇದೀಗ ಶನಿವಾರ ( ನವೆಂಬರ್ 8 ರಂದು ) ರಾತ್ರಿ...

ಕಲಾಸಿರಿ ಪ್ರಶಸ್ತಿಯು ಬದುಕಿನ ಸಾರ್ಥಕತೆಯ ಜ್ಞಾನದ ಬೆಳಕು ಬೆಳಗಲು ಸಾಧ್ಯ:ಪಿ. ಆರ್. ನಾಯ್ಕ

ಭಟ್ಕಳ : ಒಂದು ಹಣತೆಯಿಂದ ಹಲವು ಹಣತೆಗಳು ಬೆಳಗುವಂತೆ, ಕಲಾಸಿರಿಯು ಬದುಕಿನ ಸಾರ್ಥಕತೆಯ ಜ್ಞಾನದ ಬೆಳಕು ಇತರರ ಬದುಕಿನಲ್ಲೂ ಸದಾ ಬೆಳಗಲು ಸಾಧ್ಯ ಎಂದು ಕಲಾಸಿರಿ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಪಿ....

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಆಯಕಟ್ಟಿನ ಪ್ರದೇಶದಲ್ಲಿರುವ 8 ಗುಂಟೆ ಜಾಗ ಮಾರಾಟಕ್ಕಿದೆ

ಅಂಕೋಲಾ: ತಾಲೂಕಿನ ಬಳಲೆಯಲ್ಲಿ ಅತ್ಯುತ್ತಮ ಸೌಕರ್ಯ ಹೊಂದಿರುವ, ಆಯಕಟ್ಟಿನ ಪ್ರದೇಶದಲ್ಲಿರುವ NA ಆದ ಜಾಗ ಮಾರಾಟಕ್ಕಿದೆ....

ಕುಮಟಾದ ಬ್ರೌನ್ಸ್ ವಿಲೇಜ್ ಫ್ಯಾಮಿಲಿ ಗಾರ್ಡನ್ ರೆಸ್ಟೋರೆಂಟ್ ನಲ್ಲಿ ಖ್ಯಾತ ಕಲಾವಿದರಿಂದ ಲೈವ್ ಮ್ಯೂಜಿಕ್ ನೋಡುತ್ತಾ ರುಚಿ-ಶುಚಿಯಾದ ಆಹಾರ ಸವಿಯುವ ಅವಕಾಶ

ಕುಮಟಾ: ಬ್ರೌನ್ಸ್ ವಿಲೇಜ್ ಫ್ಯಾಮಿಲಿ ಗಾರ್ಡನ್ ರೆಸ್ಟೋರೆಂಟ್ ಕುಮಟಾ, ಇದು ಉತ್ತರಕನ್ನಡ ಜಿಲ್ಲೆಯ ಅತ್ಯುತ್ತಮ ಫ್ಯಾಮಿಲಿ...

ಆಂಬ್ಯುಲೆನ್ಸ್ ಡಿಕ್ಕಿ : ಭಟ್ಕಳದ ದಂಪತಿ ಬೆಂಗಳೂರಿನಲ್ಲಿ ದುರಂತ ಸಾವು

ಭಟ್ಕಳ: ವೇಗವಾಗಿ ಬಂದ ಆಂಬ್ಯುಲೆನ್ಸ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಭಟ್ಕಳ ಮೂಲದ ದಂಪತಿ...

ಪಲ್ಟಿಯಾದ ಬಸ್: 45 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಅಂಕೋಲಾ: ಪ್ರಮುಖ ಸಂಪರ್ಕ ರಸ್ತೆಗಳಲ್ಲಿ ಒಂದಾಗಿರುವ ಗೋಕರ್ಣ ವಡ್ದೀಘಾಟ ಹೆದ್ದಾರಿ ತಿರುವಿನಲ್ಲಿ ಸಾರಿಗೆ ಸಂಸ್ಥೆಯ ಬಸ್ಸೊಂದು...

KDCC ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ವಸಂತ ನಾಯಕ ಜಮಗೋಡ : ಈ ಬಾರಿ ಹೆಚ್ಚಿದ ಗೆಲುವಿನ ನಿರೀಕ್ಷೆ

ಅಂಕೋಲಾ : ಸಹಕಾರಿ ಮತ್ತು ಸಾಮಾಜಿಕ, ಧಾರ್ಮಿಕ ಮತ್ತಿತರ ಕ್ಷೇತ್ರಗಳಲ್ಲಿ ಸದಾ ಮಂಚೂಣಿಯಲ್ಲಿರುವ ನಾಯಕ ಎಂದು...

ಅಂಕೋಲಾ ಕರಾವಳಿ ಉತ್ಸವ 2025 : ನವೆಂಬರ್ 5 ರಿಂದ 10ರ ವರೆಗೆ ಸಾಂಸ್ಕೃತಿಕ ವೈಭವ

ಅಂಕೋಲಾ: ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಹೊಂದಿರುವ ಅಂಕೋಲಾ ತಾಲೂಕಿನಲ್ಲಿ ಅಂಕೋಲಾ ಸಾಂಸ್ಕೃತಿಕ ಕಲಾಬಳಗ ಉತ್ತರ ಕನ್ನಡ ಸಂಘಟನೆಯ...

ಸೇವಾಪರ್ವ ವಿಕಸಿತ ಭಾರತ ವಿಷಯಾಧಾರಿತ ಪೇಟಿಂಗ್ ಸ್ಪರ್ಧೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ದರ್ಶನ ನಾಯ್ಕ

ಭಟ್ಕಳ: ಕೇಂದ್ರ ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ತಂಜಾವೂರು ದಕ್ಷಿಣ ವಲಯ ಸಾಂಸ್ಕೃತಿಕ ಕೇಂದ್ರ ವಿಕ್ಷಿತ್ ಭಾರತ್...

ಸಮುದ್ರ ದಡಕ್ಕೆ ಬರುತ್ತಿರುವೆ ರಾಶಿ ರಾಶಿ ಜೀವಂತ ಮೀನುಗಳು: ಮುಗಿಬಿದ್ದು ಚೀಲಗಳಲ್ಲಿ ತುಂಬಿಸಿಕೊಳ್ಳುತ್ತಿರುವ ಸ್ಥಳೀಯರು

ಇಲ್ಲಿನ ಸಮುದ್ರ ತೀರದಲ್ಲಿ ಬಲೆ ಬೀಸಬೇಕೆಂದಿಲ್ಲ, ಆದರೂ ನೀವು ರಾಶಿ ರಾಶಿ ಜೀವಂತ ಮೀನುಗಳನ್ನು ಬಾಚಿ...